ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂತರಂಗದ ಸುಖ ಹೇಳುವುದಲ್ಲಾ ಸಂತೋಷವೆಂಬುದು ಶಿವನೊಬ್ಬ ಬಲ್ಲ ಪ ಗುರುಕೊಟ್ಟ ಮಂತ್ರದ ಪರರ್ಯಾರು ಅರಿಯದಂದದಲಿ ಈ ಪ್ರಾಣ ಪರಮನೊಳಾಡುವುದು ಆತನ ದಿವ್ಯ ಚರಣನೋಡುವುದು ಆಂತರ್ಯದ ಸ್ವಾನುಭವ ಅರಿಯದ ಜನರಿಗೆ 1 ಧ್ಯಾನಿಸಿ ನೋಡಲು ದೃಢವಿಡಿದಾಡಲು ಜ್ಞಾನ ದೀಪದ ಜ್ಯೋತಿ ಗಗನ ವೇರಿದ ಪ್ರತಿ ಭಾನುವುದಿಸಿದಂದದಿ ಪ್ರಕಾಶಮಾನ ಸದಾನಂದದಿ ಅಂತರ್ಯದ ಸ್ವಾನುಭವ ಅರಿಯದ ಜನರಿಗೆ 2 ಮೂರ್ತಿ ಪರಮನಾಗಿಹ ಅರ್ಥಿ ಎರಕವಾಗಿಹ ಲಕ್ಷಾ ಎಣಿಕೆ ಇಲ್ಲದ ಮೋಕ್ಷಾ ಶರಧಿಯೊಳಾಡುವುದು ಶಕ್ತಿಯ ಮರ್ಮ ವರಕೃಪಮಾಡುವುದು ವಿಮಲಾನಂದ ಗುರುಕಟಾಕ್ಷದ ಬಗೆ ಅರಿಯದ ಜನರಿಗೆ 3
--------------
ಭಟಕಳ ಅಪ್ಪಯ್ಯ
ಅನ್ನಪೂರ್ಣೇಶ್ವರಿ ನಿನ್ನ ಪಾದಕೆ ಶರಣು | ಮನ್ನಿಸಿ ಕರುಣದಿ ಎನ್ನನುದ್ಧರಿಸವ್ವ ಪ ಮಾತೆ ನೀನೆನ್ನನು | ಪ್ರೀತಿಯೊಳ್ ಸಲಹವ್ವ || ದಾತೆಯೆ ಭವಭಯ (ದ) | ಭೀತಿಯೊಳೆನ್ನ ಪೊರೆ 1 ಸರಸಿಜಾಂಬಕಿ ಯೆನ್ನ | (ಸ) ರಸೆ (ಸುಗುಣೆ) ರನ್ನೆ | ಭಾರ | ಗಿರಿಜೆ ನಿನಗಪಿ9ಸಿದೆ2 ಭಾವಭಕ್ತಿಯೊಳ್ನಿನ್ನ | ಸೇವೆಯೊಳಿರುವರನ್ನೆ || ದೇವ ವಿಶ್ವೇಶ್ವರ ಪ್ರಿಯೆ | ದೇವಿ ಸಂತಸದಿ ಕಾಯೆ 3 ಸಾಧುಸಂತರ ಸೇವೆ | ಎಂದೆಂದಿಗಾದರು || ಕುಂದದೆ ಸಾಗುವರೆ | ಕಂದನಿಷ್ಟವ ಸಲಿಸೆ 4 ವಾಸುದೇವನ ಭಗಿನಿ | ಲೇಸಿನೊಳಗ್ರಜನ || ದಾಸನಾದೆನ್ನ (ವ) ರೊಳ್ | ಸಾಸಿ (ರ) ಸೇವೆಗೈಸೆ 5 ಭಗವತ್ಸೇವೆಯೊಳೆನ್ನ | ಸುಗುಣದ ಪರಂಪರೆ || ಅಗಣಿತ ವರವೀಯೆ 6 ತಾಯೆನ್ನಿಷ್ಟವನು ಪ್ರೀಯದಿಂ ಸಲಿಸುವ || ರಾಯ ಶ್ರೀಕೃಷ್ಣಾನುಜೆ | ಕಾಯೆ ಸದಾನಂದದೊಳು7
--------------
ಸದಾನಂದರು
ತನ್ನ ತಾ ತಿಳಿದು | ಧನ್ಯನಾಗೊ ಬಗೆ ಇದು | ಖಿನ್ನವಳಿದು ಪೂರ್ಣ ಬ್ರಹ್ಮವನ್ನು ಕಾಂಬುದು ಪ ತತ್ತ್ವ ಶಾಸ್ತ್ರವನ್ನು ಓದಿ | ಭಕ್ತಿಯಿಂದ ಮನನ ಮಾಡಿ | ಯುಕ್ತಿ ಭಾವವೆಲ್ಲ ಕಳೆದು ಮುಕ್ತನಾಗುತಾ || ನಿತ್ಯವಾದ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು | ಸತ್ಯ ಶರಣರಡಿಯ ಪಿಡಿದು ಚಿತ್ತದಲ್ಲಿ ನಲಿವುದು 1 ಆಶೆ ಮೂರರಲ್ಲಿ ಇನ್ನು | ಬೇಸರಾಗಿ ವಿಷಯದ | ವಾಸನೆಗಳ ಜರಿದು ಪಾಶ ಕ್ಲೇಶವಳಿಯುತ || ನಾಸಿಕಾಗ್ರದಲ್ಲಿ ಮನವ | ಸೂಸದಂತೆ ನಿಲಿಸಿ ಜಗ- | ದೀಶನಾಟವನ್ನು ನೋಡಿ ನಾದ ಘೋಷ ಕೇಳ್ವುದು 2 ಹಿಂದೆ ಒಂದು ನೆನೆಸದಿನ್ನು | ಮುಂದೆ ಉಳಿದ ಕರ್ಮವನ್ನು | ಬಂದುದೆಲ್ಲ ಉಂಡು ಗೆದ್ದು ಹರುಷದಿಂದಲಿ || ತಂದೆ ಭವತಾರಕನ | ಹೊಂದಿ ಸದಾನಂದದಿಂದ | ಮುಂದೆ ಭವಕೆ ಬೀಳದಂತೆ ಛಂದದಿಂದ ನಲಿವುದು 3
--------------
ಭಾವತರಕರು
ಪಾದಗಳಂ ನಂಬಿದೆನಾಂ ಶ್ರೀಧರಾಚ್ಯುತಗೋವಿಂದ ಪ ಮಧ್ಯೆದೊಳಾದರದಿ ಕುಣಿಯುತಿರುವಅ.ಪ ಅಳೆದು ಮೂರಡಿಯಿಂದ ಜಗವ ಬಲಿಯ ಪಾತಾಳಕ್ಕೆ ತುಳಿದು ಲಲನೆಗಂಗೆಯ ಪೆತ್ತು ಮಂಗಳಗಳನು ಭಕ್ತರಿಗೀವ ಶುಭದಾ 1 ಧನುವ ಮೆಟ್ಟಿಮುರಿದು ಮೊಳಲಸದಾನಂದದೊಳಿರುವ 2 ಗರಡುದೇವ ನಿತ್ಯಪೊತ್ತ ಸಿರಿಯು ಸದಾ ಒತ್ತುತಿರುವ ಪರಮಪಾವನ ಹೆಜಾ ಜಿಯ ವರದನೆನುತ ನಾರದನೆನೆವ 3
--------------
ಶಾಮಶರ್ಮರು
ಭವ ದೇವಿ ಸಲಹೆಮ್ಮನು ಪ ಸೇವೆ ನಿಜಸುಖವೀ ಮಹೇಶ್ವರಿ ಅ.ಪ ದ್ವಂದ್ವಕಾನತರಾಗುತಿರುವೆವು 1 ಪರಮೇಷ್ಠಿಯವತಾರಿಯು || ಧರರುರಗ ಗರುಡಾದಿ ತುಂಬುರ ನಾರದಾದ್ಯವತಾರ ರೂಪಿಣಿ 2 ತರಳರಿಷ್ಟಗಳ ನೀಡೆ || ಸ್ಥಿರ ಸದಾನಂದದೊಳು ಪಾಲಿಸೆ 3
--------------
ಸದಾನಂದರು
ಮಣ್ಣುಪಾಲಾದ ಮೇಲ್ ನಿನ್ನಿಚ್ಛೆಯಿಹುದೇ ಪ ಮಾಯಾ ಬಲೆಯ ಹೋಗಾಡೊ 1 ನೆಲೆಯನರಿತು ಸೇರೋ ಮಾಧವನೂರಾ 2 ದೊಡೆಯ ಶ್ರೀ ಗುರು ಸದಾನಂದದಿಂದಿಹುದೂ 3
--------------
ಸದಾನಂದರು
ಮನಮುಟ್ಟಿ ಮಾಡುವದೆ ಭಕ್ತಿಗಳು ಶ್ರುತದೃಷ್ಟನು ಮನದಿಂದ ಮಾಡುವ ನೇಮನಿತ್ಯಗಳು ಮಹಾ ಧರ್ಮಶಾಸ್ತ್ರಗಳು ಯತಿ ಕುಲದೀಪಗಳು 1 ತ್ರಿವೇಣಿ ಸಂಗಮ ಸ್ನಾನಗಳು ಮಹಾದಿವ್ಯ ಮಡಿಯಗಳು ಇಟ್ಟಿಹ ದ್ವಾದಶ ನಾಮಗಳು ಮನಗಂಡಿಹದೇ ಶ್ರೀಮುದ್ರೆಗಳು 2 ಸ್ಮರಣೆಯೊಳಿಹುದೆ ಸಂಧ್ಯಾನಗಳು ಜಪಸರ ಮಾಲೆಗಳು ಜಪತಪ ಧ್ಯಾನವೆ ಮೌನಗಳು ನಿರ್ಧಾರದಿ ಗುರುಪಾದ ನಿಶ್ಚೈಸಿಹ ವ್ರತ ಆಚಾರವೇ ನಿಷ್ಠೆಗಳು 3 ಮಾಡುವುದೇ ದೇವಪೂಜೆಗಳು ಅಂತ:ಕರಣದಿ ಗುರುಚರಣದ ಅಭಿಷೇಕಜ್ಞಾನ ಭಾಗೀರಥಿ ತೀರ್ಥಗಳು ಚಿತ್ತಚಿಂತನದಿ ದಿವ್ಯ ವಸ್ತ್ರಗಳು ಪರಿಮಳಪುಷ್ಪಗಳು 4 ಅನಿಮಿಷ ನೇತ್ರದಿ ನೋಡುವ ಘನ ಚಿತ್ಪ್ರಕಾಶವೆ ಸದಾನಂದದ ಮೊದಲಾದ ಸತ್ವರಜತಮ ಏಕಾರ್ತಿಗಳು ಸದ್ಭಾವನಿ ತಾಂಬೂಲಗಳಿಂದಲಿ ರತಿಮನ ಘನ ಮಂಗಳಾರ್ಚನಿ ಪಂಚ ಪ್ರಕಾಶಗಳು 5 ಶ್ರೀಗುರು ಸೇವೆ ಸತ್ಕಾರಗಳು ಜಯ ಲಕ್ಷ್ಮಿಯ ಷೋಡಶ ಉಪಚಾರಗಳಿಂದಲಿ ಮಹಾದಿವ್ಯ ಪೂಜೆಗಳು ತಲ್ಲೀನವು ಅಗಿಹ ಗುರುಪಾದದಿ ಪ್ರದಕ್ಷಿಣೆವೆ ಗುರುನಾಮವೇ ಸದ್ಗತಿ ಮುಕ್ತಿಗಳು 6 ಆತ್ಮಾನುಭವ ಗುರುದಾಸರಿಗಲ್ಲದೆ ಬಲ್ಲವೇನು ಪಶುಪ್ರಾಣಿಗಳು ಸಾಕ್ಷಾತ್ಕಾರಗಳು ಭಾಸ್ಕರ ಸ್ವಾಮಿಗಳು ತ್ರಾಹಿ ಜೀವನಮುಕ್ತಿಗಳು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿಮಲಮತಿಯ ಪಾಲಿಸಭವ ಅಮಿತದಯಾರ್ಣವ ದೇವ ಪ ದೀನಬಂಧು ಜ್ಞಾನಸಿಂಧು ದೀನನೊಳು ನೀನೆ ನಿಂದು ಹೀನಮತಿಯ ತರಿದು ತವ ಧ್ಯಾನ ಸದಾನಂದದಿಡುವ 1 ಆಶಾಪಾಶಗಳನು ತುಳಿದು ದೋಷರಾಸಿಗಳನು ಕಡಿದು ಶ್ರೀಶ ನಿಮ್ಮ ಸಾಸಿರನಾಮವ ಧ್ಯಾಸಕಿತ್ತು ಜ್ಞಾನ ಕೊಡುವ 2 ಸತ್ಯ ಶ್ರೀರಾಮ ನಿಮ್ಮ ಪಾದ ಭಕ್ತಿಯಿಂದ ಬೇಡ್ವೆ ಸದಾ ಚಿತ್ತ ಶುದ್ಧಿಗೈದು ಎನಗಾ ನಿತ್ಯ ಮುಕ್ತಿ ನೀಡಿ ಬೇಗ 3
--------------
ರಾಮದಾಸರು