ಒಟ್ಟು 11 ಕಡೆಗಳಲ್ಲಿ , 5 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಮಹಿಮ ಏನು ಚಲುವನೆ ಶ್ರೀ ಉಡುಪಿ ನಿಲಯ ಪ. ಶಾಂತಯತಿಗಳಿಂದ ಪೂಜಿತ ನಿಂತ ಮಧ್ವಮುನಿಕರಾರ್ಚಿತ ಅ.ಪ. ಮಂಡೆ ಬಾಗಿದ ಹಿಂಡು ಭಕ್ತರಘ ಕಳೆವ ಪುಂಡರೀಕ ನೇತ್ರ ಕನಕ- ಕಿಂಡಿಯಲ್ಲಿ ಕಾಂಬ ರೂಪ1 ಬಾಲರೆಂಟು ಯತಿಗಳಿಂದ ಲೀಲೆಯಿಂದ ಪೂಜೆಗೊಂಬ ಲೀಲಮಾನುಷರೂಪ ರುಕ್ಮಿಣಿ ಲೋಲ ಲೋಕಪಾಲ ಜಾಲ 2 ಕಾಲಕಾಲದ ಪೂಜೆಗೊಂಬ ಬಾಲತೊಡಿಗೆ ಧರಿಸಿಕೊಂಬ ವ್ಯಾಳಶಯನ ಮುದ್ದುಮುಖ ಗೋ ಪಾಲಕೃಷ್ಣವಿಠ್ಠಲನೀತ 3
--------------
ಅಂಬಾಬಾಯಿ
ಕರಿಗಿರೀಶ ನಿನ್ನ ಬೇಡುವೆನೀಗ ಪರಿಪಾಲಿಸೊ ಸತತ ಪ. ನರಹರಿ ಭಕ್ತರ ಪೊರೆಯುವೆ ನೀನೆಂ- ಇಂದು ಅ.ಪ. ನಾರಸಿಂಹ ನಿನ್ನ ಸಾರಿ ಭಜಿಸುವೆನು ತೋರೊ ನಿನ್ನ ಪದವ ಬಾರಿಬಾರಿಗೆ ಸ್ತುತಿಸಲು ಬಾಲನು ಘೋರ ದೈತ್ಯನ ಸೀಳಿ ಪೊರೆದೆಯೊ 1 ಶೇಷಾಂತರ್ಗತ ನಾರಸಿಂಹ ವಿ- ಶೇಷ ಮಹಿಮೆ ತೋರೊ ಶೇಷಶಯನ ಮಹರುದ್ರಾಂತರ್ಗತ ಪೋಷಿಸೊ ಭಕ್ತರ ಶಾಂತರೂಪದಿ 2 ಲೀಲೆಯಿಂದ ಶ್ರೀ ಲಕುಮಿ ಹಿತದಿ ವ್ಯಾಳಶಯನನಾಗಿ ಪಾಲಿಸಬೇಕೆನ್ನನು ಸತತದಿ ಗೋ- ಪಾಲಕೃಷ್ಣವಿಠ್ಠಲ ನೀ ದಯದಿ 3
--------------
ಅಂಬಾಬಾಯಿ
ಕೇಳಿರಿ ಕೌತುಕ ಪೇಳುವೆನೀಗ ಶೀಲ ಶ್ರೀ ಗುರುಗಳ ಕರುಣದಲಿ ಪ. ವ್ಯಾಳಶಯನ ರಂಗ ತಾಳಿ ಕರುಣಿಸಿದ ಮೇಲು ಮೇಲು ಭಕ್ತಿಯ ನೀಡುತಲಿ ಅ.