ಒಟ್ಟು 41 ಕಡೆಗಳಲ್ಲಿ , 18 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ನೀನೆ ದೀನಜನ ಬಂಧೂ ದಯಾರಸ ಸಿಂಧೂ ಪ ದಿವಿಜರ ಸಮುದಾಯವಿದ್ದರೇನು ಅವನ ವ್ಯಾಳೆಗೆ ಒದಗಲಿಲ್ಲಾ ಅವನಿವಲ್ಲಭ ಅವ್ಯಯವೆಂದರೆ ಅವಸರಕ್ಕೊದಗಿ ಕಾಯದೇ ಕೃಷ್ಣಾ 1 ಭೂತ ಪರಿವಾರವಿದ್ದರೇನು ಆತನ ಅಭಂಗಕ್ಕೆ ಒದಗಲಿಲ್ಲಾ ಪೂತಾತ್ಮ ಪುರುಷೋತ್ತಮನೆಂದರೆ ಚಾತುರ್ಯದಿಂದ ಸಲಹಿದೆ ಕೃಷ್ಣಾ 2 ಚತುರಾಸ್ಯಾದಿಗಳು ಇದ್ದರೇನು ಶ್ರುತಿಯಹಾನಿರೆ ಒದಗಲಿಲ್ಲಾ ಚತುರಾತ್ಮ ಸಿರಿಪತಿ ಉರಗಾದ್ರಿ ಪತಿ ವಿಜಯವಿಠ್ಠಲನೇ ಕಾಯ್ದ ಕೃಷ್ಣಾ3
--------------
ವಿಜಯದಾಸ
ಶರಣೆಂಬೆ ನಾ ಶರ್ವಾಣಿ ವರನ | ಸಿರಿಪತಿ ಶಾಙ್ರ್ಗಧರನ ವರಸಿಂಧು ನಗರದೊಳು |ಸ್ಥಿರ ಭೋಗಗೊಂಬ ಸಂಗಮನ ಪ ಬಾಲೇಂದು ಮುಡಿದ ಭಸಿತಾಂಗ | ಕಾಳಿಗರ್ಧಾಂಗಾ |ಪಾಲಿಸಿ ಕೊಡುವರೆ ದೊರೆಯ ಪೇಳಲಿಕಿನ್ನಾರನೈದಾರೆ |ಭಾಲಾಕ್ಷನ ಲೀಲಾ ವಿಲಾಸ ಭೋಳಾ ದೇವೇಶ | ಕಾಲಿ ಗೆರಗಿ ಬ್ರಹ್ಮಾದಿಕರು ಕಾಲಾಂತಕನ ವರ ಪಡೆವರು |ನೀಲಕಂಧರನ ನಿಗಮೋದ್ಧಾರನ ಸ್ಥೂಲ ಶರೀರನ ಸುಖಸಂಚಾರನ ಶೀಲಕ ದೂರನ | ಶಾಂತಾಕಾರನ |ಮಾಲಾಧರನ ಮಹಾ ಗುರುಹರನ1 ಕಳೇವರ ತಾಪ ಪಾವಕ ನೇತ್ರನ ಸುರಮುನಿ ಸ್ತೋತ್ರನ ಸುಂದರ ಗಾತ್ರನ ನರಹರಿ ಮಿತ್ರನಹಿಗಳ ಸೂತ್ರನ ಶಿರಕರ ಪಾತ್ರನ ಶಿವಸ್ವತಂತ್ರನ 2 ಅಮಿತ ಭಕ್ತರು ಇಳೆಯೋಳ್ ಇಹರು ನಮಿಸಲು ಸಲಹಿಕಾವನು |ಅಮರರ ಹೊರೆವನ ಅಧಿಕ ಪ್ರಭಾವನ ತಿಮಿರವ ಕಳೆವನ ತೀರದಲಿವನ ಹಿಮಸುತೆ ಜೀವನ ಹಿಡಿದಿಹ ತ್ರಿಭುವನನ | ಶ್ರಮಗಳನಳಿವನ ಶಂಕರ ಭೀಮಾ ಶಂಕರನ 3
--------------
ಭೀಮಾಶಂಕರ
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಇಂದು ಕಂಡೇ ಪ ಪಾದ ಭಜನೆ ಮಾಡುವದೊಂದೆ ಅ.ಪ. ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು ಕೊಟ್ಟು ಜ್ಞಾನದ ಕಣ್ಣು ನೆಟ್ಟನೆ ನೊಡೆನಲು ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ ಭವ ಸುಖಕೆ 1 ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ ಮಂಡೆ ಚಚ್ಚುತ ನಿತ್ಯ ತುಂಡು ಆದಳು ಅವಳು ಬೆಂಡು ಆದೆನುನಾನು ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2 ವಿತ್ತ ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ ಉಂಟುಮಾಡುವವು ವೈಕುಂಠ ನಾಯಕಕಾಯೊ 3 ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ ಮಾಡುತಲಿ ವಿಧಿಗಳನು ದೂಡುತಲಿನಿಜೀವ ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4 ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5 ಭವ ನಿಜಗುಣವೆ ಕ್ಲೇಶದಾಯಕ ವಿರಲು ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ ಏಸು ಕಡಿಯಲು ನೀರ ಸೂಸುವುದೆ ನವನೀತ ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ ಕ್ಲೇಶ ತೊಲಗದು ಎಂದು ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ ಭಾಸವಾಗದು ಜ್ಞಾನ ಶ್ರೀಶ ಕಾಣಿಸ ತನ್ನ ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6 ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು ಅಂಬುಜಾಸನ ಸುರಕದಂಬ ಕರುಣವ ಗಳಿಸಿ ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
--------------
ಕೃಷ್ಣವಿಠಲದಾಸರು
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಗಣೇಶ ಹಿತಮತಿಯ ಪಾಲಿಸೊ ಪ ಗತಿಯ ಕಲ್ಪಿಸಿ ಸಿರಿಪತಿಯ ಪಾದದಿ ಅ.ಪ ಗಜವದನನೆ ಎನ್ನ ನಿಜಭಕುತಿಯೊಳ್ನಿನ್ನ ಭಜನೆ ಮಾಡುವಂಥ ನಿಜವ ಪಾಲಿಸಿ 1 ಹರಣ ಮಾಡಿ ನಿನ್ನ ಸ್ಮರಣೆಯ ಕೊಟ್ಟು 2 ದೀನನಾಗಿ ನಾ ನಿನ್ನ ಸನ್ನಿಧಾನಕೆ ಬಂದೆ ಜ್ಞಾನವಿತ್ತು ಕಾಯೋ ಈಗ ಪ್ರಾಣನಾಥ ವಿಠಲನಲ್ಲಿ 3
--------------
ಬಾಗೇಪಲ್ಲಿ ಶೇಷದಾಸರು
ತಪ್ಪು ಪೇಳ್ವೆ ನಿನ್ನೊಳೆನ್ನಪ್ಪಿ ಸಲಹಯ್ಯ ಅಪ್ಪ ಸಿರಿಪತಿಯೆನ್ನ ನೆಪ್ಪಿನೊಳಗಿರ್ದು ಪ ಅರಿವಿಟ್ಟು ತವಚರಣ ಸ್ಮರಿಸದಿರೆ ಎನ್ನ ತಪ್ಪು ಮರೆವೆಯನು ಪರಹರಿಸದಿರೆ ನಿನ್ನ ತಪ್ಪು ಧರೆಯ ಭೋಗವ ಮೀರಿ ನಡೆಯಿದಿರೆ ಎನ್ನ ತಪ್ಪು ಪರಮವೈರಾಗ್ಯ ಭಕ್ತಿ ಕೊಡದಿರೆ ನಿನ್ನ ತಪ್ಪು 1 ಅರ್ತಿಯಿಂ ತವಭಜನೆ ಮಾಡಿದಿರೆ ಎನ್ನ ತಪ್ಪು ಚಿತ್ತ ಚಂಚಲಗೊಳಿಸಿದರೆ ನಿನ್ನ ತಪ್ಪು ಸತ್ಯಭ್ರಷ್ಟನಾಗಾಚರಿಸಿದರೆ ಎನ್ನ ತಪ್ಪು ಸತ್ಯಜನಸಂಗ ಕೊಡದಿರೆ ನಿನ್ನ ತಪ್ಪು 2 ನಾಶವೊಂದೋ ಮಹಹೇಸಿಸಂಸಾರದ ವಾಸನೆಯ ಬಿಡದಿರೆ ಎನ್ನ ಘನತಪ್ಪು ಶ್ರೀಶ ಶ್ರೀರಾಮ ತವ ದಾಸತ್ವ ಕೊಡದಿರೆ ಸಾಸಿರಪಾಲಿಗೆ ನಿನ್ನ ಮಹತಪ್ಪು 3
