ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಲ್ಲೆ ಸಂಪದವನೆಲ್ಲವನು ತೆಗೆದುಕೊ ಚೆಲ್ವ ವೇಲಾಪುರೀಶಾ ಸ್ವಾಮಿ ಪ ಬಲ್ಲವರು ನಿನಗೆ ಸರಿಯಿಲ್ಲೆಂದು ಪೊಗಳುತಿಹ ಸೊಲ್ಲ ನಾ ಕೇಳಲಾರೆ ಸ್ವಾಮಿ ಅ.ಪ ಪೆತ್ತಯ್ಯ ತಿರುಮಲಾರ್ಯರು ವರ್ಣಕರ ಚಕ್ರ ವರ್ತಿಯೆಂಬಾ ಬಿರುದನು ಒತ್ತಿ ಪೊಗಳಿಸಿಕೊಂಡುದೇನಂದದಲಿ ತಿರು ಗುತ್ತಿರ್ದಡೇನು ಭಾಗ್ಯಾ ಮತ್ತದೆನಗಾರ್ಜಿತವೆ ಸತ್ತವರ ಸಂಪದವ- ನತ್ತಲೇ ಕಳುಹಿಕೊಡದೆ ಇತ್ತಪರೆ ನಿನ್ನ ದಾಸನುದಾಸರಿಗೆ ಸೇ ವ್ಯೋತ್ತಮನೆ ಕೆಡಿಸಬೇಡಾ ಸ್ವಾಮಿ 1 ಹರಿಯೆ ನೀ ಒಲಿದೂಳಿಗವನು ಮಾಡಲು ಬಳಿಕ ಕಿರುನುಡಿಯ ಮೀರದಿರಲು ಕರುಣದಿಂದಾಗಾಗ್ಯೆ ಕರೆದುಡುಗೊರೆಯ ಕೊಡಲು ಬಿರುದುಗಳು ಮೆರೆಯುತಿರಲೂ ಸ್ಥಿರವಿಲ್ಲದಷ್ಟ ಮಹದೈಶ್ವರ್ಯವಿರುತಿರಲು ಪಿರಿಯರೆಲ್ಲರು ಪೊಗಳಲೂ ಮೆರೆಯನೇ ಮಿಗೆ ಅಹಂಕರಿಸನೇ ಬೆರೆಯನೇ ನರಕಕಿಳಿಯನೇ ಮರಳಿ ಜನಿಸನೇ ಸ್ವಾಮಿ 2 ಸುಖವಿಲ್ಲ ಸುಖವಿಲ್ಲ ಸುಖವಿಲ್ಲ ಭಾಗ್ಯದಾ ಸಕರೆಯನು ನಾನೊಲ್ಲೆನೂ ಭಕತವತ್ಸಲನೆ ಭಾಗವತಲೋಲುಪನೆ ದುಃ ಖಕೆ ಕಾರಣವಿಲ್ಲವೆ ಅಕಳಂಕ ಚರಿತನೆ ಆದಿನಾರಾಯಣನೆ ಮಕರಧ್ವಜನ ತಾತನೆ ಸುಖವೀಯೊ ವೈಕುಂಠ ವೇಲಾಪುರಾಧೀಶ ಭಕುತಿಯನು ಕೊಟ್ಟು ಸಲಹೊ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
ಬದುಕಿಸೀ ಪಶುಗಳನೂ ಭಗವಂತ ನೀನು ಪ ಕದಲಿಸೀರೋಗವ-ಕರುಣಿಗಳರಸನೆ ಅ.ಪ. ಗೋವುಗಳೆಲ್ಲಾ ಹೊಟ್ಟೆ-ನೊವಿನಿಂ ಕಂಗೆಟ್ಟು ಮೇವನುಬಿಟ್ಟ ವಿದಾವರೊಗವೋ ಕಾಣೆ 1 ಹೊಟ್ಟೆ ಕಳೆದು ಕಂಗೆಟ್ಟುಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟುಬಿಡದಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣಾಲಿ ಕೆಂಣಾಲಿ ಕೆಂಪಾದವು ಮೂಲವೆ ತಿಳಿಯದು3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ-ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತು ಬದುಕಿಸಿದೆ ಮೃತ್ಯುದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ಸರಗೂರು ವೆಂಕಟವರದಾರ್ಯರು
ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಸತ್ತವರಿಗೆ ನೀನಳುತಲಿರುಮೆನ್ನೂಮತ್ತನಾಗಿ ಮಂದಜೀವಾ ಪಮೃತ್ಯುವೆಂಬರಿಪು ಕುತ್ತಿಕೆಡಹಿದಾಗಮತ್ತಾರಿಗಳುವೆಯೊ ಜೀವಾ ಅ.ಪನೆತ್ತಿಯ ಬಡುಕೊಂಬೆ ಜೀವಾಕತ್ತೆಯಂತೊದರದೆ ಬಿಡದೆ ಕಾಂತೆಯ ಬೆನ್ನಹತ್ತಿ ಹೋಗುತ್ತಿಹೆ ಜೀವಾ 1ಕತ್ತಲೆಯಂತಿಹ ನಿನ್ನ ವಿದ್ಯೆಯನುತೊತ್ತಳದುಳಿವರೆ ಜೀವಾಉತ್ತಮ ಜನ ಸಂಗವ ಮಾಡು ನಿನ್ನನೀನೆತ್ತಿಕೊ ಭವಕೂಪದಿಂದಾ 2ಏಳು ಶ್ರವಣ ಮನನವ ಮಾಡು ನೀನಿಂತುಘೋಳಿಟ್ಟರೆ ಫಲವೇನೂಬೀಳು ಗುರುವಿನ ಚರಣ ಕಮಲಗಳಲ್ಲಿನಾಳೆ ಮುಕ್ತಿ ಸುಖವುಂಟೂ 3ತಾಳು ಶೀತೋಷ್ಣಾದಿ ದೇಹಧರ್ಮಗಳನುಮೂಳ ಸುಮ್ಮನೆ ಕೆಡಬೇಡಾನಾಳೆ ನಾಡಿದ್ದು ಸಾಧಿಸುವೆನೆಂದೆನುತಲೆಹಾಳಾಗಬೇಡೆಲೊ ಜೀವಾ 4ಇತ್ತಲತ್ತ ಹಿಂದೆಮುಂದೆ ಕೆಳಗೆ ಮೇಲೆಉತ್ತಮ ಬೊಮ್ಮವೆಂದೆನುತಾಸತ್ಯವೆಂದು ಶೃತಿಬ್ರಹ್ಮಪುರಸ್ತಾದೆನುತ್ತ ಸಾರುತ್ತಿದೆ ಜೀವಾ 5ಮನೆಮಾರು ಧನ ನಿನ್ನತನು ಮೊದಲಾದವುಇನಿತು ನಿತ್ಯವಲ್ಲ ಜೀವಾಘನ ವಿರತಿಯ ಮಾಡು ಮನದಲ್ಲಿ ಧ್ಯಾನಿಸುವಿನುತ ಚೈತನ್ಯವ ಜೀವಾ 6ಅನುದಿನ ನಿನ್ನ ನಿಜವ ನೀತಿಳಿದರೆಳ್ಳನಿತುಶೋಕಮೋಹವಿಲ್ಲ ಜೀವಾಸನುಮತಿುಂದ ಗೋಪಾಲಾರ್ಯನ ಸೇರಿಚಿನುಮಯನಾಗೆಲೊ ಜೀವಾ 7
--------------
ಗೋಪಾಲಾರ್ಯರು