ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿಹನು ದೇವನೆಂದೆಲ್ಲು ಜನ ನುಡಿವರು ಸಲ್ಲುವುದೆ ಆಲಿಸಲು ಬಲ್ಲಗೀ ನುಡಿಯು ಇಲ್ಲೆಂದು ನುಡಿವರ್ಗೆ ಬಲ್ಲನಿತು ಪೇಳುವೆನು ಪುಲ್ಲನಾಭನ ಚರಿತವಾ ಹಿತವಾ ಪ ಕಲ್ಲಾಗಿ ಬಿದ್ದಿಪ್ಪಹಲ್ಯೆ ತಾ ಬಲ್ಲಳು ಎಲ್ಲ ಜಗ ಪಾವನನ ಸುಳ್ಳೆನ್ನಬಹುದೇ ಅಲ್ಲೆಂದರೀ ನುಡಿಗೆ ಹೊಲ್ಲ ಜಗವ ತುಂಬುವನು ಕಲ್ಲು ಮುಳ್ಳನು ಉದರದಿ ಜವನಿ 1 ತೋರೆಲವೊ ಹರಿಯನೆಂದೊದರಾಡೆ ರಕ್ಕಸನು ಘೋರ ಕಂಭದಿ ತೋರೆ ಹಾರಿ ತಲ್ಹಣವು ಘೋರ ರೂಪವ ತಾಳಿ ನಾರಸಿಂಹಾಖ್ಯದಿ ಚೂರ ಮಾಡಿದವನÀನು ಪರನು 2 ಧsÉೀನಿಪರ ಮನದೊಳಗೆ ಸಾನುರಾಗದಿ ಹರಿಯು ಸ್ಥಾನಗೊಳಿಪನು ಮನಕೆ ಆನಂದವೀವಾ ದಾನವಾಂತಕ ಶ್ರೀ ನರಸಿಂಹವಿಠಲನು ಆನತರ ನೆರೆ ಪೊರೆವನು ಬಿಡನು 3
--------------
ನರಸಿಂಹವಿಠಲರು
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು