ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂತರಂಗದ ಸುಖ ಹೇಳುವುದಲ್ಲಾ ಸಂತೋಷವೆಂಬುದು ಶಿವನೊಬ್ಬ ಬಲ್ಲ ಪ ಗುರುಕೊಟ್ಟ ಮಂತ್ರದ ಪರರ್ಯಾರು ಅರಿಯದಂದದಲಿ ಈ ಪ್ರಾಣ ಪರಮನೊಳಾಡುವುದು ಆತನ ದಿವ್ಯ ಚರಣನೋಡುವುದು ಆಂತರ್ಯದ ಸ್ವಾನುಭವ ಅರಿಯದ ಜನರಿಗೆ 1 ಧ್ಯಾನಿಸಿ ನೋಡಲು ದೃಢವಿಡಿದಾಡಲು ಜ್ಞಾನ ದೀಪದ ಜ್ಯೋತಿ ಗಗನ ವೇರಿದ ಪ್ರತಿ ಭಾನುವುದಿಸಿದಂದದಿ ಪ್ರಕಾಶಮಾನ ಸದಾನಂದದಿ ಅಂತರ್ಯದ ಸ್ವಾನುಭವ ಅರಿಯದ ಜನರಿಗೆ 2 ಮೂರ್ತಿ ಪರಮನಾಗಿಹ ಅರ್ಥಿ ಎರಕವಾಗಿಹ ಲಕ್ಷಾ ಎಣಿಕೆ ಇಲ್ಲದ ಮೋಕ್ಷಾ ಶರಧಿಯೊಳಾಡುವುದು ಶಕ್ತಿಯ ಮರ್ಮ ವರಕೃಪಮಾಡುವುದು ವಿಮಲಾನಂದ ಗುರುಕಟಾಕ್ಷದ ಬಗೆ ಅರಿಯದ ಜನರಿಗೆ 3
--------------
ಭಟಕಳ ಅಪ್ಪಯ್ಯ
ನಾದವಾದನು ನಾದದ ಮನೆಯಿದ್ದ ಅಚ್ಚರಿ ನೋಡಿವಾದಿಗಳನು ಗೆದ್ದು ಜಯವ ತಾ ಮಾಡಿ ನಾದವಾದನು ಪ ಸುಮನಸವೆಂದೆಂಬ ಕುದುರೆಯ ಹತ್ತಿಅಮಲವೆನಿಪ ಧೈರ್ಯದ ಕತ್ತಿಯ ಹಿಡಿದುಭ್ರಮಣೆಯಲ್ಲದ ವಿವೇಕ ಫೇರಿಯಿಂದವಿಮಲಾನಂದದಿ ದುಮುಕಿಸುತಿರುತಿಪ್ಪ ನಾದವಾದನು1 ಅಷ್ಟ ಆನೆಗಳ ತಲೆಗಳ ಹೊಡೆದುಷಷ್ಟರಧಿಕರ ಸಾಲನು ಕಡಿದುದುಷ್ಟಕುದುರೆಗಳ ಏಳರ ಕಾಲನು ಉಡಿದುಕಷ್ಟರೂಪದ ಚೋರರೈವರನು ದೂಡಿದ ನಾದವಾದನು 2 ಈಷಣತ್ರಯ ಪ್ರಧಾನರ ಜೀವವ ಕಳೆದುವಾಸನೆ ದಳವಾಯ್ಗಳೀರ್ವರ ನೆರೆ ತುಳಿದುಮೋಸಗಾರರ ದೊರೆ ನಾಲ್ವರನಳಿದುಏಸು ನುಡಿಯಲಿ ತಾನೊಬ್ಬನೇ ಉಳಿದು ನಾದವಾದನು 3 ದೋಷಕರೆಲ್ಲರ ದೇಶ ಬಿಟ್ಟೋಡಿಸೆನಾದವಾದರು ಎಲ್ಲರು ಕೊನೆಗೆ ಉಳಿದವರೆಲ್ಲಾಸಾಷ್ಟಾಂಗ ವೆರಗಿದರುವಾಸಿ ಪಂಥವ ಬಿಟ್ಟು ಕೊಂಡಾಡುತ ನಾದವಾದನು 4 ಇಂತು ರಣವ ಮಾಡಲು ಕೈಯ ಸುರಗಿಸಂತೋಷವೆಂಬ ಮೃತದಿ ತಾ ಮುಳುಗಿಶಾಂತನಾಗಿಯೆ ಚಿದಾನಂದ ಗುರುವಿಗೆರಗಿನಿಂತು ನೋಡಿಯೆ ಕಂಡನಾತನೆ ತಿರುಗಿ ನಾದವಾದನು 5
--------------
ಚಿದಾನಂದ ಅವಧೂತರು
ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು