ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತಿಗೆಟ್ಟೆ ಭವತಾಪವ್ಯಥೆಯಿಂದ ನಾನು ಸುತನರಿಕೆ ಹಿತದಿಂದ ಕೇಳು ಮಮಪಿತನೆ ಪ ವಿಧಿವಶದಿ ಸಿಲ್ಕಿ ನಾ ಉದಿಸಿ ಈ ಬುವಿಯೊಳಗೆ ಸದಮಲನೆ ತವಸ್ಮರಣವಿಧಿಯ ತಿಳಿಯದಲೆ ಉದಯದೇಳುತ ನಾನು ಅಧಮ ಉದರಕ್ಕಾಗಿ ವದನತೆರೆದನ್ಯರನು ಹುದುಗಿ ಬೇಡುತಲಿ 1 ಹಸಿತೃಷೆಯ ತಡೆಯದೆ ಪುಸಿಯಾಡಿ ದಿನಗಳೆದೆ ನಿಶೆಯೆಲ್ಲ ಸಂಸಾರವ್ಯಸನದೊಳು ಕಳೆದೆ ವಸನ ಒಡೆವೆಗೆ ಮೆಚ್ಚಿ ವಸುಧೆಯೊಳ್ತಿರುತಿರುಗಿ ಪುಸಿಯ ಮಾನವರನ್ನು ರಸನೆಯಿಂದ್ಹೊಗಳಿ 2 ವಾನರಗೆ ವಶನಾದಿ ದಾನವನ ರಕ್ಷಿಸಿದಿ ಮಾನವಗೆ ಆಳಾದಿ ದೀನದಯಾಸಿಂಧು ನೀನೆ ಗತಿಯೆನಗಿನ್ನು ಜ್ಞಾನಬೋಧಿಸಿ ಕಾಯೊ ಹೀನಭವ ಗೆಲಿಸಿ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು
ಹನುಮ ಮಧ್ವಾಧಿಪತೇ ನಮೋ ನಮೋ ಪ ಹನುಮ ಮಧ್ವಾಧಿಪತೇ ಘನಶ್ರೇ ಷ್ಠನುಪಮಮುನಿವರನೆನಿಸಿದ ಅ.ಪ ಉದ್ಧರಿಸೆಂದು ಮರೆಬಿದ್ದ ಭಕ್ತನಂ ಮುದ್ದಿಟ್ಟೆತ್ತೆ ನಿರ್ಧಾರದಭಯವಿತ್ತು ಪದ್ಮನಾಭ ನಿಂದುದ್ಧರಿಸಿದಿ ಪರಿ ಶುದ್ಧಮೂರುತಿ ಪ್ರಸಿದ್ಧನೆನಿಸಿದಂಥ 1 ಶಕ್ತಿಯಿತ್ತ ಮಹ ಮೌಕ್ತಿಕ ಮಾಲೆಯ ಸುತ್ತಿ ಶಿಲೆಯ ಮೇಲೆತ್ತಿ ಹೊಡೆದು ಘನ ಭಕ್ತಿತೋರಿ ಹರಿಚಿತ್ತ ತೃಪ್ತಿಬಡಿಸ ತ್ಯುತ್ತಮ ನಿಜಭೃತ್ಯನೆನಿಸಿದಂಥ 2 ಸುದತಿ ಸೀತೆ ತನ್ನ ಸದಯನ ನೆನೆಯಲು ಎದೆಸೀಳಿ ತೋರಿಸಿ ಸದಮಲನಂಘ್ರಿಯ ಸದಮಲಾಂಗಿ ವ್ರತ ಮುದದಿ ತೀರಿಸಿ ನಿಜ ಸದಮಲ ಭಕ್ತ ನೀನಹುದುಹುದೆನಿಸಿದ 3 ಶ್ರೀಕರನಪ್ಪಣೆ ಪಡೆದು ಅಸಮಬಲ ದೇಕ ಕಾಲದ್ಹಾರಿ ಹುಡುಕಿ ಕಾಶಿಯಿಂ ಏಕಾಗ್ರಚಿತ್ತದಿ ತಂದು ಲಿಂಗ ಮೂ ಲೋಕ ಮೋಹನನಿಂ ಲೋಕಪೂಜ್ಯೆನಿಸಿದ 4 ಮೀರಿದ ಗರುಡನಪಾರ ಗರುವಮಂ ಸೂರಗೈದು ದ್ವಾಪರ ಯುಗದಿಅ ಪಾರ ಮಹಿಮ ಶ್ರೀ ಧೀರ ಶ್ರೀರಾಮನ ಚಾರುಚರಣ ಕಂಡು ನಿರುತನೆನಿಸಿದಂಥ 5
--------------
ರಾಮದಾಸರು
ಹರಿಭಕುತಿಯುಳ್ಳವರ ಶರೀರವೆ ಕುರುಕ್ಷೇತ್ರ - ಇವರು |ನರರೆಂದು ಬಗೆವವರೆ ನರವಾಸಿಗಳು ಪ.ಸದಮಲನ ಧ್ಯಾನಿಸುವ ಹೃದಯ ಕಾಶೀಪುರವು |ಮಧುವೈರಿಗೊಲಿದ ಮನ ಮಣಿಕರ್ಣಿಕೆ ||ಪದುಮನಾಭನ ಪಾಡಿ ಪೊಗಳುವಾತನ ದಿವ್ಯ |ವದನವು ಅಯೋಧ್ಯೆ ಪುರವಾಗಿ ಇಹುದು 1ನರಹರಿಯ ನೀಕ್ಷಿಸುವ ನಯನ ದ್ವಾರಾವತಿಯು |ಹರಿಯ ನಿರ್ಮಾಲ್ಯ ವಾಸಿಪ ಮೂಗು ಮಥುರೆ ||ಕರುಣಾಕರನ ಕಥೆಯ ಕೇಳ್ವ ಕಿವಿ ಕೇದಾರ |ಸಿರಿಧರೆಗೆ ಎರಗುವಾ ಶಿರವೆ ಬದರಿ 2ಚಕ್ರಧರಗೆ ಪೋಪಚರಣ ಮಾಯಾವತಿ ತ್ರಿ - |ವಿಕ್ರಮನ ಪೂಜಿಸುವ ಕರಿವೆ ಕಂಚಿ ||ಅಕ್ರೂರಗೊಲಿದಸಿರಿ ಪುರಂದರವಿಠಲನಸತ್ಕøಪೆಯು ಉಳ್ಳವರ ಅಂಗಸಾಯುಜ್ಯವು 3
--------------
ಪುರಂದರದಾಸರು