ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
ಇಂದು ಮುಂದಿಲ್ಲ ಪ ಶ್ರೀ ಮುಕುಂದಗೆ ಸಮರೆನಿಸುವರು ಲೋಕದೊಳು ಅ.ಪ. ವನಧಿ ಮಥನದಲ್ಲಿ ಅನಿಮಿಷರನ ಬಿಟ್ಟು ಜನನಿ ಲಕುಮಿ ನಾರಾಯಣನೊಲಿಸಿದಳಾ 1 ಪ್ರಪಿತಾಮಹನು ಲೋಕಾಧಿಪ ಬ್ರಹ್ಮಗೆ ತಪ ತಪವೆಂದು ಪೇಳಿದಗುಪಮೆ ಎನಿಸುವವರು 2 ಕೊಂದು ಶಿವನ ಕಾಯ್ದ ಇಂದಿರಾಪತಿಗೆಣೆ 3 ಮಂದರಾದ್ರಿಯನೆತ್ತಿ ಸಿಂಧುಮಥನ ಮಾಡಿ ವೃಂದಾರಕರಿಗೆ ಆನಂದವಿತ್ತು ಪರಿ4 ಭೃಗು ಮುನಿಪನು ಬ್ರಹ್ಮಾದಿಗಳ ಪರೀಕ್ಷಿಸಿ ಜಗನ್ನಾಥವಿಠಲ ತ್ರಿಗುಣವರ್ಜಿತನೆಂದು 5
--------------
ಜಗನ್ನಾಥದಾಸರು
ಕಾಮನ ಪೆತ್ತನ ಕೋಲೆ ನಿ- ಸ್ಸೀಮ ಚರಿತ್ರನ ಕೋಲೆ ಶ್ಯಾಮಲ ಗಾತ್ರನ ಕೋಲೆ ನಮ್ಮ ಕಾಮಿತವಿತ್ತನ ಕೋಲೆ ಪ. ಕಂಜಜ ತಾತನ ಕೋಲೆ ಧ sನಂಜಯ ಸೂತನ ಕೋಲೆ ಕುಂಜರ ಗೀತನ ಕೋಲೆ ಸುರ- ಪುಂಜ ವಿಖ್ಯಾತನ ಕೋಲೆ 1 ಶ್ರುತಿಗಳ ತಂದನ ಕೋಲೆ ಬಲು ಮಥನಕೊದಗಿದನ ಕೋಲೆ ಕ್ಷಿತಿಯನೆತ್ತಿದವನ ಕೋಲೆ ಭಕ್ತ ಹಿತಕಾಗಿ ಬಂದನÀ ಕೋಲೆ 2 ಪೃಥ್ವಿಯಳದನ ಕೋಲೆ ಅಲ್ಲಿ ಸುತ್ತ ಸುಳಿದನ ಕೋಲೆ ಅರ್ಥಿಗÀಳದನ ಕೋಲೆ ದ್ವಾರಾ- ವತ್ತಿಯಾಳಿದನ ಕೋಲೆ 3 ಮುಕ್ತಾಮುಕ್ತ ಜಗತ್ತ ತನ್ನ ವಿತ್ತ ಸಂಪತ್ತ ಕಲಿ- ವೊತ್ತಿ ಮಾಡಿತ್ತನ ಕೋಲೆ4 ಜಗತಿಧನ್ಯನ ಕೋಲೆ ನಿಗಮೋಕ್ತ್ತ ವಣ್ರ್ಯನ ಕೋಲೆ ಅಘಲೇಶಶೂನ್ಯನ ಕೋಲೆ ಸರ್ವ ಸುಗುಣಾಬ್ಧಿಪೂರ್ಣನ ಕೋಲೆ 5 ಸಿರಿಹಯವದನನ ಕೋಲೆ ಸುಖ ಕರ ಸಿಂಧುಮಥನನ ಕೋಲೆ ಹರಮಾನ್ಯಸದÀನನ ಕೋಲೆ ಗೋಪಿ- ಯರ ಕಣ್ಗೆ ಮದನನ ಕೊಲೆ 6
--------------
ವಾದಿರಾಜ
ಪಾಲಿಸೋಯನ್ನ ಪರಾತ್ಪರಾ - ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನ ಘಣಿಶೈಲ ನಿಲಯ-ಹರಿ ಅ.ಪ ಜಲಜಭವನ ನಿಜಕುಕ್ಷಿಯೊಳಿದ್ದ ಸುಲಲಿತ ವೇದಾಪಹಾರಿಯ ಕಂಡು ಜಲಜರೂಪಿನಿಂದಾ ಖಳ ಸಂಹರ ಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಅಂದು ದೂರ್ವಾಸನ ಶಾಪದಿ ಜಗವು ಇಂದಿರೆ ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ಧರಣಿಯನಪಹಾರಗೈಯ್ಯಲು ಬೇಗ ಸೂಕರ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ3 ಸರಸಿಜಜನ ವರದರ್ಪದಿ ಜಗವನುರುಹಿ ತರಳನ ಬಾಧೆಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ 4 ಬಲಿಯ ಮೂರಡಿಭೂಮಿ ದಾನವ ಬೇಡಿ ಅಳೆದು ಈರಡಿಮಾಡಿ ಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯ ಪೆತ್ತ ಚೆಲುವ ವಾಮನರೂಪ5 ಚಕ್ರಾಂಶನಾದ ಕಾರ್ತಿವೀರ್ಯನ ಭುಜ ಚಕ್ರದೊಡನೆ ದುಷ್ಟ ಭೂಪರ ಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ಕ್ರೂರ ರಾವಣ ಕುಂಭಕರ್ಣರ ಬಲು ಘೋರತನಕೆ ತ್ರಿವೇಶರ ದೊಡ್ಡ ದೂರ ಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀರಾಮ ಮೂರುತಿ 7 ಬಲಭದ್ರನೆಂಬುವ ನಾಮದಿ ಧುರದಿ ಹಲ ನೇಗಿಲುಗಳನು ಹಸ್ತದಿ ಪಿಡಿದು ಬಲವಂತರಾದ ದೈತ್ಯಕುಲವ ತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರನಿಭಚೇಲ 8 ಭಾರ ಸೃಷ್ಟೀಶನಲ್ಲಿ ದೂರಿಡೆ ಬಲು ಭ್ರಷ್ಟ ಕೌರವ ಯುಧಿಷ್ಠಿರಗೆ ವೈರ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ 9 ಕಲಿಯಿಂದ ಕಿಡೆ ನಿಜಧರ್ಮವು ಬಹು ಖಳರಿಂದ ವ್ಯಾಪಿಸೆ ಲೋಕವು ಆಗ ಲಲಿತ ತೇಜಿಯನೇರಿ ಕಲುಷಾತ್ಮಕರ ಕೊಂದು ವಿಲಸಿತ ಧರ್ಮವನು ಸಲಹಿದ ಕಲ್ಕಿರೂಪ 10 ಗಿರಿಜಾವಿವಾಹದಿ ತ್ವಷ್ಟ್ರನ ಶಾಪ ಶರಧಿಯೀಂಟಿದ ಮುನಿಗೈದಲು ಬೇಗ ವರವ್ಯಾಘ್ರ ಗಿರೀಶನೆ ಶರಣೆಂದ ಮುನಿಪಗೆ ವರವಿತ್ತು ಸಲಹಿದ ವರದವಿಠಲಹರಿ11
--------------
ವೆಂಕಟವರದಾರ್ಯರು
ಪಾಲಿಸೋಯನ್ನ ಪರಾತ್ಪರಾ ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನಫಣಿ ಶೈಲ ನಿಳಯ-ಹರಿ ಅ.ಪ. ವೇದಾಪಹಾರಿಯಕಂಡು ಜಲಚರ ರೂಪಿನಿಂದಾ ಖಳನ ಸಂಹರಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ದುರುಳ ಹಿರಣ್ಯಾಕ್ಷನೆಂಬುವ-ದೈತ್ಯ-ಧರಣಿಯನ ಪಹಾರಗೈಯಲು ಬೇಗ ಪರಮೇಷ್ಟಿಗೊಲಿದು ಸೂಕರನ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ 3 ಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ4 ಅಳೆದು ಈರಡಿಮೂಡಿಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯಪೆತ್ತ ಚಲುವ ವಾಮನ ರೂಪ 5 ಚಕ್ರದೊಡನೆದುಷ್ಟಭೂಪರಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ತ್ರಿದಿವೇಶರದೊಡ್ಡ ದೂರಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀ ರಾಮ ಮೂರುತಿ 7 ನೇಗಿಲುಗಳನು ಹಸ್ತದಿಪಿಡಿದು ಬಲವಂತರಾದ ದೈತ್ಯಕುಲವತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರ ನಿಭಚೇಲ 8 ಭಾರ ತಾಳದೆ-ಧರಣೀ-ಸೃಷ್ಟೀಶನಲ್ಲಿದೂರಿಡೆ ವೈರಿ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ9 ವ್ಯಾಪಿಸೆಲೋಕವು ಆಗ ಲಲಿತತೇಜಿಯನೇರಿ ಕಲುಷಾತ್ಮಕರಕೊಂದು ವಿಲಸಿತ ಧರ್ಮವನ್ನು ಸಲಹಿದ ಕಲ್ಕಿರೂಪ 10 ಮುನಿಗೈದಲುಬೇಗ ವರವ್ಯಾಘ್ರಗಿರೀಶನೆ ಶರಣೆಂದಮುನಿಪಗೆ ವರವಿತ್ತು ಸಲಹಿದ ವರದ ವಿಠಲ ಹರಿ11
--------------
ಸರಗೂರು ವೆಂಕಟವರದಾರ್ಯರು