ಒಟ್ಟು 9 ಕಡೆಗಳಲ್ಲಿ , 7 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆರೋಹಣ ಕ್ರಮದಲ್ಲಿ ದಾಸ-ಗುರು-ದೇವತಾನಮನ) ಅಕ್ಕ ನೋಡೆ ನಾನಾ ನಿನ್ನ ದಯದಿಂದ ಗುರು ರಂಗವಲಿದದಾಸರ ಕನುಷಿನೊಳಗುಳ್ಳ ರಕ್ಕಸರಿಗೆಲ್ಲ ಕಕ್ಕಸವಾಗುತಿದೆ ದಕ್ಕಲಾರದು ಇನ್ನು ರೊಕ್ಕ ರೊಕ್ಕಕ್ಕೆ ಸಿಕ್ಕಿ ಬಲುಪರಿಯಿಂದ ಸೊಕ್ಕಿ ಧಕ್ಕೆ ತಿನ್ನುತ ಇದ್ದು ಶಕ್ಕುತಿಯಿಲ್ಲದೆ ಯನಗೆ ಪುಕ್ಕಟೆ ಸಿಕ್ಕಿತುಯೆನ್ನ ಕಕ್ಕನು ಇವರಕ್ಕಮುಕ್ಕಿ ಮಹ ಪಕ್ಕಿವಾಹನ ತಂದೆವರದಗೋಪಾಲವಿಠಲನ ತೋರುವಾ 1 ವತ್ಸರ ಇಂದಿರೆ ಕರ್ತು ನಾನಲ್ಲ ಚಂದ್ರ ಪುರಕೆ ಪೋಗು ಭಾಗಣ್ಣನೆಂಬುವನುಂಟು ಶಿರಿ ಅರಸ ವರದಗೋಪಾಲವಿಠಲನ ದಯದಿಂದಾ ಬಂದು ಸೇರಿದರು 2 ಅಪರೋಕ್ಷ ಪಾಲಿಸಿ ಮಂತ್ರಗಳುಪದೇಶಿಸಿ ಚರಣಂಗಳ ಲಯ ಮಾಡಿಸಿ ನಿರುತದಿ ಪಾಲಸಾಗರಶಾಯಿ ತಂದೆವರದಗೋಪಾಲವಿಠಲನ ನಿಲ್ಲಿಸಿ ಕೊಟ್ಟುಬಿಡದೆ3 ವಾಸವ ಮಾಡುತ ದಾಸರ ಪೋಷಿಸಬೇಕೆನುತ ಆಶೆಯುಕ್ತ ದೋಷರಹಿತಭಾವಿ ವಾಯುಪದಸ್ಥ ಸ್ವಾದಿರಾಜರ ಆಜ್ಞಾವ ಧರಿಸಿ ಶೇರಿ ಅರಸನ ಮಹಿಮೆಯ ಶೋಧಿಸಿ ಭಾಗವತಾದಿ ಶಾಸ್ತ್ರ ಅರ್ಥಸಮ್ಮತ ಕವನದಿ ರಚಿಸಿ ಹರಿಕಥಾಮೃತಾಖ್ಯ ಗುಣಸಾಗರ ಸಾರವೆಂದು ನಾಮವೆನಿರ್ಮಿಸಿ ಕುಮತವ ಭೇದಿಸಿ ಹಾನಿ ವೃದ್ಧಿಯ ಭೇದಿಸಿ ನೀತಿ ಹಿತನ ದ್ವಾರ ಜಗನ್ನಾಥವಿಠಲನೆಂಬೊ ಪೆಸರು ಪಡೆದು ತೀರ್ಥಕ್ಷೇತ್ರಾದಿಯಾಟಿಸಿ ಗಾತ್ರವ ಘೋಟಿಸಿಸೂತ್ರವ ಮೀಟುತ ಪಾತ್ರರ ಸಂಗಡ ಚಿತ್ರವೇಷವ ಧರಿಸಿ ವರ್ತನೆಗ್ಯಯ್ಯುತ ಸೂತ್ರನಾಮಕ ಕೃಷ್ಣನಂತರ್ಯಾಮಿ ಸೂತ್ರವಂದಿತ ತಂದೆವರದಗೋಪಾಲವಿಠಲನ ಭಜಿಸಿ ಮಹಪದವೈದ 4 ಆನಂದ ಆನಂದ ಮಹಾಸಾಗರದೊಳಗೆ ಮುಳುಗಿ ಶಿಂಧುಶಯನ ಅರವಿಂದನಯನನ ಪೊಂದಿ ಮಹ ಪೊಂಗೊಳಲನೂದುತ ಜಗಂಗಳ ಪೋಗುತ ಗಂಗಾಜನಕ ಹರಿ ಗೋವಿಂದನಾಶ್ರಯಿಸಿ ದ್ವಂದ್ವಾವ ಭಜಿಸುತ ಮಂಗಳ ಮೂರುತಿ ಸ್ವಪನದಿ ಬಂದು ನಂದಾದಿ ಕವನ ಪೇಳಿ ಪವಿತ್ರನ ಮಾಡಿದಿ ಭಾವಿ ಭಾರತಿ ವರನ ಮಹಿಮೆಗೆಣೆಯುಂಟೆ ಹನುಮ ಭೀಮ ಮಧ್ವಾತ್ಮಕ ರೂಪಧಾರಿಗುರುರಾಜಾಂತರ್ಗತ ತಂದೆವರದಗೋಪಾಲವಿಠಲನು ಬಂದು ವದಗಿದ ವಾಸನಾಮಯದಿ 5 ಜತೆ :ಪಾತಕ ಪೋಯಿತು ಪೂತಾತ್ಮಕನ ಸೇವಿಪ ಜಗನ್ನಾಥರಾಯನ ಕಂಡೇ ಹರಿರೂಪಧಾರಿ ಗುರು ತಂದೆವರದಗೋಪಾಲವಿಠಲನ ದಯದಿಂದಾ 6
--------------
ಗುರುತಂದೆವರದಗೋಪಾಲವಿಠಲರು
ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ ಪ ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು ಅ ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣವಿಷ ಸಮಾನವಾದ ಬಹಳ ವ್ಯಸನ ಮೆರವಣಿಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊಂಬ ರೋಗವಿಷಯದೊಳಗೆ ಕ್ಲೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ 1 ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು2 ಕುಸುಮ ಗಂಧಮಾಲೆ ಕಸ್ತೂರಿಯನು ಪೂಸಿಕೊಂಡುವಸ್ತ್ರ ಒಡವೆ ಇಟ್ಟು ಬಹಳ ಶಿಸ್ತು ನರಕಿಯೆನಿಸಿ ಮೆರೆವುದು3 ಕಾಯ ಸೌಖ್ಯದಿಆಯಾಸಪಟ್ಟು ಗಳಿಸಿದರ್ಥ ಹೇಯವೆನದೆ ಭೋಗಿಸುತ್ತಬಾಯ ಸವಿಯನುಂಡು ಕಡೆಗೆ ನಾಯ ಸಾವು ಸಾಯೋ ಬಾಳಿಗೆ 4 ಮನ್ನಿಸಿ ಗುರುಹಿರಿಯರುಕ್ತಿಯನ್ನು ಕೇಳದೆ ಕಿವುಡುಗೆಟ್ಟುಜೊನ್ನೆಯ ತುಪ್ಪ ಅನ್ನ ಒಲ್ಲದೆ ಎಲುವು ಮಾಂಸವನ್ನು ತಿಂಬಕುನ್ನಿಯಾದೆನಯ್ಯ ಕೃಷ್ಣ ನಿನ್ನ ಮಾಯದೊಳು ಸಿಲ್ಕಿದಎನ್ನನುದ್ಧರಿಸೊ ಸುಪ್ರಸನ್ನ ಆದಿಕೇಶವ5
--------------
ಕನಕದಾಸ
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು
ಶ್ರೀವರ ಹರಿ ವಿಠಲ | ಕಾಪಾಡೋ ಇವಳಾ ಪ ಭಾವುಕರ ಪಾಲ ನೆಂ | ದೇವೆ ಶ್ರುತಿ ಸಿದ್ಧ ಅ.ಪ. ಹರಿಸೇವೆ ಕೈಕಂರ್ಯ | ನಿರತಳಾಗಿ ಹಳೀಕೆಹರಿಗುರು ದಾಸ್ಯದಲಿ | ದೀಕ್ಷೆಕಾಂಕ್ಷಿಪಳೋ |ಹರಿಯ ತೈಜಸರೂಪಿ | ವರಮಾರ್ಗ ತೋರ್ಪಪರಿಹರಿಯ ನಿನ್ನಂಕಿತವ | ಇತ್ತಿಹೆನೊ ದೇವಾ 1 ಸಾರತಮ ಹರಿಯ ಜಗ | ನಿಸ್ಸಾರವೆಂದು ಸಂ |ಸಾರ ಶರಧಿಯ ಹಾಯೋ | ವಾರಿಜ ಸುನಾಭಾ |ಆರು ಮಾರ್ಭಕುತಿಗಳ | ವೈರಾಗ್ಯ ಸುಜ್ಞಾನಧೀರ ನೀ ಕರುಣಿಸುತ | ಕಡೆ ಹಾಯ್ಸೊ ಇವಳಾ 2 ಮೋದ ತೀರ್ಥರ ಮತದಿ | ಸಾಧನ ಸುಮಾರ್ಗದಲಿಹಾದಿ ಕ್ರಮಿಸುತ್ತಿಹಳೂ | ವೇದಾಂತ ವೇದ್ಯಾಹೇ ದಯಾ ಪೂರ್ಣಹರಿ | ಸ್ವಾಧ್ವಿಗೆ ತವನಾಮಸುಧೆಯನೆ ಉಣಿಸೊ ಸ | ರ್ಪಾರ್ದಿಗೇ ಓಡೆಯ 3 ಶಮದ ಮಾದಿಯನಿತ್ತು | ಭ್ರಮಮಾರ ಪರಿಹರಿಸೊಅಮಿತ ಮಹಿಮೋಪೇತ | ಸುಮನಸಾರಾಧ್ಯಕರ್ಮನಿಷ್ಕಾಮನದಿ | ರಮೆಯರಸಗರ್ಪಿಸುವಸುಮನೊಭಾವದಲಿ | ಕ್ರಮಿಪ ತೆರಮಾಡೋ 4 ನಿತ್ಯ ನಿಗಮಾತೀತ | ದೈತ್ಯ ಜನ ಸಂಹರ್ತಭೃತ್ಯಳಿಗೆ ಮೈದೋರಿ | ಹೃತ್ಕøಕ್ಷಿಯೊಳಗೇಪ್ರತ್ಯಕ್ಷನಾಗೆಂಬ | ಪ್ರಾರ್ಥನೆಯ ಸಲಿಸೋಹರಿಕರ್ತೃ ಕರ್ಮಾಖ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1 ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2 ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಸರ್ವಸಾರವೆಂದು ಸಾರುವರು |ತೆರೆದು ಹೇಳಿ ತತ್ತ್ವವನು ತಾರಿಸುವರು ಪ ಮೊರೆ ಹೊಕ್ಕವರ ಮನದ ಮಲಕು ಬಿಡಿಸುವರು |ಹರಿದು ಹೋಗುವವಗೆ ಕರೆದು ಕಡೆಗ್ಹಾಕುವರು1 ಧರೆಯೊಳವರೇ ಸಾಧು ಪುರುಷರೆನಿಸುವರು |ಸಿರಿಗೆ ಸೆರಗೊಡ್ಡಿ ಸಿರಬಾಗಿ ನಡಿಯದವರು 2 ಬರಿಯ ತರ್ಕದಿಂದ ಖಂಡಿಸದವರು |ಸರಿಗೆ ಬಂದರೆ ಸುಮ್ಮನೆ ಸಹಿಸುವರು 3 ಕಾಯ ಕದ್ದು ಕರ್ಮಪಾಶ ಕಳೆದವರು |ರಾಯ ರಂಕರಿಗೆ ಸರಿ ತಿಳಿದವರು 4 ಮಾಯದ ಮೂಲವಾದ ಭೇದವಳಿದವರು |ಲಯದ ಮನೆಯ ಮೆಟ್ಟಿ ಭಯ ಮೀರಿದವರು 5 ಅರಿತು ಅರಿಯದವರಂತೆ ತೋರುತಿಹರು |ಮರೆತು ಮರವಿಗೆ ತಾವೆ ಮರವಾಗಿಹರು6 ಗುರು ರುಕ್ಮಭೂಷಣನಂತ ತೋರಿಸುವರು |ತ್ವರಿತದಿ ತಮ್ಮ ನೆಲೆಯ ಕೊಡದವರು 7
--------------
ರುಕ್ಮಾಂಗದರು
ಇರಬೇಕು - ಹರಿದಾಸರ ಸಂಗವರಜ್ಞಾನಿಗಳ ದಯ ಸಂಪಾದಿಸಬೇಕು ಪ.ಅತಿಜ್ಞಾನಿಯಾಗಿ ಹರಿಕಥೆಯ ಕೇಳಬೇಕುಯತಿಗಳ ಪಾದಕ್ಕೆ ಎರಗಬೇಕುಸತಿ ಸುತರಿದ್ದು ಮಮತೆಯನು ಬಿಡಬೇಕುಗತಿಯೆಂದು ಬಿಡದೆ ಹರಿಯ ಪೋಪರಸಂಗ 1ನಡೆ ಯಾತ್ರಿಯನಬೇಕು ನುಡಿ ನೇಮವಿರಬೇಕುಬಿಡದೆ ಹರಿಯ ಪೂಜೆಯ ಮಾಡಬೇಕುಅಡಿಗಡಿಗೆ ಬಂದು ಹರಿಗಡ್ಡ ಬೀಳಬೇಕುಬಿಡದೆ ಹರಿಭಜನೆಯ ಮಾಡುವರ ಸಂಗ 2ಹರಿ - ಹರ -ವಿರಂಚಿಯರ ಪರಿಯ ತಿಳಿಯಬೇಕುತರತಮದಿ ರುದ್ರ - ಇಂದ್ರಾದಿಗಳಅರಿಯದಿದ್ದರೆ ಗುರುಹಿರಿಯರ ಕೇಳಬೇಕುಪರಮಾನಂದದಲಿ ಓಲಾಡುವರ ಸಂಗ 3ಷಟ್ಕರ್ಮ ಮಾಡಬೇಕು ವೈಷ್ಣವನೊಲಿಸಬೇಕು ಉ -ತ್ಕಷ್ಟ ವೈರಾಗ್ಯಬೇಕು ದುಷ್ಟಸಂಗ ಬಿಡಬೇಕುವಿಷ್ಣುವಿನ ದಾಸರ ದಾಸನಾಗಲುಬೇಕುಎಷ್ಟು ಕಷ್ಟಬಂದರೂ ಹರಿಯ ಭಜಿಪರ ಸಂಗ 4ಏಕಾಂತ ಕುಳ್ಳಿರಬೇಕು ಲೋಕವಾರ್ತೆ ಬಿಡಬೇಕುಲೋಕೈಕನಾಥನ ಭಜಿಸಬೇಕುಸಾಕು ಸಂಸಾರವೆಂದುಕಕ್ಕುಲತೆ ಬೀಡಬೇಕುಶ್ರೀಕಾಂತಪುರಂದರವಿಠಲರಾಯನ ಸಂಗ5
--------------
ಪುರಂದರದಾಸರು