ಒಟ್ಟು 19 ಕಡೆಗಳಲ್ಲಿ , 9 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(2) ರಾಮಾನುಜರು ಬೇಡಿಕೊಂಬುವೆನು ನಿಮ್ಮ ರಾಮಾನುಜರೆ ಬೇಡಿಕೊಂಬುವೆನು ನಿಮ್ಮಾ ಪ ಪಾಡಿ ಹಿಗ್ಗುವ ಸುಖವ ಸಂತತ ಕಮಲ ಮಧ್ಯದೊ ಳಾಡುತೆನ್ನನು ರಕ್ಷಿಸೆನುತಲಿ ಅ.ಪ ಚರಮ ಶ್ಲೋಕವ ಬೋಧಿಸಿ ಅಷ್ಟಾಕ್ಷರಿಯೊ ಳಿರುವ ಗೋಪ್ಯವ ತೋರಿಸಿ ಗೈವುತ ಪ್ರಣವ ಶಬ್ದದಿ ಬೆರಸಿ ನಿನ್ನನೆ ಭಜಿಸಿ ಸ್ಮರಿಸುತ ಪರಮನಾಗುವ ಮತಿಯ ತ್ವರಿತದಿ 1 ಅಷ್ಟಮದಗಳು ಎನ್ನನೂ ಬಂಧಿಸಿ ಮಾಯಾ ಅಷ್ಟಪಾಶದಿ ನೊಂದೆನೊ ದುಷ್ಟಕಾಮಾದಿಗಳ ಭ್ರಾಂತಿಯು ಕಟ್ಟ ನರಕದಿ ಕೆಡಹಿ ಸುಡುತಿದೆ ಭ್ರಷ್ಟಗುಣಗಳ ದೂರಸೇರಿಸಿ ಶ್ರೇಷ್ಠಮುಕ್ತಿಯ ಪಡೆವ ವಿರತಿಯ 2 ಜ್ಯೋತಿ ಜ್ಯೋತಿಯ ನಿಲ್ಲಿಸಿ ಹೂಬಳ್ಳಿಯೊಳ್ ಜ್ಯೋತಿನೋಡು ಪೂಜಿಸಿ ಮಾತೆ ಮಾತುಳ ಪಾಲಕಾನುಜ- ಸತಿ ಸುತ ಬಂಧು ಮಿತ್ರ ವ್ರಾತ ಸಂಗಡಬಂಧಬಿಟ್ಟು ಪು ನೀತನಾಗಲಿಬೇಕು ಎನುತಲಿ 3 ಯಾದವಾದ್ರಿಯ ವಾಸನೆ ಭಕ್ತರನೆಲ್ಲ- ಮೋದದಿಂದಲಿಯಾಳ್ವನೇ ಮೇದಿನೀಮಹದೇವಪುರವರ ನಾದಶ್ರೀಗುರುರಂಗ ನಿನ್ನ ಸು- ಪಾದನಂಬಿದ ರಂಗದಾಸನ ಪರಮಯೋಗಿಯು ಎನ್ನಿಸೆನುತಲಿ 4 ಅಷ್ಟಾಕ್ಷರದ್ವಯದರ್ಥದಿ ನಿಷ್ಠಾಪರನಾಗಿ ಮನದಿ ನಿರುತಂ ಜಪಿಸಲ್ ಇಷ್ಟಾರ್ಥವು ಸಿದ್ಧಿಸುತಂ ಅಷ್ಟಮನೋಳ್ಬೆರದುನಿಲ್ವನಿದು ಸಿದ್ಧಾಂತಂ ಕಂದ
--------------
ರಂಗದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಅನಂತಗಿರಿವಿಠಲ | ಪಾಲಿಸೋ ಇವಳಾ ಪ ಗುಣಪೂರ್ಣ ಶ್ರೀಹರಿಯೆ | ಬೇಡುವೆನು ಧೊರೆಯೇ ಅ.ಪ. ಸಿದ್ಧಿಸುತ ಶಿಷ್ಯತ್ವ | ಶುದ್ಧ ಸ್ವಪ್ನದೊಳೀಕೆಉದ್ಧಾರಕೆಂದೆನುತ | ಪ್ರಾರ್ಥಿಸುತ್ತಿಹಳೋ |ಮಧ್ವರಮಣನೆ ದೇವ | ಸಿದ್ದಾಂತ ಸಾರವನುಬುದ್ದಿಗೇ ನಿಲುಕಿಸೋ | ಭದ್ರಮೂರುತಿಯೆ 1 ಪ್ರಾಚೀನ ದುಷ್ಕರ್ಮ | ಮೋಚನೆಗೆ ಮನಮಾಡೋವಾಚಾಮ ಗೋಚರನೆ | ಖಚರಾರಿ ವಂದ್ಯನೀಚೊಚ್ಚ ತರತಮವ | ವಾಚಿಸುತ ಕರ್ಮಗಳಪಾಚಿಯನೆ ಕಳೆಸವ್ಯ | ಸಾಚಿ ಸಖದೇವಾ 2 ಹರಿಪಾದ ರತಿ ಕೊಟ್ಟು | ಹರಿ ಗುರು ಸೇವೆಗಳನಿರುತಗೈಯುವ ಮನವೆ | ಪರಿಪಾಲಿಸ್ಹರಿಯೇಅರವಿಂದನಾಭಹರಿ ಸರ್ವ ಸತ್ಸಾಧನವನೆರವೇರಿಸೆಂದೆನುತ | ಪ್ರಾರ್ಥಿಸುವೆ ಹರಿಯೇ 3 ಜ್ಞಾನಾನು ಸಂಧಾನ | ಮಾಣದಲೆ ಇತ್ತಿವಳಧ್ಯಾನ ಮಾರ್ಗಕೆ ತಂದು | ಮೌನಿ ಜನ ವಂದ್ಯಾಸಾನುರಾಗದಿ ನಿನ್ನ | ಹೃದಯ ಗಹ್ವರದಲ್ಲಿಕಾಣುವ ಸುಸಾಧನವ | ನೀನೇ ಮಾಡಿಸೊ ಹರಿಯೇ 4 ಸರ್ವಾಂತರಾತ್ಮಕನೆ | ದುರ್ವಿ ಭಾವ್ಯನೆ ದೇವಸರ್ವಕರ್ಮದಿ ನಿನ್ನ | ಸಂಸ್ಕøತಿಯ ನಿತ್ತುದರ್ವಿಜೀವಿಯ ಕಾಯೋ ಸರ್ವೇಶ ಶ್ರೀಹರಿಯೆಶರ್ವನೊಡೆಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಎಚ್ಚರಾದರು ದೇವಗಣರಿಂದು ನಮ್ಮ ಲಕ್ಷ್ಮೀರಮಣ ಕೃಷ್ಣ ರಥವನೇರುವನೆಂದು ಪ. ಶಿಂಶುಮಾರ ಚಕ್ರದಂಶಮಕರ ತಿ- ಗ್ಮಾಂಶು ಸಂಕ್ರಮಿಸುವ ಸಮಯದಲಿ ಕಂಸಮರ್ದನ ಯದು ವಂಶಾಬ್ಧಿ ಚಂದ್ರ- ವಿಪಾಂಗಗಮನನಾಗಿ ವೀಧಿಗೆ ಬಹನೆಂದು 1 ಕಂದನ ಸಂಭ್ರಮ ತಂದೆಗೆ ಸುಖಕರ- ವೆಂದು ಪೇಳುವ ಮಾತ ನಿಜವ ದೋರಿ ಮಂದರಧರ ಮನ್ಮಥನ ಕೇತು ಬೆಳಗುವಾ- ನಂದದಿ ರಥವೇರುತ್ತಿಂದು ಬರುವನೆಂದು 2 ಮೋಕ್ಷದಾಯಕ ಕಮಲಾಕ್ಷ ಕೃಷ್ಣನ ಸ- ತ್ಕಟಾಕ್ಷ ಸಂಪಾದಿಪಪೇಕ್ಷೆಯಲಿ ತ್ರ್ಯಕ್ಷಾಧ್ಯಕ್ಷಲೋಕಾಧ್ಯಕ್ಷರೆಲ್ಲರು ಕೂಡಿ ಪಕ್ಷಿವಾಹನನನ್ನು ಈಕ್ಷಿಪ ತವಕದಿ 3 ಪೃಥೆಯ ಕುಮಾರನ ರಥವ ನಡಸುತತಿ- ರಥರನು ಗೆಲಿಸಿ ಸಾಮ್ರಾಜ್ಯವಿತ್ತ ಕಥೆಯ ಕೇಳ್ಪರ ಮನೋರಥಗಳ ಕೊಡುವ ಮ- ನ್ಮಥನ ಜನಕ ಮುಕ್ತಿ ಪಥವ ತೋರುವನೆಂದು 4 ಸಿದ್ಧಿ ವಿಘ್ನಮುಖ ದೋಷಭೇಷಜ ಭಕ್ತಿ ಸಿದ್ಧ ಜಪರಿಗೆ ಸಿದ್ಧಿಸುವನೆಂದು ಮಧ್ವಮುನಿಯು ತಂದಿಲ್ಲಿರಿಸಿ ಪೂಜಿಸಿದಂಥ ಸಿದ್ಧಾಂತವೇದ್ಯನಿರುದ್ಧನಿಲ್ಲಿಹನೆಂದು 5 ಧಾರುಣಿಯೊಳಗಿನ ವಿಷ್ಣುಭಕ್ತರ ಸಂಘ ಸೇರಿ ಸಂತೋಷದಿ ಜಯವೆನಲು ಪಾರಿವ್ರಾಜರು ಕೂಡಿ ಪರತತ್ವ ನುಡಿಯೆ ಸ- ರ್ಪಾರಿಯನೇರಿ ಸಮೀರೇಡ್ಯಬಹನೆಂದು 6 ಮಾಯಿಜನರ ಮುರಿದೊತ್ತುತ ತತ್ವರ- ಸಾಯನ ಸುಧೆಯ ಸಜ್ಜನರಿಗಿತ್ತು ವಾಯುಮುನಿಯು ಪ್ರತಿಷ್ಠೆಯ ಗೈದ ಪುರುಷಾರ್ಥ ದಾಯಕ ವೆಂಕಟರಾಯನೀತನೆಯೆಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯ ಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು-ಣೇಕ್ಷಣದಲಿ ನಿರೀಕ್ಷಿಸೆಮ್ಮನು3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು- ಣೇಕ್ಷಣದಲಿ ನಿರೀಕ್ಷಿಸೆಮ್ಮನು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಖಗವರಧ್ವಜ ವಿಠಲ ಪೊರೆಯ ಬೇಕಿವನ ಪ ಭಾಗವತ ಸುಶ್ಲೋಕ್ಯ ಬಗೆಬಗೆಯಲಿಂದಿವನಮಿಗಿಲಾಗಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತಪತಿಯೊಲಿಮೆಗಳು | ಕತ್ತರಿಸಿ ಪೋಗಿ ಕೃತಕೃತ್ಯತಾನೆಂಬ ಉ | ತ್ಕøಷ್ಟಮತಿಯೊದಗೇಕೃತಿವಾಸನ ತಾತ | ಇತ್ತುದಕೆ ಸಂತೃಪ್ತಿಪೊತ್ತು ತವದಾಸ್ಯವನು | ಅರ್ಥಿಸುವ ಹರಿಯೇ 1 ಪೋರನಾ ಮಯಕಳೆದು | ತಾರತಮ್ಯ ಜ್ಞಾನ ಮೂರೆರಡು ಭೇದಗಳ | ಸಾರವನೆ ಅರುಹೀಕಾರಣಿಕ ನೀನೆ ಉ | ದ್ದಾರವನೆ ಮಾಡೊ ಹರಿಬೇಕೊಂದ ಪ್ರಾರ್ಥಿಪೆನೊ | ಕಾರುಣ್ಯ ಮೂರ್ತೇ 2 ಅನೇಕ ಜನ್ಮದಲಿ | ಹೀನಯೋನಿಲಿ ನೊಂದುಜ್ಞಾನ ಸಾಧನ ವಿರದೆ | ದೀನ ನಾದವಗೇಮಾನ ನಿಧಿ ಶಾಸ್ತ್ರ ಸಂ | ಧಾನ ವೀಯುತ ತ್ವರ್ಯಧ್ಯಾನ ಸಾಧನ ವೀಯೊ | ಪ್ರಾಣಾಂತರಾತ್ಮಾ 3 ಲೌಕಿಕವನೆಲ್ಲ ವೈ | ದೀಕ ವೆಂದೆನಿಸೊ ಹರಿಕಾಕು ಸಂಗವ ಕೊಡದೆ | ನೀ ಕೊಡೊ ಸತ್ಸಂಗಏಕಮೇವನೆ ಸ್ವಾಮಿ | ಮಾಕಳತ್ರನೆ ನಿನ್ನ_ನೇಕ ಬಗೆಯಲಿ ತುತಿಪ | ವಾಕ್ಸಿದ್ಧಿ ಈಯೋ 4 ಪದ್ಮನಾಭನೇ ಹೃ | ತ್ಪದ್ಮದಲಿ ತವರೂಪಸಿದ್ಧಿಸುತ ಸಂಚಿತವ | ಪ್ರಧ್ವಂಸ ಗೈದೂಅದ್ವೈತ ತ್ರಯದರಿವು | ಬುದ್ದಿಗೆ ನಿಲುಕಿಸೆನೆಹೃದ್ಯ ಗುರು ಗೋವಿಂದ ವಿಠಲ ಬಿನ್ನವಿಪೇ 5
