ಒಟ್ಟು 15 ಕಡೆಗಳಲ್ಲಿ , 11 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಷ್ಟಪಡಲಾರೆನೋ ಸೃಷ್ಟೀಶ ಶ್ರೀಶಾ ದುಷ್ಟದಮನ ದೀನವತ್ಸಲ ನಾರಾಯಣ ಪ ಒಡಲು ಕ್ಷಣಗಳು ಬಿಡದೆ ಬಾಧಿಸೆ ನಿನ್ನ ಅಡಿಯಕಾಣಿಸದಿವೆ ಕೆಡಿಪ ದುರಾಶೆಯ ಸುಡುತಲಿ ನೂಕು ದುಡುಕುವ ಮನವಂ ಸಡಲಿಸಬೇಕು ಕಡುಮುದದಿಂದಲಿ ಕಾಯುತ ಸಾಕು ಪರಾಕು 1 ಲೋಕಿಗರೊಳು ನಾನನೇಕದುಶ್ಚರ್ಯೆಯ ವಿ- ವೇಕವಿಲ್ಲದೆ ಮಾಡಿ ಕಾಕುಮನುಜನಾದೆ ಘೂಕದ ಪರಿಯೀ ಭವಸಂಸಾರ ನಾಕವಾದರೂ ಬಹು ನಿಸ್ಸಾರ ಜೋಕೆಯೊಳಿದಬಿಟ್ಟು ಒಟ್ಟು ಬಂದನೆ ತೋರಾ ಶೋಕಸಾಗರವಾ ಶೋಷಿಪಶೂರ 2 ಇಷ್ಟ ಮೂರುತಿ ನಿನ್ನ ನಿಷ್ಠೆಯಿಂ ಕಾಣುವೆ ಎಷ್ಟು ಮೊರೆಯಿಟ್ಟರೂ ದೃಷ್ಟಿಸದಿರುವೇ ಅಷ್ಟಮದಗಳನಿತಿಷ್ಟೂ ನಿಲ್ಲವೋ ಭ್ರಷ್ಟಗುಣಗಳ ನಿಷ್ಠುರಗೈವುದೋ ವಿಷ್ಣು ಶ್ರೇಷ್ಠಪದ ಕೊಟ್ಟು ಕರುಣಿಸೋ ಕೃಷ್ಣ ಕೃಪಾಳು ಹೆಜ್ಜಾಜೀಶಾ 3
--------------
ಶಾಮಶರ್ಮರು
ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು
ನಾ ಕರೆವುದಕಿಂತತಾನಾಗಿ ಕರೆವಳ ಕಂಡರೆ ಸೊಗಸುನಾನೆ ನೀನುನೀನೇ ನಾನುಏನನುಮಾನವೋ ಬಾರೆಂದೆನುತಲಿ ಪ ಕಣ್ಣ ಸನ್ನೆಯ ಮಾಡಿ ಕರೆವುತಬಣ್ಣಿಸಿ ಬೇಟವ ತೋರುತ್ತನಿನ್ನನಾ ಬಿಡೆನೆಂದು ನಗುತ ಮಾತಾಡುತ 1 ನೆಂಟರಿಷ್ಟರು ಕಾಣದಂದದಿ ಬಂದುಗಂಟೆರಡನು ಸಡಲಿಸುತಲಿ ನಿಂದುಬಂಟನಾದರೆ ನೀನೆರೆಬಾರೆಂದು 2 ಕುಂಭ ಕುಚಂಗಳ ತೋರುತ್ತತಾಂಬೂಲವ ಹಸಮಾಡುತ್ತನಂಬುಗೆ ರಾಮೇಶ್ವರನಿದಕೆನುತ 3
--------------
ಕೆಳದಿ ವೆಂಕಣ್ಣ ಕವಿ
ನಾನೊಂದು ಮಾಡಲು ತಾನೊಂದಾದಮೇಲಿನ್ನೇನಿನ್ನೇನು ದೇವರೆಂದು ನಮಿಸಲು ದೆವ್ವಾಗಿ ಬಡಿದ ಮೇಲಿನ್ನೇನಿನ್ನೇನು ಜೀವದಾಪ್ತರೆ ತನ್ನ ಕೊಲ್ಲಲೆತ್ನಿಸಿದರಿನ್ನೇನಿನ್ನೇನು 1 ತಾಯ್ತಂದೆಗಳೆ ಸುತರಿಗ್ವಿಷವನೆರೆದ ಮೇಲಿನ್ನೇನಿನ್ನೇನು ಕೈಯೊಳು ಪಿಡಿದ ಬೆತ್ತ ಹಾವಾಗಿ ಕಚ್ಚಲು ಇನ್ನೇನಿನ್ನೇನು 2 ಕಣ್ಣಿಲ್ಲದವನಿಗೆ ಮಾರ್ಗ ತಪ್ಪಿದ ಮೇಲೆನ್ನೇನಿನ್ನೇನು 3 ಹಾಲೆಂದು ಸವಿದರೆ ಹಲ್ಲು ಮುರಿದಮೇಲಿನ್ನೇನಿನ್ನೇನು ಮಾಲ್ಯೆಂದು ಧರಿಸಲು ಉರುಲು ಬಿದ್ದ ಮೇಲಿನ್ನೇನಿನ್ನೇನು 4 ಬೇಲ್ಯೆದ್ದು ಹೊಲದ ಬೆಳೆಯ ತಾ ಮೇಯಲಿನ್ನೇನಿನ್ನೇನು ಮಾಳಿಗೆ ಮನೆಯೆ ತಾ ಗಾಳಿಗೆ ಸಡಲಿದರರಿನ್ನೇನಿನ್ನೇನು 5 ಭೂಪತಿಗಳತಿನೀತಿತಪ್ಪಿದ ಮೇಲಿನ್ನೇನಿನ್ನೇನು ಪಾಪಿಗಳತಿಶಯಯಕೋಪ ತಾಳಿದ ಮೇಲಿನ್ನೇನಿನ್ನೇನು 6 ನೋಪಿದ ಗೌರಿಯೆ ಶಾಪವಿತ್ತ ಮೇಲಿನ್ನೇನಿನ್ನೇನು ದೀಪವೆ ಕಾಲಾಗ್ನಿಯಾಗಿ ಉರಿದಮೇಲಿನ್ನೇನಿನ್ನೇನು 7 ಹೂಳಿಟ್ಟ ಹಣವೆಲ್ಲ ಚೇಳಾಗ್ಹರಿದ ಮೇಲಿನ್ನೇನಿನ್ನೇನು ಅಳಿದ ಗೋವುಗಳು ಹುಲಿಯಾಗ್ಹಾರಿದ ಮೇಲಿನ್ನೇನಿನ್ನೇನು 8 ಆಳುವ ಒಡೆಯರೆ ಅಹಿತರಾದ ಮೇಲಿನ್ನೇನಿನ್ನೇನು ಬಾಳುವುದೆಂತಯ್ಯ ಶ್ರೀರಾಮ ನೀಮುನಿದರಿನ್ನೇನಿನ್ನೇನು 9
--------------
ರಾಮದಾಸರು
ಬಯಸದಿರೈಹಿಕ ಸುಖಗಳನುದಿನ ನಿ ಪ ರ್ಭಯದಿ ಭಜಿಸು ಹರಿಯ ವಯನಗಮ್ಯ ವಾಂಛಿತ ಫಲಗಳ ಸ ದ್ದಯದಿ ಕೊಡುವುದರಿಯ ಅ.ಪ. ಮೃಗ ಪಶು ವಾರಿ ಖೇಚರ ಶ ರೀರಗಳಲಿ ಬಂದೆ ಮಾರಿ ಮಸಣಿ ಬಿಕಾರಿ ಭವಾನಿಗ ಳಾರಾಧಿಸಿ ನೊಂದೆ ನಾರಾಯಣ ಪದಾರವಿಂದ ಯುಗ ಳಾರಾಧನೆ ಒಂದೇ ಶರಧಿ ತೋರುವುದೋ ಮುಂದೆ 1 ಅನಿರುದ್ಧನು ನಿಜ ಮನಕೆ ಸಹಿತ ತಾ ಧನ ಧಾನ್ಯದೊಳಿಪ್ಪ ಸುಖಗಳ ತೋರ್ಪಾ ಗುಣವಂತರೊಳು ಜಯಪತಿ ಸಂಕರ್ಷಣ ಕರ್ಮವ ಮಾಳ್ಪಾ ಧರ್ಮ ಕರ್ಮಗಳ ಕೊನೆಗೀತನು ಒಪ್ಪ 2 ವಾಸುದೇವ ವಿಜಯಪ್ರದನಾಗೀ ನರ ರಾ ಶರೀರಗಳೊಳು ಕ್ಲೇಶ ಸುಪುಣ್ಯಗಳ ತಾ ಸಮನಿಸುವನು ಸಂದೇಹಿಸದಿರು ಆಶಾಪಾಶಗಳನು ತಾ ಸಡಲಿಸುವನು ಶೀಘ್ರದಿಂದ3 ನಾರಾಯಣ ಕರುಣಾಸಮುದ್ರ ಕೇಳು ತನ್ನಾರಾಧಕರಿಗೆ ದೂರಗೈದು ದುರಿತಾ ಕೈವಲ್ಯ ಪ್ರದಾಯಕ ತೋರುವ ಸರ್ವಜಿತ ಹಾರೈಸದಿರು ಅಲ್ಪಾಹಿಕ ಸುಖಗಳ ನರಕದ್ವಾರಗಳವು ನಿರುತ ಸೂರಿಗಳನು ಸಂಸೇವಿಸು ಮುಕ್ತಿಗೆ ದ್ವಾರವಹುದು ಸತತಾ4 ಪಂಚರೂಪಿ ಪರಮಾತ್ಮನು ತಾ ಷ ಟ್ಟಂಚ ರೂಪದಿ ಪೊರೆವಾ ಪಾತಕ ತರಿವ ಸಂಚಿತಾಗಾಮಿಗಳಪರಾಧವ ಮುಂಚಿನವಂಗೀವಾ ಮಿಂಚಿನಂದದಿ ಪೊಳೆವಾ 5
--------------
ಜಗನ್ನಾಥದಾಸರು
ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ವಾಸುದೇವನ ನೆನೆದು ನೀ ಸುಖಿಯಾಗು ಮನವೆ | ಈ ಶರೀರದ ಭ್ರಾಂತಿ ಇನ್ಯಾಕೆ ಮನವೆ ಪ ಕಾಲುಗಳು ಕುಂದಿದವು ಕಣ್ಣದೃಷ್ಟಿ ಹಿಂಗಿದವು | ಮೇಲೆ ಯೌವನ ಹೋಗಿ ಮುಪ್ಪಾಯಿತು || ಕಾಲ ಕರ್ಮಂಗಳು ಒದಗಿದಾಕ್ಷಣದಲಿ | ಬೀಳುವ ತನುವಿನಾಶೆ ಇನ್ಯಾತಕೆಲೆ ಮರುಳೆ 1 ಧಾತುಗಳು ಹಿಂಗಿದವು ದಂತಗಳು ಸಡಲಿದವು | ಕಾಂತೆಯರು ನೋಡಿ ವಾಕರಿಸುವರು || ಭ್ರಾಂತಿ ಇನ್ಯಾಕೆ ಬಯಲಾದ ದೇಹಕ್ಕೆ ಇನ್ನು | ಅಂತರ ಮಾಡದೆ ಹರಿಯ ನೆನೆ ಮನವೆ 2 ನೀರ ಬೊಬ್ಬುಳಿಯಂತೆ ನಿಜವಲ್ಲ ದೇಹ | ಧಾರಣಿಯನು ಮೆಚ್ಚಿ ಮರುಳಾಗಿ ಕೆಡದೆ || ಶ್ರೀರಮಣ ವಿಜಯವಿಠ್ಠಲರಾಯ | ಸೋರಿ ಹೋಗುತಿದೆ ಸ್ವರ್ಗ ಸುಮ್ಮನಿರಬೇಡಾ 3
--------------
ವಿಜಯದಾಸ
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಈಗಲುಪ್ಪವಡಿಸಿದಳು ಇಂದಿರಾದೇವಿಯೋಗರತಿ ನಿದ್ರೆ ತಿಳಿದು ಪಕಡೆಗಣ್ಣಕಪ್ಪಅಂಗೈಯಿಂದಲೊರಸುತಸಡಲಿದ ತುರುಬ ಬಿಗಿದು ಕಟ್ಟುತ ||ನಡುವಿನೊಡ್ಯಾಣವ ನಟನೆಯಿಂ ತಿರುವುತಕಡುಕ ಕಂಕಣ ಬಳೆ ಕರದಿ ಘಲ್ಲೆನುತ 1ಕೂರುಗುರ ಗಾಯವನು ಕೊನೆ ಬೆರಳಲೊತ್ತುತಹಾರದ ತೊಡಕನು ಬಿಚ್ಚಿ ಹಾಕುತ ||ಜಾರಿದ ಜಾಜಿದಂಡೆ ಸರವನೀಡಾಡುತಮೋರೆಯ ಕಿರುಬೆವರ ಮುಂಜೆರಗಿಲೊರಸುತ 2ರಕ್ಕಸ ಕುಚದೊಳಿರ್ದ ಕಸ್ತುರಿಯನೊರಸುತಚಕ್ಕನೆ ಕನ್ನಡಿಯೊಳು ಮುಖ ನೋಡುತ ||ಅಕ್ಕರದ ತಾಂಬೂಲ ಸರಸದಿಂದುಗುಳುತಚೊಕ್ಕಪುರಂದರವಿಠಲ ನೋಡಿ ನಗುತ3
--------------
ಪುರಂದರದಾಸರು
ಹೇಗೆ ಉದ್ಧಾರ ಮಾಡುವನು - ಶ್ರೀಹರಿ|ಹೀಗೆ ದಿನಗಳೆದುಳಿದವನ ಪರಾಗದಿಂದಲಿ ಭಾಗವತರಿಗೆ |ಬಾಗದಲೆ ತಲೆ ಹೋಗುವಾತನ ಅ.ಪಅರುಣೋದಯಲೆದ್ದು ಹರಿಯೆನ್ನದಲೆ ಗೊಡ್ಡು |ಹರಟೆಯಲಿ ಹೊತ್ತು ಏರಿಸಿದವನ ||ಸಿರಿತುಲಸಿಗೆ ನೀರನೆರೆದು ನಿರಂತರ |ಧರಿಸದೆಮೃತ್ತಿಕೆತಿರುಗುತಲಿಪ್ಪನ ||ಗುರುಹಿರಿಯರ ಸೇವೆ ಜರೆದು ನಿರಂತರ |ಪರನಿಂದೆಯ ಮಾಡಿ ನಗುತಿಹನ ||ಪರಹೆಣ್ಣು ಪರಹೊನ್ನು ಕರಗತವಾಗಲೆಂದು |ಪರಲೋಕ ಭಯಬಿಟ್ಟು ತಿರುಗುವನ ||ತರುಣಿ ಮಕ್ಕಳನು ಇರದೆ ಪೋಷಿಸಲೆಂದು |ಪರರ ದ್ರವ್ಯ ಕಳವು ವಂಚನೆ ಮಾಳ್ಪನ2ನಡೆಯಿಲ್ಲ ನುಡಿಯಿಲ್ಲ ಪಡೆಯಲಿಲ್ಲ ಪುಣ್ಯವ |ಬಿಡವು ನಿನ್ನ ಪಾಪಕರ್ಮಗಳೆಂದಿಗು ||ಸಡಲಿದಾಯುಷ್ಯವು ಕಡೆಗೂ ಸ್ಥಿರವೆಂದು |ಕಡುಮೆಚ್ಚಿ ವಿಷಯದೊಳಿಪ್ಪನ ||ಒಡೆಯ ಶ್ರೀಪುರಂದರ ವಿಠ್ಠಲರಾಯನ |ಅಡಿಗಳ ಪಿಡಿಯದೆ ಕಡೆಗೂ ಕೆಟ್ಟವನ 3
--------------
ಪುರಂದರದಾಸರು