ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಥಿಲೊಂದು ಹೇಳುವೆನಮ್ಮಅಲ್ಲಿವಾರ್ತೆಯಚಿತ್ತಗೊಟ್ಟು ಕೇಳ ತಾಯಿಅವರ ಕೀರ್ತಿಯ ಪ. ಹೋಗಿ ನಾನು ನಾಗವೇಣಿಯರ ಬಾಗಿಲು ಹೊಕ್ಕೆನುಸಾಗರಶಯನ ಮಂಚವೇರಲು ಧಕ್ಕನೆ ನಿಂತೆನು 1 ಮರ್ಯಾದಿಲೆ ಹರಿಯ ಮನೆ ಬಾಗಿಲು ಮರೆಯಲಿ ನಿಂತೆನುಸಿರಿಯರಸು ಸತಿಯರಿಂದ ಬೆರೆದು ಕುಳಿತೆ2 ಫುಲ್ಲನಾಭನು ಮಲ್ಲಿಗೆ ಮಂಚದೊಳಿರುತಿರೆವಲ್ಲಭೆಯರಿಬ್ಬರು ಗಂಧಪೂಸಿ ಅಲ್ಲೆ ಕುಳಿತಿಹರು3 ಪುನಗು ಜಾಜಿ ವನಿತೆಯರು ಹಚ್ಚುತಿಹರುಪುನಗು Pಸ್ತ್ತೂರಿ ಬೊಟ್ಟು ಮಾನಿನಿಯರು ಇಡುತಿಹರು4 ಚಾರು ಸೂರಿ ಸುಖಿಸುತ 5 ಕೃಷ್ಣರಾಯಗೆ ಕೊಟ್ಟು ಅಡಿಕೆ ತುಷ್ಟರಾಗಲಿಪಟ್ಟದ ರಾಣಿಯರಿಬ್ಬರು ಇಟ್ಟರು ತೊಡೆಮೇಲೆ 6 ಬಟ್ಟನೆ ವೀಳ್ಯ ರುಕ್ಮಿಣಿದೇವಿ ಕೊಟ್ಟೆನೆನುತಲಿಥಟ್ಟನೆ ಕೃಷ್ಣನವದನದಲ್ಲಿ ಇಟ್ಟಾಳು ಭಾವೆ ತಾ 7 ಭರದಿ ಕೋಪಿಸಿ ರುಕ್ಮಿಣಿದೇವಿ ತೆರೆದುಕಣ್ಣುತಾಹಿರಿಯಳೇನು ಮೊದಲು ಕೊಟ್ಟೆ ವೀಳ್ಯವೆನ್ನುತಲೆ 8 ಭೂಪÀ ರಾಮೇಶ ರುಕ್ಮಿಣಿದೇವಿಯ ತಾಪವ ಕಾಣುತಅಪಾರ ಕೋಪವ ಅರಘಳಿಗೆಯಲಿ ಇಳಿಸುವೆನೆಂದು ತಾ9
--------------
ಗಲಗಲಿಅವ್ವನವರು
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಭಕುತ ಜನ ಮುಂದೆ ನೀನವರ ಹಿಂದೆ - ಇದಕೆ |ಯುಕುತಿ ಕೈಕೊಳದಯ್ಯ ಗಯಾಗದಾಧರನೆ ಪಕಟ್ಟೆರಡು ಕೂಡಿ ತಾ ನದಿಸೂಸಿ ಹರಿವಾಗ |ಕಟ್ಟುಕ್ಕಿದಾಗ ಹರಿಗೋಲ ಹಾಕೆ ||ನೆಟ್ಟನೆ ಜಿಗಿಜಿಗಿದು ದಾಟಿ ತಾ ಪೋಪಾಗ |ಹುಟ್ಟು ಮುಂದಲ್ಲದಲೆ ಹರಿಗೋಲು ಮುಂದೆ? 1ಕಾಳೆಹೆಗ್ಗಾಳೆದುಂದುಭಿನಾನಾ ವಾದ್ಯದಿಂ |ಓಲಗದಿಂದೈದೆ ಅರಸು ತಾ ಬರುವಾಗ ||ಸಾಲಾಗಿ ಬಳಿವಿಡಿದು ಸಂಭ್ರಮದಿ ಇರುವಾಗ |ಆಳು ಮುಂದಲ್ಲದೆ ಅರಸು ತಾ ಮುಂದೆ 2ಉತ್ಸವ ಮೂರುತಿಯು ಬೀದಿ ಮೆರೆಯುತ ಬರಲು |ಸತ್ಸಂಗತಿಗೆ ಹರಿದಾಸರೆಲ್ಲ ||ಅಚ್ಚ ಸಿರಿಯರಸು ಸಿರಿಪುರಂದರ ವಿಠಲನೆ |ವತ್ಸಮುಂದಲ್ಲದೆಧೇನುತಾ ಮುಂದೆ?
--------------
ಪುರಂದರದಾಸರು