ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ಮರದೆನೋ ಯನ್ನ ಶ್ರೀಹರಿಯೇ ಭಕ್ತರಿಸಿರಿಯೇ ಸ್ಮರಿಸುವರ ಧೊರಿಯೇ ಭಜಿಸವರನ ಬಿಡದಲೆ ಬಿರುದು ನಿನ್ನದೆಂದು ಪೇಳುತಿರೆ ಶೃತಿ ಪ ತಂದೆ ಕಂದನ ಭಾದಿಸಲು ಶ್ರೀಧರ ಬೇಗ ಬಂದೆನ್ನ ಸಲಹೆನ್ನಲು ಮಂದರಧರ ವಳಿ- ತೆಂದು ಸಂಧಿಸಿ ಕಾಲದ್ವಂದ್ವ ರೂಪವನೇ ಕರುಣಾಸಿಂಧು ಶ್ರೀಹರಿ 1 ಅಂದು ಅಜಾಮಿಳನು ಅಕ್ಷರದ್ವಯದಿಂದ ಮುಕ್ತನಾದನು ಕುಂದರದನ ದ್ರೌಪದಿ ಮಾನಕಾಯಿದಿ ಇಂದಿರೇಶನೆ ಮುದದಿ ಭವ ಬಂಧನದಿ ಬಲುನೊಂದೆನೋ ಇಂದು ವದನ 2 ಘನತರ ಶಿಲೆಯಾಗಿರಲು ಪಾದಸ್ಮರಿಸಲಾಕೆಯು ದುರಿತ ಕರಿವರದ 'ಹೆನ್ನೆಯ ಉರಗಶಯನಾಂಬುರುಹ ನಯನ 3
--------------
ಹೆನ್ನೆರಂಗದಾಸರು