ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜಯತು ಶುಭಕಾಯ ಜಯಜಯತು ಹರಿಪ್ರೀಯಜಯತು ಜೀಯ ಮಧ್ವಾಖ್ಯಮುನಿರಾಯಪ. ರಾಮಾವತಾರದಲಿ ಹನುಮಂತನಾಗಿ ನೀತಾಮಸನ ಪುರವ ಅನಲಗಾಹುತಿಯನಿತ್ತೆಭೂಮಿಜೆಯ ಕುಶಲವನು ರಘುನಾಥಗರುಹಿದೆಸ್ವಾಮಿಕಾರ್ಯವ ವಹಿಸಿ ಖಳರ ನೀ ತರಿದೆ 1 ದ್ವಾಪರಾಂತ್ಯದಲಿ ಶ್ರೀಕೃಷ್ಣನಂಘ್ರಿಯ ಭಜಿಸಿಪಾಪಿಮಾಗಧ ಬಕ ಕೀಚಕಾದಿಗಳಕೋಪದಿಂದಲಿ ತರಿದು ಕುರುಕುಲವ ನೀನಳಿದೆ ಪ್ರ-ತಾಪದಿಂದಲಿ ಮೆರೆದೆ ಖಳರ ನೀ ಮುರಿದೆ 2 ಮಾಯಿಗಳು ಹೆಚ್ಚಿ ಮತವೆಲ್ಲ ಸಂಕರವಾಗಿತಾಯಿಗಳಿಲ್ಲದ ಶಿಶುಗಳಂತೆ ಸುಜನರಿರಲುನೀಯವತರಿಸಿ ಮತವೆಲ್ಲ ಉದ್ಧರಿಸಿ ನಾ-ರಾಯಣನೆ ಮೂಜಗಕೆ ಪರದೈವವೆಂದೊರೆದೆ 3 ದುರುಳ ವಾದಿಗಳಿಗುತ್ತರವ ಕೊಡಬೇಕೆನುತಸರುವ ಶಾಸ್ತ್ರಾಮೃತವ ಸೃಜಿಸಿ ವಾಕ್ಯಗಳ ಕ್ರೋಡಿಸಿದರುಶನ ಗ್ರಂಥಗಳ ರಚಿಸಿ ಶಿಷ್ಯರಿಗಿತ್ತೆಪರಮ ತತ್ವದ ಖಣಿಯೆ ಗುರುಶಿರೋಮಣಿಯೆ 4 ನಿನ್ನ ಮತವೇ ವೇದಶಾಸ್ತ್ರಗಳ ಸಮ್ಮತವುನಿನ್ನ ಮತವೇ ಇಹಪರಕೆ ಸಾಧನವುಪನ್ನಂಗಶಯನ ಶ್ರೀ ಹಯವದನದಾಸರೊಳುನಿನ್ನ ಪೋಲುವರುಂಟೆ ಮಧ್ವಮುನಿರಾಯ 5
--------------
ವಾದಿರಾಜ
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