ನಿತ್ಯ ಶುಭಮಂಗಳ ಪ
ಶ್ರೀರಂಗನಾಥನಿಗೆ ಮೂರಂಗವೇಷನಿಗೆ
ಮಾರಾರಿಸಖನೆಂಬ ಮದನಪಿತಗೆ
ನೂರೆಂಟುತಿರುಪತಿಗೆ ಕಾರಣನು ನಿಜದಿವ್ಯ
ವೀರವೈಷ್ಣವನೆಂಬೊ ಮಹಾರಾಜಗೆ 1
ನೀಲಕಂಠನಪ್ರಿಯಗೆ ಮೇಲುಕೋಟೆಯ ಧೊರೆಗೆ
ಏಳುಸುತ್ತಿನ ಕೋಟೆಯೊಳಗಿರುವಗೇ
ಕಾಳೆಕೊಂಬುಧ್ವನಿಯ ಕೇಳುವಾನಂದನಿಗೆ
ವಾಲಿಯನು ಕೊಂದಂತ ವೋಂಕಾರಗೆ 2
ಶಂಕರಪ್ರಿಯನಿಗೆ ಶ್ರೀಪಂಕಜಾಕ್ಷನಿಗೆ
ಕುಂಕುಮಾಂಕಿತ ಪಕ್ಷಿವಾಹನನಿಗೆ
ಕಂಕಣವು ಕರದೊಳಗೆ ಕಟ್ಟಿ ವೊ ಶ್ರೀಗುರು
[ವಂಕ]ತುಲಸಿರಾಮದಾಸ ಪೋಷಿತನಿಗೆ 3