ಒಟ್ಟು 26 ಕಡೆಗಳಲ್ಲಿ , 17 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನಾರು ಜಗದೀಶ---- ಎನ್ನ ಮೊರೆ ಕೇಳು ಶ್ರೀರಾಮ ಪ ನಿರ್ವಹಿಸಲಾದೆ ಶ್ರೀರಾಮಾ ತೋರಿ ಎಣಿಸುವರಾರು ರಾಮಾ 1 ಅಕಳಂಕ ಚರಿತ ಶ್ರೀರಾಮ ರುಕ್ಮಿಣಿಯರಸ ಶ್ರೀರಾಮ 2 ನೀನೆ ಎಂದು ಸ್ತುತಿಸುವೆನು ಶ್ರೀರಾಮಾ ಪರಿಹರಿಸಿ ಕಾಯೋ ರಾಮಾ 3 ಬ್ರಾಹ್ಮಂಡನಾಯಕ ಹರೇ ರಾಮಾ ಮೂರ್ತಿ ಕೋದಂಡದರ ಶ್ರೀರಘು ರಾಮಾ 4 ತೋರಿನಿಮ್ಮ ಸ್ಮರಿಸುವೆನು ರಾಮಾ ಭಾರವು ನಿನ್ನದು ಶ್ರೀರಾಮ 5
--------------
ಹೆನ್ನೆರಂಗದಾಸರು
ಗಮನ ಕೃಷ್ಣಾ ಪ ಇಂದಿರೇಯರಸ ಮುಕುಂದ ಮೂಜಗಕ್ಕೆ ತಂದೆತಾಯಿ ನೀನೇ | ಶ್ರೀರಾಮಾ ಅ.ಪ ಕೇಸರಿ ಪುನಗುಗಳೂ ನೀಸತಿ ಸಹಿತ ಸದಾ ಲೇಪಿತ ಶ್ರೀನಿ- ವಾಸ ಸುಗುಣಧಾಮಾ | ಶ್ರೀ ರಾಮ 1 ಸ್ಪುರಿಪಲಲಾಟದೊಳೂಧ್ರ್ವ ಪುಂಡ್ರಕ- ಸ್ತುರಿತಿಲಕವು ಬೆಳಗೇ ಹರಿದ್ರಾ ಕುಂಕುಮ ಮಂಗಲ ದ್ರವ್ಯ ನಿನ್ನ ಅರಸಿ ಜಾನಕಿ ದೇವಿಗೇ | ಶ್ರೀರಾಮ 2 ಕ್ಷತೆಯಿಲ್ಲದವನು ನೀನೆಂಬುವದ- ಕ್ಷತೆ ನಿನದಿದೊ ದೇವಾ ತ್ಪತಿ ಮಹಾನುಭಾವಾ | ಶ್ರೀರಾಮ 3
--------------
ಗುರುರಾಮವಿಠಲ
ಚಿಂತ್ರವೇಲಿನಿಲಯ ಭಾರತಿ ಕಾಂತನೆ ಪಿಡಿಕೈಯಾ ಪ ಅಂತರಂಗದಲಿ ಚಿಂತಿಪರಘುÀಕುಲಧ್ವಾಂತದಿವಾಕರ ಸಂತತ ಸ್ಮರಿಸುವೆಅ.ಪ ಲಂಘಿಸಿ ವಾರಿಧಿಯ ಶ್ರೀರಾಮಾಂಗುಲಿ ಮುದ್ರಿಕೆಯ ಅಂಗನಿಗೆ ಕೊಟ್ಟು ಮಂಗಳಾಂಗ ರಘು ಪುಂಗವಗೆ ಕುಶಲ ಸಂಗತಿ ತಿಳಿಸಿದ 1 ಇಂದು ಕುಲದಿ ಜನಿಸಿ ಕುಂತಿಯ ಕಂದ ಭೀಮನೆನಿಸಿ ನಿಂದು ರಣದಿಕುರು ವೃಂದವ ಮಥಿಶ್ಯಾನಂದ ಸುತನೊಲಿಮೆ ಛಂದದಿ ಪಡೆದಿಹ 2 ಮೇದಿನಿಯೊಳು ಜನಿಸಿ ಬಹುದು ರ್ವಾದಿಗಳನು ಜಯಿಸಿ ಮೋದಮುನಿಯೆನಿಸಿ ಭೇದವ ಬೋಧಿಸಿ ಸಾಧು ಜನಕೆ ಬಲು ಮೋದವ ಗರಿದಿ 3 ಶೇಷದಾಸರಿಗೊಲಿದಿ ಅವರಭಿಲಾಷೆಯ ಪೂರ್ತಿಸಿದಿ ಪೋಷಿಸೆನ್ನ ಕರುಣಾ ಸಮುದ್ರ ಭವ ಕ್ಲೇಶವ ಕಳೆಯಾ ಗಿರೀಶ ಮುಖವಿನುತ4 ಭೀತರನ್ನು ಪೊರಿವಿ ಭಜಕರ ಪಾತಕವನು ಕಳೆವಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗ ನಾಥನ ಪರಮ ಪ್ರೀತಿಪಡೆದಿಹ 5
--------------
ಕಾರ್ಪರ ನರಹರಿದಾಸರು
ಜಯ ಜನಕಜಾಪತೇ ರಾಮಾ ಜಯ ಪ ಜನಕಜಾಪತೇ ಜಲದಶ್ಯಾಮಾ ಜಯರಘುವಂಶಲಲಾಮ ಅ.ಪ. ಮದನಜನಕ ಮಧುಕೈಟಭ ಭೀಮ ಮದನ ಬಿಂಬಾರ್ಚಿತ ಕಾಮಾ 1 ರಾಮಚಂದ್ರ ರಘುವೀರ ಜಾನಕೀರಾಮ ರಾವಣವೈರಿ ಶ್ರೀರಾಮಾ 2 ವಿನುತ ಸೋಮ ಶ್ರೀದವಿಠಲ ಗುಣಧಾಮ 3
--------------
ಶ್ರೀದವಿಠಲರು
ಜೋ ಜೋ ಜೋ ಜೋ ಜೋ ಕೃಷ್ಣ ಪರಮಾ- ನಂದ ಗೋಪಿಯ ಕಂದ ಮುಕ್ಕುಂದ ಜೋಜೋ ಪ ಪೆಟ್ಟಿಗೆಯೊಳಗಿದ್ದ ಪರಿಪೂರ್ಣ ಕಾಮಾ ಮುಟ್ಟಿ ಭಜಿಸೊ ಮಹಾಯತಿಗಳ ಪ್ರೇಮಾ ತೊಟ್ಟಿಲವೊಳಗೆ ಮಲಗಿದ್ದ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಸ್ತೋಮಾ 1 ಪಠವಳಿನುಟ್ಟು ಬಂದರು ಸುರರಾಗ ಘಟಣಿ ಬಿದ್ದೀತೆಂದು ಮಹಪುಣ್ಯವೀಗ ವಟಪತ್ರ ಕಲ್ಪನ್ನ ತೂಗಿರಿ ಬೇಗ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಪ್ರೇಮಾ2 ಪಾಕಶಾಸನ ಬಂದು ಮಳೆಗಳ ಕರೆಯೆ ಗೋಕುಲವನು ಕಾಯ್ದ ಮಹಿಮೆಯು ಸರಿಯೆ ಲೋಕದೊಳಜಭವರಿಗೆ ದೊಡ್ಡ ಧೊರೆಯೆ ಶ್ರೀಕಾಂತ ಸರ್ವೋತ್ಮ ನೀನೆ ಶ್ರೀಹರಿಯೆ 3 ಆಲದೆಲಿಮ್ಯಾಲೆ ಮಲಗಿರೊ ಕಂದಾ ಮ್ಯಾಲ ಕಲ್ಪವನು ದೃಷ್ಟಿಸಿದ್ಯೋ ನಿನ್ನಿಂದಾ ಬಾಲನ ಪಡದ್ಯೊ ನಾಭಿಕಮಲದಿಂದಾ ಪಾಲಾಬ್ಧಿ ಶ್ರೀರಮಣ ಮುಕ್ಕುಂದಾ 4 ಮಾಮುನಿ ಸತ್ಯಬೋಧರಾಯರಿಂದ ಪ್ರೇಮದಿಂದಲ್ಲೆ ತೂಗಿಸಿಕೊಂಬೊ ಛೆಂದಾ ಸ್ವಾಮಿ ಕದರುಂಡಲಗಿ ಹನುಮಯ್ಯಗಾನಂದ ಪ್ರೇಮದಿಂದಲ್ಲೆ ತೂಗಿದರು ಗೋವಿಂದ 5
--------------
ಕದರುಂಡಲಗಿ ಹನುಮಯ್ಯ
ನರರೇನು ಬಲ್ಲರು ಪ ಘೋರದುರಿತ ಸಂಹಾರ ಕೇಶವಧೀರಾ ಮಾರಜನಕ ಸುಂದರ ಹೇ ವೀರಾ ಸುರಾಸುರಪವಂದ್ಯ ಸುಗುಣ ಶ್ರೀಗೋವಿಂದ ವೀರಾ ಶ್ರೀರಾಮಾವತಾರ ಎತ್ತಿದ ಧೀರಾ 1 ಆದಿಮೂಲ ಕರ್ತನೆಂದು ಅರಿತು ಮನದಿ ಶೋಧಿಸೆ ಸಕಲ ಸಾರವನು ಭೇದಾನರಿತು ಯದಾಯುಗ ಭಟಗಾಳಾರು ಮೋದದಿ ನವಯುಗದ ಮರ್ಮವ ನರಿತು 2 ಸಕಲ ಪ್ರಪಂಚವೆಂಬ ಸುಖವನ್ನೆ ಅತಿಗಳೆದು ಮುಕುತಿ ದಾಯಕ 'ಹೊನ್ನ ವಿಠ್ಠಲ’ ನೆಂದೆನ್ನು ಭಕುತಿಯಿಂದಲಿ ಸದಾಭಾವನೆಯ ನೀ ಬಿಡದೆ ಅಕಳಂಕ ಮಹಿಮನ ಅರಿತು ಸ್ತುತಿಸುವರಿಗಲ್ಲದೆ 3
--------------
ಹೆನ್ನೆರಂಗದಾಸರು
ನೀ ಕೈಯ ಬಿಟ್ಟರಿನ್ಯಾತಕೆನಗೀ ಸುಖ ಗೋಕುಲಗಣನಾಯಕ ಪ ಲೋಕೈಕ ನಾಥನೆಂದಾ ರೈಉಸುರಿದ ಮುನಿಯ ಯಾಕೀ ಪರಿಯೊಳೆನ್ನ ಕಾಕುಮಾಡುವೆರಂಗಾ ನೂಕಿ ನಿಮ್ಮಾಶ್ರಯವ ಮಾಡೈ ಎಂದಿಹ ವ್ಯಾಕುಲಾಂತ ಪರಾತ್ಮ ಸತ್ಯ ಸ ಲೊಕ ಸರ್ವಸಯೇಕ ಭೀಮಾ 1 ಸಮಾಜದೀ ಭೀತಿಯಿಂದ ಮಿತ ದು:ಖವನುಂಡೆ ಸುಮನ ಸತ್ಯ ಸಮಾಜ ಭೌಮನೆ ಅಮರಗುಣ ಕಟಕಾಮಣಿಯೆ ಸ ದ್ವಿಮಲ ಚರಿತ ವಿಶಾಲ ಭೂಪಾ2 ಕಿಂತುಭವದ್ಧರ್ಶನೇನಆಹಂಬೆಲ್ಲ ಕಥಯಾಮಿಕಾಲಾಂತಕೋ ಚಕ್ರಸುಧಾರ ತ್ವರಿತದಿ ಕಂತು ಜನಕನೆ ಪಾಲಿಸೆನ್ನು ಪಂಥವೇತಕೊ ಪರಮಜೀಯಾ 3 ಭ್ರಷ್ಟಸಂಗವ ಬಿಡಿಸಿ ಪಾಲಿಸೊ ವಿ ಶಿಷ್ಟಾದ್ವೈತನೆ ಕೃಷ್ಣನಾಮನೆ ಸೃಷ್ಟಿ ಶ್ರೀಗುರು[ತುಳಸಿ]ಕುಲ ಶ್ರೀರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಪರಮಮಂಗಳ ಧಾಮಾ ಶ್ರೀರಾಮಾ ಪ ಕರುಣಾಮೃತ ಸಾಗರ ನಿಸ್ಸೀಮಾಚರಣಕೆರಗುವೆ ಸಾಸಿರನಾಮಾ 1 ಶರಣಾಗತರನು ಕರವಿಡಿವುದು ನೇಮಾಶರಣುಬಂದೆನಯ್ಯ ರಘುಕುಲ ಸೋಮಾ 2 ವಚನವ ಪಾಲಿಪ ಸುಚರಿತವೈ ನಿಮ್ಮಅಚಲ ಭಕ್ತಿಕೊಡು ಮೇಘಶ್ಯಾಮಾ 3 ಗದುಗಿನ ವೀರನಾರಾಯಣ ಪ್ರೇಮ ವೊದಗಿಸಿ ಕಾಯೋ ವೀರ ಲಲಾಮಾ 4
--------------
ವೀರನಾರಾಯಣ
ಪಾಲಿಸಗಸ್ತ್ಯ ಪುರವಾಸಾ ಸಂತತ ಲೇಸಾ ಲಾಲಿಸೋ ಭಾರತೀಶಾ ಪ ಪದ್ಯ ನಿತ್ಯ ನಿರ್ಧೂತಮಾಯಾ ಕವಿಜನ ವರಗೇಯಾ, ಕಾಮಿತಾರ್ಥಾಭಿಧೀಯಾ ದಿವಿಭುವಿ ನಿಜಗೇಯಾ, ನೀತ ಸದ್ಭಕ್ತ ಪ್ರೀಯಾ ತ್ರಿವಿಧಜನ್ವ ಸುಕಾಯಾ ನಿಲಯ ವಾಙ್ಮನೋ ಪ್ರೀಯಾ ನಿಗಮ ವಂದಿತ ಮುಖ್ಯಗುಣಧಾಮಾ ಸ್ವಾಶ್ರಿತಪ್ರೇಮಾತೋಷಿತ ಶ್ರೀರಾಮಾ ಜಗಕೆ ಜೀವನÀನಾದ ಹನುಮಾ ಕಾಮದ ಭೀಮಾ ಮೋಕ್ಷದ ಮಧ್ವನಾಮಾ ಮುಗಿವೆ ಕರದ್ವಯ ನಿಮಗಯ್ಯಾ ನಮೋ ನತಜೀಯಾ ಸಂತತ ಪಿಡಿ ಕೈಯಾ 1 ಪದ್ಯ ಜಲರುಹಭವಪೋತಾ ಭೂತನಾಥೈಕತಾತಾ ಸುಲಲಿತಜನದಾತಾ ಶುದ್ಧಸತ್ತಾ ್ವಧಿನಾಥಾ ಕಲಿಮಲ ಪ್ರವೀಫಾತಾ ವಿಶ್ವಕೋಶವ್ಯತೀತಾ ವಿಲುಲಿತ ದಿತಿಜಾತಾ ಧೂತ ಸರ್ವತ್ರಾಭೀತಾ ಪದ ಏಕವಿಂಶತಿ ಸಹಸ್ರ ಷಟ್‍ಶತಾ ಜಪಮಾಡುತಾ ತ್ರಿವಿಧರೊಳಿರುತ ಎಕೋ ನಾರಾಯಣನುತ್ತಮಾ ಸರ್ವ ಸುರೋತ್ತಮ ಜೀವಗಣವೆಂಬೋದು ಅಥವಾ ಎಕೋ ಭಾವಭಕ್ತಿವಿಜ್ಞಾನಾ ಭವದೊಳು ಜ್ಞಾನಾ ಕಲ್ಪಿಸಿ ಅಜ್ಞಾನಾ ಏಕವಾಗಿತ್ತು ಸತ್ವರಾ ಭವದಿಂದ ಮುಕ್ತರಾ ಮಾಡುವಿ ಸತ್ವರಾ 2 ಪದ್ಯ ಶ್ರುತಿತತಿಸ್ಮøತಿವೇದ್ಯಾ ಸೂತ್ರನಾಮಾಮರಾದ್ಯಾ ವಿತತವಿಮಲಗಾತ್ರಾ, ವೀಶಶೇಷತ್ರಿನೇತ್ರಾ ಶತಮಖ ಮುಖಧ್ಯಾತಾ, ಧೀತವೇದಾಂತಜಾತಾ ಪದ ವಿಶ್ವೇಶ ವಿಶ್ವಾಂತರಾತುಮಾ ಚಿÉಚ್ಛುಕಾತುಮಾ ಸರ್ವಜೀವರುತ್ತಮಾ ವಿಶ್ವಾಸದಿಂದಲಿ ತವಪಾದಾ ಮೋದ ದಾಯಕ ಮುಕ್ತಿಫಲದಾ ವಿಶ್ವನಾಟಕ ವಿಷ್ಣುಪದ ಭಕ್ತಾ ಸಜ್ಜನಸಕ್ತ ಪಾಲಿಸು ನಿನ ಭಕ್ತಾ ವಿಶ್ವೇಶÀ ಗುರುಜಗನ್ನಾಥ ಮೋದ 3
--------------
ಗುರುಜಗನ್ನಾಥದಾಸರು
ಮಂಗಳಗಾನ ವಿಲೋಲಾ | ಮುನಿಪಾಲಾ ಫಣಿಮಾಲಾ ಮುನಿಪಾಲಾ ಫಣಿಮಾಲಾನಂತ ಶೀಲಾನಂತ ಶೀಲಾ ಪ ಕುಲಿಶ ಧರಾರ್ಚಿತ ಯಲರುಣಿ ತಲ್ಪಸುಶಯನ | ಸುಶಯನಾ ಶಶಿವದನಾ ವಿಪಗಮನಾ 1 ಘುನಗುಣನಿಧಿ ವನಜಾಸನ ಜನಕಾ ದಿವಕೋಟ ಪ್ರಕಾಶ ಅಘುನಾಶ ಜಗದೀಶಾ ಜಗದೀಶಾ ಶ್ರೀನಿವಾಸಾ 2 ಸಾಮಜ ಭಯಹರ ರಾಮ ಶ್ರೀರಾಮಾ ಶಾಮಸುಂದರ ರಘುವೀರಾ ಭವದೂರ ಮುರಹರಾ ಮುರಹರಾ ಸುಕುಮಾರ 3
--------------
ಶಾಮಸುಂದರ ವಿಠಲ
ರಾಮಚಂದ್ರ ರಘುವೀರಾ ನಮೋ ನಮೋ ಪ ಶ್ಯಾಮಾಂಗ ಸುಕುಮಾರಾ ನಮೋ ನಮೋ ಕಾಮಿತಾರ್ಥದಾತಾರಾ ನಮೋ ನಮೋ ಓಂಕಾರ ಅ.ಪ ವಸಿಷ್ಟಾದಿಮುನಿ ತೋಷಿತ ನಮೋ ನಮೋ ನಿಶಚರೇಭ ಕುಲಕಾಲಾ ನಮೋ ನಮೋ ಶ್ರೀ ಬಾಲಾ 1 ನೀತಿಸುಗುಣಯುತಶೀಲಾ ನಮೋ ನಮೋ ಘನಲೀಲಾ 2 ಮಾರೀಚಾಂತಕ ವೀರಾ ನಮೋ ನಮೋ ಶ್ರೀಕಾರಾ 3 ಖ್ಯಾತ ಮೃದುವಾಕ್ ದೀಪ್ತಾ ನಮೋ ನಮೋ ಸಂತೃಪ್ತಾ4 ಪರಮ ಪುಣ್ಯಚರಿತ್ರಾ ನಮೋ ನಮೋ ಶ್ರೀಗಾತ್ರಾ 5 ಅರಿಕುಲ ನಾಶಕ ರಂಗಾ ನಮೋ ನಮೋ ಶ್ರೀರಂಗ 6 ದೇವ ದಿವಿಜನುತ ನಮೋ ನಮೋ ಶ್ರೀರಾಮಾ 7 ನಿತ್ಯ ಮುಕ್ತ ವನಮಾಲಾ ನಮೋ ನಮೋ ಭೂಪಾಲಾ8 ಮಾಂಗಿರೀಶ ಮಾಲಿಂಗಾ ನಮೋ ನಮೋ ಶ್ರೀರಂಗ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮಾ ನಿನ್ನ್ಹ್ಹೊರತನ್ಯರ ಕಾಣೆ ಪೊರೆ ನೀನೆನ್ನಾಣೇ ಶ್ರೀರಾಮಾ ಪ ಕಾಮಾಂತಕ ತನ್ನ ಭಾಮೆಗೊರೆದ ಶ್ರೀ ರಾಮತಾರಕಮಂತ್ರವೆ ಗತಿ ಲೋಕಕೆ ರಾಮಾಅ.ಪ ಮತಿವಂತ ದಶರಥ ಕೌಸಲ್ಯೆಯರ ಸುತನಾಗ್ಯವತರಿಸಿ ಅತಿ ಬಾಲ್ಯದಿ ಮುನಿಯೊಡನಡವಿಗೆ ನಡೆದು ಕಡು ದುರುಳೆಯಸದೆದು ಮತಿಹೀನ ರಕ್ಕಸರುಪಟಳವಳಿದು ಮುನಿಪತಿ ಮಖ ಬೆಳೆದು ಪತಿಸುತಸಖಹಿತ ಜನಪತಿ ಜೀವಿತ ಪಥದಾದರ್ಶವ ಜಗತಿಗೆ ತೋರಿದೆ1 ಮುನಿಗೌತಮಸತಿ ತಾ ಶಿಲೆಯಂತಿರಲು ಪದರಜದಿಂದುದ್ಧರಿಸಿ ಜಾಹ್ನವಿ ಚರಿತೆಯ ಕೇಳುತ ನಲಿದು ಅನುಜಾತನ ಬೆರೆದು ಜನನಾಥನ ಜನಕನ ಮಿಥಿಲೆಗೆ ನಡೆದು ಹರಧನುವನುಪಡೆದು ಅನುಪಮವೆನಿಪದ ನಡುವೊಳೆ ಖಂಡಿಸಿ ಜನಕಸುತೆಯ ಕರಕಮಲವ ಪಿಡಿದೆ 2 ಪರಶುಹಸ್ತರು ಮಾರ್ಗದಿ ಎದುರಾಗಿ ಅಂಜಿಸೆ ಬೆರಗಾಗಿ ಕರದಲ್ಲಾಟಿಕೆಯೊಲು ಧನುವದಗ್ರಹಿಸಿ ಕ್ಷಣದಲ್ಲುಪಹರಿಸಿ ಜನಕೆ ಹಿರಿಯರಿಗೆ ದಶರಥನಿಗೆ ಸುರನರರೆಲ್ಲರು ಪರಮಾನಂದದೊ ಳಿರುತಿರೆ ವಸಿದೆ ಸುದತಿಯೊಡನೆ ರಘುರಾಮ3 ಹಿಂದೆ ನಾ ಬಹುಜನ್ಮಗಳಲಿ ಬಂದು ನೊಂದೆನು ಈ ಭವದಿ ನಿನ್ನಲಿ ಬಂದು ನಿಂದೆ ಗತಿಯೆಂದು ಸಂದೇಹವಿಲ್ಲ ನೀನೇ ಗುಣಸಿಂಧು ಜಗಕಾಪದ್ಬಂಧು ತಂದೆ ನೀನಿಂದೆನ್ನ ಬಂಧನ ಬಿಡಿಸದೆ ಕೊಂದೆಯಾದರೆ ಕುಂದದು ನಿನಗಪಯಶ 4 ಆನಂದಮಯ ನೀನಾನಂದದಲ್ಲಿದ್ದೆ ಆಶ್ಚರ್ಯವದೇಳು ಆನಂದವನಂದು ಕುಂದದಲಿತ್ತೆ ಜಗಕತಿಶಯವೇಳು ಸಾನಂದದೊಳಿದ್ದರು ತವಸನ್ನಿಧಿಬಲದಿ ಅತಿಶಯಮತ್ತೇಳು ನ್ಹೊಂದಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ರಾಮಾ ರಾಮಾ ಸೀತಾರಾಮಾ ರಘು ಕುಲೋತ್ತಮಾ ಶ್ರೀರಾಮಾ ಪ ರಾವಣಾರಿಯಾದ ರಾಮಾ ಮಾಯ ರಕ್ಕಸಗೊಲಿದ ರಾಮಾ ವಾಯುತನಯಗೊಲಿದ ರಾಮಾ ಕೋದಂಡರಾಮಾ ಶ್ರೀರಾಮಾ 1 ಜಾಮಾತ ರಾಮ ಜಾನಕಿ ವಲ್ಲಭ ಶ್ರೀರಾಮಾ ಕ್ಷೋಣಿಗಭಿಮಾನಿ ರಾಮಾ ಕೌಸಲ್ಯಾರಾಮ ಶ್ರೀರಾಮಾ 2 ಇನಕುಲೋತ್ಪನ್ನ ರಾಮಾ ದಿನಕರ ಸತತೇಜ ರಾಮಾ ಹನುಮೇಶವಿಠಲ ರಾಮಾ ಪುನೀತರಾಮಾ ಶ್ರೀರಾಮಾ 3
--------------
ಹನುಮೇಶವಿಠಲ
ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ ಹರಣ ಪ್ರಬೋಧ ಮುದ್ರಾಂಕನ ಅ.ಪ. ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1 ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2 ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3
--------------
ಗುರುಗೋವಿಂದವಿಠಲರು
ಶ್ರೀ ಸತ್ಯಬೋಧರು ಭೀಕರ ರೂಪವ ತೋರುವ ಯತಿವರನ್ಯಾರೆ ಪೇಳಮ್ಮಯ್ಯ ಪ. ನಾಕಲೋಕಪತಿ ಪಿತನ ಬಲದಿ ಯಮಪಾಶ ಗೆದ್ದ ಸತ್ಯಬೋಧಕಾಣಮ್ಮ ಅ.ಪ. ಹರಿ ಆಚಾರ್ಯರ ಉದರದಿ ಜನಿಸಿದನ್ಯಾರೇ ಪೇಳಮ್ಮಯ್ಯಮಾರನ ಪೋಲುವ ರೂಪದಿಂದ್ಹೊಳಿಯುವ-ನ್ಯಾರೇ ಪೇಳಮ್ಮಯ್ಯಗುರುಮುಖದಿಮಂದಧ್ಯಯನ ಮಾಡುತಮನಮೋಹಗೊಳಿಪ ಬಾಲಕನಾರಮ್ಮ1 ಸುಂದರರೂಪನ ಸತಿಯನಾಮ ಕಳವರಿಸಿ-ನ್ಯಾರೆ ಪೇಳಮ್ಮಯ್ಯಮುದದಿಂದಲಿ ಸತ್ಪುತ್ರರ ಪಡೆದಿಹನ್ಯಾರೆ ಪೇಳಮ್ಮಯ್ಯಮಿಂದಸಂಸಾರದಿ ಇಂದಿರೇಶನ ಭಜಿಸುವಶ್ರೀರಾಮಾರ್ಯ ಕಾಣಮ್ಮ2 ಸತ್ಯಪ್ರೇಮರ ಪ್ರೀತಿಗೆ ಪಾತ್ರನುದಾರೆ ಪೇಳಮ್ಮಯ್ಯತಂತ್ರಿಣಿ ತಲದಲಿ ಆಶ್ರಯಗೊಂಡವನ್ಯಾರೆ ಪೇಳಮ್ಮಯ್ಯಮತ್ತೆ ಜಗದೊಳಿಹ ಮಿಥ್ಯವಾದಿಗಳೆಂಬಾಮತ್ತಗಜಗಳಂಕುಶನಿವನಮ್ಮಾ 3 ಶ್ರವಣಾಖ್ಯಪುರದಿ ಮಾಡಿಹನ್ಯಾರೆ ಪೇಳಮ್ಮಯ್ಯಶೇಷರೂಪದ ದುಷ್ಟದೈತ್ಯನ ಸುಟ್ಟವನ್ಯಾರೆ ಪೇಳಮ್ಮಯ್ಯಶೇಷಗತಿಯ ಮನ ಭೂಸುರ ವೃಂದಕೆನಿಶಿಯಲಿ ರವಿಯನು ತೋರಿದನಮ್ಮ 4 ತಪದ ಪ್ರಭಾವದಿ ಗಂಗೆಯನೊಲಿಸಿಹನ್ಯಾರೆ ಪೇಳಮ್ಮಯ್ಯಗೋಪಿಯ ಮಗನನು ತೀರ್ಥದ ದಡದಲಿ ನಿಲಿಸಿಹನ್ಯಾರೆ ಪೇಳಮ್ಮಯ್ಯಗೋಪರೊಡೆಯ ತಂದೆವರದವಿಠಲನನ್ನುಸತತ ಭಜಿಸುವ ಯತಿವರನೆ 5
--------------
ಸಿರಿಗುರುತಂದೆವರದವಿಠಲರು