ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವದೇವರಿಗುಂಟೀ ವೈಭವ ಪ ಸಾರ್ವಭೌಮ ನೀನೆ ಸಕಲ ಭಾವಜನಯ್ಯ ಅ.ಪ ಸಿರಿಯರೆಂಟುಮಂದಿ ನಿನಗೆ ಅರಸಿಯರು ಕರುಣಶರಧಿ ಸುರರು ಮೂವತ್ತು ಮೂರು ಕೋಟಿ ಚರಣಸೇವಕರಯ್ಯ ಹರಿಯೆ1 ಅನುದಿನವು ಎಡೆಬಿಡದೆ ಮನು ಸುಜನ ಸಂತತಿ ಘನವೇದಘೋಷದಿಂದ ನೆನೆದು ಪೂಜಿಪರಪರಿಮಿತ ಲೀಲೆ 2 ಕೋಟಿಸೂರ್ಯಪ್ರಕಾಶ ನಿನ್ನ ಆಟ ಬಲ್ಲವರಾರು ಜಗದಿ ಆಟವಾಡುವಿ ಅಗಮ್ಯಚರಿತ ಸಾಟಿಯಿಲ್ಲದೆ ಧನವ ಕಲಸಿ 3 ಕರೆಸಿ ಅಸಮಭಕುತ ಜನರ ವರವ ನೀಡಿ ಮುಡಿಪುಗೊಂಡು ಮೆರೆವಿ ಪರಮ ಉತ್ಸವದೊಡನೆ ಗಿರಿಯ ಭೂವೈಕುಂಠಮೆನಿಸಿ 4 ಕಿಂಕರ ಜನರ ಪೊರೆಯಲೋಸುಗ ವೆಂಕಟಾದ್ರಿಯಲ್ಲಿ ನಿಂದಿ ವೆಂಕಟೇಶ ಕಿಂಕರಜನರ ಸಂಕಟಹರ ಶ್ರೀರಾಮಪ್ರಭೋ 5
--------------
ರಾಮದಾಸರು
ಕಮಲನಾಭ ಕ್ಷಮೆಯಳೆದ ಪಾದ ರಮೆಯರಸನೆ ರಮ್ಯ ಚರಿತ ಕಮಲ ಪಾದವ ತೋರೋ ಅ.ಪ. ಸೂರ್ಯ ತೇಜ ಪೊಳೆವ ಶೇಷಶಯನ ತಲ್ಪದಿ ಹಾಟಕಾಂಬರಧರ ಕಿರೀಟ ಮಾಲ ಶೋಭ ಕೃಷ್ಣನೆ ಸಾಟಿಯಿಲ್ಲದ ಕರದಿ ಲಕುಮಿ ಧಾಟಿಯಿಂದ ವೊತ್ತುವ ಪಾದ ಸಾಟಿಯಿಲ್ಲದೆ ನಿನ್ನ ಭಕ್ತರ ಪೊರೆವ ದೇವ ನಿನ್ನ ಪಾದವು 1 ದುಷ್ಟರನ್ನು ಮೆಟ್ಟಿ ತುಳಿದ ದಿಟ್ಟ ಕೃಷ್ಣನ ಪಾದವು ಮೆಟ್ಟಿ ಕಾಳಿಂಗನ ಹೆಡೆಯ ದಿಟ್ಟ ರಂಗನ ಪಾದವು ಕಟ್ಟಿದ ವರಳನೆಳೆದು ಮತ್ತಿ ಮರವ ಮುರಿದ ಪಾದವು ಕೊಟ್ಟ ಅಭಯ ಭಕ್ತರ ಪೊರೆವಡಿಟ್ಟ ಪಾದವು 2 ಕೂರ್ಮ ವರಹ ನರಹರಿ ಅಚ್ಚವಾಮನ ಪಾದವು ಸಯಿಚ್ಚೆ ಪರಶುಧರ ಶ್ರೀರಾಮ ಕೃಷ್ಣ ನಿನ್ನ ಪಾದವು ಅಚ್ಚವರವನಳಿದು ತೇಜ ಹತ್ತಿ ಮೆರೆವ ಪಾದವು ಅಚ್ಚುತ ಶ್ರೀ ಶ್ರೀನಿವಾಸ ಕೃಷ್ಣ ನಿನ್ನ ಪಾದವು 3
--------------
ಸರಸ್ವತಿ ಬಾಯಿ
ಏನು ಧನ್ಯಳೋ - ಲಕುಮಿ - ಎಂಥ ಮಾನ್ಯಳೋ ಪಸಾನುರಾಗದಿಂದ ಹರಿಯ ತಾನೆ ಸೇವೆ ಮಾಡುತಿಹಳೊ ಅ.ಪಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರನ ಸೇವೆ |ಸಾಟಿಯಿಲ್ಲದೆ ಪೂರ್ಣಗುಣಳು ಸರ್ವಕಾಲ ಮಾಡುತಿಹಳು 1ಛತ್ರ ಚಾಮರವ್ಯಜನಪರ್ಯಂಕ ಪಾತ್ರರೂಪದಲ್ಲಿ ನಿಂತು |ಚಿತ್ರಚರಿತನಾದ ಹರಿಯ ನಿತ್ಯಸೇವೆ ಮಾಡುತಿಹಳು 2ಸರುವಸ್ಥಳದಿ ವ್ಯಾಪ್ತನಾದ | ಸರುವದೋಷರಹಿತನಾದ |ಗರುಡಗಮನನಾದ ಪುರಂದರವಿಠಲನ ಸೇವಿಸುವಳೋ 3
--------------
ಪುರಂದರದಾಸರು
ಪಾಠವ ಕೊಡು ಹರಿಯೆ ಮುಂದೆನಗೆಸಾಟಿಯಿಲ್ಲದೆ ನಿನ್ನ ಆಟಕಾಣುವವಿದ್ಯೆಪಸುಜನಸನ್ನುತತವ ನಿಜಮಹಿಮೆನ್ನ ಮನದಿನಿಜಪಿಡಿದನುದಿನ ಭಜಿಪ ಸುವಿದ್ಯ 1ನಿಪುಣತೆಯಲಿ ನಿಮ್ಮ ಸಫಲಸಚ್ಚರಿತವಅಪರೋಕ್ಷದ್ಹೊಗಳುವಗುಪಿತಸುವಿದ್ಯ2ಪ್ರಾಣೇಶ ಶ್ರೀರಾಮಮಾಣದೆತವಪಾದಧ್ಯಾನ ಸದೃಢಭಕ್ತಿ ಜ್ಞಾನ ಸುವಿದ್ಯ 3
--------------
ರಾಮದಾಸರು