ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೂವ ಕೊಡೆ ದೇವಿ ಹೂವ ಕೊಡೆಯಾವಾಗಲೂ ನಿಮ್ಮ ಸಿರಿಮುಡಿಯೊಳಗಿರ್ಪ ಪ ವರಮಹಾಲಕ್ಷ್ಮಿ ನಿಮ್ಮ ಸಿರಿಮುಡಿಯನೆ ಕಟ್ಟಿಪರಿ ಪರಿ ಧೂಪ ಧೂಮಗಳನಿಕ್ಕಿಪರಿಮಳಿಸುವ ಸಂಪಿಗೆಯ ಪೂಸರವ ಸಿಂ-ಗರಿಸಿರಲಾಮಾಳಿಕೆಯೊಳು ಸಂಪಿಗೆ ಹೂವ 1 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸರಸಿಜ ಮೊದಲಾದ ಕುಸುಮದಿಂದಪರಿಮಳಿಸುವ ನಿಮ್ಮ ಸಿರಿಮುಡಿಯೊಳಗಿರ್ಪಅರಳಿದ ಮಲ್ಲಿಗೆ ಹೂವ ಕಂಡೆ ಹೂವ 2 ವ್ಯೋಮಗಂಗೆಯೊಳಿಂದ ಹೇಮಕಾಮರಸವಕಾಮಿನಿಯರು ಕೊಯ್‍ತಂದದನುಶ್ರೀ ಮಹಾದೇವಿ ನಿಮ್ಮ ತುರುಬಿಗೆ ಮುಡಿಸಿರ-ಲಾ ಮಹಾಕುಸುಮ ಮಾಲಿಕೆಯೊಳು ತಾವರೆ ಹೂವ 3 ಮುತ್ತಿನ ಲಹರಿಯ ರತ್ನದ ರಾಗಟೆಯಸುತ್ತ ಮುತ್ತಲೂ ರಾರಾಜಿಸುವಪುತ್ಥಳಿಯ ಚಿನ್ನದಂತೆ ಘಮಘಮಿಸುವಉತ್ತಮವಾದ ಸುವರ್ಣದ ಕೇದಗೆ ಹೂವ 4 ಜಾತಿ ರತ್ನದ ನಡುವೆ ಜ್ಯೋತಿಯ ತೆರನಂತೆನೂತನವೆನಿಸಿ ಪ್ರಜ್ವಲಿಸುತಿಹಶಾತಕುಂಭದ ಚೌರಿಯ ಮೇಲೆ ಮುಡಿಸಿದಜಾತಿಮಲ್ಲಿಗೆ ಸಂಪಿಗೆ ಸೇವಂತಿಗೆ ಹೂವ 5 ಇಂದೀವರದಳನಯನೆ ಶುಭಪ್ರದೆಇಂದು ನಿಭಾನನೆ ಹೂವ ಕೊಡೆಮಂದಗಮನೆ ನಿಮ್ಮ ತುರುಬಿನೊಳೊಪ್ಪುವಮಂದಾರದ ಮೋಹನ ಮಾಲಿಕೆಯೆಂಬ ಹೂವ 6 ಚಂದ್ರಗಾವಿಯ ಸೀರೆ ಚೆಲುವ ಮುತ್ತಿನಸರದಿಂದಲೆಸೆವ ದೇವಿಹೂವ ಕೊಡೆಮುಂದಲೆ ಮುತ್ತಿನ ಸರದ ಮೇಲೊಪ್ಪುವಬಂಧುರಪೂಗಪುನ್ನಾಗ ಪಾರಿಜಾತದ ಹೂವ 7 ದೇವಿ ನಿಮ್ಮನು ಪೂಜೆಗೈದು ಮೆಚ್ಚಿಸಬಲ್ಲನಾವನೀ ಧರೆಯೊಳುಹೂವ ಕೊಡೆಪಾವನಾತ್ಮಕಿಯ ಪರಾಕ ಮಾಡದೆ ವರ-ವೀವ ಸಮಯವಿದು ಹೂವ ಕೊಡೆ ಹೂವ 8 ಮುತ್ತೈದೆತನವನು ನಿತ್ಯ ಸೌಭಾಗ್ಯವಉತ್ತಮ ಧನಕನಕಾಂಬರವಪುತ್ರ ಸಂತಾನವ ಕೊಡುವೆನೆನುತ ಕರ-ವೆತ್ತಿ ಅಭಯವಿತ್ತು ಹೂವ ಕೊಡೆ ಹೂವ 9 ಎಂದೆಂದೂ ಈ ಮನೆಗೆ ಕುಂದದ ಭಾಗ್ಯವಚಂದವಾಗಿಹ ಛತ್ರಚಾಮರವಚಂದ್ರ ಸೂರ್ಯರ ಪೋಲ್ವ ನಂದನರನುದಯ-ದಿಂದಲಿ ಕೊಟ್ಟು ರಕ್ಷಿಪನೆಂದು ಸೂಡಿದ ಹೂವ10 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮ ಪಟ್ಟದ ರಾಣಿ ಪಾರ್ವತಿ ನಿಮ್ಮಯಸಿರಿಮುಡಿಯೊಳಗಿರ್ಪ ಹೂವ ಕೊಡೆ ಹೂವ 11
--------------
ಕೆಳದಿ ವೆಂಕಣ್ಣ ಕವಿ
ಬಾಲೆಯರೆಲ್ಲರು ಬನ್ನಿರೆ ರನ್ನದ ಕೋಲ್ಗಳನೀವ್ ಪಿಡಿದು ಪ. ಮೇಲಹ ಪದಮಂ ಪಾಡುವ ಕೋಲಾಹಲ ಸಮಯವಿದು ಅ.ಪ. ಶರಧಿತನೂಭವೆ ನೀ ಬಾ ಬಾ ನೆರೆಮೆರೆವೀ ಶರದುತ್ಸಹಮಂ ಅರಿಪುತು ಜಗಕಿಂದು 1 ನಿಗ್ರಹಕಾರ್ಯದಿಂದುಗ್ರನಾಗಿಹ ಭರ್ಗನಕೆಲಕೈತಂದು ವ್ಯಗ್ರತೆಯಿಳಿಸಿ ಪೊರೆ ಶೀಘ್ರದಿ ಗಿರಿಸುತೆ ಸಮಗ್ರ ಭಾರತಮಿಂದು2 ಸರಸ್ವತಿ ಬಾ ನಿನ್ನರಸನ ಕೆಲಸಾರ್ ಧರೆಯೊಳ್ ಸುಪ್ರಜರಂ ನೆರೆ ಸೃಜಿಸುವ ವೋಲ್ ಅರುಹು ವಿಚಕ್ಷಣೆ ಅಸುರರ ಪಡೆಯದಿರೆನ್ನು3 ಶರದಿತನೂಭವೆ ಅರಸಗೆ ನೀನೊರೆ ಪರಿಪರಿ ವಿಧದಿಂದಂ ಕೊರತೆಯದಿಲ್ಲದೆ ಪೊರೆ ಜಗಮೆನ್ನುತ ಪೊರೆವೆವು ಛಲದಿಂದಂ4 ಭಾರತ ಜನನಿಯ ಭಾಗ್ಯೋದಯಮಂ ತೋರಿರೆ ಶಕ್ತಿತ್ರಯರೆ ಭಾರತವೀರರಿಗಾರೋಗ್ಯೈ ಶ್ವರ್ಯಂಗಳ ಕರುಣಿಸಿರೇ 5 ರಾಷ್ಟ್ರಪ್ರಮುಖರ ಕಷ್ಟಂಗಳ ನಾ ವೆಷ್ಟೆಂದೊರೆದಪೆವೇ ಸೃಷ್ಟಿ ಸ್ಥಿತಿ ಲಯಕರ್ತರು ನೀವಿರೆ ದೃಷ್ಟಿಸಿರೀಗೆನ್ನುವೆವೆ 6 ಕನ್ನಡತಾಯಿಯ ಕನ್ನೆಯರಾವು ಉನ್ನತಿಯನ್ನೆಳಸುವೆವು ಮನ್ನೆಯರ್ ನೀವೆಮ್ಮೋಳಿನ್ನಾವೇಶಿಸೆ ಧನ್ಯರು ಮಾನ್ಯರು ನಾವಹೆವು7 ಆರ್ಯಮಹಿಳೆಯರೆನೆ ವೀರಮಾತೆಯರೆನೆ ಧಾರುಣಿಯೊಳಗೆಮ್ಮಂ ಧೈರ್ಯಸ್ಥೈರ್ಯೌದಾರ್ಯ ಗುಣಂಗಳ ಪೂರಿತರಪ್ಪಂತೊಸೆವುದೆಮಗಿನ್ನು 8 ಒಲಿದೆಮ್ಮನು ನೀವ್ ನೆಲೆಸಿರೆ ನಲವಿಂ ಬಲಗೊಳ್ಳುತ್ತಾನವರತಂ ಕಲಿಯುಗಮಲ್ಲಿದು ಕೃತಯುಗಮೆನುವೋಲ್ ಬೆಳಗುವೆವೆಲ್ಲೆಡೆಯೋಳ್9 ಪರಿ ಭಾವಿಸಿ ಮನ್ನಿಸಿರೆ ಶ್ರೀವರ ಶ್ರೀಶೇಷಗಿರೀವರ ನಾವಗ ಮೋವುಗೆ ಕರುಣಿಸಿರೆ 10
--------------
ನಂಜನಗೂಡು ತಿರುಮಲಾಂಬಾ
ಸುಧೆಯನು ಸುರಿಸುವ ಸಮಯವಿದುಸದಯಾಕರ ಶ್ರೀಯಾದವ ಕುಲಪತಿ ಪ. ಇಂದಿರೆ ರಮಣನೇ 1 ಬಾಲೆರ ಮಧ್ಯದಿ ಕೋಲನೆ ಹಾಕುತಲೀಲೆಯ ತೋರಿದ ಬಾಲಗೋಪಾಲನೆ2 ಶಿರಿಯರಸ ತಂದೆವರದವಿಠಲನೆಚರಣಕಮಲ ತೋರೋ ಹೃದಯ ಮಂದಿರದಲಿ 3
--------------
ಸಿರಿಗುರುತಂದೆವರದವಿಠಲರು
ಸಂಜೆಯೊಳಿಂತು ಬರುವರೆ | ಶಬ್ದ ಹೊರುವರೆ | ಜನಕಂಜದಲಿಹರೆ ಪಸಂಧ್ಯಾಕಾಲವು ಗೋವು ಬಾರವೆ,ವತ್ಸಬಳಲವೆ, ಹೀಗೆ ಬರುವುದು ಥರವೆ |ಅಂದಾರು ಅತ್ತಿ ಅತ್ತಿಗೆಯರು, ಇಷ್ಟು ಸಹಿಸಾರು, ಪತಿಗಳು ಸುಮ್ಮನಿರರು ||ಕಂದಗಳೆರೆವ ಸಮಯವಿದು, ಬಿಟ್ಟು ಬರುವುದು, ಚರ್ಯೆ ನೋಡಲ್ಕರಿದು |ಬಂದೊಂಧೆಳಲೆ ಮನೆಯೊಳು ದೀಪ, ಹಚ್ಚದಿರೆ ಪಾಪ, ಮಾಡಬೇಡಿರಿ ಕೋಪ 1ಗಂಡನೇ ದೈವ ಹೆಂಗಸರಿಗೆ, ತಿಳಿಯದೆ, ಹೀಗೆ ಬರುವರೆ ಯನ್ನ ಬಳಿಗೆ |ಬಂಡುಇದೇನಿರೆ ಬತ್ತಲೆ, ಬಂದಿರೆಲ್ಲೆಲೆ, ಆಭರಣವೆಲ್ಲಿವಲ್ಲೆ ||ಕಂಡ ಕಂಡಲ್ಲೆ ಹುಡುಕುವರು, ನಿಮ್ಮನ್ನಾಳ್ವರು, ಕಾಣದಲೆ ಮಿಡುಕುವರು |ತುಂಟಾಟ ಕಲಿಯಬಾರದು ಇಷ್ಟು, ಪೇಳುವಿನೆ ಒಟ್ಟು, ಕೇಳಿರೆ ಮನವಿಟ್ಟು 2ಆಯಿತು ನಾ ಗಂಡನಾದೇನೆ, ತಿಳಿಯದರೇನೆ, ಕಂಡವರು ನಗರೇನೆ |ಕಾಯೋ ಪ್ರಾಣೇಶ ವಿಠಲ ಎಂದು, ಯನ್ನ ಪದರೆಂದು, ನಮಸ್ಕರಿಸಿರೆ ಬಂದು ||ಈಯಾಟ ಸಲ್ಲ, ನಿಮ್ಮನೆಗೀಗ, ಸಾಗಿರೆ ಬೇಗ, ಪತಿಗಳ ಕೂಡಭೋಗ|ಆಯಾಸವಿಲ್ಲದೆ ಮಾಡಿರೆ, ಮಾತು ಕೇಳಿರೆ, ಭ್ರಾಂತರಾಗಬೇಡಿರೆ 3
--------------
ಪ್ರಾಣೇಶದಾಸರು