ಒಟ್ಟು 11 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನೆ ಬಂದಿದೆ ಇದಿಗೊ ಮದ್ದಾನೆ ಪ ಜ್ಞಾನಿಗಳೊಳಾಡುವ ಮದ್ದಾನೆ ಅ ದೇವಕಿಯೊಳು ಪುಟ್ಟಿದಾನೆ - ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ - ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ 1 ನೀಲವರ್ಣದ ನಿಜದಾನೆ - ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ - ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ 2 ಬಾಲೇಂದು ಮುಖದ ಮರಿಯಾನೆ - ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ 3 ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ 4 ಮಲ್ಲರೊಡನೆ ಗೆಲಿದಾನೆ - ಕಡುಖುಲ್ಲ ಕಂಸನ ಕೆಡಹಿದಾನೆ - ವಿದ್ಯೆ ಸಾಂದೀಪರಲಿ ಕಲಿತ ಮರಿಯಾನೆಸಲೆ ಭಕ್ತರ ಕಾವ ಪುಟ್ಟಾನೆ 5 ತರಳೆ ರುಕ್ಮಿಣಿಯ ತಂದಾನೆ - ಬಹುಕರುಣದಿಂ ಪಾಂಡವರ ಪೊರೆದಾನೆವರ ವೇಲಾಪುರದೊಳಿಪ್ಪಾನೆಸಿರಿಯಾದಿಕೇಶವನೆಂಬ ಮದ್ದಾನೆ 6
--------------
ಕನಕದಾಸ
ಇ. ಶ್ರೀ ಹರಿಯ ಸ್ತುತಿ ತಿರುಪತಿ ಶ್ರೀನಿವಾಸ ದೇವರು ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1 ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2 ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3 ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4 ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
--------------
ಇಂದಿರೇಶರು
ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ. ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1 ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2 ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3 ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4 ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5 ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6 ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7
--------------
ಗಲಗಲಿಅವ್ವನವರು
ಗೋಪಾಲವಿಠಲ ನೀ ಕಾಪಾಡೊ ಎನ್ನನುಅಪಾರ ಜನುಮದಿ ಪೊಂದಿ ಇಪ್ಪೆ ನಿನ್ನ ಪ. ಉದಿತ ತರಣೀನಿಭ ಪದಪದ್ಮ ನಿನ್ನಯಹೃದಯದೊಳಗಿರಿಸಿ ಮುದದಿಂದ ಧ್ಯಾನಿಪಸದಯುಗಳ ಪಾದಪದುಮಸೇವೆಯನುಒದಗಿ ಪಾಲಿಸೊ ಶಶಿವದನ ಸಂ(ಕಂ)ಸದನನೆ 1 ವಾಸುದೇವನೆ ಎನ್ನ ದೋಷಿಯೆಂತೆಂದರೆಆಸರಿನ್ನ್ಯಾರು ನಿನ್ನ ದಾಸರದಾಸಗೆದಾಸವಿನುತ ಹೀಗುದಾಸೀನ ಮಾಡಲುದಾಸಜನರು ನಿನ್ನ ಲೇಶವು ಮೆಚ್ಚರು 2 ಪಿರಿಯರೆಲ್ಲರು ನಿನ್ನ ಚರಣವ ಪೂಜಿಸಿಪರಮಾನುಗ್ರಹ ಪರಿಪಾಲಿಸಿಪ್ಪರೆನ್ನನಿರುತದಿಬೇಡುವೆ ಗೋಪಾಲವಿಠಲ ಶ್ರೀಲೋಲನೆದೊರೆಯೆ ನಿನ್ನ ಮೂರುತಿ ಬರವೆನ್ನ ಮನಸಿಗೆ 3
--------------
ಗೋಪಾಲದಾಸರು
ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ನಾರಾಯಣ ನರಹರಿ ಪರಮಾತ್ಮ ನೀ ಪಾಲಿಸೋ ಪ ಆರು ಮೂರಾರೊಳೆನ್ನ ಬಿಡಿಸೊ ಪಾರುಗಾಣಿಸೋ ಮುನ್ನಾ ಪರ ತೋರೋ ನಿಜ ನರಹರಿ 1 ಬಾಲಪ್ರಹ್ಲಾದನಾರ್ತನಾಗಿ ಶ್ರೀಲೋಲನೆಂದು ಕರೆಯೆ ಕಂಬದಿ ಬೇಗಾ ನೀಲಮೇಘಶ್ಯಾಮನೆನಿಸಿದ ನರಹರಿ 2 ಧರಣಿಗಧಿಪ ಮದ್ಗುರುವು ತುಲಸೀರಾಮದಾಸನೆನ್ನುತ ಬಂದೆ [ವರದ] ಪಾರಾ ಮಹಿಮ ಪರಾತ್ಪರ ನರಹರಿ 3
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ತೂಗಿದಳೆಶೋದಾದೇವಿ ಬಾಲಕನಾಸಾಗರ ಶಯನನ ಜೋಗುಳ ಹಾಡಿ ಪಪುಟ್ಟಿದ್ಹನ್ನೊಂದನೆ ದಿವಸ ಶ್ರೀಕೃಷ್ಣನಾತೊಟ್ಟಿಲೊಳಗಿಟ್ಟು ಸಂತೋಷದಿ ಮಗನ ಅ.ಪಜೋಜೋ ಸುಗುಣಶೀಲ ಗೋಪಾಲಜೋಜೋ ಯದುಕುಲ ಬಾಲ ಶ್ರೀಲೋಲನೆ ಎನುತಾ 1ರಂಗ ಕೃಪಾಂಗ ಶ್ರೀರಂಗನೆ ಜೋಜೋಅಂಗಜಪಿತ ನರಸಿಂಗನೆ ಜೋ ಎಂದು 2ನಂದನ ಕಂದನೆ ಜೋಜೋ ಗೋವಿಂದಾಮಂದರಗಿರಿಧರ ಜೋಜೋ ಎಂದೆನುತಾ 3
--------------
ಗೋವಿಂದದಾಸ
ಪಾಲಗಡಲ ಶಯನಾ | ಪಂಕಜನಯನ |ಪಾಲಗಡಲ ಶಯನಾ ಪಫಾಲನೇತ್ರಪರಿ| ಶೋಭಿಪ ಭಕ್ತ | ವಿಶಾಲ ಕರುಣಗುಣ|ಶೀಲಸಮ್ಮೋಹನ 1ನೀಲಮೇಘ ನಿಭಾಂಗನೆ | ನಿರ್ಮಲಚಿತ್ತ |ಶೂಲಪಾಣಿಯ ಸಖನೆ |ಬಾಲತನದಿ ಗೋಪಬಾಲಕಿಯರ ಮನ |ದಾಲವ ಸಲಿಸಿದ ಶ್ರೀಲೋಲನೆ ಪೊರೆ 2ಕೋಟೀ ಸಂಖ್ಯೆಯೊಳ್ ದೈತ್ಯರ |ಘಾತಿಸಿನರ| ನಾಟಕದಲೀ ಭಕ್ತರ-ಆಟಪಾಟ ಸಂತೋಷದ ಕೂಟದಿ |ನಾಟಕವೆನಿಸಿzÉ |ಹರಿಗೋವಿಂದನೆ ||ಪಾಲ|| 3
--------------
ಗೋವಿಂದದಾಸ