ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿ ಮಾನವ ಭ್ರಾಂತಿಸುಖವ ಪ. ನಂಬಲಾಗದು ಮಣ್ಣಬೊಂಬೆಯಂದದ ದೇಹ ಡಂಭ ಮೋಹಗಳಿಂದ ಮದಿಸುತ ಹಂಬಲಕ್ಕೀಡಾಗುವಂತಿದ ಅ.ಪ. ನೀರಮೇಲಣಗುಳ್ಳೆ ತೋರಿಹಾರುವ ಬಗೆ ಮಾರನಾಟಿದೊಳಾಡುತ ನಲಿಯುತಲಿಕೆ ಸಾರಿಬರೆ ತನಗಪಮೃತ್ಯುಕಾಲವು ಮೀರಿದುಬ್ಬುಸವಾಂತು ಮಿಡುಹುತ ಬೋರಿಡುತ ಬೊಬ್ಬರಿಸಿ ತರಳರ ಸಾರಿಕೂಗುವ ಕಾಯಧಿರವನು 1 ನಾನು ನನ್ನದಿದೆಂದಭಿಮಾನದಿಂ ಮತಿಗೆಟ್ಟು ಜ್ಞಾನವಿಲ್ಲದೆ ಭುವಿಯೊಳ್ ದೀನನಾಗಿ ನಾನಾಪರಿಯಿಂ ಸೊರಗಿ ನರಳುತಿಹ ನೀ ನಿಜವೆಂದು ನಂಬದೆ ಜ್ಞಾನ ಲಾಭದಿ ಮನುಜನೆನ್ನಿಸೆ 2 ಕಾಮಕ್ರೋಧವ ಬಿಟ್ಟು ರಾಮನೊಳ್ ಮನವಿಟ್ಟು ತಾಮಸಬುದ್ಧಿಯನೀಡಾಡುತೆ ಮತ್ತೆ ಶಮದಮಾದಿಗಳನಭ್ಯಸಿಸುತೆ ಕ್ಷಮೆಯನಾಶ್ರಯಿಸುತೆ ಸುಖದುಃಖದೊಳ್ ಕಮಲನಯನ ಶೇಷಾದ್ರಿನಾಥನ | ವಿಮಲ ಪದದೊಳೈಕ್ಯನಾಗಲು ಅಮಭಕ್ತಿಯೆ ಮುಖ್ಯ ಸಾಧನ ನಮಗೆ ಈ ಭ್ರಾಂತಿ ಸಲ್ಲದು 3
--------------
ನಂಜನಗೂಡು ತಿರುಮಲಾಂಬಾ
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವೈದೇಹಿ ಪಾಲಿಸೆನ್ನಂ ನಂಬಿದೆ ನಿನ್ನಂ ಪ. ವೇದವಿದಿತೇ ತವಪಾದವ ಸ್ಮರಿಸುವ ಕರವ ಅ.ಪ. ಕಾಮಿತಾರ್ಥವ ನೀಡುವಳೆಂಬುವ ಬಿರುದಾಂಕಿತೆಯಾಗಿರುವ ಕಾಮಜನನೀ ನಿನ್ನ ನಾಮ ಮಂತ್ರಗಳನ್ನು ನೇಮನಿಷ್ಠೆಯೋಳ್ ಜಪಿಸುವಂದದಿ ಸು ಪ್ರೇಮದಿಂದಲಿ ವಿಮಲಮತಿಕೊಡು 1 ಜಾನಕಿನಾಮವ ಧರಿಸಿ ದಾನವಕುಲವೆಂಬ ಕಾನನಂಗಳಿಗಂತು ಹವ್ಯ ವಾಹನನೆನಿಪ ರಾಮನ ಕೈಯಪಿಡಿದ ಪರಮಪಾವನೆ 2 ಶಮದಮಾದಿಗಳಿಂದ ಮೆರೆಯುತಲಿರ್ಪ ಕ್ಷಮೆಗೆ ನೀ ನೆಲೆಯೆಂದು ಯಮಿಕುಲವರ್ಯರು ನಮಿಸಿ ಸ್ತುತಿಸುತ್ತಿಹರು ವಿಮಲ ಶೇಷಾದ್ರಿನಾಥನ ರಮಣಿ ನಿನ್ನಡಿ ಮಣಿದು ಬೇಡುವೆ 3
--------------
ನಂಜನಗೂಡು ತಿರುಮಲಾಂಬಾ
ಶ್ರೀಶ್ರೀಪ್ರಾಣೇಶದಾಸರಾಯರ ಸ್ತೋತ್ರ ದಾಸರಾಯರ ದಿವ್ಯ ಚರಣ ಭಜಿಸಿ ಶ್ರೀ ಪ್ರಾಣೇಶದಾಸಾರ್ಯ ಗುರುವರ್ಯಾ ಪ ಪಾದ ಭಜಿಪ ಸದ್ಭಕ್ತರ ಏಸುಜನುಮದ ಪಾಪರಾಶಿ ಪರಿಹರವು ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತಮತ ತತ್ವದ ತೆರೆಗಳಿಂ ಸೂಸುತ ಧರಣಿಸುರರಿಗೆ ರಾಮನಾಮಾಮೃತ ನಿರುತಭಜಿಸಲು ಙÁ್ಞನವೈರಾಗ್ಯ ತರುಮಣಿಯ ಹರಿಭಕುತಿ ಧೇನುವನ್ನೀವÀ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ ಅಜ್ಞಾನತಿಮಿರವನು ದೂರೋಡಿಪ ಸೂಜ್ಞರೆಂಬುವ ತಾವರೆಗಳರಳಿಸುವಂಥ ಅಜ್ಞಕುಮುದುಗಳ ಬಾಡಿಸುವ ಭಾಸ್ಕರನೆನಿಪ 3 ನಮಿಪಜನ ಭವತಾಪಕಳೆದು ಸದ್ಭಕ್ತಿಯಂ - ಬಮಿತ ಅಹ್ಲಾದವನು ಬೀರುವಂಥ ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸಕುಲತಿಲಕ ಪ್ರಾಣೇಶರಾಯನ ಕವನ ಶ್ರೀಶಕಥೆಗಳ ರಾಶಿಮೀಸಲಾಗಿರಲು ಆ ಸುಭಕ್ತರಿಗೆ ಸಂತೋಷಗೊಳಿಸುಲು ಸರ್ವ ದೇಶದಲಿ ಮೆರೆಸಿ ಸತ್ಕೀರ್ತಿಯನು ಪಡೆದಂಥ5 ಈ ಗುರುಗಳ ಪಾದಕೆರಗಿದ್ದ ಶಿರಧನ್ಯ ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ಈ ಗುರುಗಳ ವಾಣಿ ಕೇಳಿದ್ದ ಕಿವಿ ಧನ್ಯ ಈ ಗುರುಗಳನು ಮನದಿ ನೆನೆವÀನರ ಧನ್ಯ 6 ರಾಗದ್ವೇಷಾದಿಗಳ ಗೆದ್ದು ಸದ್ಭಕ್ತಿಯಿಂ ಶ್ರೀಗುರುಪ್ರಾಣೇಶ ಭಜಕರೆನಿಪ ನಾಗಪರಿಯಂತ ವರದೇಶ ವಿಠಲನ ಪ್ರೀಯ ಪಾದ ಭೃಂಗ 7
--------------
ವರದೇಶವಿಠಲ
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು