ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕ ಬÁಣ ಬಿಟ್ಟನು ಜಾಣ ಪ ಏಕ ಸಂಕಲ್ಪದಿ ಏಕ ವಾಕ್ಯವನು ಅ.ಪ. ಏಕ ದೈವ ಲೋಕೈಕ ಮಹಿಮ ಜಗ- ದೇಕ ಕಾರಣ ಭಕ್ತ ಶೋಕ ನಿವಾರಣ ಶ್ರೀಕರ ಶುಭಗುಣ ಸೀತಾರಮಣ ಪೂರ್ಣ ರಾಕೇಂದು ವದನ ದಿವಾಕರ ಕುಲಭೂಷಣ 1 ಕಾಕುಜನರ ಬಲು ಶೋಕಕಾರಣ ಕರು ಣಾಕರ ಶರಣಾಗತ ಜನ ರಕ್ಷಣ ಶ್ರೀಕಮಲೇಕ್ಷಣ ಲೋಕ ವಿಲಕ್ಷಣ ಲೋಕವಿನುತ ಶ್ರೀ ಕರಿಗಿರಿ ನಿಕೇತನ 2
--------------
ವರಾವಾಣಿರಾಮರಾಯದಾಸರು
ತೊಗಿರೆ ರಾಯರ ತೂಗಿರೆ ಗುರುಗಳ ತೂಗಿರೆ ಯತಿಕುಲ ತಿಲಕರ ಪ ತೂಗಿರೆ ಯೋಗೀಂದ್ರ ಕರಕಮಲ ಪೂಜ್ಯರ ತೂಗಿರೆ ಗುರುರಾಘವೇಂದ್ರರ ಅ.ಪ ಕುಂದಣಮಯವಾದ ಛಂದ ತೊಟ್ಟಿಲೊಳು ನಂದದಿ ಮಲಿಗ್ಯಾರ ತೂಗಿರೆ ನಂದನಂದನ ಗೋವಿಂದ ಮುಕುಂದನÀ ನಂದದಿ ಭಜಿಪರ ತೂಗಿರೆ 1 ಯೋಗನಿದ್ರೆಯನ್ನು ಬೇಗನೆಮಾಡುವ ಯೋಗೀಶ ವಂದ್ಯರ ತೂಗಿರೆ ಭೋಗಿಶಯನನಪಾದ ಯೋಗದಿ ಭಜಿಪರ ಭಾಗವತರನ ತೂಗಿರೆ 2 ನೇಮದಿ ತಮ್ಮನು ಕಾಮಿಪಜನರಿಗೆ ಕಾಮಿತ ಕೊಡುವರ ತೂಗಿರೆ ಪ್ರೇಮದಿ ನಿಜಜನರ ಆಮಯವನಕುಲ - ಧೂಮಕೇತೆನಿಪರ ತೂಗಿರೆ 3 ಅದ್ವೈತಮತದ ವಿಧ್ವಂಸನ ನಿಜ ಗುರು ಶುದ್ಧ ಸಂಕಲ್ಪದಿ ಬದ್ಧ ನಿಜಭಕ್ತರ ಉದ್ಧಾರಮಾಳ್ಪರ ತೂಗಿರೆ 4 ಭವ ತ್ಯಜನೆ ಮಾಡಿಸಿ ಅವರ ನಿಜಗತಿ ಇಪ್ಪರ ತೂಗಿರೆ ನಿಜಗುರು ಜಗನ್ನಾಥವಿಠಲನ್ನ ಪದಕಂಜ ಭಜನೆಯ ಮಾಳ್ಪರ ತೂಗಿರೆ 5
--------------
ಗುರುಜಗನ್ನಾಥದಾಸರು
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಅಗ್ರಪೂಜೆಯ ಮಾಡಿದಾ ಧರ್ಮಜ ತಾನುಅಗ್ರಪೂಜೆಯ ಮಾಡಿದಾ ಪರಾಜರಾಜರಗೂಡಿ ರಾಜಸೂಯದಿ ಧರ್ಮ-ರಾಜನು ಹರಿಗೆ ರಾಜರ ಸಭೆಯೊಳು ಅ.ಪಶುದ್ಧಾಚಮನ ಸಂಕಲ್ಪದಿಪಾದತೊಳೆದಿತ್ತಸದ್ಭಕ್ತಿಯಲಿ ಗಂಧಾಕ್ಷತೆ ವೇದವೇದ್ಯಗೆ 1ವಸನಾಭರಣದಿವ್ಯಕುಸುಮಧೂಪವು ದೀಪತೃಷೆನೈವೇದ್ಯವನಿತ್ತು ಕ್ಲೇಶನಾಶನಿಗಂದು 2ಕ್ರಮುಕವರ್ಪಿಸಿ ನೀಲಾಂಜನವೆತ್ತಿ ಧ್ಯಾನಿಸಿಸುಮವಿತ್ತು ಬಲವಂದು ಚಕ್ರವಿಕ್ರಮಗೆ 3ಪೊಡಮಟ್ಟಘ್ರ್ಯವ ಬಿಟ್ಟು ಒಡನೆ ಯಜ್ಞಾಂತದಿಬಿಡೆ ಬ್ರಹ್ಮಾರ್ಪಣ UÉೂೀವಿಂದನ ಪಾದದ್ವಂದ್ವಕೆ 4
--------------
ಗೋವಿಂದದಾಸ