--------------
ರಾಮದಾಸರು
ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ಪ ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ 1 ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋಸುಗವಾಗಿ 2 ಆಚರಣೆಯಲಿ ಒಂದರಘಳಿಗೆ ಬಿಡದೆ ಬಲು ಖೇಚರಾರೂಢ ಹರಿಯಾ ಸೋಚಿತಾರಾಧನೆಯ ಮಾಡಿ ಮರೆಯದಲೆ ಮಹಾ ವೈಚಿತ್ರ್ಯವನು ತೋರಿ ಈ ಚರಾಚರದಿ ಸಂಗೀತ ಸಾಹಿತ್ಯದಲಿ ಪ್ರಾಚಾರ್ಯವಂತರೆನಿಸೀ ಆ ಚತುರ್ದಶಭುವನಪತಿ ಶ್ರೀದವಿಠಲನ ಯೋಚನೆಯ ಬಿಡದೆ ಮಂಗಳ ಶಬ್ದವಾದ್ಯದಿಂ 3
--------------
ಶ್ರೀದವಿಠಲರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ನರಹರಿಯ ಗುಣ ಕೊಂಡಾಡುವುದೇ ಲೇಸು ಮುರಲೀಧರನೊಲಿಸಿ ಪರಗತಿ ಸುಖವ ಬಯಸು ಪ ಸುಳ್ಳುಮಾತಾಡಿ ಧನಗಳಿಸುವುದಕಿಂತಲಿ ಒಳ್ಳೆಯವನೆನಿಸುವ ಬಡತನವೇ ಲೇಸು ಕಳ್ಳತನದಿಂದಲಿ ಕದ್ದು ತಿಂಬುವುದಕಿಂತ ಕೇಳಿ ಸಿಕ್ಕಷ್ಟುಂಡು ಇರುವುದೇ ಲೇಸು 1 ಸಾಲದಿಂದರಮನೆಯ ಕಲ್ಪಿಸಿರುವುದಕಿಂತಾ ಸಾಲಿಲ್ಲದ ಮನೆಯಲ್ಲಿಹುದೇ ಲೇಸು ಕಾಲನ ದೂತರಿಂದೆಳೆಸಿಕೊಳ್ಳದೇ ಲಕ್ಷ್ಮೀ ಲೋಲನಾ ಪಾದದಲ್ಲಿರುವುದೇ ಲೇಸು 2 ಅನ್ಯ ಸ್ತ್ರೀಯರ ಸುಖವ ಬಯಸಿ ಕೆಡುವುದಕಿಂತ ತನ್ನವಳ ಕೂಡ ಬಡಿದಾಡುವುದೇ ಲೇಸು ಹೊನ್ನು ಹೆಣ್ಣು ಮಣ್ಣಿಗಾಸೆ ಮಾಡದೇ ಮನಸನ್ನ ಸಿರಿಪತಿಗೆ ಒಪ್ಪಿಸುವುದೇ ಲೇಸು 3 ತಾನು ಮಾಡಿದೆನೆಂಬುದಕಿಂತ ಹರಿಯ ಆಧೀನವೆಂದರಿಯುವುದು ಪರಮ ಲೇಸು ಶ್ವಾನಗೆ ಮಾಂಸವನು ತಿನಿಸಿ ಸಲಹುವುದಕಿಂತ ಜ್ಞಾನಿಯಾದವನ ಸಲಹುವುದೇ ಲೇಸು 4 ದುಷ್ಟ ಮನುಜನು ಮಾಡುವ ಕೃಪೆಗಿಂತಲೂ ಶ್ರೇಷ್ಠ ನರರಿಂದ ಬೈಸಿಕೊಳ್ಳವುದೇ ಲೇಸು ಕೆಟ್ಟ ಸಂಸಾರ ಸುಖ ಬೇಡುವುದಕಿಂತ ಹನುಮೇಶ ವಿಠಲನ ಧ್ಯಾನದ ಸುಖವೇ ಲೇಸು 5
--------------
ಹನುಮೇಶವಿಠಲ
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು