ಒಟ್ಟು 51 ಕಡೆಗಳಲ್ಲಿ , 25 ದಾಸರು , 49 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೂಢನಾದ ಯೋಗಿಯ ಬಗೆಯಿದು | ಈ | ರೂಢಿಯೊಳು ಜನಕಿನ್ನು ಕಾಣಿಸದು ಪ ಮಾತುಗಳ ಆಡನು | ಮೌನಗಳ ಮಾಡನು | ನೀತಿ ಅನೀತಿಗಳೆಂಬುದ ನೋಡನು | ಯಾತರೊಳು ತನಗೆ ಸಂಪ್ರೀತಿಯೆಂಬುವದಿಲ್ಲ | ದಾತನಾಗಿನ್ನಾತ ಚರಿಸುತಿಹನು 1 ವೇದಗಳ ನೋಡನು ಶಾಸ್ತ್ರಗಳ ಕೇಳನು | ನಾದ ಬಿಂದು ಕಳಾತೀತ ತಾನು | ಸಾಧು ಸಂತರ ಸಂಗದೊಳು ಬೋಧದಲಿ ನಲಿವುತಲಿ | ಆದ್ಯನಾದಿ ತಾನೆಂದು ತಿಳಿದಿಹನು 2 ವಂದಿಸಲು ಹಿಗ್ಗನು | ನಿಂದಿಸಲು ತಗ್ಗನು | ಬಂದದಕೆ ತಾ ಹಿಂದು ಮುಂದಾಗನು | ತಂದೆ ಭವತಾರಕನ ಚರಣಾರವಿಂದವನು | ಹೊಂದಿ ಪೂರ್ಣಾನಂದದೊಳಗಿಹನು 3
--------------
ಭಾವತರಕರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಆ) ಲಕ್ಷ್ಮೀ ಸ್ತುತಿಗಳು ಅಮ್ಮಾ ನೀನೆಮ್ಮ ಮನೆಯಲಿಹುದಮ್ಮಾ ನಿತ್ಯ ಪ ನಮ್ಮಯ್ಯನೊಡನೆ ಸುಭಾಷಿಸುತಲಿ ಸಮ್ಮಾನದಿ ಮುಖದಿಂ ನಲಿದಾಡುತಾ ಅ.ಪ ಮಕ್ಕಳೆಂದೆಮ್ಮ ನಲಿಸುತ ಒಲಿಸುತ ಸಕ್ಕರೆ ಸಮಿಗುಂಮಿಗಲಹ ಮಾತುಗ ಳಕ್ಕರದಾಡುತ ಶುಭಸಂಪದಗಳ ನಕ್ರೂರಾರ್ಚಿತೆ ಕೊಡುತ ಮೋದದಿಂ 1 ನೀನಿರುವ ಮನೆಯು ಶೋಭಿಸುತಿಹುದು ತಾನೇತಾ ಮಂಗಳ ನೆಲೆಸಿಹುದು ಸಾನುರಾಗದಿಂ ಸರ್ವರ ಜನನಿಯೆ ನಾನಿನ್ನಾದರದ ಪ್ರೇಮಸುಪುತ್ರನು 2 ನಿತ್ಯಾರಾಧನೆಗನುಕೂಲಗಳಂ ಸತ್ಯಧರ್ಮಗಳ ಬಿಡದಾಚರಿಪುದ ಸ್ತುತ್ಪತದಿ ಸಮಾರಾಧನ ವೆಸಗುನವ ಅತ್ಯಾನಂದದ ಸೌಭಾಗ್ಯವಿತ್ತು 3 ಸವಿ ಸವಿಭಕ್ಷ್ಯಗಳನುಗೊಳಿಸುತ್ತ ಸುವಿಮಲ ಮಂಗಲ ದ್ರವ್ಯಸುಪುಷ್ಪವ ಸುವಾಸಿನಿಯರಿಗೂ ಸದಭಕ್ತರಿಗುಂ ಸುವರ್ಣಭಾಜನದೀಯುವುದಿತ್ತು 4 ಹಾಲು ಹಣ್ಣು ಮಧು ಮಧುರದ ಮನೆಯಂ ಶ್ರೀಯೋಗಗಾನ ಧ್ಯಾನದ ನೆಲೆಯ ಬಾಲರ ಲೀಲೆಯ ಲಾಲನ ಪಾಲನ ಕಾಲವೆಲ್ಲ ಸೊಗನಗೆ ಮೊಗನೆರೆಯಲಿ 5 ಭೃಗುಸುತೆ ಕ್ಷೀರಸಾಗರಜಾತೆ ಭಗವತಿ ಭಾಗ್ಯದಾತೆ ಅಮೃತ ಮಂಗಳಸುಂದರಿ ಚಂದ್ರಸಹೋದರಿ ಅಗಲದೆ ಹರಿವಕ್ಷಸ್ಥಲಸ್ಥಿತೇ 6 ಸುವರ್ಣವರ್ಣಿ ಕಮಲಸುಚರಣೆ ಭುವಿಸುರ ಪೂಜಿತೆ ಕಲ್ಪಲತೆ ಭವ ಭವಹಾರಿಣೆ ಭಕ್ತೊದ್ಧಾರಿಣೆ ದಿವಿರಾಜವರದೆ 7 ಶ್ರೀಕರ ಸಾತ್ವಿಕ ಸುಲಲಿತರಿಂದ ನಾಕಿಗರೆಂಬೊ ಬಂಧುಗಳೊಡನೆ ಜೋಕೆಯ ಮಕ್ಕಳ ವಿವಾಹಗೈದು ಸಾಕಾರ ಸಂಸಾರ ಸುಖನಿಧಿ ಎನಿಸು 8 ಚಪ್ಪರ ತೋರಣ ಮೇಲ್ಕಟ್ಟುಗಳಿಂ ದೊಪ್ಪುವ ಬಗೆಬಗೆ ರಂಗವಲಿಗಳಿಂ ದಿಪ್ಪಾಸಾಗರ ಮಂಗಳ ವಾದ್ಯಂಗ ಳಪ್ಪ ಸದೃಹವ ಮಾಡುತ ಮಮತೆಯಿಂ9 ಅಪ್ರತಿಮ ರತ್ನಪೀಠವನಿಟ್ಟು ತುಪ್ಪದ ನಂದಾದೀವಿಗೆ ಹಚ್ಚಿ ಅಪ್ರಮೇಯನೋಡನಿಪ್ಪ ನಿನ್ನ ಸುಪ್ರೀತಿಯೊಳಾಂ ಪೂಜಿಪುದೀಯತ 10 ಪರಿಮಳ ತೈಲದಭ್ಯಂಜನದಿಂ ಸುರಭೀತೊಯ ಸ್ನಾವನಗೈದು ಹರಿದ್ರಾಕುಂಕುಮ ರತ್ನ ಕಿರೀಟವು ಸರಪೀತಾಂಬರ ಕಮಲವ ಧರಿಸಿ 11 ನರುಗುಂಪಿನ ಶ್ರೀಗಂಧದ ಲೇಪ ಪರಿಪರಿ ಘಮ ಘಮ ಸುಗಂಧ ಧೂಪ ಪರಮ ಪ್ರಕಾಶದ ಮಂಗಳ ದೀಪ ಸಿರಿಹರಿ ನಿಮ್ಮಯ ದಿವ್ಯ ಸ್ವರೂಪ 12 ಬಗೆ ಬಗೆ ಭಕ್ಷ್ಯವು ಕ್ಷೀರಾಜ್ಯಗಳಂ ಹಗಲಿರುಳುಂ ಫಲತಾಂಬೂಲಗಳಂ ನಿಗಮ ಸ್ತುತಿಕೈಗೊಳ್ಳುತ ಪಿಯೆ ನೀ ನಗಲದೆ ಸವಿಯುತ ಸಂತೋಷದಿಂದ 13 ಜಯ ಜಯ ಕರ್ಪೂರಾರತಿಮಾತೆ ನಯದಿಂ ಕುಸುಮಾಂಜಲಿಯಖ್ಯಾತೆ ದಯೆಯಿಂ ಭಾವಭಯ ಹರಿಸಾಪೂತೆ ಜಯ ಜಯ ಶ್ರೀಕೇಶವ ಸಂಪ್ರೀತೆ 14 ವಿಧಿರಮಾತೇ ಶ್ರೋಣಿತ ಚರಿತೆ ಬುಧಜನಪಾಲೆ ಕೃಪಾಲಪಾಲೆ ಮುದದಿಂ ಪಾಲಿಸು ಬಾಳಿನಲಿಡುತೆ ಹೃದಯನ್ನುತೆ ಜಾಜೀಶ ಸಹಿತೆ 15 ಅಗಣಿತ ಸುಗುಣೆ ಕರುಣಾಭರಣೆ ಜಗದೋದ್ಧಾರೆ ಜಯಜಯತಾರೆ ಯುಗಪದಕೀಗಲೆ ಮುಡಿಯಿಟ್ಟಿರುವೆ ಮಗುವಾದೆನ್ನಂ ಮಡಿಲೊಳಗಿಡು ನೀಂ 16
--------------
ಶಾಮಶರ್ಮರು
(ಸುಬ್ರಹ್ಮಣ್ಯ ಸ್ತೋತ್ರ) ಬ್ರಹ್ಮಣ್ಯ ಪುಂಜವನ್ನು ಕಾವಾ ಮೊರೆಯ ಕೋಳೂ ಸು- ಬ್ರಹ್ಮಣ್ಯಕ್ಷೇತ್ರಪಾಲದೇವಾ ಪ. ಶ್ರೀಶನ ಕರುಣ ಪೂರ್ಣಪಾತ್ರ ಷಡ್ವಕ್ತಪಾರ್ವ ತೀಶಸಂಪ್ರೀತಿಕಾರಿಪತ್ರ ಸುರನಿಕರ ಭಯತ್ರ ಸೂಸುತ ದೇಹದಿ ವಾಸವಾಗಿಹ ತ್ವ- ಗ್ದೋಷವ ತರಿವ ಮಹಾಸುರ ದಾರಿ1 ಸಾಂಬಾಸನತ್ಕುಮಾರನೆನಿಸಿ ಸಾಂಖ್ಯಾಯೋಗಗಳ ನಂಬಿದ ಭಕ್ತ ಜನಕೆ ಸಲಿಸಿ ದೈತ್ಯರ ಜವಗೆಡಿಸಿ ಜಾಂಬವತೀವದನಾಂಬುಜ ವಿಕಸನ ಕುಂಬುಜನಾಭ ಕುಟುಂಬಾಭರಣೀ 2 ಶೇಷಾದ್ರಿವಾಸಲಕ್ಷ್ಮೀಪತಿಯ ಪೂರ್ಣಾನುಗ್ರಹದಿ ವಾಸುಕಿಗೊಲಿದು ವಿಪ್ರತತಿಯ ಸಲಹುವ ಭೂಪತಿಯ ದೋಷವಾರಿ ಧಾರಾತೀರದಲಿ ನಿವಾಸಗೊಂಡ ನಿನ್ನಾಶ್ರಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಕ್ಷವಿದ್ಯಾನಿಪುಣ ಅಕ್ಷಯಾತ್ಮಕ ಸುಗುಣ ಅಕ್ಷಯತರ ಸುವಚನ ಲಸಿತವದನ ದ್ಯೂತೋದ್ಯೋಗತರ ಖ್ಯಾತ ಸುಗುಣೋಪೇತ ದೈತ್ಯ ಸಂಕುಲಘಾತ ಪ್ರಾಣನಾಥ ಸುರಸಿದ್ಧ ಸಂಪ್ರೀತ ಮಾರತಾತ ಗೋಪಾಲ ಕುಲರತ್ನದೀಪ ಗೋಕುಲ ಶರಣ ಗೋಪಿಕಾಜನಮನದ ತಾಪಶಮನ ಲೀಲಾ ವಿಭೂತಿಯುಗನಿರತ ಸುಹಿತ ನೀಲಾಂಬರಾವರಜ ರಾಜರಾಜ ಕಾಲಾಂಬುದಾಕಾರ ಖಲಕುಠಾರ ಪಾಹಿಮಾಂ ಶ್ರೀಶೇಷಗಿರಿವಿವಿಭಾಕ್ಷ
--------------
ನಂಜನಗೂಡು ತಿರುಮಲಾಂಬಾ
ಎಲ್ಲಿರುವೇನೋ ಮಾರುತಿ ಸುವ್ರತಿ ಎಲ್ಲಿರುವನೇನೋ ಮಾರುತಿ ಪ. ಎಲ್ಲಾ ಕಡೆಯಲ್ಲಿ ವ್ಯಾಪ್ತಿ ಯುಳ್ಳವ ಭಾರತೀಪತಿ ಅ.ಪ. ನಿತ್ಯ ರಾಮಪದೈಕಾಸಕ್ತಿ- ಚಿತ್ತನು ಸದಾ ಜಾಗರ್ತಿ ಧೂರ್ತರಿಪುದಲ್ಲಣ ಜೀ- ವೋತ್ತಮ ವಿಚಿತ್ರಗತಿ 1 ಪ್ರಾಣಸಮಾನ ಸಂಪ್ರೀತಿ ಜ್ಞಾನಪೂರ್ವಕ ಸದ್ಭಕ್ತಿ- ವಾನ ವಾನರೇಂದ್ರ ಸುಪ- ರ್ವಾಣಕುಲಚಕ್ರವರ್ತಿ 2 ಲಕ್ಷುಮಿನಾರಾಯಣನ ಪಕ್ಟ್ರೆಕಧೃತಿ ಸುಮತಿ ಅಕ್ಷೀಣ ತ್ರಾಣದ ನಿರ- ಪೇಕ್ಷ ಲಕ್ಷಣಮೂರುತಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಿರುವೇನೋ ಮಾರುತಿ ಸುವ್ರತಿ ಎಲ್ಲಿರುವನೇನೋ ಮಾರುತಿ ಪ. ಎಲ್ಲಾ ಕಡೆಯಲ್ಲಿ ವ್ಯಾಪ್ತಿ ಯುಳ್ಳವ ಭಾರತೀಪತಿ ಅ.ಪ. ನಿತ್ಯ ರಾಮಪದೈಕಾಸಕ್ತಿ- ಚಿತ್ತನು ಸದಾ ಜಾಗರ್ತಿ ಧೂರ್ತರಿಪುದಲ್ಲಣ ಜೀ- ವೋತ್ತಮ ವಿಚಿತ್ರಗತಿ 1 ಪ್ರಾಣಸಮಾನ ಸಂಪ್ರೀತಿ ಜ್ಞಾನಪೂರ್ವಕ ಸದ್ಭಕ್ತಿ- ವಾನ ವಾನರೇಂದ್ರ ಸುಪ- ರ್ವಾಣಕುಲಚಕ್ರವರ್ತಿ 2 ಲಕ್ಷುಮಿನಾರಾಯಣನ ಪಕ್ಟ್ರೆಕಧೃತಿ ಸುಮತಿ ಅಕ್ಷೀಣ ತ್ರಾಣದ ನಿರ- ಪೇಕ್ಷ ಲಕ್ಷಣಮೂರುತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಮಿತಾರ್ಥದಾಯಿ ಸೀತಾರಾಮರಾಜ ರಾಜ ಸ್ವಾಮಿಯೆನ್ನ ಕಾಯೊ ಖಳನಿರ್ನಾಮ ಭಕ್ತಕಲ್ಪಭೂಜ ಪ. ಸಾಕೇತಪುರದಿ ವಾಸಪ್ರಾಕೃತ ಲೀಲಾ ವಿಲಾಸ ಸ್ವೀಕೃತ ರಕ್ಷಾವಿಭೂಷ ಯಾಕೆನ್ನೊಳುಪೇಕ್ಷೆ ಶ್ರೀಶಾ ಬೀಕೃತಿಗಳ ದೂರೀಕರಿಸುವ ಕರು ಣಾಕರ ಭಕ್ತ ಪರಾಕ ಪರಾತ್ಪರ 1 ಪಾತಕಿ ಜನೋದ್ಧಾರೈಕ ಹೇತುವ ತೋರುವೆನೆಂದು ಸೇತು ನಿರ್ಮಿಸಿದ ರಘುನಾಥ ನೀನೆ ದೀನ ಬಂಧು ವಾತಜಾತನಿಗೊಲಿದು ಸಂಪ್ರೀತಿಯೊಳಂಬುಜ ಜಾತನಪದವಿಯನಾತಗೆ ಸಲಿಸಿದ 2 ಪಾಮರ ಪಾವನದಿವ್ಯ ನಾಮದೇವ ಸಾರ್ವಭೌಮ ಸೀಮಾಹಿತಸದ್ಗುಣೈಕ ಧಾಮಾ ಸೀತಾಪೂರ್ಣಕಾಮಾ ತಾಮರಸಾಸನವಂದ್ಯ ಶೇಷಗಿರಿ ಧಾಮ ದಯಾಂಬುಧಿ ದಶರಥ ರಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಯೊ ಕರುಣಾಳು ಅಂಬುದಛಾಯ ಬಿನ್ನಹ ಕೇಳು ತಾಯೊಳು ಶಿಶು ಗುಡಪಾಯಸಗೋಸುಗ ಬಾಯತೋರ್ಪುದು ನ್ಯಾಯವೇ ಪೇಳು ಪ. ಭೂತಿದೇವಿಯ ರಮಣಾ ನೃಪ ಸಂಪ್ರೀತಿ ಪೂರ್ತಿ ಕರಣಾ ಚಾತೂರ್ಯ ಕರಣಾ ದಿವಿಜಾರಾತಿ ಶಿರೋಹರಣಾ ಮಾತು ಮಾತಿಗೆ ವಿಖ್ಯಾತಿಗೊಳಿಪ ತೆರ ನೀ ತಿಳಿಯೇಯ ಖಗಕೇತನ ಶುಭದಾ 1 ಮಧುಮಯ ಮೃದುಭಾಷಾ ಮಧುಹರ ಮಧುಕರ ಮುಖಭೂಷಾ ಅಧರೀಕೃತ ತೋಷಾ ದಾನವ ಮದಜಲನಿಧಿಶೋಷಾ ಮಧುರಾ ಪಟ್ಟಣ- ಕಧಿಪನೆಂದೆಸೆವ ಬುಧರಿಪು ಕಂಸನ ಸದೆದ ಪರೇಶಾ 2 ಶ್ರೀಪತಿ ಸರ್ವೇಶಾ ದುರಿತಮಹಾಪದ್ಗಣನಾಶಾ ತಾಪೋನ್ಮಥನೇಶಾ ಪಾಲಿಸು ಭೂಪ ಶೇಷಗಿರೀಶಾ ನೂಪುರ ಕಿಂಕಿಣಿಕ್ವಣಿತ ಚರಣ ಲ- ಕ್ಷ್ಮೀ ಪರಿರಂಭಿತ ಪರಮಾನಂದದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗಣಪತಿ ಸ್ತುತಿ ಅಂಬಾತನಯ ಹೇರಂಬ ಪೂರ್ಣಕರು ಪ ಣಾಂಬುಧೇ ತವ ಚರಣಾಂಬುಜ ಕೆರಗುವೆ ಅ.ಪ ದಶನ ಮೋದಕ ಪಾಶಾಂಕುಳ ಪಾಣೇ ಅಸಮಸಹಸ ಚರುದೇಷ್ಣ ವಂದಿಪೆ 1 ವೃಂದಾರಕ ವೃಂದವಂದಿತ ಚರಣಾರ ವಿಂದುಯುಗಳ ದಯದಿಂದ ತೋರೆನಗೆ 2 ಯೂಥಪವದನ ಪ್ರದ್ಲೋತ ಸನ್ನಿಭ ಜಗ ನ್ನಾಥ ವಿರು ಸಂಪ್ರೀತಿ ವಿಜಯ ಜಯ 3
--------------
ಜಗನ್ನಾಥದಾಸರು
ಜಯ ಜಯ ಜಗನ್ಮಾತೆ ಪ. ಸನ್ನುತೆ | ಜಯ ಜಯ ಸುಖದಾತೆ | ನಮಸ್ತೆ | ಜಯ ಜಯ ಸುಖದಾತೆ ಅ.ಪ. ನಾಕಾಧಿಪವಿನುತೆ | ನಮಸ್ತೆ | ನಾಕಾಧಿಪ ವಿನುತೆ 1 ಭಜಕಾವಳಿ ಪ್ರೀತೆ ನಮಸ್ತೆ || ಭಜಕಾವಳಿ ಪ್ರೀತೆ 2 ಕಾಮಿತ ಫಲದಾತೆ ನಮಸ್ತೆ | ಕಾಮಿತ ಫಲದಾತೆ 3 ನತಜನ ಸಂಪ್ರೀತೆ | ನಮಸ್ತೆ | ನತಜನ ಸಂಪ್ರೀತೆ 4 ಶಂಕರಿ ಜಗನ್ಮಾತೆ | ನಮಸ್ತೆ | ಶಂಕರಿ ಜಗನ್ಮಾತೆ 5
--------------
ವೆಂಕಟ್‍ರಾವ್
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು
ದಾಸವೃಂದ ಪೋಷಿಸೆನ್ನ ಜೀಯ ಶ್ರೀ ಪ್ರಾಣೇಶದಾಸರಾಯ ಪ ಭೂಸುರ ಸೇವಿತ | ಭಾಸುರ ಮಹಿಮ ಉ ದಾಶೀನ ಮಾಡದೆ | ದೋಷಗಳೆಣಿಸದೆ ಅ.ಪ ಪದುಮಸಂಭವ ಕುಲದಿ ಜನಿಸುತ ವಿದುರಾಗ್ರಜ ಜಗದಿ | ಯದುಪತಿ ಸುಕಥೆಯ ವಿಧ ವಿಧದಿ ಬೋಧಿಸಿ ಮದಡರುದ್ಧರಿಸಿದ | ಸದಮಲ ಹೃದಯ 1 ನತಜನ ಸುರತರುವೆನಿನ್ನನು ತುತಿಸಿಲೆನಗೊಶವೆ | ಸತತದಿ ಸೇವಿಸಿ | ಯತಿ ವರದೇಂದ್ರರ ಹಿತದಲಿ ಪಡೆದ ಪ್ರತಿ ಪ್ರಭಾಕರ 2 ತರತಮ ಭೇದವನು | ಶ್ರೀವರ ಹರಿದಿನ ಮಹಿಮೆಯನು ಸರಳಕನ್ನಡದಿ ವಿರಚಿಸಿ ಕವನವ ನೊರೆದು ಸಜ್ಜನರ ಪೊರೆವ ಮಹಾತ್ಮಾ 3 ವಾತಜಾತ ಸುಮತ ಸಾಗರ ಪೋತನೊಳೀತರ | ಯಾತಕೆ ನಿರ್ದಯ ನೀತವಕದಿ ಸಂಪ್ರೀತಿಯಿಂದೊಲಿದು 4 ಧಾಮರ ಸುವಿಧೇನು ಶಾಮಸುಂದರೆನ | ನಾಮನೆನೆವ ಸುಖ ಯಾಮ ಯಾಮಕೀಪಾಮರಗೀಯುತ 5
--------------
ಶಾಮಸುಂದರ ವಿಠಲ
ದೀನ ಪರಿವಾರ ಪಾಹಿ ದಾತಾರ ಮಾಂ ದೇಹಿಮೇ ಚರಣಸೇವಾಂ ಪ ಬೃಂದಾವನಶೈಲವಾಸ ಪರಮಕೃಪಾಕರ ಪಾಪನಾಶ ಸುಧೀಂದ್ರ ವಿಭೂಷ ಹೃದಯೋಲ್ಲಾಸ ಅ.ಪ ಸರ್ವೇಶ ವೆಂಕಟೇಶ ಗುರುವರ ಸುಖಧಾಮ ಸುರರಂಜನ ಅಖಿಲ ಬೃಂದಾಳಿಭೀಮ ಶ್ರೀರಾಮ ಪರಿಭಾಷಾ ಮನಿವೇಶ ಜಿತಸೋಮ 1 ಪ್ರಾಣೇಶಸುತ ಭಜನ ಸತತ ವಿರಾಜ ಪರಿ ಪೂರ್ಣದರ್ಶನ ನಿರಂತರದಾಯಕ ಮುನಿಪುಂಗವ ಹರಿಣ ಸಾರಾಂಗ 2 ಮಂಗಳ ಚರಣ ತುರಂಗ ಗಂಗಾಮೃತ ಪೂರ್ಣತೀರ್ಥ [ತುಂಗಾತೀರ ನಿವಾಸಿನೀಂ] ಮಾಂಗಿರಿರಂಗ ಸಂಪ್ರೀತ ಮಾಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್