ಒಟ್ಟು 10 ಕಡೆಗಳಲ್ಲಿ , 7 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಭಿಡೆ ಇನ್ನ್ಯಾತಕೆ ಹೊಡಿ ಹೊಡಿ ಡಂಗುರ ಪೊಡವಿ ತ್ರಯದಿ ಹರಿ ಅಧಿಕೆಂದು ಪ ಅಡಿಯ ದಾಸರ ಕರದ್ಹಿಡಿದು ಬಿಡದೆ ಬಲು ಸಡಗರದಾಳುವ ನಿಜಧಣಿಯೆಂದು ಅ.ಪ ನಂದಕಂದ ಗೋವಿಂದ ಮುಕ್ಕುಂದ ಭಕ್ತ ಬಂಧು ಎಂದು ಕೈತಾಳವಿಕ್ಕುತ ತಂದೆ ತನ್ನ ಪಾದನ್ಹೊಂದಿ ಭಜಿಪರ ಬಂಧ ಛಿಂದಿಪ ಪರದೈವವೆಂದು ನಲಿಯುತ 1 ಸ್ಮರಿಪ ಜನರ ಮಹದುರಿತಪರ್ವತವ ತರಿದು ಪೊರೆವ ಸಿರಿದೊರೆಯೆಂದೊದರುತ ನೆರಳುಯೆಂದು ಮೈಮರೆದು ಕೂಗುತ 2 ಶರಣಾಗತರ ತನ್ನ ಹರಣದಂತೆ ಕಾಯ್ವ ಕರ ಮೇಲಕೆತ್ತಿ ಮರೆಯ ಬಿದ್ದವರ ಪರಮ ಬಡತನವ ಭರದಿ ಕಳೆದನೆಂದು ಒರೆದು ಸಾರುತ 3 ಸಾಗರಶಾಯಿ ತನ್ನ ಬಾಗಿ ಬೇಡುವರ ಬೇಗ ಕ್ಷೇಮನೀಯ್ವ ಭಾಗ್ಯದರಸನೆಂದು ನೀಗದ ಕಷ್ಟದಿ ಕೂಗಲು ತಡೆಯದೆ ಸಾಗಿ ಬರುವ ಭವರೋಗವೈದ್ಯನೆಂದು 4 ಅಚ್ಯುತಗಿಂ ಭಕ್ತರಿಚ್ಛೆ ಪೂರೈಸಲು ಹೆಚ್ಚಿನವಿರಲ್ಲೆಂದು ಬಿಚ್ಚಿ ಹೇಳುತ ಇಚ್ಛಜಪಿತ ಮಹಸಚ್ಚಿದಾನಂದ ಸರ್ವಕ್ಹೆಚ್ಚು ಹೆಚ್ಚು ಶ್ರೀರಾಮನೆ ಎನ್ನುತ 5
--------------
ರಾಮದಾಸರು
ಶ್ರೀಲೋಲನಲ್ಲೆ ಭಾಮೆ ಅವಲೋಲನಲ್ಲೆ ಭಾಮೆ ಪ ಲೋಲನೊ ಬಾಲನೊ ಗೋಪಾಲನೊ ನಾನರಿಯೆ ಅ.ಪ. ಇಂದು ತಮನ ಕೊಂದು ವೇದವ ತಂದವನಲ್ಲೆ ಭಾಮೆ ಅವತಂದವನಲ್ಲೆ ಭಾಮೆ ತಂದವನೊ ಬಂದವನೊ ಅದರಂದವನು ನಾನರಿಯೆ 1 ಅರ್ಥಿಯಿಂದಲಿ ಗಿರಿಯ ಬೆನ್ನಿಲಿ ಪೊತ್ತವನಲ್ಲೆ ಭಾಮೆ ಅವ ಪೊತ್ತನಲ್ಲೆ ಭಾಮೆ ಪೊತ್ತವನೊ ತೆತ್ತವನೊ ಅದರರ್ಥವನು ನಾನರಿಯೆ 2 ವರಾಹ ಸ್ವಾಮಿಯಲ್ಲೆ ಭಾಮೆ ಅವ ಸ್ವಾಮಿಯಲ್ಲೆ ಭಾಮೆ ಸ್ವಾಮಿಯೊ ಪ್ರೇಮಿಯೊ ಬಹು ಕಾಮಿಯೊ ನಾನರಿಯೆ3 ತರಳ ಪ್ರಹ್ಲಾದನಿಗೊಲಿದ ನರಹರಿಯಲ್ಲೆ ಭಾಮೆ ಅವ ನರಹರಿಯಲ್ಲೆ ಭಾಮೆ ನರಹರಿಯೊ ಸಿರಿದೊರೆಯೊ ಆ ಉರವಣಿಗೆಯ ನಾನರಿಯೆ4 ನೆಲನ ಈರಡಿ ಮಾಡಿ ಅಳೆದ ಚೆಲುವನಲ್ಲೆ ಭಾಮೆ ಅವ ಚೆಲುವನಲ್ಲೆ ಭಾಮೆ ಚೆಲುವನೊ ಮಲೆವನೊ ಅಂಡಲೆವನೊ ನಾನರಿಯೆ 5 ಕೊಡಲಿ ಮಸೆದು ರಾಯರನೆಲ್ಲ ಕೆಡಹಿದನಲ್ಲೆ ಭಾಮೆ ಅವ ಕೆಡಹಿದನಲ್ಲೆ ಭಾಮೆ ಕೆಡಹಿದನೊ ಮಡುಹಿದನೊ ಆ ತೊಡರವನು ನಾನರಿಯೆ 6 ಸೀತಾ ಚೋರನ ಕೊಂದ ರಘುನಾಥನಲ್ಲೆ ಭಾಮೆ ಅವ ನಾಥನಲ್ಲೆ ಭಾಮೆ ನಾಥನೊ ಖ್ಯಾತನೊ ಆ ಮಾತನು ನಾನರಿಯೇ 7 ಮಾವನ ಕೊಲಲು ಮಧುರೆಗೆ ಪೋದ ದೇವನಲ್ಲೆ ಭಾಮೆ ಅವ ದೇವನಲ್ಲೆ ಭಾಮೆ ದೇವನೊ ಭಾವನೋ ಗೋ ಕಾವನೊ ನಾನರಿಯೆ8 ತ್ರಿಪುರಾಂಗನೆಯರ ವ್ರತವನಳಿದ ಚಪಳನಲ್ಲೆ ಭಾಮೆ ಅವ ಚಪಳನಲ್ಲೆ ಭಾಮೆ ಚಪಳನೊ ವಿಪುಳನೊ ಆ ವಿಪರೀತವ ನಾನರಿಯೆ 9 ಓಜೆಯಿಂದ ತೇಜಿಯನೇರಿದ ರಾಜನಲ್ಲೆ ಭಾಮೆ ಅವ ರಾಜನಲ್ಲೆ ಭಾಮೆ ರಾಜನೊ ಭೋಜನೊ ಆ ಸೋಜಿಗವ ನಾನರಿಯೆ 10 ಸೃಷ್ಟಿಗೆ ಕರ್ತನು ವಿಜಯವಿಠ್ಠಲನಲ್ಲೆ ಭಾಮೆ ಅವ ವಿಠ್ಠಲನಲ್ಲೆ ಭಾಮೆ ವಿಠ್ಠಲನಾದರೆ ಇಷ್ಟೊಂದ್ಯಾತಕೆ ದಟ್ಟಡಿಗಳಿಗೊಂದಿಸುವೆ 11
--------------
ವಿಜಯದಾಸ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಹರಿಯೆ ಸಿರಿದೊರೆಯೆ ಅರಿಯೆ ನಿನ್ಹೊರತನ್ಯರ ಪ ಮೊರೆ ಹೊಕ್ಕಿರುವರ ದುರಿತಗಳ ಕಳೆವ ಅ.ಪ ಸೂರ್ಯ ಪ್ರಕಾಶ ಕುಮುದಾಪ್ತಮಿತ ಭಾಸ ನಾಟಕಾಧಾರ ಶ್ರೀಶ ಹಾಟಕ ಗರ್ಭತಾತ ಅಖಿಲ ಸದ್ಗುಣೋಪೇತ 1 ಮರಳಿ ಮರಳಿ ಜನನ ಮರಣಗಳೈದುತ ನರಕ ಸ್ವರ್ಗ ಭೂಲೋಕ ತಿರುಗಿ ಬಳಲುವವೋ 2 ಹಟದಿ ದುರ್ಮತಿಗಳಾರ್ಭಟಿಸುತಜ್ಞಾನದಿ ಮಟ ಮಾಯದಿ ಚರಿಸಿ ಘಟಿಪುದೇ ಗುರುರಾಮವಿಠಲ ನಿನ್ನಯ ಕರುಣ 3
--------------
ಗುರುರಾಮವಿಠಲ
ಹಿತವಾವುದದೆ ಪಥದಿ ಸತತದೆನ್ನಿರಿಸೊ ಮತಿಹೀನನ್ಹಿತದ ಪಥವರಿಯೆ ಹರಿಯೆ ಪ ಅರಿವಿಗರಿವು ನೀನು ಮರೆಯಮಾನವ ನಾನು ಹರಿದಾಸರರಸ ನೀ ಚರಣದಾಸನು ನಾನು ದುರಿತ ಪರಿಹರ ನೀನು ದುರಿತಕಾರಿಯು ನಾನು ದುರಿತ ಪರಿಹರಿಸೆನ್ನ ಪೊರೆಯೊ ಸಿರಿದೊರೆಯೆ 1 ಜೀವಜೀವೇಶ ನೀ ಜೀವನಾಧಾರ ನೀ ಪಾವನೇಶ್ವರ ನೀ ಭಾವಿ ಭಕ್ತನು ನಾ ಭವರೋಗದ್ವೈದ್ಯ ನೀ ಭವದ ರೋಗಿಯು ನಾನು ಭವರೋಗ ಪರಿಹರಿಸಿ ಪಾವನನೆನಿಸಭವ 2 ನಾಶರಹಿತನು ನೀನು ನಾಶಕಾರಿಯು ನಾನು ನಾಶನದಿಂದುಳಿಸೆನ್ನ ಪೋಷಿಸಲಿ ಬೇಕೊ ಅನುದಿನ ಮೀಸಲಮನದಿಂದ ಶ್ರೀಶ ಶ್ರೀರಾಮ ನಿಮ್ಮ ದಾಸನೈ ನಾನು 3
--------------
ರಾಮದಾಸರು
ಅಳದಿರೊ ಸುಮ್ಮನಿರಮ್ಮ ನೀಅಳದಿರೊ ಬವ್ವ ಬಂದಾವಮ್ಮ ಕೃಷ್ಣಮ್ಮ ಪ.ನಾಲ್ಕು ಮೊಗವುಳ್ಳ ಬವ್ವ ಹದಿನಾಲ್ಕು ಜಗವ ಜೋಳಿಯಲ್ಲಿಟ್ಟ ಬವ್ವಗೋಳಿಟ್ಟಿಸುತಿದೆ ಬವ್ವ ನಿನ್ನಕಾಲು ಕಂಡರೆ ಕಚ್ಚಿ ಕೊಂಡೊಯ್ವ ಬವ್ವ 1ಗಗನ ತುಂಬ್ಯಾಡುವ ಬವ್ವ ಪ್ರಾಣಿಗಳ ದೇಹವ ಪೊಕ್ಕು ಚೇಷ್ಟಿಪ ಬವ್ವಜಗವನಲ್ಲಾಡಿಪ ಬವ್ವ ನಿನ್ನಮೊಗವರಿತು ದೂರಲಿ ದಿ? ನಿಂತಿಪ್ಪ ಬವ್ವ 2ಮೊಗವೈದು ಪಣೆಗಣ್ಣ ಬವ್ವ ಪುಲಿದೊಗಲು ಕೆಂಜೆಡೆ ರುಂಡಮಾಲೆಯ ಬವ್ವಬಗೆಯಿಂದ ಪೆಣ್ಣೆತ್ತಿ ಬವ್ವ ತಾಸೊಗಸಿಲೆ ರಾಮರಾಮೆನುತಿದೆ ಬವ್ವ 3ಮೈಯೆಲ್ಲ ಕಣ್ಣಿನ ಬವ್ವÀ ತನ್ನಕೈಯಲ್ಲಿ ವಜ್ರವ ಬೀಸುವ ಬವ್ವಉಯ್ಯಲಾಡುತಲಿದೆ ಬವ್ವ ನಿನ್ನಒಯ್ವೆನೆನುತ ಬಂತು ಹಲಕಾಲ ಬವ್ವ 4ಒಂದಲ್ಲ ನೂರಲ್ಲ ಬವ್ವ ನಿನ್ನಮಂದಿರ ಸುತ್ತುತವನಂತ ಬವ್ವಪೊಂದೊಟ್ಟಿಲೊಳು ನಿದ್ರೆಗೆಯ್ಯೈ ಎನ್ನತಂದೆ ಪ್ರಸನ್ವೆಂಕಟ ಸಿರಿದೊರೆಯೆ 5
--------------
ಪ್ರಸನ್ನವೆಂಕಟದಾಸರು
ದಾಸರಿಗೆ ದುರಿತದೋರದುಶೇಷಾಧೀಶ ಶ್ರೀ ಶ್ರೀನಿವಾಸನದ್ವೇಷಖಳ ಮೋಳಿಗೆಯ ನಿ:ಶೇಷವೆನಿಸಿ ನಿಜಜನರ ವರ್ಧಿಪನ ಸುರಾಧಿಪನ ಸುಪ್ರತಾಪನ ಪ.ಅವನಿಯ ಕೊಂಡಿಳಿದವನ ಕೊಂದವನಿ ತಂದ ವನಜಭವ ಸನಕಾದ್ಯರಿಗೊಲಿದನಕುವರ ತನ್ನವರಿದ್ದಾಟವಿಯಲಿದ್ದವನ ಭಯವ ನಿವಾರಿಸಿ ಕುವರಗೆ ವರದನ ಪೊರೆದನ ಮೆರೆದನ 1ವಿಧಿಪದಕರ್ತರ ಗುರುಸುಖತೀರ್ಥರಹೃದಯ ಮಂಗಳ ಮಾನಸದ ಮರಾಳನಪದಸೋಂಕಿಸಿ ಪಾರಾಕಿಯನು ತ್ವರಿಯದಿಸುದತಿಯ ಮಾಡಿದುದರಿಯಾಘಹಾರಿಯ ಅರಿದಾರಿಯಮುರಾರಿಯ 2ಕಿರುಗೆಜ್ಜೆ ನೂಪುರ ವರಜಾಂಬೂನದಾಂಬರದಾಮಕೌಸ್ತುಭಸಿರಿವತ್ಸ ಕೇಯೂರಹಾರ ಕರವಲಯಕುಂಡಲಮಣಿಮಕುಟಾಭರಣಭೂಷಿತ ಘನಗಾತ್ರನಬ್ಜನೇತ್ರನ ಮಾಕಳತ್ರನ ಖಗಪತ್ರನ3ಸಿರಿದೊರೆತಿರೆ ಬೆರೆತಿರದೆ ಆ ಹರಿಶರಣರವೆರೆಸಿ ಗರ್ವಜರಿದು ಶ್ರೀಹರಿಯಗುರುನಿರೂಪದಪರಿಅರಿದೆಡರದರಿದುಅರಿಅರುವರಿಗಂಜದಿಹ ಅಳುಕದಿಹ ದೃಢದಲ್ಲಿಹ ಮುಕ್ತನಾಗಿಹ4ಪಂಚಬೇಧ ವಿವರ ತಿಳಿದು ತತ್ವ ಜಪಿಸಿಪಂಚರಾತ್ರಾಗಮ ತಂತ್ರಸಾರಾರ್ಥಗಳಿಂಮಿಂಚುವ ಭಕ್ತಿ ಪಥದಲಿ ನಿಜಾಯುವಹಿಂಚುಮಾಡುವ ಭವಾರ್ಣವವನೀಸಾಡುವ ಕಡೆಗೋಡುವನಲಿದಾಡುವ 5ವೆಂಕಟೇಶನ ನಾಮ ಪಾಡಿಕೊಂಡಾಡುವವೆಂಕಟೇಶನಾಕೃತಿ ನೋಡೊಲೆದಾಡುವವೆಂಕಟೇಶನ ಕಥಾಮೃತಕೇಳಿಬಾಳುವವೆಂಕಟೇಶನ ಚರಣವೆ ಶರಣೆನುವ ಕಾರಣೆನುವ ಪೂರಣೆನುವ 6ಮೊದಲೆ ಸ್ವಾಮಿ ಪುಷ್ಕರಣಿ ಶ್ರೀವರಾಹನಸದಮಲ ಸುವಿಮಾನ ಶ್ರೀನಿವಾಸನಇದೀಗೆ ಭೂವೈಕುಂಠವೆನಿಪಾನತರಾದರ ಪ್ರಸನ್ವೆಂಕಟೇಶನ ಕಾಣುವ ಶಮಮಾಣುವ ಕೊಬ್ಬಿಕುಣಿವ 7
--------------
ಪ್ರಸನ್ನವೆಂಕಟದಾಸರು
ಶ್ರೀ ನರಸಿಂಹ ಸ್ತೋತ್ರ11ವಂದಿಸು ನರಹರಿಯ ಮನವೆ ವಂದಿಸು ನರಹರಿಯವಂದ್ಯವಂದ್ಯನು ಬಹು ಸುಂದರ ಸುಖಮಯಇಂದಿರರಸ ಅರವಿಂದ ಸುನಾಭನ ವಂದಿಸು ನರಹರಿಯ ಪಸಿಂಧುಸಂಚರ ಬಹು ಸುಂದರ ಗಿರಿಧರತಂದನು ವಸುಧೆಯ ಕಂದನ ಕಾಯ್ದ ಪುರಂದರವರದ ಮುನೀಂದ್ರ ಕುಮಾರ ಕಪೀಂದ್ರಗÉ ಒಲಿದಮರೇಂದ್ರಗೆ ಬೋಧಿಸಿನಿಂದ ದಿಗಂಬರಕುಂಭಿಣಿಸುರನುತಮಂದರಗಿರಿ ಎತ್ತಿ ಸಿಂಧುವಿಂದಲಿ ಬಂದುಅಂಧ ಮೂಢರ ತನ್ನ ಅಂದ ಮೋಹದಿಕಟ್ಟಿದಾನ್ತ ಸುರರಿಗೆಲ್ಲ ಚಂದ ಸುಧೆಯನಿತ್ತಇಂದಿರಾಕಾಂತನನಂತ ಸುಗುಣಗಳಚಿಂತಿಸಿ ಯೋಗ್ಯದಿ ಕಂದದ ಪ್ರೇಮದಿವಂದಿಸು ನರಹರಿಯ 1ವೇದಾಂತರ್ಗತಬಾದರಾಯಣಹರಿಪಾದಾರಾಧಕಮೋದಸುತೀರ್ಥರಪಾದಾವಲಂಬಕ ಸಾಧು ಸುಮೇಧರಹೃದಯಾಕಾಶದಿ ಪದುಮದ ಮೂಲದಿಸದಮಲಾತ್ಮನಾದಿತ್ಯನುಪೋಲುವಿಧವಿಧಭಾಸದಿ ಪದೆ ಪದೆ ನೋಡುತವಿಧಿಯ ತಾತನ ಬಹುಮೋದಸುಗುಣಗಳಮುದದಲಿ ಚಿಂತಿಪಕೋವಿದಹಿರಿಯರಪಾದಸುಪಾಂಶುವ ನಿಯಮದಿ ಪೊಂದಿ ನೀಪದುಮೇಶನ ನಿನ್ನ ಹೃದಯದಿ ಚಿಂತಿಸಿವಂದಿಸು ನರಹರಿಯ 3ನಿಜಸುಖಮಾರ್ಗದಿ ಭಜಕ ಬಾಲಕ ಪೋಗೆಅರ್ಜಿತ ದ್ವೇಷದಿ ಮೂರ್ಜಗ ಶತ್ರುಗಜಾದಿಗಳಿಂ ಹೆಜ್ಜೆಜ್ಜೆಗೆ ಬಾಧಿಸೆಧೂರ್ಜಟಸೇವ್ಯ ಜನಾರ್ಧನ ನರಹರಿಗರ್ಜಿಪ ವದನನು ಸಜ್ಜನಪಾಲಕಅಜಸುರರೆಲ್ಲರು ತೇಜೋಮಯ ಅತಿಜ್ವಲಿಸುವ ನಖದಿಂ ದುರ್ಜನ ರಾಜನಜೋಜ್ಜೆಯ ಛೇದಿಸಿ ಭಜಕಗೆ ವರವಿತ್ತುಸೃಜ್ಯಾಸೃಜ್ಯರ ಪ್ರಾಜÕನ ಮರೆಯದೆವಂದಿಸು ನರಹರಿಯ 3ಸೃಷ್ಟ್ಯಾಧೀಶನದೃಷ್ಟನಾಗಿರುತಿಹಸೃಷ್ಟಾಸೃಷ್ಟ ಪ್ರವಿಷ್ಟಾಸೃಷ್ಟನುಶಿಷ್ಟರ ಇಷ್ಟ ಸುದೃಷ್ಟಿಯ ಬೀರುತಶಿಷ್ಟರ ಬಹು ವಿಧ ಕಷ್ಟಗಳಳಿದುಅಭೀಷ್ಟಗಳೀವನು ದುಷ್ಟರ ಶಿಕ್ಷಿಪಭ್ರಷ್ಟಜನರಿಗಿವ ಸ್ಪಷ್ಟನಾಗುವನಲ್ಲಶ್ರೇಷ್ಠೋತ್ತಮಪರಮೇಷ್ಠಿಜನಕನಿವಕಾಷ್ಟಾಗ್ನಿಯವೊಲ್ ಅದೃಷ್ಟಾದೃಷ್ಟನುದುಷ್ಟದೂರ ವಾಸಿಷ್ಠ ಶ್ರೀ ಕೃಷ್ಣನುತಿಷ್ಟನು ನಿನ್ನೊಳುತ್ಕøಷ್ಟನೆಂದರಿತುವಂದಿಸು ನರಹರಿಯ 4ಸರಿಪರರಿಲ್ಲದ ಸಿರಿಯರಸನಚಾರುಚರಣಾರಾಧನ ಪರಸುಖವೀವುದುಸಿರಿದೊರೆ ಸುಹೃದನು ಸಿರಿಸಹ ಮೆರೆಯುತಅರಿತ ಸುಜನರನು ಪೊರೆವನು ದಯದಿಮೊರೆಯನು ಲಾಲಿಸಿ ಪೊರೆದನು ಗರ್ಭವಮರೆತು ನಾರಾ ಎಂದ ನರಸುರಗೊಲಿದನುಪೊರೆದನು ದಯದಿ ನರಾಧಮ ಎನ್ನನುಕರಿವರ ದ್ರೌಪದಿವರದ ವಿಖ್ಯಾತನುಸರಸಿಜಭವತಾತ ಪ್ರಸನ್ನ ಶ್ರೀನಿವಾಸಪೊರೆವನು ನೆನೆವರ ಸಿರಿಭೂದೊರೆಯೆಂದುವಂದಿಸು ನರಹರಿಯ 5
--------------
ಪ್ರಸನ್ನ ಶ್ರೀನಿವಾಸದಾಸರು