ಒಟ್ಟು 7 ಕಡೆಗಳಲ್ಲಿ , 5 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಡವಿನಿಲಯ ನಿನ್ನಡಿಗೆರಗುವೆ ಕರ ಪಿಡಿದು ಪಾಲಿಸಯ್ಯ ಪ ಮೃಡನುತ ಭಾರತಿ ಒಡೆಯನೆ ಪ್ರಾರ್ಥಿಪೆ | ಮಾಯಾ ಅ.ಪ ನಿನ್ನ ದರುಶನದಿ ಎನ್ನ ಜನ್ಮ ಪಾ | ವನ್ನ ವಾಯಿತಯ್ಯ | ನಿನ್ನನುಗ್ರಹಪಡೆದ ಸಂ | ಪನ್ನರೊಳಿಡು ಜೀಯಾ 1 ತರುಚರನರದ್ವಿಜ | ವರರೂಪತ್ರಯ | ಧರಿಸಿದಂಥ ದೇವ || ಶರಣರ ಸಂಜೀವಾ 2 ಸೃಷ್ಟಿಯೊಳಗೆ ಅತಿ ಶ್ರೇಷ್ಟನೆಂದೆನಿಸಿದ | ಕುಷ್ಟಗಿ ಮೂರುತಿ ಪುರವಾಸ ಧಿಟ್ಟ ಮೂರುತಿ ಶಾಮಸುಂದರ ವಿಠಲ ಪ್ರಿಯದಾಸ 3
--------------
ಶಾಮಸುಂದರ ವಿಠಲ
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪ್ರಾಣಾ ನೀ ಕಲ್ಯಾಣಗುಣ ಗೀರ್ವಾಣಾದ್ಯರ ಮಣಿ ಜೀವಗಣ ಗುಣಕಾರ್ಯತ್ರಾಣ ಅಗಣಿತಮಹಿಮ ಪ ಇನ್ನೆಣೆಯುಂಟೆ ತ್ರಿಭುವನ ತ್ರಾಣ ನಿನ್ನ ಆಣತಿಯಂತೆ ಪಂಚಪ್ರಾಣ ಅಣುಘನತೃಣ ಮೊದಲು ಪಣೆಗಣ್ಣ ಸುರ ಗಣಾದ್ಯಮರರೊಳಗನವರತ ನೀ ಘನ್ನ ಫಣಿರಾಜಗುರು ನಿನಗೆಣೆಯುಂಟೆ ನೀರಜಭ ಮುಖ್ಯಪ್ರಾಣ ಬಾದರಾ ಯಣನನುಗ ಆನಂದಗುಣಭರಿತ ಕೃತಿರ- ಮಣನ ಸುತೆ ರಮಣ ನೀ ಕ- ರುಣಿಸಿದರುಂಟು ಶ್ರೀಹರಿಯ ಕರುಣಾಅ.ಪ ಮರುತಾ ಶ್ರೀ ಹರಿಯಿಂದಲನವರತ ಪ್ರೇರಿತನಾಗಿ ನಿರುತಾ ಜಗಕಾರ್ಯದೊಳು ಸತತ ನೀ ಬಿಡದಿರೆಡರಿಲ್ಲ ಮರುತಾ ಜಗಚೇಷ್ಟಪ್ರದ ನೀನಹುದೊ ಶಕ್ತಾ ವರ ಮಂತ್ರಿಯಾಗಿ ನೀ ಹರಿಗೆ ಭಕ್ತಾಗ್ರಣಿಯೆ ಯಂತ್ರೋ- ದ್ಧ್ದಾರ ಶ್ರೀ ಹನುಮಂತಾ ಬಲಭೀಮ ಗುರುಮಧ್ವಶಾಂತಾ ತ್ರಿಕೋ ಟಿರೂಪಧರ ಖ್ಯಾತ ಸುರಾಸುರನರೋರಗಗಳನವರತ ಸರ್ವವ್ಯಾಪಾರ ನೀ ನಡೆಸಿ ಪೊರೆವ ಸದ್ಗುರುವರ ಸುಸಮೀರಾ ನೀರಜಾಂಡವ ಕೂರ್ಮರೂಪದೊಳು ನಿಂತು ನೀ ಭಾರವಹಿಸಿ ಮೆರೆದೆ ಶ್ರೀ ವಾಯುಕುವರಾ1 ಸೃಷ್ಟಿಗೊಡೆಯನಿಗೆ ನೀನಿಷ್ಟಪುತ್ರ ನಿನ್ನಷ್ಟುಜ್ಞಾನ ಪರಮೇಷ್ಠಿಗಲ್ಲದೆ ಎಷ್ಟು ನೋಡಿದರು ಇತರರಲಿ ಎಳ್ಳಷ್ಟಿರೆಣೆಯಿಲ್ಲ ತುಷ್ಠಿಪಡಿಸುವೆ ಹರಿಯ ಜೇಷ್ಟದಾಯರ ಶ್ರೇಷ್ಟ ಮೂರುತಿ ಕವಿಶ್ರೇಷ್ಟ ನೀನೆನಿಸಿ ಲಂಕಾ ಶ್ರೇಷ್ಟನೆನಿಸಿದ ದುಷ್ಟದೈತ್ಯನಾ ಮರವನ್ನ ಹುಟ್ಟನಡಗಿಸಿ ಸುಟ್ಟಿ ಲಂಕಪಟ್ಟಣವನ್ನು ಪುಟ್ಟಿದಾಗಲೆ ಬೆಟ್ಟ ಹಿಟ್ಟನು ಮಾಡಿ ಆ ದುಷ್ಟಭಾಷ್ಯಗಳ ಕಷ್ಟ ಪರಿಹರಿಸಿ ನಿ- ರ್ದುಷ್ಟತತ್ವವ ತೋರ್ದೆ ಎಷ್ಟು ಶಕ್ತನು ಜೀವ- ಶ್ರೇಷ್ಠಮೂರುತಿ ಸರ್ವ ಕಷ್ಟ ಹರಿಸಿ ನಿನ್ನ ಇಷ್ಟಭಕುತರ ಸೇವೆ ಕೊಟ್ಟು ಶ್ರೀ ಹರಿಯ ಶ್ರೇಷ್ಠಮೂರುತಿ ತೋರೋ ಇಷ್ಟದಾಯಕ ಗುರು ಶ್ರೇಷ್ಠ ಮಾರುತಿಯೆ2 ಈಶ ಪ್ರೇರಣೆಯಿಂದ ಈ ನಶ್ವರದೇಹದೊಳು ಆ ಸಮಯದಲಿ ಅಪಾನನಿಂದೊಡಗೂಡಿ ಪ್ರಾಣೇಶ ನಿನ್ನಿಂದ ಎಲ್ಲ ಚೇತನವಿಹುದೋ ವಾಸವಾಗಿರುವನಕ ಈ ಶರೀರ ಕಾರ್ಯ ಶಾಶ್ವತ ನಡೆವುದೋ ಕಲ್ಪಾವಸಾನ ಮೋಕ್ಷಪರಿಯಂತ ಲೇಶ ಬಿಡದಲೆ ಬಪ್ಪ ಜಡದೇಹದೊಳು ನೀ ವಾಸವಾಗಿಹೆ ದೇವ ಶಾಶ್ವತನಾಗಿ ಆಯಾಸವಿಲ್ಲದಲೆ ಊಧ್ರ್ವಗಮನದಿ ಪ್ರಾಣ ಅಪಾನನಿಂದಗಲಲೀದೇಹ ಭೂಶಯನ ವಾಸ ಜಡವೆಂದೆನಿಸಿ ಆ ಶರೀರವು ಭೂತಪಂಚಕದಿ ಸೇರುವುದು ಪ್ರಾಣೇಶ ನೀನಾಗ ಹರಿಯನ್ನು ಸೇರುವೆ ಏಸು ಚರಿತೆಯೊ ಅನಿಲ ಶಾಶ್ವತನು ನೀನು ಅಶಾಶ್ವತ ದೇಹಗಳ ಮಾಳ್ಪ ನಿನ್ನಯ ಕಾರ್ಯ ಏಸುಕಾಲಕು ದೇಹದಿಂ ಮೃತರೈಯ್ಯ ಜೀವರು ಶ್ರೀಶನಾತ್ಮಜ ನೀನಮೃತನೆನಿಸೀ ಮೆರೆವೆ ಈಶ ಪ್ರೇರಣೆ ನಿನಗೆ- ನಿನ್ನ ಪ್ರೇರಣೆ ಎಮಗೆ ಅಸುಪತಿಯೆ ನಿನಗಿದು ಹೊಸ ಪರಿಯಲ್ಲವೊ ಮೀಸಲಾಗಿರಿಸು ಶ್ರೀ ವೇಂಕಟೇಶನ ಪಾದ ದಾಸನೆನಿಸೊ ಪವನೇಶ ಉರಗಾದ್ರಿವಾಸ ವಿಠಲನ ದಾಸ ಎನ್ನ ಮನದಾಸೆ ನೀ ಸಲಿಸಿ ನಿಜ ದಾಸಜನ ಸಹವಾಸವಿತ್ತು ಅನಿಶ ಭವ ಪಾಶ ಸಡಿಲಿಸಿ ಸುಖವಾಸವೀಯೊ ಗುರು ಮಾತರಿಶ್ವ 3
--------------
ಉರಗಾದ್ರಿವಾಸವಿಠಲದಾಸರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಮಹಾಲಕ್ಷ್ಮಿದೇವಿ ಪ ಆಹಾ ನಿನ್ನ ಮಹಿಮೆ ಹೊಗಳಲಳವೆ ಅ.ಪ ಮೂಲ ಪ್ರಕೃತಿ ಮಹಾಮಾಯೆ ನಿನ್ನ ಲೀಲೆಯಲ್ಲವೆ ಸಮಸ್ತವೂ ಸಾಲದೆಂಬುವ ದುಸ್ವಭಾವ ಬಿಡಿಸಮ್ಮ 1 ಕ್ಷೀರಸಾಗರಾತ್ಮಜೇ ಭಜೇ ಅಂ ಭೋರುಹಾಕ್ಷನರ್ಧಾಂಗಿ ಸಾರಸ ವೈರಿಯ ತಂಗಿ ಶುಭಾಂಗಿ 2 ತುತ್ತುಮಾಡಿವುಣಿಸಮ್ಮ ಮತ್ತಾರನು ಕಾಣೆಮ್ಮ ನಮ್ಮಮ್ಮ 3 ತಾನೆ ಶ್ರೇಷ್ಟನೆಂಬ ಹೀನರ ಸಂಗವು ಜ್ಞಾನಿಗಳಿಗೆಯಿದು ಹಾಸ್ಯವಲ್ಲದೆ 4 ನಿನ್ನ ಪತಿಯಾದ ಗುರುರಾಮ ವಿಠಲನ ಘನ್ನ ಚಿತ್ತಗನುಸಾರ ಮನ್ನಿಸಿ ಕಾಯಿ ನೀ ನೆನ್ನನು ನಿಜದೆÉ ಮಹಾಲಕ್ಷ್ಮಿದೇವಿ 5
--------------
ಗುರುರಾಮವಿಠಲ
ರಂಗನಾಥ ಪಾಲಿಸೆನ್ನ ಮಂಗಳಾಂಗ ಶ್ರೀಶ ಬೇಗ ಪ ನಿನ್ನ ಭಜನೆಯನ್ನು ಗೈವೆ ಪನ್ನಗಾರಿವಾಹ ಹರೆ ಸ್ವರ್ಣವಸನ ಭೂಷಿತಾಂಗ ಸನ್ನುತಾಂಗ ಧೀರಶೂರ 1 ದುಷ್ಟರನ್ನು ಶಿಕ್ಷಿಸುತ್ತ ಸೃಷ್ಟಿಗೊಡೆಯನೆನಿಸಿ ನೀನು ಇಷ್ಟ ವರಗಳನ್ನು ಕೊಟ್ಟು ಶ್ರೇಷ್ಟನೆನಿಸು ನಂಬಿದೆನು 2 ಕಾಮಿತಾರ್ಥ ಫಲಗಳೀವ ಕಾಮ ಜನಕ ದೇವನೆ ಧೇನುನಗರದಲ್ಲಿ ನೆಲಸಿ ನೇಮದಿಂದ ಪೂಜೆಗೊಂಬೆ 3
--------------
ಬೇಟೆರಾಯ ದೀಕ್ಷಿತರು