ಒಟ್ಟು 45 ಕಡೆಗಳಲ್ಲಿ , 21 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾದವನಾಲಿಪ ಯೋಗಿಯ ನೋಡಿ | ಕಕುಲ ಮಾಡಬ್ಯಾಡಿ ಪ ಪಂಚಭೂತದ ಸಂಚಿತ ಬಿಟ್ಟು | ಪಂಚಾದಶಿಯಲಿ ಮನವಿಟ್ಟು 1 ಪರಮ ವೈರಾಗ್ಯದ ಭೋಗಿ | ಪರಶಿವ ರೂಪನೆ ತಾನಾಗಿ 2 ಇಹಪರವೆರಡೆಂಬುದ ಕಡಿದು | ಹಂಸೋಹಂ ಎಂಬನ ಪಿಡಿದು 3 ಭವ ಭಯ ಸಂಶಯಗಳನೆ ಜರಿದು |ಭವತಾರಕನಂಘ್ರಿಯ ಬೆರೆದು 4 ತಾರಕ ಮಂತ್ರವ ಜಪಿಸುತಲಿರಲು | ಅರಿತು ಜ್ಞಾನಿಯಾಗುವನೆನಲು 5
--------------
ಭಾವತರಕರು
ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೂ ಭ್ರಾಂತಿಯ ಮಾಡುವರೆ | ನನ್ನದೆಂದು ಆಡುವರೆ |ತನ್ನ ತಾ ತಿಳಿಯದೆ | ಅನ್ಯರ ಗುಣದೋಷ ನೋಡುವರೆ ಪ ಸ್ತುತಿಸುತ ಬಂದರೇನು | ಮತ್ತೆ ಜಲವ ಮಿಂದರೇನು | ಎತ್ತ ಹೋದರೂ ದಣಿವಿಕೆಯಿಲ್ಲದೆ | ನಿತ್ಯಾನಿತ್ಯ ವಿವರಿಸಲಿಲ್ಲ 1 ಮಾತಿನ ಬಣವಿಯನೊಟ್ಟಿ | ಸ್ವಂತ ವಿಷಯಂಗಳ ಮುಟ್ಟಿ |ಯಾತಕೆ ವೈರಾಗ್ಯದ ಮಾತು | ಮಾತಿನಂತೆ ನಡೆದರಾಯಿತು 2 ನಾನು ದೊಡ್ಡವ ನನ್ನವರೆಂದು | ಜ್ಞಾನ ಗರ್ವದ ಮನೆಗೆ ಬಂದು | ಜ್ಞಾನಬೋಧನ ಪ್ರಭುವ ಕೂಡದೆ ದೀನನಾಗಿ ಬಳಲುವದೇನೊ 3
--------------
ಜ್ಞಾನಬೋದಕರು
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಎಂದಿಗೆ ಕಾಂಬುವೆ ಇಂದಿರೇಶನೆ ನಿನ್ನ ಪಾದ ಕೃಪೆಯ ಪ ಒಂದರಲವ ನಿಂದು ಒಂದೇ ಮನದಿ ನಿನ್ನ ಮಂದ ಭಾಗ್ಯನು ನಾನು ಅ.ಪ ಎನ್ನ ಮನಸಿನ ಚೇಷ್ಟೆ ವರ್ಣಿಸಲಳವಲ್ಲ ಕ್ಷಣಕೊಂದು ಪರಿಯಪ್ಪುದು ಘನದೃಢ ಹರಿಪಾದ ನೆನೆಯುವುದು ನಿಮಿಷದಿ ಎಣಿಯಿಲ್ಲದೈಶ್ವರ್ಯವನು ಭೋಗಿಸುವುದು 1 ಗಳಿಗೆಯೊಳ್ದಶಲಕ್ಷ ಸುಲಭದಿಂ ಗಳಿಸರ್ಥ ಬಲವಾಗಿ ನಿಲಯದಿಟ್ಟು ಲಲನೆಯೊಳೊಡಗೂಡಿ ಬಲುಸೌಖ್ಯ ಬಡುಕೊಂಡು ಗಳಿಗೆಯೊಳ್ ದೇಶಾಂತರಕೆಳಸುವುದಭವ 2 ಅರಿಗಳಂ ಬಂಧಿಸಿ ಸೆರೆಯೊಳಿಟ್ಟರಲವದಿ ಶಿರವರಿಪೆನೆನುತಿಹ್ಯದು ಪರಮ ವೈರಾಗ್ಯದಿಂ ಚರಿಸುವುದರಲವದಿ ಪರಲೋಕ ಸಾಧನದಿರುತಿಹ್ಯದಕಟ3 ದೃಢದಿ ನಡೆವುದು ನಿಮಿಷ ಪೊಡವಿಜನಕೆ ಸತ್ಯ ನುಡಿಯು ಬೋಧಿಸುತಿಹ್ಯದು ದೃಢತರಬಲದಿ ತಾ ಕಡುಗಲಿಯೆನಿಸೊಂದೇ ಕೊಡೆಯಿಂದಲಾಳುವುದು ಪೊಡವಿಯಂ ಸಕಲ 4 ಕಾಮಿಸುತೀಪರಿ ಕಾಮಕೊಳಪಡಿಸೆನ್ನ ಪಾಮರನೆನಿಸುವುದು ಸ್ವಾಮಿ ಶ್ರೀರಾಮ ಎನ್ನ ಪಾಮರಮನಸಿನ ಕಾಮಿತವಳುಕಿಸಿ ಪ್ರೇಮದಿಂ ಸಲಹಯ್ಯ 5
--------------
ರಾಮದಾಸರು
ಏನಾದರೇನು ಪ ತನು ವೈರಾಗ್ಯದಲ್ಲಿಟ್ಟನವರತಾ | ಅಣಿಮಾ ಸಿದ್ಧಿ ಅರತಾ | ಘನಗುರು ಜ್ಞಾನವಾ ಮರತು 1 ಓದಿಕಿಯಲಿ ನಿಪುಣಾದವನು ಯಲ್ಲಾ | ವೇದಾರ್ಥ ಮಾಡಬಲ್ಲಾ ಸಾಧುರಾ ಮಾರ್ಗವೆ ತಿಳಿಲಿಲ್ಲಾ 2 ಗುರು ಮಹಿಪತಿ ಸುತ ಪ್ರಭುವಲಿಯದೆ | ಪರಗತಿ ಸಾಧಿಸುವದೆ | ಬರೆ ವ್ಯರ್ಥಡಂಭದಿ ಮೆರೆವುದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಙÁ್ಞನಗುರು ಶುದ್ಧ ಮಡಿವಾಳ ಮನ ಮೈಲಿ ತೊಳೆವ ನಿರ್ಮಳ ಧ್ರುವ ದೃಢ ಮಾಡುವ ಬಂಡೆಗಲ್ಲು ತೊಡೆವ ಸುಭೋಧ ಸಬಕಾರ ಮೇಲು ಹಿಡಿದು ಹಿಂಡುವ ಮನ ಮೈಲು ಕುಡುವ ವೈರಾಗ್ಯದ ಬಿಸಿಲು 1 ಉದ್ದಿ ಒರಸುವ ಸಬಕಾರ ಕೈಯ ಎದ್ದಿ ವಿವೇಕ ಉದರ ನಿಶ್ಚಯ ಶುದ್ಧದೋರಿಸಿ ಸಾಂಪ್ರದಾಯ ಸಿದ್ಧ ಮಾಡುವ ಗುರು ನಮ್ಮೈಯ್ಯ 2 ಸೆಳೆದು ಒಗೆವ ವ್ಯಾಳೆವ್ಯಾಳಗಯ್ಯ ತೊಳೆದು ಅಹಂಭಾವದ ಕಲೆಯ ಕೊಳ್ಳದೆ ಒಗೆವಾ ತಾ ಕೂಲಿಯ ಬಿಳಿದು ಮಾಡುವ ಮೂಳೆ ಕಳಿಯ 3 ಆಶಿ ಎಂಬುದ ಹಾಸಿ ಒಣಗಿಸಿ ಹಸನಾಗಿ ಘಳಿಗೆ ಕೂಡಿಸಿ ಭಾಸಿ ಕೊಡುವ ತಾ ಘಟ್ಟಿಸಿ ಲೇಸು ಲೇಸಾಗಿ ಅನುಭವಿಸಿ 4 ಶುದ್ಧ ಮಾಡಿದ ಮನ ನಿಶ್ಚಯ ಸಿದ್ಧ ಸಾಕ್ಷಾತ್ಕಾರ ನಮ್ಮಯ್ಯ ಸದ್ಬೋಧಿಸಿದ ಙÁ್ಞನೋದಯಸದ್ಗೈಸಿದ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯದೇವ ಜಯದೇವ ಜಯ ಶಂಕರ ಮೂರ್ತಿ ಜಯ ಜಯವೆಂದು ಬೆಳಗುವೆ ಮನದಲಿ ಭಾವಾರ್ತಿ ಪ ಸಾಧನ ಕೆಂಜೆಡೆಯೊಳಗೆ ಜ್ಞಾನಗಂಗೆಯ ನಿಲಿಸಿ ಸಾದರದಲಿ ಚಿಜ್ಯೋತಿಯ ಚಂದ್ರನ ಕಳೆಧರಿಸಿ ನಾದಬಿಂದು ಕಳಾನಯನ ತ್ರಯವೆರಿಸಿ ಮೋದಿಪೆ ಅಪರೋಕ್ಷನುಭವ ಮುಖದೆಳೆ ನಗೆಬಳಿಸಿ 1 ಧವಲಾಂಗದಿ ಸಲೆ ಶುದ್ಧ ಸತ್ವದ ಶೋಧಿಸಲಿ ತವಕದಿ ಶಮದಮವೆಂಬಾ ಬಾಹುದ್ವಯದಲಿ ಅವಯವದಲಿ ನಿಜಭಕ್ತಿ ಶೇಷಾಭರಣದಲಿ ಶಿವತಾನೆಂದು ಬೆಳಗುವೆ ಸಹಜಾನಂದದಲಿ 2 ವಿವೇಕ ವೈರಾಗ್ಯದಾ ಕರಚರ್ಮಾಂಬರಣಾ ಅವನಿಲಿಸುರನರಪೂಜಿತ ಪಾವನಶ್ರೀ ಚರಣಾ ಕುವಲಯ ಲೋಚನ ಶಾಂತಿಯ ಪಾರ್ವತಿ ಸಹಕರುಣಾ ಭವತಾರಕ ಗುರುಮಹಿಪತಿ ಪ್ರಭುದೀನೋದ್ದಾರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾರಿ ಒಳ್ಳೇದಾಗಿರಬೇಕೂ ಹರಿದಾಸನಾದ ಮೇಲೆ ಪ ಯಾರೇ ಬಂದರೂ ಸರಿ ಯಾವ ಕಾಲದಲ್ಲಿಯು ಪಾರಗಾಣದಂಥಾ ಈ ಸಂಸಾರವಾರ್ಧಿ ದಾಟುವದಿಕ್ಕೆ ಅ.ಪ ಜ್ಞಾನ ಭಕ್ತಿ ದಾನಧರ್ಮ ವೈರಾಗ್ಯದಿ ಸದ್ಗುಣಂಗಳು ತಾನೆ ತಾನಾಗೆಲ್ಲವು ಸ್ವಾಧೀನವಾಗಿರಬೇಕಾದರೆ 1 ಓದಿದರ್ಥ ಮನಕೆ ತಿಳಿದು ನಿರತವು ಸಾಧನವು ಮಾಡುತ ಅ- ನಾದಿ ಸಿದ್ಧವಾದ ತತ್ವದ ಹಾದಿ ಕಾಣಬೇಕಾದರೆ 2 ತಾಮಸಾದಿ ದುರ್ಗುಣ ನಿರ್ನಾಮವಾಗಿ ಪ್ರೇಮದಿಂ ಗುರುರಾಮವಿಠಲನ್ನ ನೆನೆವದಕ್ಕೆ 3
--------------
ಗುರುರಾಮವಿಠಲ
ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ನಡೆಯೇ ತೀರ್ಥವು ನುಡಿ ಪ್ರಸಾದವುಕೊಡುವುದೇ ತಾನೀಗನುಗ್ರಹವುಹಿಡಿವುದೇ ತತ್ವವು ಬಿಡುವುದೇ ವೈರಾಗ್ಯದೃಢದಲಿ ತನ್ನ ತಿಳಿದಾ ಮಹಾತ್ಮನಾ ಪ ಮೆಟ್ಟಿದ್ದೆ ಕಾಶಿಯು ಮಲಗಿದ್ದೆ ಶ್ರೀ ಶೈಲದಿಟ್ಟಾಗಿ ಕುಳಿತುದೇ ಕುರುಕ್ಷೇತ್ರವುಘಟ್ಟಿಯಾಗಿಹುದೇ ಗಯವೀಗ ಗೋಕರ್ಣಮುಟ್ಟಿಯೇ ತನ್ನತಾ ತಿಳಿದ ಮಹಾತ್ಮನಾ 1 ಉಂಡದ್ದೆ ಕೇದಾರ ಉಟ್ಟಿದ್ದೆ ಶ್ರೀ ಬದರಿಕಂಡದ್ದೆ ಕಂಚಿ ಕಾಳಹಸ್ತಿಮಂಡೆಗೆರಕೊಂಡುದೇ ಮೈಲಾರ ಮಧುರೆಯುಖಂಡಿಸಿ ತನ್ನತಾ ತಿಳಿದ ಮಹಾತ್ಮನಾ 2 ಸುಧಾ ಶರಧಿಯು ಆತ ಸಾಕ್ಷಾತ್ತು ದೈವವುವಿಧ ವಿಧದ ಜಗ ತಾನೆಯಾದಾತನುಮದಕಾಮ ಕ್ರೋಧ ಪಾಶ ಶೋಕ ವರ್ಜಿತಚಿದಾನಂದ ಗುರುವೇ ತಾನಾದ ಮಹಾತ್ಮನಾ 3
--------------
ಚಿದಾನಂದ ಅವಧೂತರು