ಒಟ್ಟು 11 ಕಡೆಗಳಲ್ಲಿ , 4 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಮಂಗಳ ಮಾಧವಗೆ ಮಾರಮಣಗೆ ಮಂಗಳ ಶ್ರೀಧರಗೆ ಪ ಭಂಗ ಭವಗಜ ಸಿಂಗ ಕರುಣಾಪಾಂಗ ಶ್ರೀಶಗೆ ಗಂಗಾಜನಕಗೆ ತುಂಗ ಮಹಿಮಗೆ ಭಂಗರಹಿತಗೆ ಅನಂಗಪಿತನಿಗೆ 1 ಭುವನ ಮೋಹನ ಸುಮನಸರ ಪ್ರಿಯ ಕವಿಜನರ ಹೃದ್ಗøಹ ನಿವಾಸಗೆ ನವನವ ಲೀಲೆಗಳ ತೋರ್ದಗೆ ನವರತುನದಾರತಿಯ ಬೆಳಗಿರೆ 2 ಗರುಡಗಮನಗೆ ಉರಗಶಯನಗೆ ಪರಮಪುರುಷಗೆ ಪುಣ್ಯಚರಿತಗೆ ಉರಗಗಿರಿವಾಸನಿಗೆ ದೇವಗೆ ಸುರರೊಡೆಯ ಶ್ರೀ ಶ್ರೀನಿವಾಸಗೆ3 ಸೌಮ್ಯನಾಮ ಸಂವತ್ಸರದಂದು ನೇಮದಿಂದ ಭಜಿಪ ಭಕುತರ ಕಾಮ್ಯಕರ್ಮವ ತರಿದು ಪೊರೆಯುವ ಕಮಲನಾಭ ವಿಠ್ಠಲನ ಪ್ರತಿದಿನ4
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ರಘುರಾಮಗೆ ಜಯಮಂಗಳಂ ಗುಣಧಾಮಗೆ ಮಂಗಳಂ ಮದನಾರಿವಂದ್ಯಗೆ ಮಂಗಳಂ ಮನ್ನಾಥಗೆ ಪ. ರಾಮಗೆ ನತಕಾಮಗೆ ಘನಶ್ಯಾಮಗೆ ಸುಪ್ರೇಮಗೆ ಕಾಮಿತಾರ್ಥಪ್ರದಾತಗೆ ವರರಾಮಣೀಯಕ ರೂಪಗೆ 1 ಶ್ರೀಶಗೆ ಜಗದೀಶಗೆ ಭಯನಾಶಗೆ ಸರ್ವೇಶಗೆ ದಾಸಜನಮನೋಲ್ಲಾಸ ಲಕ್ಷ್ಮೀಶಕೇಶವ ಮೂರ್ತಿಗೆ 2 ಮಾರುತಾತ್ಮಜಪÀರಿಸೇವ್ಯಗೆ ನತಪಾರಿಜಾತ ಸಮಾನಗೆ ವಾರಿಜಾಯತನೇತ್ರ ಶ್ರೀಶೇಷಶೈಲ ನಿವಾಸಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳಂ ರಘುರಾಮಗೇ ಜಯಮಂಗಳಂ ಗುಣಧಾಮಗೆ ಮಂಗಳಂ ಮದನಾರಿವಂದ್ಯಗೆ ಮಂಗಳಂ ಮನ್ನಾಥಗೆ ಪ. ರಾಮಗೇ ನತಕಾಮಗೆ ಘನಶ್ಯಾಮಗೆ ಸುಪ್ರೇಮಗೇ ಕಾಮಿತಾರ್ಥಪ್ರದಾತಗೆ ವರ ರಮಣೀಯಕರೂಪಗೆ 1 ಶ್ರೀಶಗೆ ಜಗಧೀಶಗೆ ಭಯನಾಶಗೇ ಸರ್ವೇಶಗೆ ರಾಸಮನೋಲ್ಲಾಸ ಲಕ್ಷ್ಮೀಶ ಕೇಶವಮೂರ್ತಿಗೆ 2 ಮಾರುತಾತ್ಮಜ ಸೇವೆಗೇ ನತಪಾರಿಜಾತ ಸಮಾನಗೆ ವಾರಿಜಾಯತನೇತ್ರಗೇ ಶ್ರೀ ಶೇಷಶೈಲನಿವಾಸಗೆ 3
--------------
ನಂಜನಗೂಡು ತಿರುಮಲಾಂಬಾ
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ವಾದೀಗಳಾಗೆದ್ದು ಸಿದ್ಧಾಂತ ಸ್ಥಾಪಿಸಿ ಮುದ್ದು ಕೃಷನ ತಂದ ವೇದ ವ್ಯಾಸರ ಪ್ರಿಯ ಮಧ್ವರಾಯ ಮಧ್ವರಾಯ ಪ ಬಿದ್ದೆ ನಿಮ್ಮಯ ಚಲುವ ಪಾದಪದ್ಮಂಗಳಿಗೆ ವೇದ ಮಧ್ವರಾಯ ಮಧ್ವರಾಯ ಅ.ಪ ತಂದು ಚೂಡಾಮಣಿ ನಿಂದೆ ರಾಮನ ಮುಂದೆ ಮಧ್ವರಾಯ ಮಧ್ವರಾಯ ಕಂದನು ಎಂತೆಂದು ಮುಂದೆ ಪಾಲಿಸ ಬೇಕು ಮಧ್ವರಾಯ ಮಧ್ವರಾಯ 1 ದ್ವಾಪರ ಯುಗದಲ್ಲಿ ದ್ರೌಪದಿ ಗಂಡನೆನಿಸಿ ಪಾಪಿಗಳಾಕೊಂದು ಪತಿ ಸೇವೆ ಮಾಡ್ದೆ ಮಧ್ವರಾಯ ಮಧ್ವರಾಯ ಕೋಪವು ಮಾಡದೆ ತಾಪಗಳೋಡಿಸಿ ಗೋಪಾಲ ಕೃಷ್ಣನ ಕೃಪೆಯ ಕೊಡಿಸೈಯ ಮಧ್ವರಾಯ ಮಧ್ವರಾಯ 2 ದುರುಳ ಮಾಯಿಗಳೆಲ್ಲ ಹರಿಯ ದೂರುತ್ತಿರಲು ಸುರರ ಮಧ್ವರಾಯ ಮಧ್ವರಾಯ ಭವ ಬಿಡಿಸಿ ವೀರ ವೈಷ್ಣವ ನೆನಿಸಿ ಸಾರಿ ಸಾರಿಸ ಬೇಕು ಹರಿಯ ನಾಮವನ್ನು ಮಧ್ವರಾಯ ಮಧ್ವರಾಯ 3 ಲೋಕದಿ ಸಜ್ಜನರ ಸಾಕಬೇಕು ಎಂದು ಬೇಕೆಂದು ಯತಿಯಾದೆ ಶ್ರೀಕಾಂತ ಪಟ್ಟಪುತ್ರ ಮಧ್ವರಾಯ ಮಧ್ವರಾಯ ನೂಕೋದುರಿತ ರಾಶಿ ಲೋಕಕ್ಕೆಲ್ಲಾ ಗುರು ಮಧ್ವರಾಯ ಮಧ್ವರಾಯ 4 ಸುರರೆಲ್ಲ ಪರಿವಾರ ತಾರತಮ್ಯವ ತೋರ್ದೆ ಮಧ್ವರಾಯ ಮಧ್ವರಾಯ ಸೂರಿಗಳೊಡೆಯನೆ ಭಾರತಿ ಪ್ರಾಣಕಾಂತ ಮಧ್ವರಾಯ ಮಧ್ವರಾಯ5 ಮತ್ತೆ ಹರಿಯಮತದಂತೆ ಬರೆದೆಯೊ ಹೊಸ ಭಾಷ್ಯ ಮಧ್ವರಾಯ ಮಧ್ವರಾಯ ಪೊರೆದೆ ಹರಿಯಪ್ರಧಮಾಂಗ ವೀರ ಮಾರುತಿ ದೇವ ಮಧ್ವರಾಯ ಮಧ್ವರಾಯ 6 ಬೃಹತೀಗೆ ನೀ ಪ್ರತಿಮ ಬಹುರೂಪ ಧಾರಕ ವಹಿಸೊ ಎಮ್ಮೆಯ ಅಹಿ ಭೂಷಣ ಪ್ರಿಯ ಮಧ್ವರಾಯ ಮಧ್ವರಾಯ ದಹಿಸೋ ಸೋಹಂ ಜ್ಞಾನ ಮಹಿಯೊಳು ಅಪ್ರತಿಮ ಮಧ್ವರಾಯ ಮಧ್ವರಾಯ 7 ಜಪ ಬೇರೆ ಬೇರೆ ಮಾಡಿ ಮೂರು ಗತಿಯ ತೋರ್ಪೆ ಮಧ್ವರಾಯ ಮಧ್ವರಾಯ ಭಾರೀಶಕ್ತನು ನೀನು ಆರು ಸರಿಯು ನಿನಗೆ ಮಧ್ವರಾಯ ಮಧ್ವರಾಯ 8 ಆನಂದ ಶಾಸ್ತ್ರವ ಸಾನುರಾಗದಿ ಪೇಳ್ದೆ ಮಧ್ವರಾಯ ಮಧ್ವರಾಯ ಮಾನವ ಜ್ಞಾನಾದಿಗಳ ಕೊಟ್ಟು ಕಾಯ ಬೇಕೋ ಮಧ್ವರಾಯ ಮಧ್ವರಾಯ 9 ಜಗ ಭಾರವ ವಹಿಸಿದೆ ಮೇರೆ ಗಾಣದ ಸತ್ವ ಮಧ್ವರಾಯ ಮಧ್ವರಾಯ ಹರಿಯ ಅರಿವ ಮರ್ಮ ಕರುಣದಿ ಅರುಹೈಯ್ಯ ಮಧ್ವರಾಯ ಮಧ್ವರಾಯ 10 ಅಮರ ವೃಂದಕ್ಕೆಲ್ಲ ಹರಿಯ ತೋರಿಸಿ ಕೊಟ್ಟೆ ಮಧ್ವರಾಯ ಮಧ್ವರಾಯ ಬೊಮ್ಮದೇವಗು ಬಲವ ಕೊಟ್ಟನ್ನ ಕೊಳ್ಳುವೆ ಮಧ್ವರಾಯ ಮಧ್ವರಾಯ 11 ಬಂದು ಮೂವತ್ತೇಳು ಸುಂದರ ಗ್ರಂಥ ಮಾಡ್ದೆ ಮಧ್ವರಾಯ ಮಧ್ವರಾಯ ಶುದ್ದ ಸತ್ವಮೂರ್ತಿ ಬದ್ಧನು ನೀನಲ್ಲ ವದ್ದು ಅವಿದ್ಯೆಯ ತಿದ್ದೊ ಎಮ್ಮೆಯ ಮನ ಮಧ್ವರಾಯ ಮಧ್ವರಾಯ 12 ಅಖಿಳಾಗಮಾವೇತ್ತ ಸುಖದ ಪ್ರಾರಬ್ಧವೋ ಮಧ್ವರಾಯ ಮಧ್ವರಾಯ ಸಕಲ ಲಕ್ಷಣವಂತ ಸಕಲ ತತ್ವರಪತಿ ಮಧ್ವರಾಯ ಮಧ್ವರಾಯ 13 ತತ್ವೇಶ ರೊಳಗೆಲ್ಲ ನಿನ್ನವ್ಯಾಪಾರವು ಉತ್ತಮ ನಿನ್ನಲ್ಲಿ ಹರಿಯ ವ್ಯಾಪಾರವು ಮಧ್ವರಾಯ ಮಧ್ವರಾಯ ನಿತ್ಯ ಕೃಷ್ಣನಕಾಂಬ ಸೂತ್ರನಾಮಕದೊರೆ ಮಧ್ವರಾಯ 14 ಉತ್ತುಮೋತ್ತುಮ ವಿಷ್ಣು ನಿನ್ನ ದ್ವಾರವೆ ವಲಿವ ಮಧ್ವರಾಯ ಮಧ್ವರಾಯ ನಿತ್ಯ ತೃಪ್ತನಿಗೀವೆ ನಿಷ್ಕಾಮ ಭಕ್ತಿ ನಿಧಿ ಮಧ್ವರಾಯ ಮಧ್ವರಾಯ15 ದಿವಿಜಾನಾಯಕ ನೀನು ಪಾದ್ಯ ಹೌದಯ್ಯಮಧ್ವರಾಯ ಮಧ್ವರಾಯ ಸೇವಕರೆನಿಸುವ ಭಾಗ್ಯವಿತ್ತು ಕಾಯೋ ಮಧ್ವರಾಯ ಮಧ್ವರಾಯ 16 ನಾಗಾರಿಶಿವ ಗುರುವೆ ಭವ ಬಿಡಿಸು ಮಧ್ವರಾಯ ಮಧ್ವರಾಯ ನೀಗಿಸು ಇವರ ಬಾಧೆ ಪಂಚ ಕೋಶಗ ಪ್ರಾಣ ಮಧ್ವರಾಯ ಮಧ್ವರಾಯ17 ಶ್ರೀ ಪತಿದಯದಿಂದ ತಾಳ ಹಾಕುವ ಶಕ್ತ ಮಧ್ವರಾಯ ಮಧ್ವರಾಯ ನೀಪಾಲಿಸಿದ ರುಂಟು ಏನೆಂಬೆ ನಿಮ್ಮ ಮಹಿಮೆ ಮಧ್ವರಾಯ ಮಧ್ವರಾಯ18 ಭಾನುಸ್ಥ ಪ್ರಭು ನೀನು ಆಧ್ಯಾತ್ಮಗತನಾಗಿ | ಸಾನುರಾಗದಿ ಜಗ ಜೇಷ್ಟೆಯ ನಡಿಸುವೆ ಮಧ್ವರಾಯ ಮಧ್ವರಾಯ ಶ್ರೀನಿವಾಸನ ಪೂರ್ಣ ಕೃಪೆಗೆ ನೀ ಪಾತ್ರನು | ಪೂರ್ಣ ಭೋದ ಗುರುವೆ ದೀನರೆಮ್ಮನು ಪಿಡಿ ಮಧ್ವರಾಯ ಮಧ್ವರಾಯ19 ಅಣವು ಮಹದ್ ಘನ ಪೂರ್ಣ ಪ್ರಜ್ಞನು ನೀನು | ಅನ್ನಜೀವರು ನಿನಗೆ ಅನ್ನ ಶ್ರೀಶಗೆ ನೀನು ಮಧ್ವರಾಯ ಮಧ್ವರಾಯ ನಿನ್ನ ರೂಪಗಳಲ್ಲಿ ನ್ಯೂನವಿಲ್ಲವು ಗುಣದಿ | ಮಣಿಸದೆ ಚಿತ್ತದಲ್ಲಿ ಉಣಿಸೋ ಹರಿ ಕೀರ್ತನೆ ಮಧ್ವರಾಯ ಮಧ್ವರಾಯ 20 ಭೇದಬೊಧೆಯ ನಿತ್ತು ಉದ್ದಾರ ಮಾಡಿದೆ | ವಾದಿ ಭೀಕರಯತಿ ಶ್ರೆದ್ಧೆ ಮನೋಹರ ಮಧ್ವರಾಯ ಮಧ್ವರಾಯ ಮುದ್ದು ಕೃಷ್ಣನ ತಂದು ತಿದ್ದಿ ಪದ್ದತಿಗಳ | ಶುದ್ಧವೈಷ್ಣವರಿಗೆಲ್ಲ ವೃದ್ಧಿ ಮಾಡಿದೆ ಭಕ್ತಿ ಮಧ್ವರಾಯ ಮಧ್ವರಾಯ 21 ಗುರು ಪ್ರಾಣ ನಾಥನೆ ಹರಿಯ ಮನದಂತೆ | ಪರಿಪರಿಲೀಲೆಯ ನಿರುತ ತೋರುತಲಿಪ್ಪೆ ಮಧ್ವರಾಯ ಮಧ್ವರಾಯ ಭರತ ಪ್ರಭುವೆ ನಿನ್ನ ಚರಣವ ಸಾರಿದೆ | ಗಾರು ಸಂಸಾರದಿ ದಾರಿ ತೋರಲಿ ಬೇಕು ಮಧ್ವರಾಯ ಮಧ್ವರಾಯ 22 ಜಯ ಜಯ ಜಯ ಹನುಮ ಜಯ ಜಯ ಜಯ ಭಿಮ ಮುಖ್ಯಪ್ರಾಣ ಮರಾಮರಾ ಜಯ ಜಯತೀರ್ಥ ವ್ಯಂದ್ಯನೆ ಜಯ ಕೃಷ್ಣವಿಠಲನ ಮಧ್ವರಾಯ ಮಧ್ವರಾಯ 23
--------------
ಕೃಷ್ಣವಿಠಲದಾಸರು
ಶರಣು ಶರಣು ಶ್ರೀ ರಾಮಚಂದ್ರನೆ ಶರಣು ಸುರಮುನಿ ವಂದ್ಯನೆ ಪ. ಶರಣು ಶ್ರೀ ರಘುಕುಲಾಬ್ಧಿಚಂದ್ರನೆ ಶರಣು ಸದ್ಗುಣ ಸಾಂದ್ರನೆ ಅ.ಪ ಕಮಲನಾಭನೆ ಕಮಲನೇತ್ರನೆ ಅಮರವಂದಿತ ವಿಮಲಚರಿತನೆ ಕುಮುದಸಖಸಮಾನ್ಯನೆ 1 ಅಂಬುಜಾಸನ ಶಂಭುವಂದಿತ ಶಂಬರಾರಿಯ ಜನಕನೆ ಕಂಬುಕಂದರ ನಂಬಿ ಭಜಿಸುವೆ ಬೆಂಬಿಡದಲೆ ಪಾಲಿಸೈ 2 ಪಕ್ಷಿವಾಹನ ರಕ್ಕಸಾಂತಕ ಲಕ್ಷ್ಮೀರಮಣ ಶುಭಲಕ್ಷಣ ಲಕ್ಷ್ಮಣಾಗ್ರಜ ಸತ್ಯವಿಕ್ರಮ ರಕ್ಷಿಸೈ ಪುರುಷೋತ್ತಮ 3 ಪರಮಪಾವನ ಶೇಷಗಿರಿಯೊಳು ನಿರುತ ನೆಲೆಸಿಹ ಶ್ರೀಶಗೆ ಶರಣ ಜನರ ಸಚ್ಚರಿತೆಯೋದುವ ವರವ ಪಾಲಿಸು ದೇವನೇ 4
--------------
ನಂಜನಗೂಡು ತಿರುಮಲಾಂಬಾ
ಶುಭವು ಶ್ರೀಹರಿಯ ನಾಮವು ಸುಜನರಿಗೆಲ್ಲಶುಭವು ಶ್ರೀಹರಿಯ ನಾಮವು ಪಶುಭವು ಶ್ರೀಹರಿಯ ನಾಮವಿಭವದಿಂ ಪೊಗಳಲುಶುಭಕೃತು ನಾಮ ಸಂವತ್ಸರದಲಿಶುಭಶುಭವೆನ್ನುತ ಪಾಡುವರನು ಸಲಹುವಅ.ಪಸಿಂಧುಶಯನ ಹರಿಯಇಂದಿರೆಸಹಿತಚಂದದಿ ಭಜಿಸುವರಮಂದರಧರಅರವಿಂದನಯನ ಶ್ರೀಮು-ಕುಂದಭಕ್ತರ ಭವಬಂಧನ ಬಿಡಿಸುವಪೊಂದಿ ಭಜಿಸುವರಾನಂದದಿ ಸಲಹುವಸುಂದರವದನಶುಭಾಂಗನು ಮುದದಲಿಇಂದ್ರಾದಿಗಳು ಆನಂದದಿ ಪೊಗಳೆ ಗೋ-ವಿಂದ ಆನಂದ ಹೃನ್ಮಂದಿರ ವಾಸನು 1ಶುಭವು ಭಕ್ತರಕಾರ್ಯಕೆ ಶ್ರೀಹರಿಯನಾಮಶುಭವು ಮುಕ್ತಿಸಾಧನಕೆಶುಭವು ಬಂಧುಗಳಿಂದ ಸದನದಿ ವೆÀುರೆಯಲುಶುಭವು ಭಕ್ತರ ವೃಂದ ಕೂಡಿ ನಲಿದಾಡಲುಶುಭಗುಣ ಶೀಲನ ಶುಭಗುಣಗಳು ಸ-ನ್ಮುದದಲಿ ಪಾಡಲು ಶುಭಕೊಡುವನುಶುಭಶುಭಶುಭವೆನ್ನುತ ನಲಿದಾಡೆ ಅ-ಶುಭಗಳನೋಡಿಸಿ ಶುಭವೀವನುಹರಿ2ಶುಭವು ಶೋಭನ ಶ್ರೀಶಗೆ ಶ್ರೀ ಸಹಿತದಿವೆÀುರೆವ ಮಹಾನುಭಾವಗೇಶುಭವೆಂದು ಪಾಡಲುಅಗಣಿತಮಹಿಮನಬಗೆಬಗೆಯಿಂದವರಘ ಪರಿಹರಿಸುವಖಗವಾಹನಶ್ರೀ ಕಮಲನಾಭ ವಿಠ್ಠಲನನು ಪಾಡುವ ಸುಜನರ ಸಲಹುವಹಗಲಿರುಳೆನ್ನದೆ ಭಜಿಸುತ ಪಾಡಿರೊಕಡಲೊಡೆಯನಪಾದಧೃಡ ಭಕುತಿಯಲಿ3
--------------
ನಿಡಗುರುಕಿ ಜೀವೂಬಾಯಿ
ಶ್ರೀ ಪುರಂದರದಾಸರು132ಶರಣುಪುರಂದರದಾಸರಾಯರೆ ಶರಣು ಶರಣು ದಯಾನಿಧೆಶರಣು ವ್ಯಾಸಮುನೀಂದ್ರ ಪ್ರಿಯತಮ ಶರಣು ಮನ್ಮನೋಭೀಷ್ಟದ ಪ.ಜ್ಞಾನಭಕ್ತಿವೈರಾಗ್ಯ ಶಮದಮಗುಣಗಣಾದಿ ಸಂಪನ್ನ ನೀಹೀನ ವಿಷಯಗಳಲ್ಲಿ ರತನುಬೂಟಕನು ಗುಣಹೀನ ನಾ 1ನಿನ್ನ ಸುಸ್ವಭಾವವಾದ ಔದಾರ್ಯಗುಣದಿಂದ ಎನ್ನನ್ನುಇನ್ನು ಮುಂದೆ ಕೊರತೆ ಸರ್ವವಪರಿಹರಿಸಿ ಪಾಲಿಸೋ 2ಶ್ರೀಪುರಂದರವಿಜಯವಿಠ್ಠಲಗೋಪಾಲ ಕಪಿಲ ಶ್ರೀಶಗೆಪುಷ್ಪ ಜನಪಿತÀ ಶ್ರೀ ಪ್ರಸನ್ನಶ್ರೀನಿವಾಸಗೆ ಪ್ರಿಯತಮ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಶೇಷಚಂದ್ರಿಕಾರ್ಯರ ಸ್ತೋತ್ರ106ಶೇಷಚಂದ್ರಿಕಾ ಆರ್ಯರೇ ಶರಣು ಶೇಷಚಂದ್ರಿಕಾಶೇಷಶಾಯಿನಿರ್ದೋಷಗುಣಾಂಬುಧಿ ಶ್ರೀಶಗೆ-ಪ್ರಿಯ ರಘುನಾಥ ಯತೀಂದ್ರ -ಇಂದಿರಾ ಸಹ ಹಂಸ ಬೋಧಿತ ಪಮಂದಜಭವ ಸನಕಾದ್ಯರ ವಂಶಜಾನಂದ ಮುನೀಂದ್ರ ಪರಂಪರ ಲಕ್ಷ್ಮಿನಾರಾಯಣ ಯೋಗೀಂದ್ರ ಸಂಜಾತ ಶೇಷಚಂದ್ರಿಕಾರ್ಯರೇ 1ಭೈಷ್ಮಿ ಮೈಥಿಲಿ ಈಶ ಶ್ರೀ ಕೃಷ್ಣ ರಾಮನ್ನತೋಷಿಸಿ ತಂತ್ರ ಸುಸಾರದಿ ಅರ್ಚಿಸಿಭಾಷ್ಯ ದೀಪಿಕಾರ್ಯ ತತ್ ಶಿಷ್ಯ ಶಿಷ್ಯ ಜಗನ್ನಾಥಯತಿ ಸಂಸೇವಿತ ಕಾವೇರಿನರ-ಸಿಂಹ ಕ್ಷೇತ್ರದಿ ಇಷ್ಟ ಶೇಷಚಂದ್ರಿಕಾ ಆರ್ಯರೇ ಶರಣು 2ಬಂಧು ಭಯದಿಂದ ಹೊರನಿಂದೆ ಮಂದನ್ನದಯದಿಂದ ಒಳಕರತಂದು ಸದನುಸಂಧಾನಒದಗಿಸಿ ಅರವಿಂದಜತಾತಪ್ರಸ್ನನ ಶ್ರೀನಿವಾಸ ಪ್ರಿಯಕರ ನರಾಂಶ ಸಂಯತ ಗುರುವರ -ಮಹಂತಶರಣು-3 ಪ
--------------
ಪ್ರಸನ್ನ ಶ್ರೀನಿವಾಸದಾಸರು