--------------
ಗುರುಗೋವಿಂದವಿಠಲರು
ಜಯ ಮಂಗಳಂ ಮಹಾ ಶುಭಮಂಗಳಂ ಕ್ಷಯ ರಹಿತ ಗುರುಪಾದಾಂಗುಷ್ಠ ತೀರ್ಥಕ್ಕೆ | ಜಯ ಮಂಗಳಂ ಪ ಚರಣ ನಾಲ್ಕುಗಳಿಂದ ತೋರುತಿಹ ಜಗದುದಯಚರಣಮಯ ಜಗವೆಂದು ತಿಳಿದು ನಿಜದಿಚರಣ ತೀರ್ಥವ ನಿರಂತರ ಸೇವಿಸುವ ಜನರಜನನ ಮರಣವ ಹಿಂಗಿಸುವ ತೀರ್ಥಕ್ಕೆ 1 ಅಜ್ಞಾನ ಮಲನಾಶನವಾದುದದರಿಂದ ಸುಜ್ಞಾನ ವೈರಾಗ್ಯ ಸಿದ್ಧಿಸುವದು ವಿಜ್ಞಾನ ಮನದಿ ಉಭಯ ಪದದಲಿ ಐಕ್ಯ ಜಿಜ್ಞಾಸೆ ಹರಿದು ಮುಕ್ತಿಯ ಕೊಡುವ ತೀರ್ಥಕ್ಕೆ 2 ಶುಭ ಮಂಗಳಂ 3
--------------
ಗುರುರಾಮಲಿಂಗ
ದ್ವಾರಕಾನಾಥ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಶ್ರೀ ಹರಿಯೆ | ಸರ್ವ ಮಂಗಳನೇ ಅ.ಪ. ಶೀಲ ಗುಣ ಸಂಪನ್ನೆ | ಮಾಲೋಲ ತವ ಪಾದಓಲೈಪಜನರಲ್ಲಿ | ಲಾಲಿಸೋ ಇವಳಾ |ಮೇಲಾಗಿ ಭಿನ್ನವಿಪೆ | ಪಾಲಿಸಲಿ ಬೇಕೆಂದುಶ್ರೀ ಲೋಲ ಕಮಲಾಕ್ಷ | ಬಾಲ ಗೋಪಾಲ 1 ಕಾಮ ಜನಕನೆ ದೇವ | ಕಾಮಿತವ ಸಲಿಸುತ್ತವಾಮಾಂಗಿಯನು ಪೊರೆಯೊ | ಕಾಮಿತಾರ್ಥದನೇ |ಯಾಮ ಯಾಮಕೆ ನಿನ್ನ | ನಾಮಸ್ಮøತಿ ಕರುಣಿಸುತನೀ ಮಾಡಿ ಮಾಡಿಸೊ ನೇಮ ಸಾಧನವಾ 2 ಮಧ್ವ ಮತ ಪದ್ಧತಿಯ | ವೃದ್ಧಿಗೈಸಿವಳಲ್ಲಿಪದ್ಮನಾಭನೆ ದೇವ | ಮಧ್ವರಮಣಾ |ಶುದ್ಧ ಭಕ್ತಿ ಜ್ಞಾನ | ಸಿದ್ಧಿಸುತ ಇವಳಲ್ಲಿಮುದ್ದು ಗುರು ಗೋವಿಂದ | ವಿಠಲ ಉದ್ಧರಿಸೋ 3
--------------
ಗುರುಗೋವಿಂದವಿಠಲರು
ನಿನ್ನ ಸೇರಿದೆ ಮಹಾಲಿಂಗ ಎನ- ಗಿನ್ಯಾರು ಗತಿ ಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗ ಪ. ನಿನ್ನಂತೆ ಕೊಡುವ ಉದಾರ ತ್ರಿಭು- ವನ್ನದೊಳಿಲ್ಲದಕ್ಯಾವ ವಿಚಾರ ಮುನ್ನ ಮಾರ್ಕಾಂಡೇಯ ಮುನಿಯ ಭಯ ವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1 ಸರ್ವಾಪರಾಧವ ಕ್ಷಮಿಸು ಮಹಾ- ಗರ್ವಿತರಾಶ್ರಯಕ್ಕೊಲ್ಲದು ಮನಸು ಶರ್ವರೀಶಭೂಷ ನಿನ್ನ ಹೊರ- ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2 ಅಂತರಂಗದ ದಯದಿಂದ ಯುದ್ಧ- ಮಂ ತೊಡಗಿದೆ ಪಾರ್ಥನೊಳತಿಚಂದ ಪಂಥದ ನೆಲೆಯನ್ನು ತಿಳಿದು ಸರ್ವ- ದೊಡ್ಡದು ನಿನ್ನ ಬಿರುದು 3 ಸಿದ್ಧಿಸು ಸರ್ವಸಂಕಲ್ಪ ಅಡ್ಡ- ಬಿದ್ದು ಬೇಡುವೆ ನಿನಗ್ಯಾವದನಲ್ಪ ಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು4 ಅಂಜಿಕೆ ಬಿಡಿಸಯ್ಯ ಹರನೆ ಪಾ- ವಂಜಾಖ್ಯವರಸುಕ್ಷೇತ್ರಮಂದಿರನೆ ಸಂಜೀವನ ತ್ರಿಯಂಬಕನೆ ನವ- ಸಲಹೊ ಪಂಚಮುಖನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ವಿನುತ ಸಿರಿ | ರಾಮ ವಿಠಲ ಕಾಯೋ ಪ ಈ ಸತೀ ಮಣಿಯ ನೀ | ಸಲಹಬೇಕೆಂದುಶೇಷ ಸಂಜ್ಞಿತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಅಮೃತ ಕೂರ್ಮ | ರೂಪದಿಂದರುಹೀಉಪದೇಶ ನೀಡ್ವಗುರು | ರೂಪವನೆ ತೋರಿಸುತಅಪರಿಮಿತ ಕಾರುಣ್ಯ | ರೂಪನಾಗಿರುವೆ 1 ಪರಮ ಗುರು ನಿಜ ರೂಪ | ಎರಡು ಬಾರಿಯು ತೋರಿಸರಸನಾಬ್ಯಾದಿ ಹರುಷ | ಬೀರ್ದೆ ಭಯಹಾರೀಕರುಣವೆಂತುಟೊ ನಿನಗೆ | ಸುರಸಿದ್ಧ ಸಂಸೇವ್ಯಶಿರಿ ರಮಣ ಶ್ರೀರಾಮ | ಪರಮ ಪುರುಷನೆ 2 ಈ ಸತೀಮಣಿ ಬಯಕೆ | ನೀ ಸಲಿಸಿ ಲೌಕಿಕದಿಲೇಸು ಹೊಲ್ಲೆಗಳೆಂಬ | ಪಾಶಗಳ ಬಿಡಿಸೀದೋಷ ದೂರನೆ ಹರಿಯೆ | ನೀ ಸಲಹೆ ಪ್ರಾರ್ಥಿಸುವೆದಾಶರಥೆ ಪೊರೆ ಇವಳ | ಮೇಶ ಮಧ್ವೇಶಾ 3 ಮಧ್ವಮಾರ್ಗದಿ ಇಹಳು | ಶುದ್ಧ ಭಕ್ತಿಜ್ಞಾನಸಿದ್ಧಿಸುತ ಇವಳಲ್ಲಿ | ಉದ್ಧರಿಸೊ ಹರಿಯೇ |ಕೃದ್ಧ ಖಳ ಸಂಹಾರಿ | ಸದ್ಧರ್ಮ ಪಥತೋರಿಅಧ್ವಯನೆ ತವ ನಾಮ | ಶುದ್ಧ ಸುಧೆ ಉಣಿಸೋ 4 ಸರ್ವವ್ಯಾಪ್ತನೆ ದೇವ | ಪವನಾಂತರಾತ್ಮಕನೆದರ್ವಿ ಜೀವಿಯ ಕಾಯೊ | ಶರ್ವವಂದ್ಯಾ |ಸರ್ವ ಸುಂದರ ಗುರು | ಗೋವಿಂದ ವಿಠ್ಠಲನೆಈ ವಿಧದ ಬಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು