ಒಟ್ಟು 8 ಕಡೆಗಳಲ್ಲಿ , 4 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ನಿನ್ನ ಭಜಿಸುವಂಥ | ಶರಣ ಸಂಗವಾನಿರುತ ಇತ್ತು ಕಾಯೊಯೆನ್ನ | ಅಘವ ಕಳೆಯುವ ಪ ಮೇರುಗಿರಿಯ ಪೋಲ್ವದುರಿತ | ರಾಶಿ ನಿಚಯವಾಸಾರಿ ತೂಲರಾಶಿಗನಳ | ಪರಿಯ ಮಾಡುವಾ |ಸೂರಿ ಜನ ಸಂಗ ಫಲವ | ಪೇಳಲಳವಾತೋರಿ ಪೊರೆ ಅಂಥವರ | ದೇವರ ದೇವಾ 1 ನಿನ್ನ ಸಂಕಲ್ಪಾನುಸಾರ | ನಡೆವ ಭಕ್ತರಮನ್ನುಜರು ಅವರೆಂದು | ತಿಳಿವ ಕುಜನರಇನ್ನ ತನಯ ಶಿಕ್ಷಿಸುವ | ಬಿಡದಲವರಬೆನ್ನು ಹುರಿಯ ಕೀಳಿಸುವ | ಮನ್ಯುಲವರ 2 ಕಾಲ ಕಳೆವಾರೋ 3 ಸತಿಸುತಿರೊಡನೆಯಿದ್ದು | ಮಮತೆ ದೂರರೋಹಿತವು ಅಹಿತವೆರಡು ಸಹಿಸಿ | ನಿನ್ನಿಂದೆಂಬೋರೋ |ಕ್ಷಿತಿಯೊಳುಳ್ಳ ತೀರ್ಥಕ್ಷೇತ್ರ | ಪಾವಿಸುವರೋಗತಿಯು ನೀನೆ ಸತತ ಎಂದು | ಅನ್ಯ ಬಗೆಯಾರೋ 4 ದರ್ವಿಯಂತೆ ಜೀವನೆಂದು | ಅರಿತು ಅನುದಿನದುರ್ವಿಭಾವ್ಯ ವ್ಯಕ್ತಾಅವ್ಯಕ್ತ | ಅನಂತಗುಣಶರ್ವ ವಂದ್ಯನಾದ ಗುರು | ಗೋವಿಂದ ವಿಠಲನಸರ್ವಕಾಲ ತುತಿಸುತ್ತ | ತಿಳಿವರಾಧೀನ 5
--------------
ಗುರುಗೋವಿಂದವಿಠಲರು
(41ನೇ ವರ್ಷದ ವರ್ಧಂತಿ) ಸತ್ಯ ಸಂಕಲ್ಪಾನುಸಾರದಿ ನಡೆಸುವುದುತ್ತಮ ಬಿರುದಾದರು ಭೃತ್ಯನ ಬಿಟ್ಟನೆಂಬಪಕೀರ್ತಿ ಬರದಂತೆ ಚಿತ್ತದಲ್ಲಿರಲಾದರು ಪ. ಕಳೆದಿತು ಐದೆಂಟು ಮೇಲೊಂದು ವತ್ಸರ ಬೆಳೆದಿತು ಬಲು ಮತ್ಸರ ನೆಲನ ಮೇಲಡಿಯಿಡಲಿಲ್ಲ ಶಕ್ತಿಯು ಇಂಥ ಛಲದಿ ತೋರುವಿ ತಾತ್ಸಾರ ಬಳುಕಿ ಬಾಡಿದ ದೇಹವುಳುಹಲುತ ಸೇವಾ ಫಲಕೆ ಕಾರಣವೆಂಬೆನು ನಳಿನನಾಭನೆ ನಿನ್ನ ಮನವೆಂತಿರುವುದೆಂದು ತಿಳಿಯದೆ ಬಳಲುವೆನು 1 ವಯಿನು ತಪ್ಪಿದ ಬಳಿ- ಕ್ಯಾತರಗುಣವಪ್ಪುದು ಭೂತಪಂಚಕ ಸನ್ನಿಪಾತ ಸೂಚಿಸುವಂತೆ ಕಾತರತೆಯು ತಪ್ಪದು ಈ ತೆರದಲಿ ದೇಹ ರೀತಿಯಾಗಿರುವುದ ನೀ ತಿಳಿದಿರಲೆನ್ನಯ ಮಾತ ಕೇಳದೆ ಲಕ್ಷ್ಮೀನಾಥ ತಾತ್ಸಾರವಿಂತು ನೀತಿಯಾಗದು ಚಿನ್ಮಯ 2 ಜನನ ಮರಣ ಜೋಡಾಗಿರುವುದೆಂಬ ಸಿದ್ಧ ನಿನಗಿದು ಸುಲಭಸಾಧ್ಯ ಮನೆವಾರ್ತೆ ಮಡದಿ ಮಕ್ಕಳು ಮುಂತಾದುದಕೆಲ್ಲ ವನಜಾಕ್ಷ ನೀನೆ ಬಾಧ್ಯ ಕನಸಿಲಾದರು ನಿನ್ನ ನೆನವ ತಪ್ಪಿಸದಿರು ವಿನಯ ವೆಂಕಟರಾಯನೆ ನಿನಗಿಲ್ಲದಪಕೀರ್ತಿ ಎನಗಿಲ್ಲ ಮಹದಾರ್ತಿ ಘನಕಲ್ಪ ಸುರಭೂಜನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಸಂಕಲ್ಪಾನುಸಾರ ಮಾಡೋ ಎನ್ನ ಸಾಕುವ ಧೊರೆಯೆ ತಿಳಿದು ನೀ ನೋಡೋ ಪ ಪಾತ್ರನೆಂದೆನಿಸೋ ಬಹು ಪಾಪಾತ್ಮನೆಂದೆನಿಸೋ ಶ್ರೋತ್ರೀಯನೆಂದೆನಿಸೋ ಶುಂಠನೆನಿಸೋ ಪುತ್ರಮಿತ್ರಾದ್ಯರಿಂ ಬಯಸಿ ಪೂಜೆಯಗೈಸೋ ಕರ್ತೃ ನೀ ಜಗಕೆ ಸರ್ವತ್ರ ವ್ಯಾಪಕನೆ 1 ಜನರೊಳಗೆ ನೀನಿದ್ದು ಜನ್ಮಗಳಲ್ಲಿ ಗುಣಕಾಲಕರ್ಮ ಸ್ವಭಾವಂಗಳಾ ಅನುಸರಿಸಿ ಪುಣ್ಯ ಪಾಪಗಳ ಮಾಡಿಸಿ ಫಲಗ ಳುಣಿಸಿ ಮುಕ್ತರ ಮಾಡಿ ಪೊರೆವೆ ಕರುಣಾಳು 2 ಯಾತಕೆನ್ನನು ಇನಿತು ದೂಷಕನ ಮಾಡುವಿ ಧ ರಾತಲದೊಳನುದಿನದಿ ಮಾಯಾಪತೇ ಭೀತಿಗೊಂಬುವನಲ್ಲ ಭಯನಿವಾರಣ ಜಗ ನ್ನಾಥ ವಿಠ್ಠಲ ಜಯಪ್ರದನೆ ಜಗದೀಶಾ3
--------------
ಜಗನ್ನಾಥದಾಸರು
ನೀಲಮೇಘಶ್ಯಾಮ ರಾಮ ನಿಖಿಳಲೋಕ ಕ್ಷೇಮಧಾಮ ಪ. ಪಾಲಿಸೊಲಿದು ಹನುಮಪ್ರೇಮ ಪಾವನಾತ್ಮ ಸೀತಾರಾಮ ಅ.ಪ. ಸತ್ಯಸಂಕಲ್ಪಾನುಸಾರ ಚಿತ್ತಚಿನ್ಮಯಾತ್ಮ ಶ್ರೀಧರ ನಿತ್ಯಮುಕ್ತ ಪುಣ್ಯನಾಮ ಪ್ರತ್ಯಗಾತ್ಮ ಪೂರ್ಣಕಾಮ 1 ಕಮಲನಾಭ ರವಿಶತಾಭ ಸುಮನಸಾರ್ಚಿತಾಂಘ್ರಿಶೋಭ ಅಮಿತವಿಕ್ರಮ ಸಮರಭೀಮ ಶಮಲಶಮನ ಸಾರ್ವಭೌಮ 2 ಶಾರದೇಂದುಸನ್ನಿಭಾನನ ಮಾರುತಿಹೃದಯೈಕಸದನ ಧೀರಲಕ್ಷ್ಮಿನಾರಾಯಣ ಸೂರಿಜನೋದ್ಧರಣನಿಪುಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರುಳುತನವಿದ್ಯಾಕೆ ಮನವೆ ಮಂದಭಾವದಿ ಶ್ರೀ- ಧರೆಯರಸ ಸ್ವೇಚ್ಛೆಯಿಂದ ಪೊರೆವ ತಾನೆ ಕರುಣದಿ ಪ. ಕಾಲ ನಾನಾ ಫಲಗಳನ್ನು ತೋರ್ಪುದು ಶ್ರೀ ಲಲನೆಯರ ಸನಿಚ್ಛೆಯಿಂದ 1 ಛಳಿಯು ಬಿಸಿಲು ಮಳೆಯು ಗಾಳಿ ಸುಳಿವದ್ಯಾರ ಕೃತ್ಯವೆಂದು ತಿಳಿದು ನೋಡಲಿನ್ನು ವ್ಯರ್ಥ ಫಲವಗೊಳ್ಳುತಳಲದಿರು 2 ಸತ್ಯ ಸಂಕಲ್ಪಾನುಸಾರ ಭೃತ್ಯವರದ ಕರುಣದಿಂದ- ಲಿತ್ತುದೆ ಸಾಕೆಂದು ತಿಳಿವದುತ್ತಮ ಸಾಂಗತ್ಯ ಬಯಸು 3 ಹಸಿದ ವೇಳೆಯಲ್ಲಿ ತಾಯಿ ಬಿಸಿಯ ಹಾಲ ತಣಿಸಿ ತನ್ನ ಶಿಶುವಿಗೀವ ತೆರದಿ ಭಕ್ತವಶನ ಮೇಲೆ ಭಾರವಿರಿಸು 4 ನೆನೆವ ಜನರ ಮನದೊಳಿರುವ ವನಜನಾಭ ವೆಂಕಟೇಶ ವಿನಯದಿಂದ ಕಾವನೆಂಬ ಘನವ ತಿಳಿದು ಪಾಡಿ ಪೊಗಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ
ನೀಲಮೇಘಶ್ಯಾಮರಾಮನಿಖಿಳಲೋಕ ಕ್ಷೇಮಧಾಮ ಪ.ಪಾಲಿಸೊಲಿದು ಹನುಮಪ್ರೇಮಪಾವನಾತ್ಮ ಸೀತಾರಾಮ ಅ.ಪ.ಸತ್ಯಸಂಕಲ್ಪಾನುಸಾರಚಿತ್ತಚಿನ್ಮಯಾತ್ಮ ಶ್ರೀಧರನಿತ್ಯಮುಕ್ತ ಪುಣ್ಯನಾಮಪ್ರತ್ಯಗಾತ್ಮ ಪೂರ್ಣಕಾಮ 1ಕಮಲನಾಭ ರವಿಶತಾಭಸುಮನಸಾರ್ಚಿತಾಂಘ್ರಿಶೋಭಅಮಿತವಿಕ್ರಮ ಸಮರಭೀಮಶಮಲಶಮನ ಸಾರ್ವಭೌಮ 2ಶಾರದೇಂದುಸನ್ನಿಭಾನನಮಾರುತಿಹೃದಯೈಕಸದನಧೀರಲಕ್ಷ್ಮಿನಾರಾಯಣಸೂರಿಜನೋದ್ಧರಣನಿಪುಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ.ವ್ಯೋಮಕೇಶಭವಾಬ್ಧಿತಾರಕ ರಾಮನಾಮೋಪಾಸಕಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ 1ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರಶೈಲರಾಜಸುತಾಧರಾಮೃತಲೋಲ ಲೋಕಧುರಂಧರಕಾಲಕಾಲ ಕಪಾಲಧರಕರುಣಾಲವಾಲಮಹೇಶ್ವರಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3ಕೃತ್ತಿವಾಸಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕಮೃತ್ಯುಹರ ಹರಮೃಡನಮೋಸ್ತುನಮೋ&bಜquo;ಸ್ತು ಸುಮನನಿಯಾಮಕ 4ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹಚಂಡಿಕಾಧವ ಶಿವ ದಯಾರ್ಣವಖಂಡಪರಶುಸುರಾರಿಹಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗಸದೋದಿತಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6ಭರ್ಗಭಾರ್ಗವಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