ಪ. ಅರಿಯದ ದೇಶದಿ ಅರಿಯದ ಕಾಲದಿ ಅರಿಯದವಸ್ಥೆಯ ಅನುಭವವು ಸಿರಿಯರಸನ ವ್ಯಾಪಾರವಿದಲ್ಲದಡೆ ನರರಿಗೆ ಸಾಧ್ಯವೆ ನಾಡಿನೊಳು 1 ಸಂಭÀ್ರಮದಲಿ ಸಮಾರಂಭವು ಕಲೆತಿರೆ ಬೆಂಬಿಡದಲೆ ರಕ್ಷಿಸುತಿರಲು ಕುಂಭಿಣಿಯೊಳು ಸ್ಥಿರವಾದ ಪದವಿಗೆ ಅಂಬುಜನಾಭನ ಕರುಣವಿದು 2 ಅಗ್ನಿಗಳೆರಡು ಕಲೆತು ಶಾಂತವಾಗಿ ಭಗ್ನವಿಲ್ಲದ ಆನಂದ ತೋರೆ ವಿಘ್ನವಾಗದ ಕಾಲಗಳೊದಗುತ ಮಗ್ನಗೈಸಿತಾನಂದದಲಿ 3 ಚಲಿಸದ ವಸ್ತುಗಳ್ ಚಲಿಸಿತು ಮತ್ತೆ ಚಲನೆಯಿಲ್ಲದೆ ಸುಸ್ಥಿರವಾಯ್ತು ಬಲು ವಿಚಿತ್ರವು ಭೂತಲದೊಳಗಿದು ನಳಿನನಾಭನ ಸಮ್ಮತವು4 ಬಿಂಬನಾಗಿ ಹೃದಂಬರ ಮಧ್ಯದಿ ಸಂಭ್ರಮಗೊಳಿಸೆಲೊ ಶ್ರೀ ವರನೆ ನಿತ್ಯ ಇಂಬುಗೊಟ್ಟು ಕಾಯೊ ಬಿಂಬ ಶ್ರೀ ಗೋಪಾಲಕೃಷ್ಣವಿಠ್ಠಲ 5
--------------
ಅಂಬಾಬಾಯಿ
ಧನ್ಯ ಧನ್ಯ ಧನ್ಯ ಧನ್ಯ ಗುರುವರಾ ಧನ್ಯ ತಂದೆ ಮುದ್ದುಮೋಹನ್ನ ಗುರುವರಾ ಪ. ಮಾನ್ಯ ವಿಭುದ ಮಾನ್ಯ ಜಗದ್ಮಾನ್ಯ ಗುರುವರಾ ಅ.ಪ. ಪುಟ್ಟಿದಂದಿನಿಂದಿನ್ವರೆಗೆ ತೊಟ್ಟು ದಾಸತ್ವ ದೀಕ್ಷೆ ಕರ್ಮ ಜಪತಪಂಗಳಾ ಕರ್ಮ ಮಾಡಿ ಮುಗಿಸಿ ಶ್ರೇಷ್ಠ ಜ್ಞಾನ ಕವಚ ತೊಟ್ಟು ದಿಟ್ಟತನದಿ ಮೆರೆದ ಗುರುವು ಮುಟ್ಟಿದರೀಗ ಹರಿಯ ಪುರವ 1 ಭಕ್ತಿ ಭೂಷಣ ತೊಟ್ಟು ವಿರಕ್ತಿ ಖಡ್ಗ ವರೆಯಲ್ಲಿಟ್ಟು ಮುಕ್ತಿ ಮಾರ್ಗಕೆಲ್ಲ ದೀಕ್ಷೆ ಇತ್ತು ಸುಜನಕೆ ವ್ಯಕ್ತಾವ್ಯಕ್ತ ಮಹಿಮೆಯಿಂದ ವ್ಯಕ್ತಿತ್ವವನು ತೋರಿಕೊಳದೆ ಉಕ್ತಿಗೊಶರಮಾಡಿಕೊಂಡ ಶಕ್ತಿ ಪೇಳಲಳವೆ ಎನಗೆ 2 ಕರ್ಮ ಕುರುಹನರುಹಿ ನಮ್ಮ ಮಧ್ವಮತಕೆ ದಿವ್ಯ ಸಮ್ಮತವಾಗಿ ವಮ್ಮನದ ಸುಜ್ಞಾನ ಬೆಳಕು ತಮ್ಮ ನಂಬಿದರಿಗೆ ತೋರಿ ಬÉೂಮ್ಮನೈಯ್ಯನ ಪುರಕೆ ಸಾರ್ದ ನಮ್ಮ ಗುರುವರಾ 3 ದಾಸಕೂಟ ಸಭಾಸ್ಥಳದಿ ದಾಸ ಪ್ರಾಣರಾಯನ ನಿಲಿಸಿ ದಾಸಜನಕೆ ಮುಕ್ತಿ ಸ್ಥಾನ ಕರಿಗಿರಿ ಎನಿಸಿ ವ್ಯಾಸತೀರ್ಥರಿಂದ ಬಂದ ದಾಸಕೂಟ ನಿಜವೆಂದೆನಿಸಿ ದಾಸಜನರ ಮೆರಸಿ ನೃಹರಿ ದಾಸಕೂಟ ಸಭಾಸ್ಥಾಪಕ 4 ವ್ಯಾಳಶಯನನಾದ ಗೋಪಾಲಕೃಷ್ಣವಿಠ್ಠಲನ್ನ ಲೀಲೆಯಿಂದ ಯನ್ನ ಹೃದಯದಲ್ಲಿ ನಿಲ್ಲಿಸೀ ಕಾಲ ಕಾಲಕ್ಕೆ ಇತ್ತು ಪಾಲಿಸಿದಾ ಪರಮ ಪ್ರಿಯ ಕೃಪಾಳೂ ಗುರುವರಾ 5
--------------
ಅಂಬಾಬಾಯಿ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ನೀನು ನಾನು ಸಮನೆಂತಹೆವು ಕಾಣೆನ್ಯಯ್ಯಾ ಪ ಮಾನವ ರಕ್ಕಸ ಜನರ ಕುತರ್ಕವದೇನೊ ಅ.ಪ. ಹದಿನಾಲ್ಕು ಲೋಕಗಳನು ಪೊರೆವ ದಾತನು ನೀನು ಉದರಕಾಗಿ ಅಂಡಲೆವ ತಿಂಡಿಪೋತನು ನಾನು ಮಧುರ ರಕ್ಕಸನ ಸೀಳ್ದ ಘನ ಪರಾಕ್ರಮಿ ನೀನು ಸುದತಿ ಗದರಿಸಲು ಗದಗದ ನಡುಗುವೆ ನಾನು 1 ವ್ಯಾಳಶಯನನಾಗಿ ಸುಖದಿ ನಿದ್ರಿಸುವೆ ನೀನು ಚೇಳು ಕುಟುಕಲು ಬಾಯ್ಬಡುಕೊಂಬುವೆನು ನಾನು ನಿತ್ಯ ತೃಪ್ತನು ನೀನು ಕೂಳಿಲ್ಲದಿರೆ ಮೇಲಕೇಳಲಾರೆನೊ ನಾನು 2 ಸರ್ವಜ್ಞನಾದ ರಂಗೇಶವಿಠಲ ನೀನು ಗರ್ವಿಷ್ಟನಾದ ಮಹಾಜ್ಞಾನಿಯು ನಾನು ಶರ್ವಾದಿಗಳಿಂದ ಸ್ತುತ್ಯನಾದವ ನೀನು ಉರ್ವಿಯೊಳು ಸರ್ವರಿಂದ ನಿಂದಿತನು ನಾನು 3
--------------
ರಂಗೇಶವಿಠಲದಾಸರು
ಪೇಳಲೇನು ವಿಧಿಯ ಲೀಲೆಯ ಮಹಿಮೆ ಪ ವ್ಯಾಳಶಯನನ ಸಂಕಲ್ಪದಂತಿಹುದು ಅ.ಪ. ಮೂರ್ತಿ ನೋಡುವ ಕಂಗಳು ಅಂಗನೆಯರ ರೂಪ ನೋಡಲೆಳಸಿದವು 1 ಶ್ರೀ ರಮಣನ ಕಥೆ ಕೇಳುವ ಕರ್ಣಗಳು ವಾರನಾರಿಯರ ವಾರ್ತೆಗೆ ಸೋತವು 2 ಮಂಧರಧರನ ನಿರ್ಮಾಲ್ಯವನೊಲ್ಲದೆ ಸುಂದರಿಯರ ಮೈ ಗಂಧ ಬಯಸಿತು ಘ್ರಾಣ 3 ಹರಿಯ ಪ್ರಸಾದವು ಭುಜಿಸದೆ ಜಿಹ್ವೆಯು ಪರಮ ನಿಷಿದ್ಧ ಪಾನ ಭೋಜನ ಬಯಸಿತು 4 ರಂಗನ ಭಕ್ತರ ಸಂಗವ ಬಿಟ್ಟು ಸ್ಪರ್ಶ ಅಂಗನೆಯ ದೇಹಾಲಿಂಗನ ಬಯಸಿತು 5 ಶ್ರೀನಿಕೇತನ ನಾಮ ನುಡಿಯುವ ನಾಲಿಗೆ ದೀನ ಕಾಮಾತುರ ನುಡಿಯಲಿ ನಲಿಯಿತು 6 ಪಾದ ಸ್ಮರಣೆಯ ಬಿಟ್ಟಾ ಮನ ತರುಣಿಯರು ಸದಾ ನೆನೆಸಿತು ಅಕಟಾ 7
--------------
ವರಾವಾಣಿರಾಮರಾಯದಾಸರು
ಮೂರು ನಾಮಗಳ ಧರಿಸಿರುವ ಕಾರಣವೇನು ಸಾರಿ ಪೇಳಲೊ ಈಗಲೆ ಪ. ಶ್ರೀ ರಮಾಪತಿ ಶ್ರೀನಿವಾಸ ವೆಂಕಟರಮಣ ಯಾರು ಇಟ್ಟರೋ ನಿನಗೆ ಈ ಮೂರು ನಾಮ ಅ.ಪ. ಶುದ್ಧ ವೈಷ್ಣವರೆಲ್ಲ ಶುದ್ಧ ಮೂರುತಿ ಎಂದು ಕರವ ಮುಗಿದು ಎದ್ದು ನೋಡಲು ನಿನ್ನ ಫಣಿಯೋಳೀ ತರವಿರಲು ಮಧ್ವಮತ ದೈವವೆಂದಿನ್ನು ತಿಳಿಯುವರೆ 1 ಮೂರುರೂಪನು ನಾನು ಮೂರು ಲೋಕಗಳಿಹವು ಮೂರು ಮಾಳ್ಪೆನು ಜಗವ ಮೂರು ಗುಣದಿ ಮೂರು ತಾಪವ ಗೆದ್ದು ಮೂರು ಮಾರ್ಗದಿ ಭಜಿಸೆ ಪಾರು ಮಾಡುವೆನೆಂದು ತೋರುವ ಸೊಬಗೊ 2 ಸಾಲದೆ ನಿನಗೆ ಸೌಂದರ್ಯಕೆ ಒಂದು ತಿಲುಕ ಪಾಲಸಾಗರಶಾಯಿ ಚಲುವಮೂರ್ತಿ ಕಾಲಕಾಲಕೆ ಜನರ ದೃಷ್ಟಿ ತಗುಲುವುದೆಂದು ಲೀಲೆಯಿಂದಲಿ ಹೀಗೆ ಧರಿಸಿದೆಯ ಪೇಳೊ 3 ಮೂರೆರಡು ಎರಡೊಂದು ಇಂದ್ರಿಯವನರ್ಪಿಸಲು ತೋರುವನು ನಿಜರೂಪ ಭಕ್ತಗೆಂದು ಸಾರುತ್ತಿದ್ದರು ವಾಯು ಅರಿಯದೆ ಭಜಿಸಿದರೆ ಮೂರುನಾಮವೆ ಗತಿ ಎನ್ನುವ ಬಗೆಯೊ 4 ಶ್ರೀಲೋಲ ಗೋಪಾಲಕೃಷ್ಣವಿಠ್ಠಲ ನಿನ್ನ ಈ ಲೀಲೆ ಬಗೆಯನು ಅರಿವವರ್ಯಾರೊ ವ್ಯಾಳಶಯನ ವೆಂಕಟೇಶ ಎನ್ನ ಮನದಿ ಕಾಲಕಾಲಕೆ ನಿನ್ನ ರೂಪವನೆ ತೋರೋ 5
--------------
ಅಂಬಾಬಾಯಿ
ರಾಮ ರಾಮ ಎಂಬೆರಡಕ್ಷರ | ಪ್ರೇಮದಿ ಸಲುಹಿತು ಸುಜನರನು ಪ ಹಾಲಾಹಲವನು ಪಾನವಮಾಡಿದ | ಫಾಲಲೋಚನನೆ ಬಲ್ಲವನು || ಆಲಾಪಿಸುತ್ತ ಶಿಲೆಯಾಗಿದ್ದ | ಬಾಲೆ ಅಹಲ್ಯೆಯ ಕೇಳೇನು 1 ಅಂಜಿಕೆಯಿಲ್ಲದೆ ಗಿರಿಸಾರಿದ ಕಪಿ-| ಕುಂಜರ ರಮಿಸುತÀ ಬಲ್ಲವನು || ಎಂಜಲ ಫಲಗಳ ಹರಿಗರ್ಪಿಸಿದ | ಕಂಜಲೋಚನೆಯ ಕೇಳೇನು 2 ಕಾಲವರಿತು ಸೇವೆಯ ಮಾಡಿದ ಲೋಲ ಲಕ್ಷ್ಮಣನೆ ಬಲ್ಲವನು || ವ್ಯಾಳಶಯನ ಶ್ರೀ ವಿಜಯವಿಠ್ಠಲನ ಲೀಲೆ ಶರಧಿಯ ಕೇಳೇನು3
