ಒಟ್ಟು 13 ಕಡೆಗಳಲ್ಲಿ , 8 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ
ಏನ ಬಣ್ಣಿಪೆನಮ್ಮ ಪ. ಏನ ಬಣ್ಣಿಪೆ ಪೂರ್ಣಪ್ರಜ್ಞ ಪಂಡಿತರಾಯರ ಅ.ಪ. ಮಧ್ವಸರೋವರ ತೀರದ ಮುದ್ದುಕೃಷ್ಣನ ಪ್ರ-ಸಿದ್ಧಿಯಿಂದ ಪೂಜೆಮಾಡಿ ಗೆದ್ದ ಬಲವಂತ ರಾಯರ1 ಭವಬಂಧ ಮಾಯಿಗಳ ಕಾಲಲೊದ್ದು [ಮೂಲೆಲ್ಹಾಕಿ]ಮಧ್ವಶಾಸ್ತ್ರವೆಲ್ಲ ಪ್ರಸಿದ್ಧ ಮಾಡಿದ ಯತಿರಾಯರ 2 ಸಿರಿ ಹಯವದನನ ಚರಣಕಮಲವನುನಿರುತವಾಗಿ ಸೇವಿಸುವ ಅಚ್ಛಿನ್ನ ನಿಜದಾಸರ 3
--------------
ವಾದಿರಾಜ
ಜಯ ಜಯ ಜಯ ಮುನಿವರ್ಯ ಜಯ ಮಧ್ವಶಾಸ್ತ್ರ ವ್ಯಾಖ್ಯಾನಾತಿಗೇಯ ಪ ಮಂಗಲವೇಡೆಯೊಳುದುಭವಿಸುತ ಜಗ- ನ್ಮಂಗಲಕರವಾದ ಟೀಕೆಯ ರಚಿಸಿ ಮಂಗಲಮೂರುತಿ ರಾಮನ ಭಜಿಸುತಾ- ನಂಗನ ಜಯಿಸಿದ ಮುನಿಕುಲ ತಿಲಕ 1 ವಿದ್ಯಾರಣ್ಯನೆಂಬ ಖಾಂಡವ ವನವನೆ ಯಾದವೇಶನ ಸಖನಂತೆ ನೀ ದಹಿಸಿ ಮಧ್ವಶಾಸ್ತ್ರವೆಂಬ ರತ್ನವ ಜನರಿಗೆ ಸುಧೆಯಂತೆ ಕುಡಿಸಿದ ಯತಿವಂಶ ರತ್ನ 2 ಮಾಧ್ವಗ್ರಂಥವ ನೀನು ಬಂಧುವೆಂದೆಣಿಸುತ ರಾಜೇಶ ಹಯಮುಖ ಶ್ರೀರಾಮಚಂದ್ರ ಪಾಂದಾಂಬರುಹವನ್ನೆ ಬಿಡದೆ ಸೇವಿಸುತಲಿ ವಾದೀಭಗಳಿಗೆ ಮೃಗೇಂದ್ರನಾಗಿರುವಿ 3
--------------
ವಿಶ್ವೇಂದ್ರತೀರ್ಥ
ತಿಮಿರ ಭರದಿ ಬಿಟ್ಟೋಡಿತು ಪ ಶ್ರುತಿ ಶಾಸ್ತ್ರವೆಂಬ ಕಂಜಗಳತಿ ರಮ್ಯದಿಂದರಳಿದವುಕ್ಷಿತಿಯೋಳು ಕುಮುದದಂತೆ ದುರ್ಮತಗಳೆಲ್ಲ ಕುಗ್ಗಿದವು ||ಇತರ ದೇವಂಗಳಿಂತು ಭಜಿಸಿದೆ ರಘುಪತಿಯೆ ದೈವ ಮಧ್ವ ಮತವೆ ಸಿದ್ಧಾಂತವುಸತತವನು ಹರಿ ಸರ್ವೋತ್ತಮನೆಂದುತುತಿಸುವ ಕಾಂತಿಯು ತುಂಬಿತು ಜಗದೊಳು 1 ಚಕ್ರವಾಕ ಧ್ವನಿಗೈದವು ||ಸಾರಿ ಸಾರಿಗೆ ಹೊತ್ತು ಯೇರುವ ತೆರದಲಿಶ್ರೀರಮಣನ ಚರಣಾರವಿಂದವು ನಿತ್ಯಆರಾಧಿಸುವ ವಿಚಾರವಿದೆನುತಲಿತಾರತಮ್ಯ ಜ್ಞಾನ ತೋರಿದರಿಳಿಯೊಳು 2 ಅಂದವಾದಲಾದಿನ್ನೆ ಹನುಮಂತನೊಡೆಯ(ಮುಂದಿನ ಪಾದಗಳು ಸಿಕ್ಕಿಲ್ಲ)
--------------
ಮೋಹನದಾಸರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಮಾತು ಆಡುವೆ ಯಾತಕೆ ಮನವೆ ನೀ ಸೋತು ಸುಮ್ಮನಿರು ಜೋಕೆ ಪ ಮಾತು ಆಡುವೆ ಯಾಕೆ ಮಮತಾ ಅಹಂಕಾರದಿ ಶ್ರೀತರುಣಿವರನ ಸಿರಿನಾಮವಿಲ್ಲದೆ ಅ.ಪ ಕಾಯ ಅಸ್ಥಿರವೆನ್ನದೆ | ಇಹ ಪರಕೆ ಸ- ಮಾಯವಾದಗಳಾಡೆ ಬಾಯಿ ನೋವಲ್ಲದೆ 1 ವೇದ ಪುರಾಣವಿಲ್ಲ | ಶಾಸ್ತ್ರವೆ ಬ್ರಹ್ಮ- ವಾದವೇ ಮೊದಲೇಯಿಲ್ಲಾ ಸಾಧನೆಯೆಂಬುವದು ಲೇಶಯಿದರೊಳಿಲ್ಲಾ ಹಾದಿಹೋಕರ ಕೂಡಿ ಪ್ರೌಢನು ನಾನೆಂದು 2 ಹರಟೆ ಹರಟೆ ಮೋದಿಸಿ ಪರಗತಿ ಚಿಂತೆ ಬಿಂದು ಮಾತ್ರವು ಕಾಣೆ ಹರಿವ ನೀರೊಳು ಬೂದಿಹಾಕುವಂದದಿ ವ್ಯರ್ಥ 3 ಒಂದಕ್ಕೊಂದ್ಹೆಚ್ಚಿಸುತ | ಶುಷ್ಕವಾದ- ದಿಂದ ಕಾಲವ ಕಳೆಯುತ ನಿಂದಿಸಿ ಪರರ ಸ್ವಯೋಗ್ಯತೆ ತಿಳಿಯದೆ 4 ಬಲ್ಲೆನಾ ಬಿಡು ಎಂಬುವೆ | ಸದಾ ಒಬ್ಬ- ಪುಲ್ಲಲೋಚನ ಗುರುರಾಮವಿಠಲನ ಕಾಣ- ಲಿಲ್ಲ ಶೋಧಿಸಿ ತಿಳಿಯಲಿಲ್ಲ ಬರಿದೆ ಬಾಯಿ 5
--------------
ಗುರುರಾಮವಿಠಲ
ಮುಖ್ಯಪ್ರಾಣ ಮೂಲಗುರು ಅಹುದೊ ಪ. ಅಹುದೊ ಧರಣಿಯ ಮ್ಯಾಲೆ ದಿವಾಕರನ ಪ್ರಭೆಯಂತೆಅಹುದೊ ಮಧ್ವಮತಕೆ ಬಿರುದು ನೀ ಅಹುದೊಅ.ಪ. ಅಂಜನೆಯ ಗರ್ಭದಲಿ ಉದ್ಭವಿಸಿದ್ಯೊ ನೀನುಸಂಜೀವನವ ತಂದ್ಯೊ ಸಕಲ ಕಪಿಗಳಿಗೆಮಂಜುಭಾಷಣ ನೀನು ಶರಧಿಯನು ದಾಟಿದೆಯೊಕಂಜಾಕ್ಷಿ ಸೀತೆಗೆ ಉಂಗುರವನಿತ್ತೆ 1 ಕುಂತಿಯ ಗರ್ಭದಲಿ ಉದ್ಭವಿಸಿದ್ಯೊ ನೀನುಪಂಥವನಾಡಿ ದಾಯಾದ್ಯರೊಡನೆಕಂತುಪಿತನ ಕೂಡಿ ಕೌರವರ ಗೆಲಿದ್ಯೊಸಂತೋಷದಿಂದ ಸಾಮ್ರಾಜ್ಯ ಕೈಗೊಂಡೆ 2 ಮಧ್ವಾವತಾರದಲಿ ಮುನಿವೇಷವನು ತಾಳಿಅದ್ವೈತವೆಂಬೊ ಅರಣ್ಯವನು ತರಿದೆಮಧ್ವಶಾಸ್ತ್ರವೆಂಬೊ ಮತವ ನಿರ್ಣೈಸಿದೆಮುದ್ದು ಹಯವದನದಾಸ ನೀನಹುದೊ 3
--------------
ವಾದಿರಾಜ
ಮುನಿಯು ನೀನಾದದ್ದು ಮನದೊಳು ನಾಬಲ್ಲೆಮುನಿ ಜನ ಮನ ಮಂದಿರಾ - ಸುರೇಂದ್ರಾ ಪ ಅನುಮಾನ ತೀರ್ಥರ ಮಾನ ಮೇಯದ ಸಾರಘನವಾಗಿ ತಿಳಿಸಿದುದಾರಾ - ಸುರೇಂದ್ರಾ ಅ.