ಒಟ್ಟು 5 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಜನ್ಮವ್ಯರ್ಥವಾಯಿತು ಶಾಙ್ರ್ಗಧನ್ವ ನಿನ್ನನಂಬದೆ ಪ ಮನ್ಮಥನಾಟದಲ್ಲಿ ಮರೆತು ಹೋಗಿಕಾಲ ನಾಕಳದೇ ಅ.ಪ ಹೊಟ್ಟೆಗೋಸಗ ಕಾಡಿಬೇಡಿ ನಿಷ್ಟುರಗಳನಾಡುತಾ ಕೆಟ್ಟವನಿವನೆನಿಸಿ ಕೊಂಡು ಕೀರ್ತಿಶೂನ್ಯನಾಗುತಾ 1 ನಿತ್ಯಕರ್ಮಮಾಡದೆ ಗೃಹಕೃತ್ಯದಲ್ಲಿ ಬಳಲುವೆ ಸತ್ಯವೆಂಬುದು ಸ್ವಪ್ನದಲ್ಲಿಯು ಸಾಧ್ಯವಾಗದು ಜನರಿಗೆ2 ಸುಳ್ಳು ಹೇಳುವವನ ಜನರು ಒಳ್ಳೆವನಿವನೆಂಬರು ಬಲ್ಲ ಹಿರಿಯರಾಡುವ ನುಡಿ ಭಕ್ತಿಯಿಂದನಂಬರು 3 ಖಲರು ನಡಿಯಲಾರದೆಯಿದು ಕಲಿಯುಗವೆಂದು ನಿಂದಿಸೀ ಕೊಲೆಗೆ ಗುರಿಯಾಗಿ ಕಾಮ ಕ್ರೋಧಗಳಿಂದ ಬಂಧಿಸಿ 4 ಹೀನ ವಿದ್ಯಗಳೆಚ್ಚಿತು ಸುಜ್ಞಾನಬೋಧೆ ತಗ್ಗಿತು ಸ್ವಾನುಭವಕೆ ಹಾನಿಕರ ನಿಧಾನಿಸೇ ಧರ್ಮ ಕುಗ್ಗಿತು 5 ದುರ್ಗುಣಿಗಳ ತೃಪ್ತಿಪಡಿಸೆ ಭರ್ಗಗಾದರು ಸಾಧ್ಯವೇ ನಿರ್ಗಮಿಸುವಧ್ಹ್ಯಾಗೆ ನಾವಿನ್ನಿರುವುದು ಭೂಮಿಭಾರವೆ6 ಲೇಶ ಸಾಧನವಾಗುವದಿಲ್ಲ ಆಸೆ ಅಧಿಕವಾದುದರಿಂದ ಘಾಶಿಪಡುವದಲ್ಲದೆ ದೇಹಾಯ್ಸವೇಕೆ ಪಡುವೆನಾಂ 7 ಮಾನವಿಲ್ಲ ಜ್ಞಾನವಿಲ್ಲ ಮಮತೆಯೆಂಬೋದು ಬಿಡದಲ್ಲಾ ಹೀನಾರನಾಸೇವಿಸಲಾರೆ ಹಿತವ ಕಾಣೆ ಸಿರಿನಲ್ಲಾ8 ಇರುಳು ಹಗಲು ನಿನ್ನ ದಿವ್ಯ ಚರಣಸೇವೆ ಪಾಲಿಸೊಗುರುರಾಮ ವಿಠಲನೆ ಪಾಮರರ ಬಿನ್ನಹ ಲಾಲಿಸೊ9
--------------
ಗುರುರಾಮವಿಠಲ
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ1 ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕÀ ಬಾ ಹಸೆಯ ಜಗುಲಿಗೆ 2 ಸಾಮಜರಾಜಾ ವರದಾ ಬಾ | ಸಾಮವಿಲೋಲನೆ ಸದ್ಗುಣ ಶೀಲನೆ ರಾಮಾ ಬಾ || ರಣರಂಗಭೀಮಾ ಬಾ ಹಸೆಯಾ ಜಗುಲಿಗೆ 3 ಅಚ್ಯುತ ಉನ್ನತ ಮಹಿಮನೆ ಯಾದವ ಬಾ | ಘನ್ನ ಮೂರುತಿಯೆ ಸುಪ್ರಸನ್ನಾ ಬಾ ಸಚ್ಚರಿತಾ ಬಾ | ಭಾಗ್ಯ ಸಂಪನ್ನಾ ಬಾ ಜೀವರ ಭಿನ್ನಾ ಬಾ ಹಸೆಯಾ ಜಗುಲಿಗೆ 4 ನಾರಾಯಣ ದಶರೂಪಾ ಬಾ | ಚಾರುಚರಿತಾ ಪ್ರತಾಪ ಬಾ | ಶೌರಿ ಮುರಾರಿಯೆ ನಿಟಿಲ ಕಸ್ತೂರಿಯ ಲೇಪಾ ಬಾ || ನಿತ್ಯ ಸಲ್ಲಾಪಾ ಬಾ ನಮ್ಮ ಸಮೀಪ ಬಾ ಹಸೆಯಾ ಜಗುಲಿಗೆ 5 ವಾಸುದೇವ ಮುಕುಂದಾ ಬಾ | ಸಾಸಿರನಾಮ ಗೋವಿಂದಾ ಬಾ | ಕೇಶವ ಪುರುಷೋತ್ತಮ ನರಸಿಂಹ ಉಪೇಂದ್ರ ಬಾ || ಗೋಪಿಕಂದಾ ಬಾ | ಬಹುಬಲ ವೃಂದಾ ಬಾ | ಅತಿಜವದಿಂದಾ ಬಾ ಹಸೆಯಾ ಜಗುಲಿಗೆ 6 ಪರತತ್ವದಿ ಅತಿ ಚಿಂತಾ ಬಾ | ಪರಬೊಮ್ಮನೆ ಅತಿ ಶಾಂತಾ ಬಾ | ಪರಮಾತ್ಮನೆ ಪರಿಪೂರ್ಣ ವಿಭೂತಿವಂತಾ ಬಾ || ಅಖಿಳ ವೇದಾಂತಾ ಬಾ | ರುಕ್ಮಿಣಿಕಾಂತಾ ಬಾ | ಸದ್ಗುಣವಂತಾ ಬಾ ಹಸೆಯಾ ಜಗುಲಿಗೆ7 ತ್ರಿದಶಗುಣನುತ ವಿಲಾಸಾ ಬಾ | ಮಾಧವ ಶ್ರೀಧರನೆ ಸುನಾಸಾ ಬಾ || ಸಿರಿಮಂದಹಾಸಾ ಬಾ | ಭಕುತ ಉಲ್ಲಾಸಾ ಬಾ | ಶ್ರೀ ಶ್ರೀನಿವಾಸಾ ಬಾ ಹಸೆಯಾ ಜಗುಲಿಗೆ8 ಕೃಷ್ಣವೇಣಿಯ ಪಡೆದವನೆ ಬಾ | ರಥ ಹೊಡೆದವನೆ ಬಾ | ಕೃಷ್ಣೆಯ ಕಷ್ಟವ ನಷ್ಟ ಮಾಡಿದ ಕೃಷ್ಣಾ ಬಾ || ಯದುಕುಲ ಶ್ರೇಷ್ಠ ಬಾ | ಸತತ ಸಂತುಷ್ಟ ಬಾ | ಉಡುಪಿಯ ಕೃಷ್ಣ ಬಾ ಹಸೆಯಾ ಜಗುಲಿಗೆ 9 ಎಲ್ಲರೊಳಗೆ ವ್ಯಾಪಕನೆ ಬಾ ಬಲ್ಲಿದ ದೊರೆಗಳ ಅರಸನೆ ಬಾ | ನಾ ಎಲ್ಲಿ ನೋಡಲು ಪ್ರತಿಗಾಣೆ ನಿನಗೆ ಸಿರಿನಲ್ಲಾ ಬಾ || ಅಪ್ರತಿಮಲ್ಲ ಬಾ ಭಕ್ತವತ್ಸಲಾ ಬಾ | ವಿಜಯವಿಠ್ಠಲ ಬಾ ಹಸೆಯ ಜಗುಲಿಗೆ10
--------------
ವಿಜಯದಾಸ