ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಬೆಟ್ಟದ ಶೃಂಗವ ಹತ್ತಿ ಧುಮುಕುವೆ ನಾನು ಕೃಷ್ಣನೇ ಸರ್ವೋತ್ತಮ ಮತ್ತಾರೊಬ್ಬರಿಲ್ಲವೆಂದು ಪ ಪಂಕಜಾಸನಾಹಿಪ ಶಂಕರಾದಿಗಳು ಹರಿಗೆ ಕಿಂಕರರು ಮತ್ತು ಇವಗೆ ಪುತ್ರ ಪೌತ್ರರು `ಏಕೋ ನಾರಾಯಣ ಆಸೀನ್ನಬ್ರಹ್ಮೇ'ತಿ ಶ್ರುತಿಯೊಂದೇ ಸಾಕೊ ಮತ್ತಿನ್ಯಾಕೆ ಸಂಶಯ ಹರಿ ನೀನೆ ಗತಿಯೆಂದು 1 `ಯಂಕಾಮಯೇ' ಎಂಬ ಶ್ರುತಿ ಪಂಕಜಾಸನಾನಿಲ ಶಂಕರರೆಲ್ಲರೂ ಹರಿಕಿಂಕರರು ಸಿರಿಗೆ ಕಿಂಕರರೆಂಬುದ ನಿಶ್ಶಂಕವಾಗಿ ಪೇಳಲು ಶಂಕೆ ಯಾಕೊ ಸಲಹೊ ಶ್ರೀ ಪಂಕಜಲೋಚನನೆಂದು 2 ಜಾನಕಿ ವಿಯುಕ್ತನಾಗಿ ಕ್ಲೇಶಗಳಪಟ್ಟಿರುವ ಮತ್ತು ಜರಾಸಂಧಗಂಜಿ ಬೆಟ್ಟವೇರಿದನು ನಿರವದ್ಯ ನಿರನಿಷ್ಟ ಎಂಬೊ ಶ್ರುತಿಯನ್ನೆ ನೋಡಿ ನಿರ್ದೋಷನಿದನೆಂದು 3 ದೇವದತ್ತ ಯಜ್ಞದತ್ತ ಮೊದಲಾದ ಜನರಂತೆ ಪುರುಷನಾದ ಮೇಲೆ ಇವನಲ್ಪಗುಣನು ಎಂಬ ದುರ್ಮತಿಯ ಬಿಟ್ಟು ಗುಣಶ್ರುತ ಸವಿರುದ್ಧ ಎಂಬೋ ಶ್ರುತ್ಯರ್ಥವ ತಿಳಿದು ಹರಿಗುಣಪೂರ್ಣನೆಂದು 4 ಸೋಮಕುಲಶೇಖರನೆ ಭಾಮಾವಲ್ಲಭ ಬಲ ರಾಮನಿಗೆ ಸಹೋದರ ಸಾಮಗಪ್ರಿಯ ಶ್ರೀಮನ್ನಾಮಗಿರಿ ಶ್ರೀ ಸ್ವಾಮಿ ನೃಹರಿಯೆ ವಿದ್ಯಾ ರತ್ನಾಕರ ಯೋಗಿಯನ್ನು ಹರಿ ನೀನೆ ರಕ್ಷಿಸೆಂದು 5
--------------
ವಿದ್ಯಾರತ್ನಾಕರತೀರ್ಥರು