ಒಟ್ಟು 6 ಕಡೆಗಳಲ್ಲಿ , 3 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುರಾಘವೇಂದ್ರ ಕರುಣಿಸೋ ತವಚರಣ ಸ್ಮರಣೆಯ ಪ ಶರಣು ಜನಕೆ ಸುರತರುವೆಂದೆನಿಸುತ ವರ ಮಂತ್ರಾಲಯ ಪುರದಿ ಮೆರೆವ ಶ್ರೀಮದ್ 1 ನಂದತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರನೆನಿಸಿದ ಸುಧೀಂದ್ರ ಕರೋದ್ಭವ 2 ಧರಿಯೊಳು ಶರಣರ ಪೊರೆವ ಕಾರ್ಪರನರಹರಿಯನೊಲಿಸಿರುವ ಪರಿಮಳಾಚಾರ್ಯ ಶ್ರೀ3
--------------
ಕಾರ್ಪರ ನರಹರಿದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ಬಾರೋ ಗುರು ರಾಘವೇಂದ್ರ ಸದ್ಗುಣಸಾಂದ್ರ ಪ ಬಾರೋ ಸದ್ಗುರುವರ ಸಾರಿದ ಸುಜನರ ಘೋರ ದುರಿತವ ತರಿದು ಕರುಣದಿ ಸಾರ ಸೌಖ್ಯವಗರಿದು ಪೊರಿಯಲು ಅ.ಪ ಸೂರಿಜನಾಲಂಕೃತ ಸುರಪುರದಿ ವಿಠ್ಠ ಲಾರ್ಯರಿಂದಲಿ ಪೂಜಿತ ಯದುಗಿರಿಯ ಕ್ಷೇತ್ರಾಗಾರನೆಂದೆನಿಸಿ ನಿರುತ ಭಜಕರನು ಪೊರೆಯುತ ಸೇವೆಯನುಕೊಳ್ಳುತ ತುರಗವನೇರಿ ಮೆರೆಯುತ1 ಭಕ್ತ್ಯಾದಿ ಫಲವೀವಂಥ ಗುರುವರನೆ ನಿಮ್ಮಯ ಸ್ತೋತ್ರ ಪಠಣವ ಮಾಡುತ್ತ ಅನವರತ ಭಜ- ನಾಸಕ್ತ ಜನರ ಕಾಮಿತ ನಾ ಕೊಡುವೆನೆನುತ ಮತ್ತೆ ಎಡಬಲದಲ್ಲಿ ದ್ವಿಜಕೃತ ಛತ್ರಚಾಮರ ವ್ಯಜನ ಸೇವಾ ನೃತ್ಯಗಾಯನ ವೈಭವದಿ ವರ ಹಸ್ತಿವಾಹನ ವೇರಿ ಮೆರೆಯುತ 2 ಇಳಿಸುರರೊಳು ಪ್ರಖ್ಯಾತ ಲಿಂಗೇರಿ ಭೀಮಾ ಹೊಳಿಯ ಸ್ಥಾನಕೆ ಬಂದಂಥ ಯದುಗಿರಿಯ ದ್ವಿಜವರ ಗೊಲಿದರ್ಚನಿಯ ಗೊಂಬಂಥ ಶರ್ವಾದಿವಿನುತ ಚಲುವ ಪ್ರಾಣನಾಥನ ಜಲಜಯುಗ ಸನ್ನಿಧಿ ಯೊಳನುದಿನ ಪೊಳೆವ ವೃಂದಾವನದಿ ಭಕುತರಿ ಗೊಲಿದು ಪೊರೆಯಲು ಕುಳಿತ ಯತಿವರ 3 ನಂದತೀರ್ಥರ ಸುಮತ ಸಿಂಧುವಿಗೆ ಪೂರ್ಣ ಚಂದ್ರರೆಂದೆನಿಸಿ ದಂಥಾ ಕರ್ಮಂದಿವರ್ಯನೆ ದುರಿತ ಘನಮಾರುತ ವಂದೆ ಮನದಲಿ ಬಂದು ನಿಮ್ಮಡಿ ದ್ವಂದ್ವವನು ಶೇವಿಸುವ ಶರಣರ ವೃಂದವನು ಪಾಲಿಸಲು ಸುಂದರಸ್ಯಂದನ- ವೇರುತಲಿ ವಿಭವದಿ 4 ನೀರಜಾಸನ ವರಬಲದಿ ಸಮರಾರೆನುತ ಬಂ- ಗಾರ ಕಶ್ಯಪ ಪೂರ್ವದಿ ಪ್ರಹ್ಲಾದ ರಾಜಕು ಮಾರ ನಿನ್ನೊಳು ವೈರದಿ ಹರಿಯನ್ನು ಜವದಿ ಚಾರು ಕೃಷ್ಣಾ ತೀರಕಾರ್ಪರ ನಾರಸಿಂಹನ ಸ್ತಂಭದಿಂದಲಿ ತೋರಿಸಿದ ಗುರು ಸಾರ್ವಭೌಮನೆ 5
--------------
ಕಾರ್ಪರ ನರಹರಿದಾಸರು
ಭಕ್ತ ಪ್ರಹ್ಲಾದಗೆ ಆರುತಿ ಮಾಡುವೆನಾ ಪ ಆರುತಿ ಮಾಡುವೆ ನಾರಿಯ ಗರ್ಭದಿ ನಾರದ ಮುನಿಯಿಂದ ನಾರವ ಪಡೆದಗೆ ಅ.ಪ ಶಾಲೆಯೊಳಗೆ ದೈತ್ಯ ಬಾಲಕರಿಗೆ ಸಿರಿ ಲÉೂೀಲನೆ ಪರನೆಂದು ಪೇಳಿದ ಬಾಲಕಗೆ 1 ನಂದತೀರ್ಥರ ಮತಸಿಂಧುವಿಗೆ ಪೂರ್ಣ ಚಂದ್ರನೆಂದೆನಿಸಿದ ಚಂದ್ರಿಕಾರ್ಯರಿಗೆ 2 ವಂದಾರು ಜನರಿಗೆ ಮಂದಾರನೆನಿಸಿದ ನಂದದಾಯಕ ಸುಧೀಂದ್ರಕುಮಾರಗೆ 3 ವೃಂದಾವನದೊಳಗೆ ನಿಂದು ಶೇವಕಜನ ವೃಂದಾಪಾಲಕ ರಾಘವೇಂದ್ರಯತೀಂದ್ರಗೆ 4 ಧರೆಯೊಳು ಶರಣರ ಪೊರೆವ ಕಾರ್ಪರ ನರಹರಿ ಯ ನೊಲಿಸಿದಂಥ ಪರಿಮಳಾಚಾರ್ಯರಿಗೆ5
--------------
ಕಾರ್ಪರ ನರಹರಿದಾಸರು
ಶ್ರೀ ರಾಘವೇಂದ್ರರು ಇಂಥಾ ಗುರುಗಳ ಕಾಣಿನಾ | ಭೂತಳದೊಳು ಇಂಥಾ ಯತಿಗಳ ಕಾಣಿನಾ ಪ ಕಾಣಿ \ ಮಂತ್ರ ಮಂದಿರದಲ್ಲಿ ನಿಂತು ಭಜಕರಿಗೆ | ಚಿಂತೆ ಕಳೆವ ಕರುಣಿ ಅ.ಪ ದೇವಸ್ವಭಾವನೀತನು | ಸತತ ಪವನ ದೇವನಾವೇಶಯುಕ್ತನು || ಆವ ಸಂಶಯವ್ಯಾಕೆ | ದೇವಾಧಿದೇವ ನರಮೃಗ ದೇವನೀತನ ಭಕ್ತಿಗೆ | ಧಾವಿಸಿ ಬಂದ ಸ್ತಂಭದಿ ಭಾವ ಭಕ್ತಿಯಲಿ | ಸೇವಿಪರಿಗೆ ಭವ ನೋವು ಕಳೆದು ಸುರ | ಗೋವಿನ ತೆರ ವರ ವೀವನು ಕರುಣದಿ | ಕಾಮನು ಪರಮ ಪಾವನ ಚರಿತನು | ಕೋವಿದರೊಡೆಯನು 1 ವರಹಜ ತಟದಲ್ಲಿರುವ ಭಕ್ತರು ಕೂಗಿ ಕರೆದಲ್ಲಿಗೋಡಿ ಬರುವ | ಮರುತ ಶಾಸ್ತ್ರದ ಮರ್ಮ ಭರಿತವಾದಂಥ ದಿವ್ಯ ಪರಿಮಳ ಗ್ರಂಥವ ವಿರಚಿಸಿ ಬುಧರಿಗೆ ಗರೆದನು ಕರುಣದಿ ಪೊರೆದನು ಪರಮತ ಮುರಿದನು ಜಗದೋಳ್ ಮೆರೆದನು ಹೊಸ ಹೊಸ ಪರಿ ಸುಮಹೋತ್ಸವ ಹರುಷದಿ ಪ್ರತಿದಿನ ಗುರು ಸುಯಮೀಂದ್ರರ | ಕರದಿಂಗೊಂಬರು 2 ಮಂದಹಾಸನ ಶ್ರೀ ಶಾಮಸುಂದರ ರಂಘ್ರಿ ಸೇವಕ | ಕೇಸರಿ ಎನಿಸಿ ಗಂಧವಾಹನ ಮತ | ಸಿಂಧುವಿಗೆ ಶಶಿ ಯಂದದಿ ರಾಜಿಸಿ ವೃಂದಾವನವನು ಒಂದೆ ಮನದಲಿ ವಂದಿಸಿ ನಮಿಸುವ ವಂದ್ಯಾಂಧಕರಿಗೆ | ಕಂದರಕ್ಷಿಗಳ ಕುಂದದಿ ಕೊಡುವ | ಕರ್ಮಂದಿ ಕುಲಾಗ್ರಣಿ 3
--------------
ಶಾಮಸುಂದರ ವಿಠಲ
ಶ್ರೀ ಸತ್ಯಪರಾಯಣ ಸ್ವಾಮಿಗಳ ಸ್ತುತಿ ಕಂಗಳು ದಣಿಯ ನೋಡೆಲೆ ಮನವೆ |ಮಂಗಳಾಂಗ ಸತ್ಯಪರಾಯಣ ಗುರುಗಳ ಪ ಹಿಂದಿನ ಜನುಮದಿಂದ | ಬಂದ ಪಾಪಂಗಳ ||ಇಂದು ತಮ್ಮ ದರುಶನ | ದಿಂದ ಕಳದಾ 1 ನಂದತೀರ್ಥ ಶಾಸ್ತ್ರ | ಸಿಂಧುವಿಗೆ ಪೂರ್ಣ ಚಂದ್ರಾ |ನಂದದಲೊಪ್ಪುವ ಗುಣ | ಸಾಂದ್ರರ ಪದಂಗಳ 2 ವರಸೀತಾರಾಮ ಪದ | ಸರಸಿಜಕೆ ಮಧುಪಾ ||ಗುರುಪ್ರಾಣೇಶ ವಿಠಲಾ ನಿರಸಿಹ ಹೃದಯದಿ 3
--------------
ಗುರುಪ್ರಾಣೇಶವಿಠಲರು