ಒಟ್ಟು 52 ಕಡೆಗಳಲ್ಲಿ , 27 ದಾಸರು , 45 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸರಾಜರು ಇದಿರದಾವನು ನಿನಗೀ ಧರೆಯೊಳುಪದುಮನಾಭನ ದಾಸ ಪರಮೋಲ್ಲಾಸಾ ಪ ವಾದಿತಿಮಿರ ಮಾರ್ತಾಂಡನೆಂದೆನಿಸಿದೆವಾದಿಶರಭ ಭೇರುಂಢ ವ್ಯಾಸರಾಯಾ 1 ಯತಿಗಳೊಳಗೆ ನಿಮ್ಮಿಂದದವರುಗಳಪ್ರತಿಗಾಣೆನು ಈ ಕ್ಷಿತಿಯೊಳು ಯತಿರಾಯಾ2 ಹಮ್ಮನಳಿದು ಶ್ರೀಪತಿ ರಂಗವಿಠಲನ್ನಸುಮ್ಮಾನದಿಂ ಸೇವಿಪ ವ್ಯಾಸಮುನಿರಾಯಾ3
--------------
ಶ್ರೀಪಾದರಾಜರು
ಅಂಜಬ್ಯಾಡಂಜಬ್ಯಾಡವೋ ಭೂನಂದಸೂನು ಪ ಅಂಜಬ್ಯಾಡಂಜಬ್ಯಾಡ ಕರುಣನಿಧಿಯೆಸಂಜೆ ಮುಂಜಾನಿಲ್ಲೆ ಬಾರೋ ಮಂಜುಳಾದ ಕಥೆಯ ಪೇಳ್ವೆ ಅ.ಪ. ಪಾಂಡುತನಯನಂತೆ ನಿನ್ನ ಭಂಡಿ ಬಾಹು ಕನ್ನೆಮಾಡಿಕಂಡ ಕಂಡ ಕಾರ್ಯದಲ್ಲೆ ದಂಡಿಸುವುದು ಎನ್ನೊಳಿಲ್ಲ 1 ಗೋಪಿಯಂತೆ ಸೊಂಟದಲ್ಲೆ ತ್ಯಾಪಿ ಹಗ್ಗಗಳನೆ ಕಟ್ಟಿಶ್ರೀಪತಿಯ ಒರಳಿಗ್ಹಾಕಿ ಆಪರಿಂದ ಕಟ್ಟೋಣಿಲ್ಲ2 ಜಾರ ಚೋರನಂತೆ ನಿನ್ನ ನಾರೇರಂತೆ ವ್ಯಾಸಮುನಿಯಮಾರಿಗ್ಹಾಕಿ ವಾರ್ತೆಯನ್ನು ದೂರೋಣಿಲ್ಲ ಜಗದಿ ಸ್ವಾಮಿ 3 ಮಂದಗಮನೆ ಮೋಹಕಾಗಿ ಚಂದ್ರಮೌಳಿಯಂತೆ ಬೆಣ್ಣೆಹಿಂದೆ ಮುಂದೆ ಓಡಿಸಿಂದು ದಣಿಸೋಣಿಲ್ಲ ಶ್ರೀಶಕೃಷ್ಣ 4 ಇಂದಿರೇಶ ಎನ್ನ ಹೃದಯ ಮಂದಿರದೊಳಿಟ್ಟುಕೊಂಡುಚಂದ ಚಂದ ಕಥೆಯ ಪೇಳ್ವೆ ನಂದತನಯ ನೊಂದಿಸುವೆನು 5
--------------
ಇಂದಿರೇಶರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು
ಎಂಥ ಗುರುಶಿಷ್ಯರ ಜೋಡಿಯು ನೋಡಿರಿಇಂಥವರ ಸ್ಮರಿಸಿದರೆ ಚಿಂತೆ ದೂರಾಗುವದು ಪಧ್ರುವರಾಜವಂಶದಿಂದಿಳೆಯೊಳಗೆ ಅವತರಿಸಿಸರ್ವದುರ್'ಷಯದಲಿ ವೈರಾಗ್ಯ ಬೆಳೆಸಿಬಾಲ್ಯದಲಿ ಪರಮಹಂಸಾಶ್ರಮ ಸ್ವೀಕರಿಸಿಶ್ರೀಪಾದ-ರಾಜರೆಂದೆನಿಸಿ ಮೆರೆವರು ನೋಡು 1ಶ್ರೀಶನನು ಕಂಬದಿಂದ ತಂದ ಪ್ರಲ್ಹಾದನೆವ್ಯಾಸಮುನಿಯಾಗಿ ಅವತರಿಸಿ ಬಂದುದೇಶಾಧಿಪತಿಗೆ ಬಂದಾಪತ್ತು ಪರಿಹರಿಸಿಶ್ರೀ ಪಾದರಾಜರಿಗೆ ಶಿಷ್ಯರಾದರು ನೋಡು 2ಜ್ಞಾನ ವೈರಾಗ್ಯ ಭಕ್ತಿಯು ತುಂಬಿರುವುದುದೀನಜನ ಮಂದಾರ ಭಕ್ತ ಪುರಧೇನು'ಜುೀಂದ್ರ ವಾದಿರಾಜರಿಗೆ ಗುರು ಪರಮಗುರುಭೂಮಪತಿ'ಠ್ಠಲನ ಕುಣಿಸಿದ ಮಹಾತ್ಮರು 3ಸೋದೆ ವಾದಿರಾಜರು
--------------
ಭೂಪತಿ ವಿಠಲರು
ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ಪ. ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1 ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2 ಕದಳಿ ಫಲವ ತಂದು ಮುಂದಿಟ್ಟ 3 ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4 ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆಕೋಣನಿದಿರಿಗೆ ಕಿನ್ನರಿಯ ಮೀಟಿದಂತೆವೇಣುಧ್ವನಿ ಬಧಿರನ ಬಳಿ ಹೊರಡಿಸಿದಂತೆ ಕಣ್‍ಕಾಣದವನಿಗೆ ಕನ್ನಡಿಯ ತೋರಿದಂತೆ 5 ನೋಡಿದಿರ ಈ ಕನಕನಾಡುವ ಮಾತುಗಳಮೂಢ ಜನರರಿಯಬಲ್ಲರೆ ಮಹಿಮೆಯನಾಡಾಡಿಯಂತೆಯೆ ಮಾಡಿಬಿಟ್ಟರು ಇವಗೆ ನಾಡೆಲ್ಲ ಹುಡುಕಿದರು ಈಡಾರ ಕಾಣೆ6 ಪುರಂದರ ವಿಠಲನೆಂದ 7 * ಈ ಕೀರ್ತನೆ ಕನಕದಾಸರದೆಂದೂ, ‘ಪುರಂದರ ವಿಠಲ’ ಎಂಬ ಅಂಕಿತ ಪ್ರಕ್ಷಿಪ್ತವೆಂದೂ ಪ್ರತೀತಿ.
--------------
ಕನಕದಾಸ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರುರಾಜ ನಿನ್ನ ಹೊರತು ಪೊರೆವ ಧೊರೆಗಳ ಕಾಣೆ | ಶರಣಜನರಿಷ್ಟವನೆ ಸುರತರುವಿನಂತೀವೆ ಪ ತರಳಪ್ರಹ್ಲಾದನಾಗಿರಲು ವರಭಕುತಿಯಿಂ | ನರಹರಿಯ ಮೆಚ್ಚಿಸಿದೆ ಪರಮಕರುಣಾಸಿಂಧೊ 1 ವ್ಯಾಸಮುನಿಯು ನೀನೆ ವಾಸುದೇವನ ಭಜಿಸಿ | ಲೇಸಾದ ಚಂದ್ರಿಕೆಯ ಭೂಸುರರಿಗರುಹಿದೆ 2 ಶ್ರೀರಾಮಚಂದ್ರಪದಸರಸೀರುಹಾಭೃಂಗ | ಶ್ರೀ ರಾಘವೇಂದ್ರಯತಿ ಸುರುಚಿರಕೃಪಾಪಾಂಗ 3 ನರಹರಿ ಸಿರಿರಾಮ ಮುರವೈರಿ ಮುನಿವ್ಯಾಸ | ಇರುತಿಹರು ನಿನ್ನೊಳು ಧರೆಯ ಪಾಲಿಸೆ ಮುದದಿ 4 ಕರೆದಲ್ಲಿ ಬರುವೆನೆಂದೊರೆದ ವಚನವ ಸಲಿಸೆ | ಭರದಿ ನಾರಾಯಣಪುರಕೈದಿದಿಯೊ ಮುದದಿ 5 ಭೀಮಸೇತ್ವ್ಯಾಖ್ಯ ಮಠ ಸೋಮರಘುತಿಲಕರಿಂ | ದೇ ಮಹಾಸೇವೆಯ ಕೈಗೊಂಡೆಯೋ ಮುದದಿ 6 ದೋಷದೂರನೆ ಪ್ರಭುವೆ ಆಶೆಯಿಂ ಸೇವಿಪರ | ಕ್ಲೇಶವೆಲ್ಲವನಳಿದು ಶ್ರೀಶಕೇಶವನೊಲಿಸೊ 7
--------------
ಶ್ರೀಶ ಕೇಶವದಾಸರು
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