ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನುತ ಕರವರ ಗೀತಾವಾದಿ ಪರಮ ದಯಾಳು ಗುರೋ ಪ ಜಲಚರರೂಪದಿ ವೇದವ ತಂದಿರೆ ಮತ್ಸ್ಯನೆನಿಸಿದೆಯೋ ಬಲವಂತನೆನಿಸಿಯದ್ರಿಯ ನೆತ್ತಿದಿ ಬಲುಘನ ಕಚ್ಛಪಾದಿ ನೆಲಸಿದ ಭೂಗೋಲವನಾಸದಿ ಭಲೆ ವರಾಹವತಾರಿ ಸ್ಮರಿಸಲು ತಕ್ಷಣದಿ 1 ವಟುವಾಗಿ ಬಲಿಯನ್ನಿಳಿಗೊತ್ತೀದಿ ದಟಹರ ವಾಮನನಹುದೋ ಹಟದಿ ಮಾತೆಯ ಶಿರವಾರಿಸಿದಿ ಭಟ ಪರಶುರಾಮ ನೀನು ಕುಟಿಲ ದುಶ್ಶಾಸನ ಧ್ವಂಸಗೈದಿ ಪಟು ರಾಮನೆನಿಸಿದೆಯೋ ಶಠರ ಸಂಹರಿಲು ಶ್ರೀ ಕೃಷ್ಣನೆನಿಸಿದಿ ನಿಟ್ಟಿಪುದೀಗೆನ್ನ ಕೃಪಾನಿಧಿ 2 ತರುಣಿ ವೃಂದದ ವ್ರತವನ್ನಳಿದಿ ಪರಮ ಬೌದ್ಧನಹುದೋ ಕರದ ಖಡ್ಗದಿ ದನುಜರನಳಿಸಿ ವರ ಕಲ್ಕಿರೂಪ ನೀನು ಪರಬ್ರಹ್ಮ ಪುಟ್ಟುವಿ ಜವದಿ ಪೊರೆಯುವಿ ನುತಿಪರನಾ ಕಾರುಣ್ಯನಿಧಿ 3
--------------
ನರಸಿಂಹವಿಠಲರು
ಹೀಗಿದ್ದವನೇ ತಿಳಿದವನು | ನಿಜ | ಯೋಗದ ಮಾರ್ಗಕ ಬೇಗ ಹೊಂದುವನು ಪ ನೆಂಟರಿಷ್ಟರೊಳು ದಾಕ್ಷಿಣ್ಯಾ | ತನ್ನ | ಬಂಟ ಜನರ ಮ್ಯಾಲ ಘನ ಕಾರುಣ್ಯಾ | ಶುಂಠ ಶಠರೊಳು ಕಾಠಿಣ್ಯಾ | ತನ | ಗುಂಟಾದ ಸಾಧುಗಳೊಳು ಪ್ರೀತಿ ಬಣ್ಣಾ 1 ಅರಸುಗಳಲಿ ನಮ್ರ ಸ್ಥಿತಿ | ಸರ್ವ | ವರಿತ ವಿದ್ವತ್ತರೋಳರ್ಜಿವ ವೃತ್ತಿ | ಅರಿಗಳೊಳಗೆ ಶೌರ್ಯ ಖ್ಯಾತಿ | ತನ್ನ | ಗುರುಗಳೊಳಗ ಭೆಜ್ಜರಂಜಿಕೆ ನೀತಿ 2 ಹೆಂಗಳೆಯರೊಳು ಧೂರ್ತತನಾ | ತಾನು | ಹಿಂಗದೆ ಮಾಡುವ ಶ್ರವಣ ಮನನಾ | ತುಂಗ ಮಹಿಪತಿ ಸುತ ಪ್ರಿಯನಾ | ಮಂಗ | ಳಂಗುಟ ನೆನೆವನು ಬಿಡದನು ದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು