ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪು ಮಾಡುವದು ಮನುಜ ಧರ್ಮ | ನಮ್ಮದು ಬೇಡುವದು ಕಾಡುವದು ಪ ನಡೆ ನುಡಿಗೆ ತಪ್ಪು ನೋಡುವದು ನ್ಯಾಯವೇ ನಿನಗೆ ||ಬಡವರಾಟಗಳೆಂದು ಸಲುಹಯ್ಯ | ಮಾಡಲಬೇಡ ತಡವ |ಕಡಿದ್ಹಾಕು ಕಮಳಲೋಚನಾ | ಎನ್ನ ನಿನ್ನಡಿಗೆಸೇರಿಸು | ಕಡಲಶಯನ ಮೋಹನ್ನಾ 1 ಮಡಹಿ ಮಲ್ಲನ ಕೆಡವಿ | ಜೋಡು ಮತ್ತಿಯ ಮರವ ತಡವಿ | ಮಧು ಮೊದಲಾದವರನ್ನು | ಅಡವಿ ಕಿಚ್ಚವ ನುಂಗಿ | ಕಡುವಿ ಮಡುವ ಧುಮುಕಿ | ಬಡವಿ ಕುಬ್ಜಿಯ ಕೈಪಿಡಿದು ಯಶವ ಪಡೆದಿ 2 ನಡೆವವನು ಎಡವುವನೆಂದು | ಅಪರಾಧಗಳನುಬಡಿದಾಡದೆ ಒಡಲೊಳಗೆ ಹಿಡಿವ | ಮಡದಿಯನುನಿಮ್ಮ ಜಡೆಯಲಿರಿಸಿದ ಮನೆಯಲಿ ಎನ್ನ |ಸಡಗರದ ರುಕ್ಮದಿಂದಿಡಿದು ಲಾಲಿಸು 3
--------------
ರುಕ್ಮಾಂಗದರು
ದಯಮಾಡಿ ಪಿಡಿ ಎನ್ನಕೈಯ್ಯಾ ಗುರುರಾಯಾ ಪಕರುಣಾಸಾಗರನೆಂಬ ಬಿರುದು ನಿನಗೆ ಉಂಟು ಅ.ಪನಾನು ನನ್ನದು ಎಂಬ 'ೀನ ಬುದ್ದಿಯ ಬಿಡಿಸುಸಾನುರಾಗದಿ ಮನಸನು ಧರ್ಮದಲ್ಲಿರಿಸುಮಾನಾಪಮಾನಕ್ಕೆ 'ಗ್ಗದೆ ಕುಗ್ಗದೆಧ್ಯಾನಾನಂದದೊಳೆನ್ನ ಇರಿಸಯ್ಯಾ ಸ್ವಾ'ು 1ದೇಹ ನನ್ನದು ಎಂಬ ದುರಭಿಮಾನವ ಬಿಡಿಸುದೇಹಾನುಬಂಧುಗಳ ಮೋಹಬಿಡಿಸುದೇಹಗೇಹಗಳೆಲ್ಲ ದೇವರ ಸ್ವತ್ತೆಂಬಸುಜ್ಞಾನವನು ಕೊಟ್ಟು ಸಲುಹಯ್ಯಾ ಸ್ವಾ'ು 2ದುಷ್ಟ ಬುದ್ಧಿಯು ಎನಗೆ ಹುಟ್ಟದಂತೆ ಮಾಡುಕೆಟ್ಟಜನರ ಗಾಳಿ ತಟ್ಟದಿರಲಿಎಷ್ಟು ಬೇಕಾದಷ್ಟು ಕಷ್ಟಬಂದರು ಸಹಗಟ್ಟ್ಯಾಗಿ ನಿನ್ನಲ್ಲಿ ಭಕ್ತಿಹುಟ್ಟಲಿ ಸ್ವಾ'ು 3ಭೇದ ಅಭೇದದ ಮರ್ಮವ ತಿಳಿಸಯ್ಯಾಸಾಧು ಸಜ್ಜನರ ಸಂಗದೊಳೆನ್ನ ಇರಿಸುಮೋದತೀರ್ಥರ ಮತದ ಸುಜ್ಞಾನವನು ಕೊಟ್ಟುಭೂದೇವ ವಂದ್ಯ ಭೂಪತಿ 'ಠ್ಠಲನ ತೋರು 4
--------------
ಭೂಪತಿ ವಿಠಲರು
ನಡೆರಂಗ ನಡೆ ಕೃಷ್ಣ ನಡೆ ಮನೆಗೆಧೃಡ ಭಕ್ತರ ಕೂಡಿ ದ್ವಾರಕೆಗೆ ಪ.ಬಂದ ಜನರಿಗೆಲ್ಲ ಗಂಧ ಕುಂಕುಮವನಿಟ್ಟುತಂದು ತಾಂಬೂಲ ಕೊಡುತಲೆತಾಂಬೂಲ ಕೊಡುತಲೆ ರುಕ್ಮಿಣಿಕುಂದವ ಮಾಡಿ ಬಗೆಯದೆ 1ಮಿತ್ರೆ ದ್ರೌಪತಿದೇವಿ ಮತ್ತೆ ಪಾದಕ್ಕೆರಗಿಅತ್ಯಂತ ನಾವು ನುಡಿದೆವಅತ್ಯಂತ ನಾವು ನುಡಿದ ಅಪರಾಧವಚಿತ್ತದೊಳಿಡದೆ ಕರುಣಿಸು 2ಅರಗಿಳಿ ಮಾತಿನಹರದಿಸುಭದ್ರಾ ತಾನುಎರಗಿದಳುಭಾವೆಚರಣಕ್ಕೆಎರಗಿದಳುಭಾವೆಚರಣಕ್ಕೆ ರುಕ್ಮಿಣಿಯಪರಮಆಶೀರ್ವಾದ ಇರಲೆಂದು3ಅತ್ತಿಗೆಯರೆಂದು ಅರ್ಥಿಲಾಡಿದ ಮಾತುಮತ್ತೊಂದು ನೀವು ತಿಳಿಯದೆಮತ್ತೊಂದು ನೀವು ತಿಳಿಯದೆ ರಂಗನಮಿತ್ರೆಯರೆ ನಿಮ್ಮ ದಯವಿರಲಿ 4ಬಂದು ಪಾಂಡವರೆಲ್ಲ ಇಂದಿರೇಶಗೆ ಎರಗಿಚಂದಾಗಿ ತಾವು ಕೈ ಮುಗಿದುಚಂದಾಗಿ ತಾವು ಕೈ ಮುಗಿದು ನುಡಿದರುಕುಂದುಗಳೆಣಿಸದೆ ಸಲುಹೆಂದು 5ಭಾವಮೈದುನತನದಿ ನಾವೊಂದು ವಿನಯದಿಯಾವ ತಪ್ಪುಗಳ ಎಣಿಸದೆಯಾವ ತಪ್ಪುಗಳ ಎಣಿಸದೆ ಶ್ರೀ ಕೃಷ್ಣದೇವ ನೀ ಮಾಡೊ ದಯವನೆ 6ತಂದೆ ರಾಮೇಶಗೆ ನಾವಂದ ಮಾತುಗಳೆಲ್ಲಕುಂದವ ಮಾಡಿ ಬಗೆಯದೆಕುಂದವ ಮಾಡಿ ಬಗೆಯದೆ ನಮ್ಮನೆಗೆಬಂದು ಬಂದೊಮ್ಮೆ ಸಲುಹಯ್ಯ 7
--------------
ಗಲಗಲಿಅವ್ವನವರು