ಒಟ್ಟು 12 ಕಡೆಗಳಲ್ಲಿ , 7 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡಳು ಶ್ರೀ ಹರಿಯ ಶತಮಾ- ರ್ತಾಂಡ ತೇಜೋನಿಧಿಯ ಪ. ಪುಂಡರೀಕಾಂಬಕನ ಪೂರ್ಣಾ- ಖಂಡ ಜಗನ್ಮಯನ ಅ.ಪ. ಶಂಖಚಕ್ರಾಂಕಿತನ ಧ್ವಜವ- ಜ್ರಾಂಕುಶಪದಯುಗನ ಶಂಕರಹಿತಕರನ ಕೌಸ್ತುಭಾ- ಲಂಕೃತಕಂಧರನ 1 ಮಕರಕುಂಡಲಧರನ ಸಜ್ಜನ ನಿಕರೇಷ್ಟಪ್ರದನ ಪ್ರಕೃತಿನಿಯಾಮಕನ ಸತ್ಯಾ- ತ್ಮಕ ಪೀತಾಂಬರನ 2 ಅಕ್ಷಿಗೋಚರನ ಭಕ್ತರ ಪಕ್ಷದೊಳಿರುತಿಹನ ಪಕ್ಷೀಂದ್ರವಾಹನನ ಶ್ರೀಹರಿ ಲಕ್ಷ್ಮೀನಾರಾಯಣನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಂಡಳು ಶ್ರೀ ಹರಿಯ ಶತಮಾ- ರ್ತಾಂಡ ತೇಜೋನಿಧಿಯ ಪ. ಪುಂಡರೀಕಾಂಬಕನ ಪೂರ್ಣಾ- ಖಂಡ ಜಗನ್ಮಯನ ಅ.ಪ. ಶಂಖಚಕ್ರಾಂಕಿತನ ಧ್ವಜವ- ಜ್ರಾಂಕುಶಪದಯುಗನ ಶಂಕರಹಿತಕರನ ಕೌಸ್ತುಭಾ- ಲಂಕೃತಕಂಧರನ 1 ಮಕರಕುಂಡಲಧರನ ಸಜ್ಜನ ನಿಕರೇಷ್ಟಪ್ರದನ ಪ್ರಕೃತಿನಿಯಾಮಕನ ಸತ್ಯಾ- ತ್ಮಕ ಪೀತಾಂಬರನ 2 ಅಕ್ಷಿಗೋಚರನ ಭಕ್ತರ ಪಕ್ಷದೊಳಿರುತಿಹನ ಪಕ್ಷೀಂದ್ರವಾಹನನ ಶ್ರೀಹರಿ ಲಕ್ಷ್ಮೀನಾರಾಯಣನ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕರುಣದೊಳೆನ್ನನು ನೀ ಪ ಪಡೆದ|ಜಗದೀಶ್ವರಿಯೆ ಅ ಪ ಧರಣಿಯ ಭಾರವನು|| ಶ್ರೀ| ಸರ್ವೇಶ್ವರಿಯೆ 1 ನಂಬಿಹೆ ಶಂಕರಿಯೆ || ಇಂಬುಗೊಡುತ ನೀ| ಬೆಂಬಿಡದೆನ್ನನು 2 ಪಂಕಜಮುಖಿ ಶ್ರೀ| ಶಂಕರಿ ಶುಭಕರಿ| ಕಿಂಕರಪಾಲಿನಿಯೆ || ಬಿಂಕದ ದಾನವ| ಸಂಕುಲವಳಿಸಿದ| ಶಂಖಚಕ್ರಾಂಕಿತೆ | ಶ್ರೀ ದುರ್ಗಾಂಬಿಕೆ 3
--------------
