ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಾರತಿ ಎತ್ತುವೆ ಮಾರಮಣಗೆ ಪ ಅಂಗಜ ಜನಕ ಶುಭಾಂಗ ಶ್ರೀರಂಗಗೆ ಅ.ಪ ವೈರಾಜ್ಯ ಸ್ಯಾರಾಜ್ಯ ಮಹ ಪರಮೇಷ್ಠಿ ರಾಜ್ಯ ಸಾರ್ವಭೌಮ ನೀನೆಂದು 1 ವೇದೋಕ್ತ ಮಂತ್ರ ಪುಷ್ಪಾಂಜಲಿಯಿಂದ ನಿನ್ನಯ ಪಾದಕ್ಕೆರಗಿ ಪುನಃ ಪ್ರಾರ್ಥನೆಗೆಯ್ಯುತ 2 ಪಾಪಿಗಳೊಳಗತಿ ಪಾಪಿಯು ನಾನೆನ್ನ ತಾಪತ್ರಯವ ಬಿಡಿಸಿ ಕಾಪಾಡು ನೀನೆಂದು 3 ಪದಜಾನುಕರಗಳಿಂ ಉದರ ಹೃದಯದಿ ಶಿ- ರದಿ ದೃಷ್ಟ್ಯಮನಸವಚನಸಾಷ್ಟಾಂಗದಿಂ ಮಣಿದು 4 ಕಂದರ್ಪ ಕೋಟಿ ಲಾವಣ್ಯ ಸರ್ಪಶಯನ ನಮ್ಮಪ್ಪಾ ತಿಮ್ಮಪ್ಪನೆಂದು 5 ವಾಹನ ವಸ್ತೂಗಳರ್ಪಿಸಿ ಸರ್ವೋತ್ತಮ ನೀನೆಂದ್ಹೊಗಳಿ 6 ಅಪರಾಧವೆಮ್ಮಿಂದಲಾಗುವುದೆಲ್ಲ ಕ್ಷಮಿಸು ಕಪಟನಾಟಕ ಸೂತ್ರಧಾರೀ ಗುರುರಾಮವಿಠಲ 7
--------------
ಗುರುರಾಮವಿಠಲ
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ಜಯ ಜಯ ಜಯ ಮಂಗಳಂ ಶ್ರೀರಂಗಗೆ ಪ.ಮಂಗಳ ಮಹಿಮ ತ್ರಿವೆಂಗಳ ಮೂರ್ತಿಗೆಮಂಗಳವ್ವೆಯ ವಕ್ಷಾಂಗದೊಳಿಟ್ಟಗೆ 1ಮಂಗಳಾನಂತ ಗುಣಂಗಳಿಂ ಪೂರ್ಣಗೆಹಿಂಗದೆ ಭಕ್ತರ ಸಂಗದಲ್ಲಿಹಗೆ 2ಮಂಗಳ ನೈದಿಲೆಗಂಗಳ ಚೆಲ್ವಗೆರಂಗ ಪ್ರಸನ್ವೆಂಕಟಿಂಗಿತಜÕನಿಗೆ 3
--------------
ಪ್ರಸನ್ನವೆಂಕಟದಾಸರು