ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