ಪ. ಗಜ ವೈರಿ ಮಧ್ಯದಭುಜಗ ವೇಣಿಯರ ಕೂಡೀ - ಸುರೇಂದ್ರಾ ||ಅಜನೀನೇ ಎನ್ನುತ | ಭುಜಿಸೆ ಅನ್ನವ ನೀಡಿಯಜನಾದಿಗಳ ಮಾಡಲೂ - ಸುರೇಂದ್ರಾ ||ಗಜ ವರದನು ಬಂದು | ಭುಜಿಸಲು ಅನ್ನವತ್ಯಜಿಸಿ ಬಂದೆಯೊ ಸುರಪುರವಾ - ಸುರೇಂದ್ರಾ 1 ವ್ರಜ || ಸುರರನೆಲ್ಲರ ಕಾಯ್ದಹರಿಯ ಮೊಗವ ನೋಡೆ ನಾಚುತಲೀ - ಸುರೇಂದ್ರಾ 2 ವಾಸುಕಿ | ಅಂದ ನೇಣನ ಮಾಡಿಮಂಥಿಸಿ ಶರಧಿಯನ್ನಾ - ಸುರೇಂದ್ರಾ ||ಅಂದು ನೀನಮೃತವ ನುಂಡ ಕಾರಣದಿಂದಇಂದಿಲ್ಲಿ ಸುರರಿಗುಣಿಸೆ ಬಂದ್ಯೋ - ಸುರೇಂದ್ರಾ 3 ಮಧ್ವ ಶಾಸ್ತ್ರವೆಂಬ | ದುಗ್ದಾಬ್ದಿಯನೆ ನೀನುಶ್ರದ್ಧೆಯಿಂದಲಿ ಮಥಿಸೇ - ಸುರೇಂದ್ರಾ ||ಉದುಭವಿಸಿದ ನ್ಯಾಯ | ಸುಧೆ ಎಂಬ ಅಮೃತವವಿದ್ವಜ್ಜನಕೆ ಉಣಿಸೇ - ಸುರೇಂದ್ರಾ ||ತ್ರಿದಶ ಲೋಕವ ತ್ಯಜಿಸಿ | ಉದಿಸಿದೆ ಧರೆಯೊಳುಸಾಧು ವೇಷವನ್ನೆ ಧರಿಸೀ - ಸುರೇಂದ್ರಾ 4 ನಾಕಪತಿಯೆ ನಿನ್ನಾ | ನೇಕ ಚರಿತೆಯಲ್ಲಿನಾಕೇಳಿ ಪೊಗಳಲಳವೇ - ಸುರೇಂದ್ರಾ ||ಲೋಕಾ ಲೋಕದೊಳು | ಟೀಕಾರ್ಯರೆಂಬವಾಕು ಕೇಳೀ ಬಲ್ಲೆನೋ - ಸುರೇಂದ್ರಾ ||ನಾಕಜ ಪಿತ ಗುರು ಗೋವಿಂದ ವಿಠಲನನೇಕ ಬಗೆಯಿಂದ ಸ್ತುತಿಸಿದೆಯೋ - ಸುರೇಂದ್ರಾ 5
--------------
ಗುರುಗೋವಿಂದವಿಠಲರು
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ಶ್ರೀರಾಮ ಜಯರಾಮ ಜಯ ಜಯತು ರಾಮ ಶ್ರೀರಾಮ ಜಯರಾಮ ಜಯ ಜಯತು ರಾಮ ಪ ನಮೋ ರಾಮಚಂದ್ರ ಸದಾಪೂರ್ಣಾನಂದ ನಮೋ ಸುಗುಣ ಸಾಂದ್ರ ಕೌಸಲ್ಯಕಂದ ನಮೋ ರಾಘವೇಂದ್ರ ಸೀತಾ ಕುಮುದ ಚಂದ್ರ ನಮೋ ಅಜಭವೇಂದ್ರಾದ್ಯಖಿಲ ಸುರವಂದ್ಯ 1 ನಿನ್ನ ಉದಯದಿರವಿಯು ಉನ್ನತಿಯನೈದಿಹನು ಘನ್ನತೆಯ ಪೊಂದಿಹರು ಕೌಸಲ್ಯದಶರಥರು ನಿನ್ನ ಅನುಜರು ಜಗದಿ ಪರಮ ಪಾವನ್ನರು ನಿನ್ನರಸಿ ಶ್ರೀಸೀತೆ ತ್ರೈಲೋಕ್ಯ ಮಾತೆ 2 ನಿನ್ನ ಕರುಣದಿ ಹನುಮ ಬ್ರಹ್ಮತ್ವ ವೈದಿದನು ನಿನ್ನ ನಾಮದಿ ವ್ಯಾಧ ವಾಲ್ಮೀಕನಾದ ನಿನ್ನ ಪದರಜ ಸೋಂಕಿ ಶಿಲೆಯಬಲೆಯಾದುದು ನಿನ್ನ ಪ್ರೇರಣೆಯಿಂದ ಪ್ರಣವೆ ಜ್ವಾಲಾಯಿತು 3 ನಿನ್ನ ಪ್ರೇಮದಿ ಶಬರಿ ಮುನ್ನ ಸವಿನೋಡಿ ಫಲ ನಿನ್ನ ಪದಕರ್ಪಿಸಲು ಘನಪದವಿಯಿತ್ತೆ ನಿನ್ನ ಸಖ್ಯವನೆ ಬೆರಸಿದವ ಸುಗ್ರೀವನು ಧನ್ಯವಾಗಿರುತಿಪ್ಪ ನಿಹಪರಂಗಳಲಿ 4 ನಿನ್ನ ದಾಸ್ಯವನೈದಿ ಅನಂತ ಕಪಿವರರು ಉನ್ನತೋನ್ನತ ಯೋಗ್ಯತೆಗಳ ಪಡೆದಿಹರು ನಿನ್ನ ದ್ವೇಷದಿ ರಾವಣಾದಿಗಳು ಮಡಿದರು ನಿನ್ನ ಪೊಂದಿದ ವಿಭೀಷಣ ರಾಜ್ಯಪಡೆದ 5 ಸುರರು ಕೃತ ಪುಟಾಂಜಲಿಯಲ್ಲಿ ಸ್ಥಿತರಾಗಿ ಇರುತಿಹರು ನಿನ್ನಾಜ್ಞದಿ ಇತರ ಮನುಜರ ತೆರದಿ ಪಿತನಾಜ್ಞೆ ಪಾಲಿಸಲು ವ್ರತವನೇ ಕೈಕೊಂಡು ವನಕೈದಿದೆ 6 ಜಾನಕಿಯು ಅವಿಯೋಗಿ ನಿನ್ನ ಬಳಿಯಿರುತಿರಲು ವಾನರರ ಭಲ್ಲೂಕಗಳ ಸೇನೆನೆರಹಿ ಕಾನನವ ಸಂಚರಿಸಿ ಖಳರನ್ನು ಮೋಹಿಸಿದೆ ಶ್ರೀನಿಧಿಯೆ ತವ ಲೀಲೆ ಬಹು ಚೋದ್ಯವು 7 ತಾಮಸರ ಸಂಹರಿಸಿ ಭೂಮಿ ಭಾರವನಿಳಿಸಿ ನೇಮದಿಂ ಕೈಕೊಂಡು ರಾಜ್ಯವನ್ನು ಪ್ರೇಮದಿಂ ಪಾಲಿಸಿದೆ ಪ್ರಜೆಗಳನು ವಿಧವಿಧದಿ ತಾಮರಸಜನ ಪ್ರಾರ್ಥನೆಯ ಮನ್ನಿಸಿ 8 ನಿನ್ನ ರಾಜ್ಯವೆ ಸಕಲ ಸುಖದ ಸಾಮ್ರಾಜ್ಯವು ನಿನ್ನ ಯಾಙ್ಞವೆ ವೇದವಾಣಿಯಿಂದಧಿಕವು ನಿನ್ನನಂತವತಾರಗಳ ಚರಿತೆ ಸೋಜಿಗವು ನಿನ್ನಯವತಾರಕ್ಕು ಮೂಲಕ್ಕಭೇದವು 9 ನಿನ್ನ ಮಹಿಮಾ ಜಲಧಿಯೊಳು ರಮೆಯು ಮುಳುಗಿಹಳು ನಿನ್ನ ಸ್ತುತಿಗೈವ ನಾಲ್ಮೊಗನು ನಾಲ್ಮೊಗದಿಂ ನಿನ್ನ ಧ್ಯಾನದಿ ಸದಾ ಮೋದಿಪನು ಮಾರುತನು ನಿನ್ನನೇ ಪಾಡುವರು ಅಜಪವನ ಪತ್ನಿಯರು 10 ನಿನ್ನ ನಾಮವ ಸವಿದು ಭವನು ನಲಿನಲಿಯುತಿಹ ಖಗರಾಜ ರತಿ ವರ್ಣಿಸುವರು ಚನ್ನೆ ಪಾರ್ವತಿಯು ವಾರುಣಿಯು ಸೌಪರ್ಣಿಯು ಚನ್ನಾಗಿ ಪಾಡುವರು ನಿನ್ನ ಗುಣಗಳನು 11 ಸುರರು ನಾರದಾದಿ ಋಷಿವರರು ವಂದಿಸುತ ಭಕ್ತಿಯಲಿ ನಿನ್ನ ಪದಗಳಿಗೆ ಅಂದದಲಿ ವೀಣಾ ಸುಗಾನ ಸಂಗೀತದಲಿ ಒಂದೊಂದೇ ಮಹಿಮೆಗಳ ಪೊಗಳಿ ಕುಣಿಯುವರು 12 ಸುಖತೀರ್ಥಮುನಿರಾಜ ಗುರುರಾಘವೇಂದ್ರಾರ್ಯ ಅಕಳಂಕ ವgದೇಂದ್ರ ಯತಿಸಾರ್ವಭೌಮರು ಮುಕುತಿದಾಯಕ ನಿನ್ನ ಪದಕಮಲ ಪೂಜಿಸುತ ಪ್ರಖರ ಕಿರಣದಿ ಜಗವ ಬೆಳಗುತ್ತಲಿಹರು 13 ತಾಳತಂಬೂರಿ ಸಮ್ಯಾಳದಿಂದಲಿ ಕೂಡಿ ಕಾಲುಗೆಜ್ಜೆಯ ಕಟ್ಟಿ ಮೇಲು ಸ್ವರದಿಂದ ಮೇಲಾದ ಭಕ್ತಿಯಲಿ ವಾಲ್ಗೈಸುತಿಹರು 14 ನಿನ್ನ ಲೀಲೆಯ ಕಥೆಯು ಮುಕ್ತಿಗೆ ಸತ್ಪಥವು ನಿನ್ನ ನಾಮದ ಮಹಿಮೆ ನಿಗಮಗಮ್ಯ ನಿನ್ನ ಚರಣೋದಕವು ತ್ರಿಜಗಪಾವನ್ನವು ನಿನ್ನ ನೇಮವೇ ಸೃಷ್ಟಿ ಸ್ಥಿತಿಲಯಕೆ ಕಾರಣವು 15 ನಿನ್ನ ನಾಮದಿ ಭರದಿ ಶುಕನು ಕುಣಿದಾಡುತಿಹ ನಿನ್ನ ಧ್ಯಾನದಿ ಯೋಗಿವೃಂದ ಸಂದಿಪು (ದು) ನಿನ್ನ ರೋಷದಿ ಅಜಭವಾದ್ಯರು ತೃಣರು 16 ಮೂರ್ತಿ ಕಣ್ಣಿಗಲ್ಹಾದಕರ ನಿನ್ನಂಘ್ರಿ ಸೇವೆ ಸಾಮ್ರಾಜ್ಯಗಿಂ ಪರತರವು ನಿನ್ನ ನಾಮದ ರುಚಿಯು ಅಮೃತಕಿಂತಧಿಕ 17 ನಿನ್ನ ಧ್ಯಾನವೆ ಸಕಲ ಸಾಧನದ ಸಾರವು ನಿನ್ನ ಗುಣಗಾನವೆ ಶಾಸ್ತ್ರಗಳ ಭೂಷಣವು ನಿನ್ನ ಮಹಿಮಾರಹಿತ ಕಾವ್ಯವಗ್ರಾಹ್ಯವು ನಿನ್ನ ಲೀಲಾ ರಹಿತ ಶಾಸ್ತ್ರವೆ ಕುಶಾಸ್ತ್ರ 18 ನಿನ್ನ ನಾಮಧ್ಯಾನವೇ ದೇಹ ಸಾರ್ಥಕವು ನಿನ್ನ ನಾಮವೆ ವಿವಿಧ ರೋಗನಿರ್ಮೂಲಕವು ನಿನ್ನ ನಾಮವೆ ದುರಿತರಾಶಿಗೆ ಪಾವಕವು ನಿನ್ನ ನಾಮವೆ ಸಕಲಭವಬಂಧ ಮೋಚಕವು 19 ರೇಣು ತೃಣ ಕಾಷ್ಟದಲಿ ನಿನ್ನ ದಯಪರಮೇಷ್ಠಿಯಿಂದಿರುವೆಗಳಲಿ ನಿನ್ನ ಪ್ರೇಮದಿ ನಲಿದ ಮಂದಮತಿ ವಂದ್ಯನು ನಿನ್ನಲ್ಲಿ ಮಮತೆಯಿಲ್ಲದವದೂಷಿತನು 20 ಅಜಭವಗಿರೀಶಾ ಭಜಕÀಜನ ದಾಸಾ ಸುಜನಮನತೋಷಾ ಕುಜನ ಮನಕ್ಲೇಶ ದ್ವಿಜತತಿಯ ಪೋಷ, ರಜನಿಚರನಾಶ ರಜತಪುರಧೀಶ, ಭುಜಗÀಗಿರಿ ವಾಸ 21 ತಂದೆ ತಾಯಿಯು ನೀನೆ, ಬಂಧು ಬಳಗವು ನೀನೆ ಹಿಂದು ಮುಂದು ನೀನೆ, ಎಂದೆಂದು ನೀನೆ ಬಂದಭಯ ಪರಿಹರಿಸಿ ಕುಂದದಲೆ ಕಾಯ್ವಸಂ - ಬಂಧಿಗನÀು ಆಪ್ತ ಗೋವಿಂದ ನೀನೆ 22 ಸೃಜಿಸಿದವನು ನೀನೆ ಪೋಷಿಸಿದವನು ನೀನೆ ನಿಜಗತಿಯ ಜೀವರಿಗೆ ನೀಡುವವÀನು ನೀನೆ ಅಜಪಿತನೆ ನಿನ್ನ ಪದ ಭಜನೆ ಮಾಳ್ಪವರನ್ನು ನಿಜವಾಗಿ ಕಾಪಾಡಿ ಪೊರೆವ ಪ್ರಭುನೀನೆ 23 ಕೊಡುವವನು ನೀನೆ ಕೋಳುವವನು ನೀನೆ ಅಡಿಗಡಿಗೆ ಸುಖದುಃಖ ನೀಡುವವ ನೀನೆ ಕೊಡುವದಾತನು ನೀನೆ ಕೊಟ್ಟದ್ದು ಕೊಂಡರೆ ಹೊಡಕೊಂಡು ಅಳುವದ್ಯಾತಕೆ ಮೂಢಪ್ರಾಣಿ 24 ಈ ಪೊಡವಿಯೊಳು ಮೊದಲು ನಾನು ಬಹು ಕಾಲದಿ ಕೌಪೀನ ಸಹ ಯನ್ನ ಸಂಗಡಿರಲಿಲ್ಲ ಈ ಪೊಡುವಿಯನು ಬಿಟ್ಟು ನಾ ಪೋಪಕಾಲಕ್ಕು ಈ ಪರಿಯೆ ಪೋಪೆನೆಂಬುದು