ವೆಂಕಟ್‍ರಾವ್
ದಯದೋರು| ದಯದೋರು | ದಯದೋರು | ಜನನಿ ಪ ಜಯ ಜಗನ್ಮಾತೆ ನೀ | ದಯದೋರಿ ಪೊರೆ ನೀ ಅ.ಪ ಆದಿ ನಾರಾಯಣಿ | ಮಾಧವಭಗಿನಿ || ಸಾಧುಸುಪ್ರೀತೆ ನೀ| ವೇದವಂದಿತೆ ನೀ 1 ಭುವನಪಾಲಿನಿ ದೇವಿ | ಭುವನವಂದಿತೆ ನೀ || ಭವಭಯಹಾರಿಣಿ | ಭುವನೇಶ್ವರಿ ನೀ 2 ಶಂಖಚಕ್ರಾಂಕಿತೆ | ಶಂಕರಿ ಸುಗುಣಿ | ವೆಂಕಟರಮಣನ | ಪ್ರೇಮದ ಭಗಿನಿ 3
--------------
ವೆಂಕಟ್‍ರಾವ್
ಪೊರೆಯುವಳು ದೇವಿ ಪೊರೆಯುವಳು|| ಕರುಣದಿಂದ ನಮ್ಮ ಪೊರೆಯುವಳು ಪ ಶರಣರಿಗೊಲಿದವರಿಷ್ಟವ ಸಲಿಸುವ| ಪರಮಪಾವನೆ ದೇವಿ ಪೊರೆಯುವಳು ಅ ಪ ತೋಷದಿಂದಲವಳಾಶ್ರಿತ ಜನರಭಿ| ಲಾಷೆಯ ಸಲಿಸುತ ಪೊರೆಯುವಳು|| ವಾಸವಾದಿ ಸುರವಂದಿತೆ ಶ್ರೀ ಪರ| ಮೇಶ್ವರಿದೇವಿಯು ಪೊರೆಯುವಳು 1 ಮಹಿಷಾಸುರನನು ಮಹಿಯೊಳು ಕೆಡಹಿದ| ಮಹಿಷಮರ್ದಿನಿದೇವಿ ಪೊರೆಯುವಳು|| ಮಹಿಮೆಯದೋರುತ ಖಳ ಧೂಮ್ರಾಕ್ಷನ| ದಹಿಸುತ ಮಹಿಯನು ಪೊರೆದವಳು 2 ಚಂಡ ಮುಂಡ ಖಳ ತಂಡವಳಿಸಿ ಬ್ರ | ಹ್ಮಾಂಡದ ಭಾರವ ಕಳೆದವಳು|| ರುಂಡವ ತರಿಯುತ ಚೆಂಡಾಡಿದ ಶ್ರೀ| ಚಾಮುಂಡೇಶ್ವರಿ ಪೊರೆಯುವಳು 3 ಭಕ್ತರ ಪೊರೆಯಲು ರಕ್ತಬೀಜಾಖ್ಯನ| ರಕ್ತ ಪಾನÀವನು ಗೈದವಳು|| ಯುಕ್ತಿಯಿಂದಲಾ ನಕ್ತಂಚರನನು| ಶಕ್ತಿಸ್ವರೂಪಿಣಿ ತರಿದವಳು 4 ಶುಂಭ ನಿಶುಂಭರ ವಧಿಸಿದ ಶ್ರೀ ಜಗ| ದಂಬಾದೇವಿಯು ಪೊರೆಯುವಳು|| ಅಂಬುಜಲೋಚನೆ ಶಂಭುಮನೋಹರೆ | ಇಂಬುಗೊಡುತ ನಮ್ಮ ಪೊರೆಯುವಳು 5 ದುರುಳರ ಬಾಧೆಗೆ ಬೆದರುತ ಸುರತತಿ | ಮೊರೆಯಿಡಲಭಯವನಿತ್ತವಳು|| ಅರುಣಾಸುರನ ಸಂಹರಿಸುತ ನಂದಿನಿ| ನದಿಯೊಳು ಶರಣರಿಗೊಲಿದವಳು 6 ಪರಿಪರಿ ವಿಧದಲಿ ಧರಣಿಯ ಭಾರವ ಪರಿಹರಿಸುತಲಿ ಪೊರೆದವಳು|| ಪರಮಕೃಪಾಕರಿ ಶ್ರೀ ಜಗದೀಶ್ವರಿ ಶರಣರಾದ ನಮ್ಮ ಪೊರೆಯುವಳು 7 ಶಂಕರಿ ಶುಭಕರಿ ಕಿಂಕರಪ್ರಿಯಕರಿ|| ಪಂಕಜಲೋಚನೆ ಪೊರೆಯುವಳು|| ಶಂಖಚಕ್ರಾಂಕಿತೆ ಶ್ರೀ ದುರ್ಗಾಂಬಿಕೆ| ಕಿಂಕರರೆಮ್ಮನು ಪೊರೆಯುವಳು 8 ಕೈಟಭಾದಿ ಖಳಸಂಕುಲವಳಿಸಿದ| ನಿಟಿಲಾಂಬಕಿ ಶಿವೆ ಪೊರೆಯುವಳು|| ಜಟಾಮಕುಟ ಸುರತಟನೀಧರಸತಿ| ಕಟಿಲಪುರೇಶ್ವರಿ ಪೊರೆಯುವಳು9
--------------
ವೆಂಕಟ್‍ರಾವ್
ಮಾಧವ ಮಧುಸೂದನ ಗೋವರ್ಧನ ಪ ದೋಷನಿವಾರಣ ಶೇಷಾರಿಗಮನ ವಾಸುಕಿಗಿರಿಶಯನ 1 ಕೀಟಕ ಸಂಹರ ಹಾಟಕಾಂಬರ ತಾಟಕಿಪ್ರಾಣಹರಣ 2 ಕೌಸ್ತುಭಮಾಲಾ ಕುಜನರ ಕಾಲ ಕಂಸಾಸುರಾದಿ ಮರ್ದನ 3 ಗೋಕುಲವಾಳಿದ ಗೋಪಿಯರ್ವರದ ಗೊಪ ಗೋಪತಿ ನಂದನ 4 ಮಂದರ ನಿಲಯ ಸಿಂಧುಜಾಪ್ರಿಯ ಬಂಧುವೆ ಅನಾಥಜನ 5 ಜಗದೋದ್ಧಾರಣ ಜಗತ್ರಯಮೋಹನ ಜಗಜೀವನ ಪಾವನ 6 ಶಂಖಚಕ್ರಾಂಕಿತನೆ ಕಿಂಕರಜನ ಪ್ರೀತ ಶಂಖಸುರಾದಿ ಮರ್ದನ 7 ಯದುಕುಲಸಂಭವ ಸದಯ ಯಾದವ ಸದಮಲಸುಖಸದನ 8 ಹರಿಗೋವಿಂದ ಪರಮಾನಂದ ನರಹರಿ ಸಿರಿರಮಣ 9 ಸಿರಿನರಸಿಂಗ ಪರಿಭವಭಂಗ ಪರತರ ಗಿರಿಧಾರಣ 10 ನಿತ್ಯನಿರಾಮಯ ನಿರ್ಗುಣ ನಿರ್ಭಯ ನಿರಂಜನ 11 ಪರಮಪುರುಷ ಹರಿ ಸರ್ವೇಶ ಸುರಮುನಿನುತಚರಣ 12 ನಿಮಗೋಚರ ಜಗದಾಧಾರ ಅಘನಾಶ ಭಜಕಜನ 13 ವೇದಾದಿನಮಿತ ವೇದವೇದಾತೀತ ಸಾಧುಸಜ್ಜನಪ್ರಾಣ 14 ವರದಶ್ರೀರಾಮ ನಿರತರ ಪ್ರೇಮ ಪರಿತರ ಪರಿಪೂರ್ಣ15
--------------
ರಾಮದಾಸರು
ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು