ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಒ) ಭಾರತೀ ದೇವಿ ಏನು ಮರುಳಾದೆಮ್ಮ ಯೆಲ ಭಾರತೀ | ನಿಕರ ಶ್ರೇಷ್ಠನಾದವಗೆ ಪ ನಿನ್ನ ತೊರೆದು ಬ್ರಹ್ಮಚಾರಿಯಾಗಿ || ಹಣ್ಣಿಗಾಗಿ ಹೋಗಿ ವನವ ಕಿತ್ತೀಡ್ಯಾಡಿ | ಉಣ್ಣ ಕರದರೆ ಎಂಜಲೆಡೆವೈದ ಕಪಿಗೆ 1 ಪುಟ್ಟಿದನು ಗುರುತಲ್ಪಕನ ವಂಶದಲಿ | ನಟ್ಟಿರುಳೆ ಒಬ್ಬ ಅಸುರಿಯ ಕೂಡಿದಾ || ಹೊಟ್ಟೆಗಾಗಿ ಪೋಗಿ ಭಿಕ್ಷದನ್ನವನುಂಡ | ಅಟ್ಟು ಹಾಕುವನಾದ ಕುಲವ ಕೊಂದವಗೆ 2 ಮಂಡೆ ಬೋಳನಾಗಿ ಭೂಮಂಡಲ ಚರಿಸುವ | ಕಂಡವರಾರು ಈತನ ಗುಣಗಳಾ || ಪುಂಡರೀಕಾಕ್ಷ ವಿಜಯವಿಠ್ಠಲನ್ನ | ಕೊಂಡಾಡುತ ತಾ ಬೋರೆ ಗಿಡದ ಕೆಳಗಿಪ್ಪ 3
--------------
ವಿಜಯದಾಸ
204ಏನು ಮರುಳಾದೆಯೇ ಎಲೆ ಭಾರತೀ ಪವಾನರಕುಲದೊಳಗೆ ಶ್ರೇಷ್ಠನಾದವಗೆಅ.ಪಕಣ್ಣಿಲ್ಲದವಳ ಗರ್ಭದಲಿ ಜನಿಸಿ ಬಂದುನಿನ್ನ ತೊರೆದು ಬ್ರಹ್ಮಚಾರಿಯಾದ ||ಹೆಣ್ಣಿಗಾಗಿ ಪೋಗಿ ವನವ ಕಿತ್ತಾಡಿ |ಉಣ್ಣ ಕರೆದರೆ ಎಂಜಲೆಡೆಯನೊಯ್ದವಗೆ 1ಹುಟ್ಟಿದನು ಗುರುತಲ್ವಗಾಮಿಯಾ ವಂಶದಲಿ |ನಟ್ಟಿರುಳೊಳೊಬ್ಬ ಅಸುರಿಯಕೂಡಿದ||ಹೊಟ್ಟೆಗೆಂತಲೆ ಹೋಗಿ ಭಿಕ್ಷದನ್ನವನುಂಡು |ಅಟ್ಟ ಹಾಕುವನಾಗಿ ದಿನವ ಕಳೆದವಗೆ 2ಮಂಡೆಬೋಳಾಗಿ ಭೂಮಂಡಲವ ತಿರುಗಿದ |ಕಂಡವರು ಯಾರು ಈತನ ಗುಣಗಳ ||ಪುಂಡರೀಕಾಕ್ಷಶ್ರೀ ಪುರಂದರವಿಠಲನ |ಕೊಂಡಾಡುತಲಿ ಬೋರೆ ಮರದ ಕೆಳಗಿದ್ದವಗೆ 3
--------------
ಪುರಂದರದಾಸರು