--------------
ವಿಜಯದಾಸ
ಶ್ರೀಕರಾರ್ಚಿತ ರಂಗನಾಥ ಜಗದೇಕನಾಥ ಪ. ಪಾಕಶಾಸನವಂದ್ಯ ಪರಮ ಕಾರುಣ್ಯನಿಧಿ ಜೋಕೆಯಿಂ ಭಕ್ತರನು ರಕ್ಷಿಸಲು ಬಂದೆಯೊ ಅ.ಪ. ಸಿರಿ ಆಲದೆಲೆಯ ಮೇ- ಲೊಂದು ಬೆರಳನೆ ಚೀಪುತ ಮುಂದೆ ಶೇಷಶಯನನಾಗಿ ಬ್ರಹ್ಮನ ಪಡೆದು ಮಂದಹಾಸದಿ ನಲಿಯುತ ಇಂದಿರೆ ಸಹಿತಲಿರೆ ಭಕ್ತರೆಲ್ಲರು ಆಗ ನೋಡಲಿಲ್ಲೆಂದೆನುತ ಇಂದು ಈ ನಾಗರಾಜನ ಮಂಚವನೆ ಏರಿ ಸಿಂಧುಶಯನನೆ ಮಲಗಿದ್ಯಾ ಸ್ವಾಮಿ 1 ಅಜಗೆ ವೇದವನಿತ್ತು ಅಸುರನ್ನ ಕೊಂದು ನೀ ಭುಜಗಶಯನನೆ ಮಲಗಿದ್ಯಾ ಋಜುಗಣವಂದಿತನೆ ಬೆನ್ನಲಿ ಗಿರಿಪೊತ್ತ ಆಯಾಸದಿಂ ಮಲಗಿದ್ಯಾ ದ್ವಿಜಧ್ವಜನೆ ಭೂಮಿಯನು ಮೇಲೆತ್ತಿ ತಂದು ಸಾಕಾಗಿಲ್ಲಿ ಶಯನಿಸಿದೆಯಾ ಭಜಿಸಿದ ಬಾಲಕನ ಪಿತನೊಡನೆ ಕಾದಾಡಿ ಬಳಲಿ ನೀ ಪವಡಿಸಿದೆಯಾ ಸ್ವಾಮಿ 2 ಇಂದ್ರ ಪದವಿಗೆ ಬಂದ ಬಲೀಂದ್ರನ ನೆಲಕೊತ್ತಿ ಬಂದಿಲ್ಲಿ ಮಲಗಿಪ್ಪೆಯಾ ಕೊಂದು ಜನನಿಯ ಚಿಂತೆಯಿಂದ ಮನದಿನೊಂದು ಬಂದಿಲ್ಲಿ ಮಲಗಿಪ್ಪೆಯಾ ತಂದೆ ತಾಯಿ ಆಜ್ಞೆಯಿಂದ ಅಡವಿಯ ಅಲೆದು ಬಂದಿಲ್ಲಿ ಮಲಗಿಪ್ಪೆಯಾ ಮಂದರೋದ್ಧರ ಶ್ರೀಶ ಮಾವನ್ನ ಕೊಂದು ನೀ ಬಂದಿಲ್ಲಿ ಪವಡಿಸಿದೆಯಾ ಸ್ವಾಮಿ 3 ನಾರಿಯರ ವ್ರತ ಕೆಡಿಸಿ ನಾಚಿಕೆಯಿಂ ಬಂದು ಏರಿ ಮಂಚವÀ ಮಲಗಿದ್ಯಾ ಏರಿ ಕುದುರೆಯನು ದುಷ್ಟರ ಶಿರವ ತರಿಯುತ್ತ ಸೇರಿ ಶೇಷನ ಮಲಗಿದ್ಯಾ ಬಾರಿ ಬಾರಿಗೆ ಇಂಥ ಕಾರ್ಯಗಳ ಮಾಡಿಸಿ ಬಳಲಿಲ್ಲಿ ಮಲಗಿಪ್ಪೆಯಾ ನಾರದಾದ್ಯರ ಗಾನ ಕೇಳುತಾನಂದದಿಂ ನಿದ್ರೆಗೈಯುತ ಮಲಗಿದ್ಯಾ ಸ್ವಾಮಿ 4 ಭಕ್ತ್ರರಾಡುವ ಸಲಿಗೆ ಬಿನ್ನಪಕೆ ಬ್ಯಾಸತ್ತು ಯುಕ್ತಿಯಿಂ ಪವಡಿಸಿದೆಯಾ ಮುಕ್ತರ ಸ್ತುತಿಗೆ ನಿದ್ರೆಯು ಬಾರದೆಂತೆಂದು ಮುಕ್ತೇಶ ಇಲ್ಲಿ ಮಲಗಿದೆಯಾ ಎತ್ತ ನೋಡಲು ಮಾರ್ಗಬಿಡಳು ಕಾವೇರಿ ಎಂದು ಸೋತಿಲ್ಲಿ ಮಲಗಿಪ್ಪೆಯಾ ಚಿತ್ತಜಾಪಿತ ಸ್ವಾಮಿ ಭಕ್ತರೆಬ್ಬಿಸಲೆಂದು ಚಿತ್ತದಲಿ ಇಪ್ಪದೇನೋ ದೇವ 5 ಅಸುರರ ಕಾಟ ವೆಗ್ಗಳವಾಗೆ ಬಂದಿಲ್ಲಿ ಅಡಗಿ ನೀ ಮಲಗಿಪ್ಪೆಯಾ ಬಿಸಜನಾಭನೆ ನಿನ್ನ ಬಗೆಯರಿತು ಎಬ್ಬಿಸುವ ಬಲವಂತರನ್ಯಾರೆಲೊ ಶಶಿವದನ ಭಕ್ತರನುದ್ಧರಿಸಲೋಸುಗದಿ ಬಂದಿಲ್ಲಿ ಮಲಗಿಪ್ಪೆಯಾ ಭವ ಬಂಧನವ ಪರಿಹರಿಸಿ ಘಸನಗೊಳಿಸದಲೆ ಕಾಯೊ ಜೀಯ 6 ಏಳು ಫಣೆಯ ಸರ್ಪನ ಮೇಲೆ ಮಲಗಿ ಏಳು ಕಣ್ದೆರದು ನೋಡೋ ತಾಳಲಾರೆನೊ ನಿನ್ನ ಸೇವೆಯಗಲಿದ ದುಃಖ ಏಳು ಮನ್ನಿಸಿ ಪಾಲಿಸೊ ವ್ಯಾಳಶಯನನೆ ನಿನ್ನ ಸೇವೆಯನು ಎನ್ನಿಂದ ಲೀಲೆಯಿಂ ಸ್ವೀಕರಿಸೆಲೊ ಭಾಳ ಬೇಡುವದೇನೊ ಗೋಪಾಲಕೃಷ್ಣವಿಠ್ಠಲ ಈ ವ್ಯಾಳೆ ಎನ್ನ ಸಲಹೊ ಸ್ವಾಮಿ 7
--------------
ಅಂಬಾಬಾಯಿ
ಹರಿ ಹರಿ ನರಹರಿ ಎನ್ನಿಜನರು ಹರಿ ಹರಿ ಎಂದು ಕೊಂಡಾಡಿ ಸಜ್ಜನರು ಪ ನಂದನಂದನನಾ ಮಂದರಧರನಾ ಇಂದ್ರಾದಿ ಸನಕ ಸನಂದನ ವಂದಿತನಾ 1 ತಾಳಭಂಜನನಾ ವ್ಯಾಳಶಯನನÀ ಕಾಳಿಯ ಪೆಡೆಯ ಮೇಳ್ ಕುಣಿದ ಗೋವಳನ 2 ಶರಧಿ ಶಯನನ ವರ ಶಂಖಚಕ್ರಗದಾಬ್ಜ ಶ್ರೀಧರನ 3 ಮಾವ ಮರ್ದನನ ರಾವಣಾಂತಕನ ಗೋವರ್ಧನವನೆತ್ತಿ ಗೋವಕಾಯ್ದವನ 4 ಮಕರ ಕುಂಡಲನ ಮುಕುತಿದಾಯಕನ ಬಕನ ವೈರಿಯ ಕೋಣೆ ಲಕ್ಷ್ಮೀ ರಮಣನ 5
--------------
ಕವಿ ಪರಮದೇವದಾಸರು