ವೇದವ್ಯಾಸರ ದಿವ್ಯಪಾದ ಪದುಮಯುಗಲ
ಆರಾಧಿಸುತಿರು ಮನುಜಾ ಪ
ವೇದಗಳಿಗೆ ಸಮ್ಮತವಾದ ಪುರಾಣಗಳ
ಸಾದರದಲಿ ರಚಿಸಿ ಮೋದವ ಬೀರಿದ ಅ.ಪ
ಧರಿಯೊಳು ಸುಜನರಿಗೆ ವರಧರ್ಮ ತಿಳಿಸೆಂದು
ಸುರಮುನಿ ಪ್ರಾರ್ಥನದಿ
ಭಾಗವತ ಗ್ರಂಥ
ವಿರಚಿಸಿ ಶುಕಮುನಿಗೆ ಕರುಣದಿಂದರುಹಿದ 1
ವಾಸಿಪ ಮುನಿಗುಣ ಭೂಷಿತ ಬದರಿಯೋಳ್
ತೋಷ ತೀರ್ಥರ ಕರೆದು
ಭೂಸುರ ಜನರಿಗೆ ಮೋಕ್ಷದಾಯಕ ಸೂತ್ರ
ಭಾಷ್ಯವರಚಿಸೆಂದಾದೇಶವ ನೀಡಿದ2
ಅರಿದರಾದ್ಯಯುಧ ಧರಿಸಿ ಷೋಡಶಸಂಖ್ಯ
ಕರಗಳಿಂದಲಿ ಶೋಭಿತ
ಸುರತರು ವೆನಿಸಿ ಧರೆಯೊಳು
ಮೆರೆವ ಕಾರ್ಪರ ನರಹರಿ ರೂಪಾತ್ಮಕನಾದ 3