ಒಟ್ಟು 67 ಕಡೆಗಳಲ್ಲಿ , 31 ದಾಸರು , 66 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
(37ನೇ ವರ್ಷದ ವರ್ಧಂತಿ) ದಯದೋರೊ ದೀನಾನುಕಂಪಾ ಲಕ್ಷ್ಮೀಶಾ ಭಯಹಾರಿ ಭಾಮಾ ಮುಖಾಬ್ಜ ದಿನೇಶ ಪ. ಒಂದೊಂದುಪಾಧಿ ಸಂಬಂಧಿಸಿ ಬರುವಾ ಮಂದಾಭಿಲಾಷಗಳಿಂದ ನಿಂದಿಸುವ ಕುಂದ ನಾನೆಂದಿಗು ಹೊಂದದಂದದಲಿ ನಿಂದು ಮನದಿ ಪೂರ್ಣಾನಂದ ಸಂತಸದಿ 1 ನಾವಿಬ್ಬರೊಂದೆ ವೃಕ್ಷದಿ ಸೇರಿರುವೆವು ಕೋವಿದ ನೀನಾದರಿಂದ ಎನ್ನಿರವು ಜೀವ ಕರ್ತೃತ್ವಾದಿ ಬಳಲುವದೈತು ತಾವಕನೆಂಬ ಭಾವನೆ ದೂರ ಹೋಯ್ತು 2 ಮತ್ತೇಳು ಮೂವತ್ತು ವತ್ಸರಗಳನು ಎತ್ತಿನಂದದಿ ಕಳೆವುತ್ತ ಬಾಳಿದೆನು ಎತ್ತಾಲು ಹೊಂದದೆ ಎರಡೇಳು ವಿಧದ ಭಕ್ತಿಯ ಬಯಸುವ ಭಯ ದೂರ ವರದ 3 ಮನಸಿನ ದೌರಾತ್ಮ್ಯವನು ಪೇಳಲಾರೆ ತನುವ ದಂಡಿಸಿ ಕರ್ಮಗಳ ತಾಳಲಾರೆ ಅನುಕೂಲವಲ್ಲದಿಂದ್ರಿಯಗಳನೆಲ್ಲ ವನಜಾಕ್ಷ ನಾನೆಂತು ಗೆಲ್ಲುವೆ ಶ್ರೀನಲ್ಲ 4 ಈರೇಳು ಭುವನಾಧಿನಾಥ ನಿನ್ನನ್ನು ಸೇರಿದೆ ಶೇಷಾದ್ರಿ ಶಿಖರವಾಸ ಸಾರಿದೆ ಸರ್ವಾಭೀಷ್ಟದ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಮಹಿಷಿ ಅಶ್ವತ್ಥನಾರಾಯಣ ದೇವರು) ತಪ್ಪಾ ಕ್ಷಮಿಸು ಕಲ್ಪತರುರೂಪ ತವಪಾದ- ಕೊಪ್ಪಿಸಿದೆನು ಯೆನ್ನನು ಅಪ್ಪಳಿಸಖಿಳಾಂತರಾಯವತಿದಯದಿ ತಿ- ಮ್ಮಪ್ಪರಾಜನೆ ನೀನೆಂದರಿತು ಬಂದಿರುವೆನು ಪ. ಮಂಗಲ ಮಹಿಮೆ ಮಾತಂಗ ವರದ ಶುಭ ತುಂಗಾತೀರದಿ ನಿಂದು ತಾರಕನೆಂದು ಭವ ಭಯ ಭಂಗದ ಮಹಿಮನೆಂದರಿತು ಬಂದಿಹೆನಿಂದು ಅಂಗದಾದಿ ದೇವೇಂದ್ರ ಸಂಸ್ತುತ ತುಂಗಬಲ ಹನುಮತ್ಪ್ರತಿಷ್ಠಿತ ಅಂಗುಟಾಗ್ರದೊಳಖಿಳಪಾವನ ಗಂಗೆಯನು ಪಡದಾದಿ ಪುರುಷ 1 ಪಾವಕ ದಿಋಖ(?) ದೇವ ಸತ್ಸುಖಗಣ ಭಾವನ ಭಜಕೇಷ್ಟಸಿದ್ಧಿದನೇ ಮಾವನ ಮಗನೊಳಗುಸುರಿದ ನುಡಿಯನು ಕಾವೆನಿಂದಿರುವಿಲ್ಲಿ ಕರುಣಾವಾರಿಧಿ ಕೃಷ್ಣಾ ಈ ವಸುಂಧರೆಯಲ್ಲಿ ಘಟಿಸುವ ನೋವುಗಳ ಸಂಬಂಧಗೊಳಿಸದೆ ಶ್ರೀವನಿತೆಯೊಡಗೂಡಿ ನಿನ್ನ ಕ- ರಾವಲಂಬನವಿತ್ತು ಕರುಣಿಸು 2 ತ್ರಿವಿಧ ತಾಪಗಳು ಭರಿಸಲಾರದೆ ವಂದು ನೆವನದಿಂದಲಿ ಬಂದು ನುಡಿದೆನಿಂದು ಪವಮಾನವಂದಿತ ಪತಿತ ಪಾವನನೆ ನೀ- ವಹಿಸಿ ರಕ್ಷಿಪುದೆಂದು ಒರೆವೆನು ಗುಣಸಿಂಧು ವಿರಿಂಚಿ ರಮಾ ವರಪ್ರದ ಭಾರ ನಿನ್ನಲಿರಿಸಿದವನನು ತವಕದಲಿ ಕಾಪಾಡು ವೆಂಕಟ ಮಹಿಷಿ ಕ್ಷೇತ್ರ ಪಾಲನ3
--------------
ತುಪಾಕಿ ವೆಂಕಟರಮಣಾಚಾರ್ಯ
ಆದಿಯಲಿ ಕೌರವರ ಪಾಂಡವಮೇದಿನೀಶರ ಜನನ, ವಿದ್ಯವನೋದಿದುದು ಲಾಕ್ಷಾನಿವಾಸದಲಗ್ನಿ ಸಂಬಂಧವೇದವಿದರೂಪದಲ್ಲಿ ಧರ್ಮಸುತಾದಿಗಳು ತಾÀವಿದ್ದು ದ್ರೌಪದಿಗಾದರೈವರು ಪತಿಗಳೆಂಬುದು ಭಾರತಾಖ್ಯಾನ 1ದ್ಯೂತದಲಿ ರಾಜ್ಯವನು ಸ್ತ್ರೀಯನುಸೋತು ವನದಲಿ ನಿಂದು ಗುಪ್ತದಿದೂತರಾದರು ಮತ್ಸ್ಯನೃಪತಿಯ ಮೆರೆವ ನಿಳಯದಲಿಮಾತ ಸಲಿಸೆ ಮಹಾತ್ಮ ಕೃಷ್ಣಪ್ರೀತಿಯಲಿ ಪಾಂಡವರ ಕಾರ್ಯಕ್ಕೀತ ಸಂಧಿಗೆ ನಡೆದನೆಂಬುದು ಭಾರತಾಖ್ಯಾನ 2ಮುರಿದು ಸಂಧಿಯನುಭಯರಾಯರನೆರಹಿ ಪಾರ್ಥಾಸ್ತ್ರದಲಿ ಸರ್ವರತರಿದು ಯಮಸುತನಿರಿಸಿ ರಾಜ್ಯದ ಪರಮ ಪೀಠದಲಿಎರೆದನಭಿಷೇಕವನು ಭಕ್ತರಹೊರೆದ ತಿರುಪತಿ ವೆಂಕಟೇಶನುಮೆರೆದ ಮಹಿಮೆಯನೆಂಬುದಿದು ತಾ ಭಾರತಾಖ್ಯಾನ 3ಓಂ ಅನಂತಾಯ ನಮಃ
--------------
ತಿಮ್ಮಪ್ಪದಾಸರು
ಆನಂದಕರಮಾದ ಇಂದಿರಾರ್ಯ ತವ ಧ್ಯಾನಾನಂದೆನಗೆ ದಯಪಾಲಿಸು ಪ ನೊಂದೆ ಭವದೊಳು ಬಿದ್ದು ಮಂದನಾಗಿ ತಿಳಿಯದೆ ಅಂದಮಾದ ತವ ಮಹಿಮೆಯ ದೇವ ಅ.ಪ ಕಾಣುವ ಜಗವೆಲ್ಲ ಏನೆಂಬ ನಿಜತವನು ನಾನರಿಯದೊರಲುತಿಹೆನು ನಾನಿಲ್ಲದಮೊದಲು ಏನಿತ್ತು ಎಂಬುದನು ನಾನೆಂತು ತಿಳಿಯುವೆನು ನಾನು ಯಾರೆಂಬ ನಿಜ ಖೂನವರಿಯದೆ ಬಲು ಹೀನತೆಗೆ ಬಂದಿದ್ದೆನು ನೀನೆ ಸ್ವತಂತ್ರಖಿಲ ದೀನಗರಿವಿಕೆ ನೀಡಿ ಜ್ಞಾನದಿಂ ಪೊರೆ ದಯದಿ ಜವದಿ 1 ಎಲ್ಲಿರ್ದೆಮೊದಲು ನಾನೆಲ್ಲಿಂದ ಬಂದೆ ಮ ತ್ತೆಲ್ಲಿಗೆ ಪೋಗುವೆನು ಎಲ್ಲಿರುವೆ ಈಗ ನಾನೆಲ್ಲಿಂದ ನುಡಿಯುವೆನು ಎಲ್ಲಿಗೆ ಕೊಡುವೆನು ಎಲ್ಲನಿಂದಿದರೊಳಗೆ ಇಲ್ಲದ್ದು ಕಲ್ಪಿಸಿ ಎಲ್ಲಿಂದ ಕಾಂಬುವೆನು ಎಲ್ಲಿಟ್ಟಿರುವಿದರ ಸಲ್ಲಲಿತ ಸೂತ್ರವನು ಪುಲ್ಲನಾಭ ದಯಪಾಲಿಸು ತಿಳಿಸು 2 ಆರೊಂದುಗೇಣಿನಾಪಾರ ಸೂತ್ರದಗೊಂಬೆ ಆರಿಂದಲಾಗಿಹ್ಯದು ಸೋರುತಿಹ್ಯ ಒಂಬತ್ತು ದ್ವಾರಹಚ್ಚಲು ಇದರ ಕಾರಣವೇನಿಹ್ಯದು ತೋರುವುವು ಇದರೊಳಗೆ ಮೂರುವಿಧಮಾಗಿ ಆರಸಾಕ್ಷದಕ್ಕಿಹ್ಯದು ತೋರದೇನೇನಿದರ ತಾರತಮ್ಯಜ್ಞಾನ ಸುವಿ ಚಾರ ಎನಗೊಲಿದು ತಿಳುಹು ಸಲಹು 3 ಕಾಲು ಕಯ್ಯಿಗಳಾಡಿ ಬೀಳುವೇಳುವ ಮೂಲ ಕೀಲಿಯೆಲ್ಲಿರುತಿಹ್ಯದು ಜ್ಯಾಲದಂದದಿ ಹರಕು ಚೀಲದೊಳು ತುಂಬಿರುವ ಗಾಳ್ಯೆಂತುನಿಂತಿಹ್ಯದು ಕಾಲಮಹಿಮ ನೀ ಗೈದ ಮೇಲುಯಂತ್ರದಿ ಇಂದ್ರ ಜಾಲವೇ ತುಂಬಿಹ್ಯದು ಕಾಲಚಕ್ರನ ಮಹ ದಾಳಿಯನು ಗೆಲಿಸಿ ತವ ಲೀಲೆಯೊಳೆನ್ನಾಡಿಸು ಪಾಲಿಸು 4 ಬಂಧರೂಪಕಮಾದ ದಂದುಗದ ಭವವು ದಾ ರಿಂದಲುತ್ಪತ್ತಿ ಯಾಯ್ತು ಸತಿ ಸುತರು ಬಂಧಬಳಗ ಎ ಲ್ಲಿಂದ ಬಂದಿವಗೆ ಜೊತೆಗೂಡಿತು ಒಂದಕ್ಕೊಂದರ ಸಂಬಂಧವೇ ಇಲ್ಲಿವಗೆ ಬಂಧ ಮತ್ತೆಲ್ಲೊದಗಿತು ನಿಂದುನೋಡಲು ಸಕಲ ತಂದೆ ಶ್ರೀರಾಮ ನಿನ್ನಿಂದ ಕಂಡು ನಿನ್ನೊಳೈಕ್ಯ ಮಾಯ ಖರೆಯ 5
--------------
ರಾಮದಾಸರು
ಇಂದಿರೆ ಪತಿ ಭಂಗಬಡುವ ವಿಷಯಂಗಳಿಗೆರಗದೇ ರಂಗ ನಿನ್ನಯ ಮಂಗಳಂಗುಟರ್ಚಿಸುವಂತೆ 1 ಉದರ ಪೋಷಣೆಗಾಗಿ ಸದೆಬಡಿಗನಾಗದೇ ಸದಮಲ ನಿನ್ನೂಳಿಗದವನಾಗುಳಿವಂತೆ 2 ಶರೀರ ಸಂಬಂಧಿಗಳಲ್ಲಿರುವ ಪ್ರೇಮವ ತಂದು ಗುರು ಮಹಿಪತಿ ಪ್ರಭು ಸ್ಮರಣೆಯೊಳಿರುವಂತೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದು ಎಲ್ಲಾ ಇದು ಎಲ್ಲಾ ಏನಾರೆಂಬುದ ಬಲ್ಲ್ಯಾ ಪ ತನುವಿದು ಮೊದಲಿಗೆ ನಿನ್ನದಲ್ಲಾ || ತನು ಸಂಬಂಧದ ಗುರುತು ಬಿಡಲಿಲ್ಲಾ 1 ನಿಜವೆನುತಲಿ ಆಶೆಯ ಕಚ್ಚಿ ಅಜಹರಿಹರರಾದರು ಕೇಳೇ ಹುಚ್ಚಿ 2 ಗುರುಭವತಾರಕನ ನಿಜವಾದ ಭಕ್ತಾ | ಅರಿತು ಆದನು ಜೀವನ್ಮುಕ್ತಾ 3
--------------
ಭಾವತರಕರು
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1 ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2 ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3 ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4 ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು
ಎನ್ನನುದ್ಧರಿಸಲು ಘನ್ನ ಬಿರುದುಗಳು ಪ ಇನ್ನು ಉನ್ನತವಾಹವು ಕೇಳೊ ಹರಿಯೆ ಅ.ಪ ಅನವರತದಿ ದುರ್ವಿಷಯ ಲಂಪಟದೊಳು ಚನ್ನಾಗಿ ಪತಿತ ಎನ್ನಂತಜಾಮಿಳನೆ ಇನ್ನಿದು ತಿಳಿದು ನೀ ಎನ್ನ ಪೂತನ ಮಾಡೆ ನಿನ್ನನಿಮಿತ್ತ ಬಂಧುತನವೆ ವೆಗ್ಗಳವೊ 1 ಮನ್ನಿಸಿದವನಲ್ಲ ಪೂಜಿಸಲಿಲ್ಲ ತನ್ನ ಸಂಬಂಧಿಯು ಮೊದಲಿಗನಲ್ಲ ಎನ್ನಂತೆ ಗಜೇಂದ್ರನೆ ಎನ್ನನುದ್ಧರಿಸಲು ನಿನ್ನ ಪತಿತಪಾವನತೆ ಘನ್ನವೊ 2 ಏಸಪರಾಧ ಮಾಡಿದ ಚೈದ್ಯಾದಿಗಳು ಈಸಪರಾಧ ರಾಶಿಗಳ ಮಾಡಿದರೆ ವಾಸುದೇವವಿಠಲ ಎನ್ನ ರಕ್ಷಿಸಲು ಸೂಸುವುದೋ ನಿನ್ನ ಭಕುತ ವಾತ್ಸಲ್ಯತನವೊ 3
--------------
ವ್ಯಾಸತತ್ವಜ್ಞದಾಸರು
ಎಲ್ಯಾದರು ಮಾಡಬೇಕು ಕೆಲಸ ಪ ಅಲ್ಲೇನು ಇಲ್ಲೇನು ಬಲ್ಲಂಥಾವನಾದರೆ ತಾನು ಅ.ಪ ಶರೀರ ಸಂಬಂಧಿಗಳಿಗಾಗಿ | ಮೂರು ಕರಣದಿಂದಲಿ ಅನುವಾಗಿ ಕರೆಕರೆಪಡುತಲಿ ಅರೆನಿಮಿಷವಾದರೆ ಬಿಡದೆ 1 ತ್ತರವಾದ ಕಟ್ಟಾಜ್ಞೆ ಅಲ್ಲಿ ನ- ರರ ಕಾಟವು ಇಲ್ಲಿ ಸುರರ ನಿಬಂಧನೆಯಲ್ಲಿ 2 ಬಾಲ್ಯ ಯೌವನ ಕೌಮಾರ | ಮುಪ್ಪು ಲೀಲೆಯಿಂದಲಿ ಕೆಲವರು ಗೋಳಾಡುತಲಿ ಕೆಲವರು3 ಸ್ವಲ್ಪಾದರು ಸತ್ಕರ್ಮ ಮಾಡೆ | ಫಣಿ- ಅಲ್ಪರಿವುದು ಯಾಕೆ 4 ಇಪ್ಪತ್ತು ನಾಲ್ಕು ತತ್ವಗಳಿಂದ | ನ- ಕ್ಲುಪ್ತಗೈದಿರುವನು ಆಪ್ತ ಎಂದಿಗೂ ನಮಗವನು 5
--------------
ಗುರುರಾಮವಿಠಲ
ಏತಕೆ ಸಂತತ ಚಿಂತಿಸುವೆ ಪ ಕೋತಿಗೆ ಮದ್ದಿಕ್ಕಿದ ರೀತಿಲಿ ಮನವೆಅ.ಪ ಹಾನಿ ವೃದ್ಧಿಗಳು ತಾನಾಗಿ ಬರುವುದು ಏನೇನು ಮಾಡಲು ಬಿಡಲೊಲ್ಲದು ಜ್ಞಾನವಿಲ್ಲದೆ ವೃಥಾ ಧೇನಿಸಿ ಧೇನಿಸಿ 1 ದೇಹಸಂಬಂಧಿಗಳ ಮೋಹ ಪಾಶಕ್ಕೆ ಸಿಕ್ಕಿ ಸಾಹಸ ಮಾಡುವುದೇನು ಫಲ ಊಹಿಸಿ ನೋಡಲು ಭ್ರಾಂತಿಯದಲ್ಲವೆ 2 ಪೂರ್ವ ಕರ್ಮಾನುಸಾರ ನಡೆಸುವನು ಗರ್ವವಿರಹಿತನು ಗುರುರಾಮವಿಠಲನು 3
--------------
ಗುರುರಾಮವಿಠಲ
ಏನು ಕಾರಣ ಮತಿಯಿಲ್ಲ ಮನವೆ ಪ ಹೀನಾಯವಾಡದಿರು ಪರರ ಗುಣಗಳ ಎಣಿಸಿ ಅ.ಪ ಅವನ ಗೊಡವೆಯೇಕೆ ಅವನಾರು ನೀನಾರು | ಅವನ ಪಾಪಕ್ಕೆ ನೀ ಭಾಗಾದಿಯೆ | ಅವನುತ್ತಮನಾದಡವನೆ ಬದುಕಿದ ಕಾಣೊ ಅವ ಪುಣ್ಯಮಾಡಿದರೆ ಅವನ ಕುಲ ಉದ್ಧಾರ 1 ನಿನಗೆ ಕೊಡುವುದರೊಳಗೆ ಬೇಡ ಬಂದವನಲ್ಲ | ನಿನಗೆ ಅವನಿಗೆ ಏನು ಸಂಬಂಧವೊ | ಮನೆ ಒಡವೆ ವಸ್ತುಗಳ ಹಂಚಿಕೊಂಬುವುದಲ್ಲ | ಕ್ಷಣ ಕ್ಷಣಕೆ ಕ್ಲೇಶವನು ಮಾಡಿಕೊಂಬುದು ಸಲ್ಲ 2 ನಿನ್ನ ಗತಿ ಮಾರ್ಗಕ್ಕೆ ಅವನಡ್ಡ ಬಾಹನೆ | ನಿನ್ನಿಂದ ಪರಲೋಕ ಅವನಿಗುಂಟೆ | ನಿನ್ನೊಳಗೆ ನೀ ತಿಳಿದು ವಿಜಯವಿಠ್ಠಲನ್ನ | ಸನ್ನುತಿಸಿ ಭವರೋಗ ಬನ್ನವನು ಕಳೆಯೊ 3
--------------
ವಿಜಯದಾಸ
ಏನೆಂದು ಬಣ್ಣಿಸುವೆನು ಗುರುವಿನ ನಾನು | ತಾನಂದವರಿಗಿನ್ನು ಸ್ವಾನಂದ ಸುಖವ ನೀಡುವಾ ಪ ತಾಯಿಯಂಬೆನೆ ಮೋಹದೀ | ಬಾಲಕ ಧೃವನಾ | ತಾಯಿಗಾಯ್ದಳೆ, ಸ್ನೇಹದಿ ಜನಕನೆಂಬೆÉನೆ | ನ್ಯಾಯದಿ ಪ್ರಲ್ಹಾದನ ಜನಕ ಕಾಯ್ದನೆ ನೋಡಮ್ಮಾ 1 ಬಂಧುಯಂಬೆನೆ ಜಗದೊಳು ವಿಭೀಷಣನ್ನಾ | ಬಂದು ಕಾಯ್ದನೆ, ಇಳೆಯೊಳು ಆಪ್ತನೆಂಬೆÉನೆ | ಸದು ವಿಗ್ರಹದಿ ಗಜೇಂದ್ರರ ನಾಪ್ತರು ಕಾಯ್ದರೇ 2 ಇಂತು ಸಂಬಂಧ ಸ್ನೇಹದಾ | ಸಾಸಿರ ಮಡಿಯಾ | ಸಂತತ ಕೃಪೆಯಾ ಬೀರಿದಾ | ಮಹಿಪತಿ ಕಾಯಾ | ಪಂಥವರಿಯದಾ ಪರಮ ಭ್ರಾಂತನಾನು | ದ್ಧರಿಸಿದ ನೆನ್ನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು