ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳೊ ಬಾಲನೆ ವೇಳೆ ಮೀರುತಿಹುದು ಪ ಕೇಳುತಿಹರು ಯದುಮೌಳಿಯೆಲ್ಲಿ ಎಂದು ಅ.ಪ ಎದ್ದು ಬಾರೆಲೋ ಮುದ್ದು ಬಾಲಕೃಷ್ಣ ಪದ್ಧತಿಯಲಿ ಕ್ಷೀರ ಸಿದ್ಧವಾಗಿಹುದು 1 ಜಾಣ ನಿನ್ನಯ ವೇಣುನಾದ ಕೇಳೆ ಏಣನಯನೆಯರು ಕಾಣ ಬಯಸುತಿಹರು 2 ಯಮುನಾ ತೀರದಿ ಸುಮಲತೆಗಳಲ್ಲಿ ಕಮಲನಯನ ನಿನ್ನ ರಮಿಸ ಬಯಸುತಿಹರು 3 ಮೌನಿಜನರು ತಮ್ಮ ಸ್ನಾನ ಮುಗಿಸಿ ನಿನ್ನ ಜ್ಞಾನ ಪೊಂದೆ ಗುಣಗಾನ ಮಾಡುತಿಹರು 4 ನಿನ್ನ ಪ್ರಿಯ ಜನರನ್ನು ಕಾಯಿಸಲು ಇನ್ನು ತರವೇನೋ ಪ್ರಸನ್ನವದನನಾಗಿ 5
--------------
ವಿದ್ಯಾಪ್ರಸನ್ನತೀರ್ಥರು
ಭಾರತಿದೇವಿ ಭಕ್ತಿಯನು ನೀಡಮ್ಮ ಭಾರತೀದೇವಿ ಪ. ಭಕ್ತಿ ದಾತೆಯು ಎಂದು ಶ್ರುತಿ ಶಾಸ್ತ್ರ ಸಾರುತಿವೆಅ.ಪ. ಕಾಮ ಕ್ರೋಧಗಳೆಲ್ಲ ಮನೆಮಾಡಿಕೊಂಡುತಾವೆನೇಮದಿಂ ಪರಿಪರಿ ಕಾಡುತಿಹವುಪ್ರೇಮಿ ನಿನ್ನಯ ಪಾದಕಮಲದಲಿ ಮತಿ ಕೊಟ್ಟುಕಾಮನಯ್ಯನ ತೋರು ಸೋಮಶೇಖರ ಜನನಿ 1 ಮಧ್ವಮತದಲಿ ಎನಗೆ ಶ್ರದ್ಧೆ ಪುಟ್ಟದೆ ಪೋಯ್ತುಸಿದ್ಧವಾಗಿಹುದು ಮನ ದುರ್ವಿಷಯಕೆಬುದ್ಧಿವಂತಳೆ ನಿನ್ನ ಮುದ್ದು ಮುಖವನು ತೋರಿಉದ್ಧಾರ ಮಾಡೆ ಶ್ರೀ ಹದ್ದುವಾಹನ ತನಯೆ 2 ಕರುಣವಾರಿಧಿಯೆಂದು ಮರೆಯ ಪೊಕ್ಕೆನು ತಾಯೆಕರಪಿಡಿದು ಕಾಪಾಡೆ ಉರಗವೇಣಿಕರುಣಸಾಗರ ತಂದೆವರದವಿಠಲನನ್ನುನಿರುತದಿ ಭಜಿಸುವ ಭರತರಾಜನ ರಾಣಿ 3
--------------
ಸಿರಿಗುರುತಂದೆವರದವಿಠಲರು