ಸಟಿಯು ಅಲ್ಲ 25 ಗಾಡಿ ವಾಜಿಯು ಮತ್ತೆ ಬೆಡಗಿನ ವಸನಗಳು ಕೇಡುಯಿಲ್ಲದವಾ ಭರಣ ವಸ್ತುಗಳು ನಾಡಿನೊಳು ಬಹುಮನ್ನಣೆಯು ಯೆಂಬರೆಲ್ಲೆನ್ನ ಕೂಡಬರಬಹುದಾದುದೊಂದುಯಿಲ್ಲ 26 ಎಷ್ಟುಗಳಿಸಿದರೆನ್ನ ಹೊಟ್ಟೆಗೊಂದೇ ರೊಟ್ಟಿ ಸೃಷ್ಟಿಪತಿ ನಿನ್ನಂಘ್ರಿ ನಿಷ್ಠೆ ತೊರೆದು ಕಷ್ಟ ನಷ್ಟಗಳನ್ನು ಸಹಿಸಿ ನಿಷ್ಠ್ಠುರನಾಗಿ ದುಷ್ಟತನದಿಂದ ನಾನಿಷ್ಟುಪರಿಗಳಿಸಿ 27 ದಾನಧರ್ಮಗಳಿಲ್ಲ ವÀ್ರತನೇಮಗಳುಯಿಲ್ಲ ಆನಮಿಸಿಕೊಡಲಿಲ್ಲ ಮಾನಿ ವಿಪ್ರರಿಗೆ ಧೇನುಪಾಲನೆ ನಿನ್ನಧ್ಯಾನವನ್ನೇ ಮರೆದು ಶ್ವಾನನÀಂದದಿ ಕಾದು ಕೊಂಡು ಕುಳಿತಿಪ್ಪೆ 28 ವಾರನಾರಿಯರಲ್ಲಿ ವೇಷಧಾರಿಗಳಲ್ಲಿ ಸೊರೆಮಾಡಿದೆ ಕರ್ಣನೆನಿಸ ಬೇಕೆಂದು ಶ್ರೀರಮಾಪತಿ ನಿನ್ನ ಚರಣ ಕಮಲಗಳನ್ನು ಆರಾಧಿಪರಿಗೆ ನಾರುವ್ವಿ ಕೊಡಲಿಲ್ಲ 29 ಸತಿಸುತರು ಹಿತÀದವರು ಹಿತವ ಮೇಲ್ತೋರಿದು - ರ್ಗತಿಗೆನ್ನ ಗುರಿಮಾಡುತಿಪ್ಪರಲ್ಲದಲೇ ಪರ - ಗತಿಗೆ ಸಾಧನ ತೋರ್ಪರಾರು ಯನಗಿಲ್ಲ 30 ಈ ಮಹಾಜ್ವರದಿಂದ ನೊಂದು ನಿನ್ನನು ನೆನೆವೆÉ ನಾಮಹಾಭಕ್ತಿಯಲಿ ನಂಬಿದವನಲ್ಲ ನಾ ಮಾಡಿದ ಪಾಪರಾಶಿಗಳ ಪರಿಹರಿಸಿ ಪ್ರೇಮದಿಂದಲಿ ಪೊರೆಯೋ ಪರಮಕರುಣಿ 31 ರೋಗವನೆ ಹೆಚ್ಚಿಸು ನಿರೋಗಿಯನು ಮಾಡು ಭವ ರೋಗದಿಂದಗತೀ ಕಡೆದಾಂಟಿಸು ಯೋಗಿವರ ನಿನ್ನಿಚ್ಛೆ ಹೇಗೆÀಮಾಡಿದರುಸರಿ ಆಗದೆಳ್ಳಿನಿತು ಸಂಕೋಚವೆನಗೆ 32 ನೀಕೋಟ್ಟಕವಚವಿದು ನೀ ತೆಗೆದು ಹಾಕಲ್ಕೆ ನಾಕೆಟ್ಟುದುದುಯೇನು ಕರುಣಾಳುವೆ ಈ ಕವಚ ಕೆಲಕಾಲ ಬಿಟ್ಟಮಾತ್ರಕೆ ಮುಂದೆ ನೂಕಬೇಡೆನ್ನ ಮನ ಪಾಪಗಳ ಕಡೆಗೆ 33 ತನುಮನವು ನಿನ್ನದು ಧನಧಾನ್ಯ ನಿನ್ನದು ವನಿತೆ ನಿನ್ನವಳು ಮನೆ ಮಾರು ನಿನ್ನದು ದೇವ ಎನಗಾಪ್ತರೆಂಬುವರು ನಿನ್ನದಾಸರು ರಾಮ ಎನದೆಂಬ ವಸ್ತುವೆಲ್ಲವು ನಿನ್ನದು 34 ನಿನ್ನ ನಂಬಿದಯನೆಗೆ ಪಾಪದಂಜಿಕೆಯಿಲ್ಲ ಪುಣ್ಯದಾಶೆಯು ಇಲ್ಲ ಪರಮಪುರುಷ ನಿನ್ನ ಪ್ರೇರಣೆಯಿಂದ ಯನಿ
--------------
ವರದೇಶವಿಠಲ
ಶ್ರೀ ವಿಷ್ಣು ತೀರ್ಥವಿಜಯ130ಪ್ರಥಮ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ, ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪನಿರ್ದೋಷಗುಣಪೂರ್ಣಶ್ರೀ ರಮಣ ಹಂಸನಿಗೆವಿಧಿಸನಕ ಮೊದಲಾದ ಗುರುಪರಂಪರೆಗೆ,ಯತಿವರ್ಯ ಅಚ್ಚುತ ಪ್ರೇಕ್ಷರಿಗೆ ಆನಂದತೀರ್ಥರ ಪದಾಂಬುಜಗಳಿಗೆ ಆನಮಿಪೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶರಿಗೆ ನಮೋ ರಾಮಚಂದ್ರರಿಗೆ 2ಶ್ರೀರಾಮ ಪ್ರಿಯ ರಾಮಚಂದ್ರರ ಕರಜರುಸೂರಿಗಳುವಿಭುದೇಂದ್ರ ವಿದ್ಯಾನಿಧಿಗೆಎರಗಿ ವಿದ್ಯಾನಿಧಿಯ ಸುತ ರಘುನಾಥರಿಗುಕರುಣಾಳು ರಘುವರ್ಯರಿಗು ಆನಮಿಪೆ 3ವೇದಾಂತಕೋವಿದರಘೂತ್ತಮ ತೀರ್ಥರಿಗೆವೇದವ್ಯಾಸಾಭಿದ ಯತಿಗಳಿಗೆ ನಮಿಪೆವೇದವ್ಯಾಸ ತೀರ್ಥರ ಕರಕಮಲ ಸಂಜಾತವಿದ್ಯಾಧೀಶರ ಚರಣಕಾ ನಮಿಪೆ 4ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯ -ನಾಥ ಸತ್ಯಾಭಿನವ ಸತ್ಯಪೂರ್ಣರಿಗೆಸತ್ಯವಿಜಯ ಸತ್ಯಪ್ರಿಯ ಸತ್ಯಬೋಧರಿಗೆಸತ್ಯಸಂಧ ಈ ಸರ್ವ ಗುರುಗಳಿಗೆ ನಮಿಪೆ 5ಸತ್ಯವರ ತೀರ್ಥರ ಚರಣಕಾ ನಮಿಸುವೆಸತ್ಯವರ ಕರಕಂಜ ಸಂಜಾತರಾದಸತ್ಯರಮಣ ಪ್ರಿಯ ಶ್ರೀ ವಿಷ್ಣುತೀರ್ಥರವೃತತಿಜಾಂಘ್ರಿಗಳಲ್ಲಿ ಶರಣಾದೆ ಸತತ 6ಶ್ರೀ ತ್ರಿವಿಕ್ರಮಪಾದಅಬ್ಜಜಾಸರಿತವಶಿರದ ಮೇಲ್ ಧರಿಸಿದ ಗಿರಿಜೇಶನಂತೆಹರಿಭಕ್ತಾಗ್ರಣಿ ವೈರಾಗ್ಯ ನಿಧಿಯು ಈಸೂರಿಕುಲತಿಲಕ ಶ್ರೀ ವಿಷ್ಣು ತೀರ್ಥಾರ್ಯ7ಸವಣೂರು ಪ್ರಾಂತದ ಸಿದ್ಧಾಪುರದವರುಮಾಧ್ವದಂಪತಿ ಭಾಗೀರಥಿ ಬಾಳಾಚಾರ್ಯಸೇವಿಸಿದರು ಟೀಕಾಚಾರ್ಯರ ಭಕ್ತಿಯಿಂದೇವಸ್ವಭಾವ ಮಗ ಪುಟ್ಟಬೇಕೆಂದು 8ರಾಘವಾನಂದ ಮುನಿ ಅಕ್ಷೋಭ್ಯ ತೀರ್ಥರಾ -ನುಗ್ರಹ ಸದಾಪೂರ್ಣ ಜಯತೀರ್ಥ ಮುನಿಯುಬಾಗಿ ಬೇಡಿದ ಈ ಸಾಧುದಂಪತಿಗೊಲಿದುಯುಕ್ತ ಕಾಲದಿ ದೊರೆಯಿತು ಪುತ್ರ ಭಾಗ್ಯ 9ಸ್ಪಟಿಕನಿಭ ಅಕಳಂಕ ಕಾಂತಿಯುಕ್ ಮಗನಿಗೆಇಟ್ಟು ಜಯತೀರ್ಥನಾಮವ ಮುಂಜಿ ಮಾಡಿಪಾಠ ಓದುವುದಕ್ಕೆ ಐಜಿ ಆಚಾರ್ಯರಲಿವಟುವ ಕಳುಹಿಸಿದರು ಕೃತಕೃತ್ಯ ತಂದೆ 10ಜಯತೀರ್ಥರನುಗ್ರಹದಿ ಜಯತೀರ್ಥ ವಟುವುವಿದ್ಯಾಭ್ಯಾಸ ಐಜಿ ಆರ್ಯರಲ್ಲಿಗೈಯುವಾಗ ಇತರ ವಿದ್ಯಾರ್ಥಿಗಳಿಗಧಿಕದಿವ್ಯ ಪ್ರತಿಭಾವನ್ನ ತೋರಿಸುತ್ತಿದ್ದ 11ಶ್ರೀದ ಒಲಿದಿಹ ಇವನ ಯೋಗ್ಯತೆ ದೊಡ್ಡದು,ವೈದಿಕ ಸುಪೂರ್ಣ ಬೋಧರ ಶಾಸ್ತ್ರವೆಲ್ಲ,ಓದಿ ಶ್ರೀ ಐಜಿ ವೇಂಕಟರಾಮಾರ್ಯರಲ್ಲಿಉತ್ತಮ ಜ್ಞಾನಿಯು ಆದ ಜಯತೀರ್ಥ 12ಸುರವೃಂದದಲಿ ದೊಡ್ಡ ಸ್ಥಾನದವ ಇವನೆಂದುಹರಿಯೇ ಈ ಜಯತೀರ್ಥನಲಿ ತೋರಿಹನುಗುರುಐಜಿಯರ ಸುತನ ಅಪಮೃತ್ಯು ತರಿದಿಹನುಭಾರಿತರ ಆಶ್ಚರ್ಯ ಇನ್ನೂ ತೋರಿಹನು 13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ಮಹಾಭಕ್ತ ಶ್ರೀ ವಿಷ್ಣು ತೀರ್ಥಾಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶ್ರೀನಿವಾಸದೇವರು33ಸರ್ವಾಂತರ್ಯಾಮಿ ಸ್ವತಂತ್ರ ಶ್ರೀನಿವಾಸ ಸರ್ವಾಂತರ್ಯಾಮಿ ಸ್ವತಂತ್ರಸರ್ವಾಂತರ್ಯಾಮಿಹರಿಸುಂದರ ಜ್ಞಾನಾನಂದಇಂದಿರೆಕಾಂತ ಅರಿವಿಂದಸಂಭವನಯ್ಯ ಪಅದ್ಭುತ ಅಚಿಂತ್ಯ ಶಕ್ತ ಅಮ್ಮ ಲಕುಮಿಯಅಮಲ ಪ್ರೇಮದಿ ಇವನ ಆಡಿಗಳಿಗೆರಗುವರಅಘಕೂಟ ತೊಲಗಿಸಿ ಅಪವರ್ಗವೀವ ಸ್ವಾಮಿಚಿಂತಿಸಿ ವಂದಿಪ ಸುಜನರ ಮನದೊಳುಚಂದಿರನಂದದಿ ನಿಂದಿವ ಪೊಳೆಯುತಹಿಂದಿನ ಮುಂದಿನ ಕರ್ಮವ ಕಳೆದಿನಕುಂದದಾನಂದವನೀವ ಮುಕುಂದನು 1ಜನ್ಮಾದಿ ಮುಖ್ಯ ಕಾರಣ ಜಾನಕೀಶ ಜಲಜಸಂಭವನಯ್ಯಜಿಹ್ವಾದ್ವಯನುದ್ವಿಜಜಲಧರ ಮೊದಲಾದಜನರೊಳು ಇದ್ದು ಕಾಣದೆ ಜಾಣತನದಿ ಚರಿಪನುಶೀಘ್ರದಿ ಒಲಿವನು ಸೇವಿಪ ಜನರಿಗೆಸುಗ್ರೀವನಸಖಲಕ್ಷ್ಮಣನಗ್ರಜಜಾಗೃತ ಸ್ವಪ್ನ ಸುಷುಪ್ತಿ ಪ್ರವರ್ತಕವಿಗ್ರಹ ರೂಪದಿ ನಿಂತಿಹನಿಲ್ಲಿ 2ಆಲೋಚನೆಗೂಶಾಸ್ತ್ರದಿಂದಲೆ ಗೋಚರ ಸಾತ್ಯವತಿಶಾಸ್ತ್ರವೆಲ್ಲಕೂ ಅತೀತಸರ್ವಾಶ್ರಯನು ಇವ ಶಂಭೂ ಶಂಕರನುತಸರ್ವತ್ರ ವ್ಯಾಪ್ತ ಅಮಲ ಸರ್ವ ವಿಲಕ್ಷಣ ಹರಿಯುಸರಿಪರರಿಲ್ಲವು ಇವಗೆಲ್ಲೆಲ್ಲು ಹರವಿಧಿಸುರಮುನಿಸನ್ನುತಶ್ರೀಶನುವರವರ ವೆಂಕಟನಿಂತಿಹನಿಲ್ಲಿ ಸರಸಿಜಭವತಾತಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು