ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರವೀರಪುರವ ಸೇರಿದಳು ಹದಿನಾರು ಸಾವಿರ ನಾರಿಯರ ಭಾಗ್ಯವ ನೋಡಿ ಸೇರಿದಳುಲಕುಮಿ ಜರಿದಾಳು ಪ. ಶ್ರೀವೈಕುಂಠಕ್ಕೆ ಸರಿಯೆಂದು ದ್ವಾರಕೆಹರಿ ಬ್ರಹ್ಮ ಕೇಳಿ ಹರುಷಾಗಿಹರಿ ಬ್ರಹ್ಮ ಕೇಳಿ ಹರುಷಾಗಿ ತಮ್ಮ ತಮ್ಮಪುರದಿಂದ ಇಳಿದು ಬರುತಾರೆ 1 ವೃಂದಾರಕರೆಲ್ಲ ಬಂದರು ದ್ವಾರಕೆಗೆ ಚಂದ್ರ ನೊಬ್ಬ ಬರಲಿಲ್ಲಚಂದ್ರ ತಾನೊಬ್ಬ ಬರಲಿಲ್ಲ ತನ್ನಕಾಂತಿ ಕುಂದೀತೆಂಬೊ ಭಯದಿಂದ2 ಸಾರು ದೇವತೆಗಳು ದ್ವಾರಕೆಗೆ ಬರಲುಸೂರ್ಯ ತಾನೊಬ್ಬ ಬರಲಿಲ್ಲಸೂರ್ಯ ತಾನೊಬ್ಬ ಬರಲಿಲ್ಲ ತನ್ನತೇಜ ಕುಂದೀತೆಂಬೊ ಭಯದಿಂದ 3 ಜಾಣ ನಾರದ ತಮ್ಮ ವೀಣೆ ನುಡಿಸುತ ವಾಣಿ ಮಾವನ ಸ್ತುತಿಸುತವಾಣಿ ಮಾವನ ಸ್ತುತಿಸುತ ತಾಒಂದು ಓಣಿಯ ಹಿಡಿದು ಬರುತಾನೆ4 ವಶಿಷ್ಠ ಮೊದಲಾದ ಮಹಾಶಿಷ್ಠರು ಮುನಿಗಳು ತಮ್ಮ ಕೃಷ್ಣ್ಣಾಜಿನ ಕಾಷ್ಠ ಸಹಿತಾಗಿಕೃಷ್ಣ್ಣಾಜಿನ ಕಾಷ್ಠ ಸಹಿತಾಗಿ ಬಂದರು ಧಿಟ್ಟ ರಾಮೇಶÀನರಮನೆಗೆ 5
--------------
ಗಲಗಲಿಅವ್ವನವರು
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ
ಶ್ರೀರಾಘವೇಂದ್ರ ಸ್ವಾಮಿಗಳು ಗುರುಗಳ ನೋಡಿರಿ ರಾಘವೇಂದ್ರ ಪ ಗುರುಗಳ ನೋಡಿ ಚರಣದಿ ಬಾಗಿ ಕರೆಕರೆ ನೀಗಿ ವರಸುಖ ಪಡೆಯಿರಿ ಅ.ಪ ಕಾಮಿತ ಫಲಗಳ ಇತ್ತು ಇತ್ತು ತಾಮಸ ಗುಣಗಳ ಕೆತ್ತಿ ಕೆತ್ತಿ ರಾಮನ ಭಕ್ತಿಯ ಬಿತ್ತಿ ಬಿತ್ತಿ ಪ್ರೇಮದಿ ಶಿಷ್ಯರ ಸಲಹುವ ನಮ್ಮ 1 ಅಂತೆ ಕಂತೇ ಸಂತೆ ಮಾತು ಸಂತರ ಬೆಲ್ಲ ಇವರಲಿಲ್ಲ ಎಂಥಾ ಭಕ್ತಿ ಅಂಥಾ ಫಲವು ಕುಂತೀ ಭೀಮನ ಪಂಥಾ ಪಿಡಿದು 2 ಇಲ್ಲ ಎಂಬಗೆ ಎಲ್ಲಾ ಇಲ್ಲಾ ನಲ್ಲ ಎಂಬಗೆ ಎಲ್ಲಾ ಉಂಟು ಕ್ಷುಲ್ಲ ಸಂಶಯ ಹಲ್ಲು ಮುರಿದು ಪುಲ್ಲ ನಾಭನ ಬಲ್ಲವರೊಡನೆ 3 ಕಲಿಯೆಂದೇಕೆ ಅಳುವಿರಿ ನೀವು ಒಲಿಯಲು ಗುರುವು ಸುಳಿಯುವ ಹರಿಯು ತುಳಿಯುತ ಕಲಿಯ ಬೆಳಸಿರಿ ಭಕ್ತಿ ಕಾಲ 4 ಕೃಷ್ಣ ವಿಠಲನ ಇಷ್ಟ ಗುರುಗಳು ತೃಷ್ಠರಾದೆಡೆ ಇಷ್ಟ ಕರಗತವು ಭಷ್ಟರಾಗದೆ ಶಿಷ್ಠರ ಸೇರುತ ಪುಷ್ಠಿಯ ಗೈಸುತ ಸುಷ್ಠು ಜ್ಞಾನವ 5
--------------
ಕೃಷ್ಣವಿಠಲದಾಸರು
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು