ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ಗತಿ ಮುಕುತೆನೆಗೆ ಅನಂತ ಜನುಮಗಳಲಿ ಪ ಆನೇನರಿಯೆ ಗರುಡಗಮನ ಸಿರಿಕೃಷ್ಣ ರಾಯಾ ಅ.ಪ ಅನ್ಯವಾರ್ತೆ ಅನ್ಯಸಂಗ ಅನ್ಯಜನರಾರಾಧನೆಅನ್ಯಸತಿ ಅನ್ಯಕರ್ಮ ಮೊದಲು ಸಕಲತನ್ನು ಮನ್ನ(=ತನುಮನ) ವಾಕ್ಯಗಳಿಂದ ಜರಿದೆ ನಿನ್ನವರೊಳುಎನ್ನ ಕೂಡಿಸೊ ನಿನ್ನ ಚರಣ ಭಕುತಿಯಲಿ ಶ್ರೀಶ 1 ಅಂದು ವೇದೋದ್ಭವಳ ಮೊರೆಯನು ಕೇಳಿ ಕಾಯ್ದಂತೆಮಂದ ಗಜೇಂದ್ರನಿಗೊಲಿದು ರಕ್ಷಿಸಿದ ಪರಿಯಂತೆತಂದೆತಾಯಿ ಬಂಧುಬಳಗ ಎಂದೆಂದು ನೀನೇ ದಯಾ-ಸಿಂಧು ನಿನ್ನ ದಾಸರ ದಾಸನೆಂದೆನಿಸೆನ್ನ2 ಪಾದ ಜಂಘೆ ಜಾನೂರುಕಟಿಘನ್ನ ಬಾಹು ಉದರವಕ್ಷ ಭುಜ ಕುಂತಳದಿಚನ್ನ ಕಿರೀಟ ಸರ್ವಾಲಂಕಾರದಿಂ ಶೋಭಿಸುವನಿನ್ನ ಮೂರ್ತಿಯನ್ನೆ ತೋರೊ ಭಕ್ತವತ್ಸಲ ಸಿರಿಕೃಷ್ಣ3
--------------
ವ್ಯಾಸರಾಯರು