ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು