ಒಟ್ಟು 17 ಕಡೆಗಳಲ್ಲಿ , 10 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಏನು ಸೇವಿಸಿದೆ ಗುರು ಯೆಲೊ ಮಾರುತಿ | ಭಾನು ವಂಶೋತ್ತಮನೆ ನಿರುತ ಧಾರ್ಮಿಕನೆಂದು ಪ ಉದಧಿ | ಭೀತಿ ಇಲ್ಲದೆ ಹಾರಿ ಲಂಕಾಪುರವ ದಹಿಸಿ | ಸೀತೆ ವಾರ್ತೆಯ ತÀಂದು ಪೇಳಿದಕೆ ಸುಫಲಾ 1 ವನಧಿ ಭೂತಳವ ತಿರುಗಿ ಪ್ರತಾಪದಿಂದ | ಗೋತುರೋನ್ನತ ತಂದು ತಡಿಯದೆ ಪ್ರಖ್ಯಾತದಿ | ಸೇತುವಿಯ ಕಟ್ಟಿ ಕುಣಿದಾಡಿದದುಕೇನು ಫಲಾ 2 ಅಂದು ವಿಂಶತಿ ಹಸ್ತ ರಣದೊಳಗೆ ರಥವೇರಿ | ಬಂದಿರಲು ನೋಡಿ ಈ ಧನುರ್ಧಾರಿಯಾ ನಿಂದು ಚಾಲ್ವರಿದು ಬೊಬ್ಬಿರಿದದುಕ್ಕೇನು ಫಲಾ 3 ಒಂದೇ ಹಾರಿಕಿಯಲಿ ಜಿಗಿದು ಕುಪ್ಪಳಿಸಿ ನೀ | ಗಂಧಮಾದನಗಿರಿಯ ಕಿತ್ತು ತಂದು | ಅಂದದಲಿ ದೇವತತಿ ಕೊಂಡಾಡುತಿರೆ ಕಪಿ | ವೃಂದವೆಬ್ಬಿಸಿ ಖಳರ ಮಡುಹಿದದುಕ್ಕೇನು ಫಲಾ 4 ಅಪರಿಮಿತ ಉಪಕಾರ ಮಾಡಿದಲ್ಲದೆ ನಿನ್ನ | ಕೌಪೀನ ಬಿಡಿಸಲಿಲ್ಲಾ | ವನಧಿ ನಿಜವೆಂದು ತುತಿಸಿದದುಕ್ಕೇನು ಫಲಾ 5
--------------
ವಿಜಯದಾಸ
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು
ಪಾಪೋಸು ಹೋದುವಲ್ಲಾ ಪ ಅಪಾರ ಜನ್ಮದಿಂದ ಆರ್ಜನ ಮಾಡಿದ ಅ.ಪ. ಉರುಗಾದ್ರಿಯಲ್ಲಿ ಸ್ವಾಮಿ ಪುಷ್ಕರಣಿ ಮೊದಲಾದಪರಿಪರಿ ತೀರ್ಥ ಸ್ನಾನಗಳ ಮಾಡಿಹರಿದಾಸರ ಕೂಡ ಶ್ರೀನಿವಾಸ ಮೂರ್ತಿದರುಶನದಲಿ ಮೈಮರೆತು ಇದ್ದೆನು ಎನ್ನ 1 ಪರಮ ಭಾಗವತರು ಹರಿಕಥೆ ಹೇಳಲುಪರಮ ಹರ್ಷದಿಂದ ಕೇಳುತಿದ್ದೆಪರಮ ಪಾಪಿಷ್ಠರ ಪಾಲಾಗಿ ಹೋದಾವುಪರಮಾತ್ಮನ ಚಿತ್ತಕೆ ಬಂದಿತೀಗೆನ್ನ 2 ಮಾಯಿ ಒಲಿದು ಎನಗೆ ಕೊಂಡು ಕೊಟ್ಟಿದ್ದಳುದಾಯಿಗಾರರು ನೋಡಿ ಸಹಿಸಲಿಲ್ಲಾಮಾಯಾರಮಣ ನಮ್ಮ ಮೋಹನ್ನ ವಿಠಲನ್ನಮಾಯದಿಂದಲಿ ಮಟ್ಟವಾಯಿತು ಎನ್ನ 3
--------------
ಮೋಹನದಾಸರು
ಭವಸಾಗರ ದಾಟುವ ಬಗೆ ಪೇಳಯ್ಯ ಭವನಂಗಳಿಗೊಡೆಯ ಭವಸಾಗರ ದಾಟುವ ಬಗೆ ಪೇಳಯ್ಯಾ ಪ ಕ್ಷಿತಿಯೊಳು ದಾನವರತಿ ಪೆರ್ಚಿಹರು ಮಿತಿಮೀರಿ ಮೆರೆವೋರು ಕ್ಷಿತಿಪತಿ ನಿನ್ನನೆ ಮರೆತಿಹರು ಶ್ರುತಿಗಳ ಕಾಡ್ವರು ಸತಿ ಮಾತೆಯರಿಯರು ಧರ್ಮವೆನುತಿಹರು1 ಹಿಂದಿನ ಜನ್ಮದಿ ಕಲಿಶೇವಕರು ನಿಂದಕರುನ್ಮತ್ತರು ಹೊಂದೀ ದ್ವಿಜ ಜನ್ಮವ ದ್ವಿಜರಿಗಸುರರು ಕುಂದದೆ ಬೇಡಿಪರು ತಂದೆ ತವದಾಸರ ನೆರೆ ದೂಷಿಪರು ಕುಂದದೆ ಪೋಲಿಪರು ಹೊಂದಿಸದೀರೆನಗೆಂದಿಗೆ ಖಳರನು 2 ನರಜನ್ಮದಿ ಯಾತ್ರೆಯ ಚರಿಸಲಿಲ್ಲಾ ವರವ್ರತಗಳೆ ಇಲ್ಲಾ ಹರಿಪಾದತೀರ್ಥದ ಪಾನಗಳಿಲ್ಲಾ ಹರಿಪೂಜೆ ಮೊದಲಿಲ್ಲಾ ವರತೀರ್ಥದೆಂದಿಗೂ ಮೀಯಲಿಲ್ಲ ಹರಿಕೀರ್ತನವಿಲ್ಲಾ ನರಸಿಂಹವಿಠ್ಠಲ 3
--------------
ನರಸಿಂಹವಿಠಲರು
ಮಂದಮತಿ ನಾನಯ್ಯ ಮಂಗಳಾಂಗಾ ಒಂದಾದರೂ ಗತಿ ಧರ್ಮ ಚಿಂತಿಸಲಿಲ್ಲಾ ಪ ಜಪತಪಗಳರಿಯೆ ಉಪವಾಸಗಳರಿಯೆ ಕೃಪೆ ಮಾಡಲರಿಯೇ ಪರಿಜನಗಳಲ್ಲಿ ಕುಪಿತವನು ಬಿಡಲರಿಯೆ ಅಪರಿಮಿತವಾಗಿದ್ದ ಅಪರಾಧಗಳ ಮಾಡಿ ತಪಿಸುವೆನು ಭವದೊಳಗೆ 1 ಯಾತ್ರೆ ಮಾಡಲರಿಯೆ ತೀರ್ಥ ಮೀಯಲರಿಯೆ ಗಾತ್ರದಂಡಣಿಯ ಮಾಡಲರಿಯೆ ಗಾತ್ರ ಲಘು ನೋಡಿ ಸ ತ್ಪಾತ್ರರನು ಭಜಿಸದೆ ವ್ಯರ್ಥ ಕಾಲವ ಕಳೆವ2 ಅನ್ನದಾನವರಿಯೆ ಮನ್ನಣೆ ಮಾಡಲರಿಯೆ ಚನ್ನಾಗಿ ಬಂಧುಗಳು ಪೊರಿಯಲರಿಯೆ ಎನ್ನ ಮನದೊಡಿಯ ಶ್ರೀ ವಿಜಯವಿಠ್ಠಲರೇಯಾ ನಿನ್ನ ಭಕುತಿ ಒಮ್ಮೆ ಪಡಿಯಲರಿಯೆ 3
--------------
ವಿಜಯದಾಸ
ವ್ಯಗ್ರಬುದ್ಧಿಯು ನಿನಗೆ ಶ್ರೀಹರಿಯೆ ಸುಗ್ರಾಸನವು ನನಗೆ ಅಗ್ರದೈವರು ನೀನೇ ಗತಿಯೊ ಉಗ್ರತಪದಲಿ ಭಜಿಸುವಾತ್ಮಗೆ ಉಗ್ರರೂಪವ ತೋರಿ ವಿಧವಿಧಾ- ನುಗ್ರಹಿಪೆ ಅಮೃತಾನ್ನ ಭೋಜನ ಪ ಜನಿಸಲಮೃತ WಟÀವು ಸಿಂಧುವಿನೊಳು ವನಜನಾಭನೆ ವಂಚಿಸಿ ದನುಜ ಕಣಕದು ಇಲ್ಲದಾಗಿ ಅನುಮಿಷರಿಗತ್ಯಂತಮಿಕ್ಕೆ ಘನಹರುಷ ತೋರಿದೆಯು ಸುರರಿಗೆ ನಿನಗೆ ಮೆಲ್ಲಲು ಇರಿಸಲಿಲ್ಲಾ 1 ಧೀರ ದೂರ್ವಾಸ ಮುನಿ ಶಿಷ್ಯರ್ವೆರಸಿ ಹೋರಿದಾಹಾರಕ್ಕಾಗಿ ನೀರಜಾಕ್ಷಿಯು ಘೋರ ಬಂತೆಂದಾ ರಾತ್ರಿಯಲಿ ನೆನೆಯೆ ನಿನ್ನನು ಆ ರಭಸದೊಳು ಬಹುನಿಮಿಷÀದಿ ಸೂರಿ ಮಾಡ್ದೆಯೋ ಇಷ್ಟು ಭೋಜನಾ 2 ಸಖ ಸುದಾಮನು ಕಾಣಲು ಶ್ರೀಹರಿಯೆ ಭಕುತಿ ನೋಡಿ ಮೆಚ್ಚಿದಿ ಮುಕುತಿದಾಯಕ ಪರಮ ಪುರುಷನೆ ಭಕುತಿ ಭೋಜನವಿತ್ತೆನಗೆ ಸದಾ ಪ್ರಕಟ ನರಸಿಂಹವಿಠಲನೆ ಬಲು ನಿಕಟಮನ ಕೊಡು ನಿನ್ನ ಭಜಿಸುವಾ 3
--------------
ನರಸಿಂಹವಿಠಲರು
ಹದಿನಾಲ್ಕು ಲೋಕವನಾಳುವ ತಂದೆಗೆ | ಮುದದಿಂದ ನಾನೊಬ್ಬ ಭಾರವಾದೆನೆ ಪ ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ || ಭರದಿಂದ ಪೋಗಿ ಚೆನ್ನಾಂತು ಪೊತ್ತೆ || ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು | ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ 1 ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ | ಬೆರಳಲಿ ಧರಿಸಿ ಕಾಯ್ದು ನಿಜದೆ || ವರಮುನಿ ಪಸವನು ಬೇಡಲಾಗಿ ಬೆದರಿ ನರ- | ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ 2 ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ | ಸಲಹಬೇಕೆಂದು ಬೇಸರಿಸಲಿಲ್ಲಾ || ಸುಲಭದಲಿ ಶೇಷಾಚಲನಾಗಿಪ್ಪ | ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ 3
--------------
ವಿಜಯದಾಸ
ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1 ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2 ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3
--------------
ಗುರುಗೋವಿಂದವಿಠಲರು
ಹ್ಯಾಂಗೆ ನಿಮ್ಮ ಚರಣಾ | ಕಾಂಬೆನೊಯೋಗಿ ಜನರ ಶರಣಾ ಪ ನಾಗಶಯನ ಭವಸಾಗರ ಮಮತೆಯನೀಗಿ ನಿರುತ ಅನುರಾಗದಿಂದ ಪೊರೆ ಅ.ಪ. ವ್ಯರ್ಥವಾಯಿತಲ್ಲಾ | ಜನ್ಮವು | ಸಾರ್ಥಕಾಗಲಿಲ್ಲಾಮುಕ್ತಿ ಬಯಸಲಿಲ್ಲಾ | ಜ್ಞಾನ ವಿ | ರಕ್ತಿಯು ಮೊದಲಿಲ್ಲಎತ್ತ ತಿಳಿಯದೇ ಸುತ್ತಿ ಭವದೊಳುನ್ಮತ್ತ ನಡತೆಯಲಿ ಹೊತ್ತು ಕಳೆದ ಪೊರೆ 1 ಮಾಯ ಬಿಡದು ಹರಿಯೇ | ಮುಂದೆ ಉಪಾಯವೇನು ದೊರೆಯೇ ||ಧೇಯ ನಿಮ್ಮನು ಮರೆಯೇ | ಅನ್ಯ ಸಹಾಯವು ನಾನರಿಯೇ ||ಕಾಯಜ ಪಿತ ಕಮಲಾಯತ ಲೋಚನಮಾಯವ ಬಿಡಿಸಯ್ಯ ನ್ಯಾಯದಿಂದ ಹರಿ 2 ವಾಕು ಪಾಲಿಸೊ ಹರೆ 3 ಮಲ್ಲಮರ್ದನ ಕೃಷ್ಣ 4 ವ್ಯಾಸವಿಠಲರಾಯಾ | ಮನದಭಿಲಾಷೆ ಸಲ್ಲಿಸಯ್ಯಾ ||ದಾಸನೆಂದು ಕಯ್ಯಾ | ಪಿಡಿದುಪೋಷಿಸುವುದು ಪ್ರೀಯಾ ||ಶ್ರೀಶನೆಂದು ನಿನ್ನ ಸೇರಿದೆನೋ ಪರದೇಶಿಯೆಂದು ಉದಾಸೀನ ಮಾಡದೆ 5
--------------
ವ್ಯಾಸವಿಠ್ಠಲರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ದೇವರ ನಾಮ(ಶ್ರೀಶ ಸ್ತೋತ್ರ)38ಶ್ರೀಕರಾರ್ಚಿತ ಶ್ರೀಶ ಶ್ರೀ ಶ್ರೀನಿವಾಸಭಕುತವತ್ಸಲ ನಮೋ ಕಾರುಣ್ಯ ಶರಧೇ ಪಲೌಕೀಕ ವಿಷಯದಲಿ ಕಾಯಮನದಿಂಚರಿಸಿ |ಶ್ರೀಕರನೆ ನಿನ್ನನಾ ಸಂಸ್ಮರಿಸಲಿಲ್ಲಾಲೋಕ ಬಂಧುವೇ ಶರಣು ಶರಣು ಕರುಣಾಂಬುಧಿಯೇನೀಕಾಯಬೇಕೆನ್ನ ತಪ್ಪು ಎಣಿಸದಲೆ 1ನಾರಾಯಣವಾಸುದೇವಸಂಕರುಷಣಪ್ರದ್ಯುಮ್ನ ಅನಿರುದ್ಧ ಆತ್ಮಾಂತರಾತ್ಮಶ್ರೀ ಕೃಷ್ಣ ಕಪಿಲನೆ ಸರ್ವಕರ್ತನು ನೀನೆಸರ್ವ ಪ್ರೇರಕ ಸರ್ವ ಸ್ವಾಮಿ ಮಮ ಸ್ವಾಮಿ 2ವಿಶ್ವವಿಷ್ಣು ವಷಟ್ಕಾರ ಶ್ರೀಭೂರಮಣವಿಶ್ವತೋಮುಖ ಸರ್ವ ವಶಿ ವಿಶ್ವನಾಥವಿಶ್ವಪಾಲಕ ನಮೋ ಶ್ರೀರಾಮ ವಿಧಿತಾತವಿಶ್ವರೂಪನೇ ಶ್ರೀ ಪ್ರಸನ್ನ ಶ್ರೀನಿವಾಸ3
--------------
ಪ್ರಸನ್ನ ಶ್ರೀನಿವಾಸದಾಸರು