ಒಟ್ಟು 8 ಕಡೆಗಳಲ್ಲಿ , 8 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಡವ ಮಾಡಲಿ ಬೇಡ ಹಡೆದವ್ವ ಎ ನ್ನೊಡೆಯನನು ಹುಡುಕಿ ತಾರೆ ಪಿಡಿವೆ ಪಾದವ ಪ ತಡವ ಮಾಡದೆ ಪೊಡವಿಯೊಳು ಕಡು ಸಡಗರಾರ್ಯನ ಹುಡುಕಿ ತಂದರೆ ಹಡೆದು ನಿನ್ನ್ಹೆಸರಿಸಿವುವೆನೆನ್ನವ್ವ ಸರಿಮಾಡ್ವೆನವ್ವ ಅ.ಪ ಜೀವದರಸನ ಹಂಬಲೆನಗವ್ವ ಅತ್ಯಧಿಕವಾಗಿ ಕಾಯಸೊರಗಿ ಕ್ಷೀಣವಾಯ್ತೆವ್ವ ಪ್ರಾಯಬಂದರೆ ಸುಮ್ಮನೆ ಹೋಗುತಾದವ್ವ ಪ್ರಾಯಕ್ಕೆ ತಕ್ಕ ಚಾಯಗಾರ ಕಂಡೇನ್ಹೇಗವ್ವ ಕಾಯರಹಿತ ಕಾರುಣ್ಯನಿಧಿ ಮಾಯತಿಳಿಯುವರಿಲ್ಲ ಆತನ ದಿವ್ಯಚರಿತ ನೆನೆದು ನೆನೆದು ಬಾಯ ಬಿಡುವೆನೆ ಆಯತಾಂಬಕಿ 1 ವಸ್ತೊಡೆವೈಷ್ಟಿರಲು ಏನವ್ವ ಅತಿಶೋಭೆಯೆನಿಪ ಮುತ್ತುಯಿಲ್ಲದ ಮೋರೆಯಾಕವ್ವ ಹತ್ತಿರಕೆ ಬರಗೊಡರವ್ವಾ ಮುತ್ತೈದೆರೆಲ್ಲರು ಅತ್ತ ಇತ್ತೆಂದೆಳೆಯುತಿಹ್ಯರವ್ವ ಮತ್ತೆ ಬೇಡಲು ದೊರೆಯದಂಥ ಹೊತ್ತು ಸುಮ್ಮನೆ ಹೋಗುತಿದೆ ಕರ್ತ ತುರ್ತು ದೊರೆಯದನಕ ಚಿತ್ತ ಸ್ವಸ್ಥವಾಗದವ್ವ 2 ಭೂಮಿತ್ರಯದೊಳಧಿಕ ಕೇಳವ್ವ ಆತನಹೆಸರು ಕಾಮಿತವನೀಗರಿತುಕೊಂಡೆನವ್ವ ನೇಮದಿಂದ ಭಜಿಸುತಿಹೆನವ್ವ ಎನ್ನಕಡೆಗಾತ ಪ್ರೇಮದಿಂದ ಸುಳಿಯದಿಹ್ಯನವ್ವ ಭಾಮೆಬಾರೆಂದು ಬದಿಲಿಕರೆದು ಪ್ರೇಮದಿಂದ ಅಪ್ಪಿ ನಿನ್ನಯ ಸ್ವಾಮಿ ಶ್ರೀ ರಾಮ ನಾನೆಂದ್ಹೇಳಲು ಕ್ಷೇಮ ಪಡೆದು ಬಾಳ್ವೆನವ್ವ 3
--------------
ರಾಮದಾಸರು
ನಡತೆ ನನ್ನದು ಕೇಳಿರಯ್ಯ ಪ ಒಡೆಯ ವಲಿವ ಹ್ಯಾಗೆ ಪೇಳಿರಯ್ಯ ಅ.ಪ. ಒಡವೆ ತರದಿಹನೆಂದು ಕೋಪ ಮಡದಿನಟಿಸುತ ಹೆದರೀ ಒಡನೆ ಸ್ನಾನವ ಮಾಡಿತಂದು ಕೊಡುವ ಪ್ರಸನ್ನ ಗೈಯ್ಯಲವಳಾ ಆಹಾ ಒಡಿಯ ದೇವಗೆ ಹರಕೆ ನಡಿಸಬೇಕೆನ್ನಲು ಭೂರಿ ನೋಡುವೆನೆಂತೆಂಬೆ 1 ಒರಿಸೆ ಸಾಲಿಗ್ರಾಮ ಗೃಹದಿ ಅರಿವೆ ಹರಕು ಸಹ ಇಲ್ಲವೆನ್ನೇ ತರುವೆನೆನುತ ತಿಂಗಳಾರು ಕಾಲ ಬರಿದೇ ಆಹಾ ತರಲು ಸೂಳೆಗೆ ಸೀರೆ ಭರದಿ ಕೂಡಿಯೆ ಅವಳ ಪುರವ ಪೇಟೆಪೇಟೆಗಳೆಲ್ಲ ತಿರುಗಿ ತಿರುಗುವೆ ಮುದದೀ 2 ಹರಿಗೆ ದೀಪವ ಹಚ್ಚೆ ತೈಲ ಇರದು ತಾರೆನೆ ಹಡೆದ ತಾಯಿ ಬರಲಿ ಸಂಬಳ ತರುವೆ ಕೊಡುವಿ ಉರಿವ ಕಾಟವನೆಂದು ನುಡಿವೆ ಆಹಾ ಪರಮ ಸಂಭ್ರಮದಿಮದ ತಿಂಡಿ ಅಂಗಡಿಯಲಿ ಹರಕು ಜಿಹ್ವೆಂiÀi ಚಪಲ ಪೂರ್ಣಮಾಡುವೆ ನಿರುತ 3 ವೃತ್ತಪತ್ರಿಕೆಯಲ್ಲಿ ಹೆಸರು ಎತ್ತಿಹಾಕುವರೆನೆ ಒಡನೆ ವಿತ್ತದಾನವಗೈವೆ ಬರಿ ಉ- ನ್ಮತ್ತಕಾರ್ಯಕಾದರು ಸರಿಯೇ ಆಹಾ ಉತ್ತಮಭಕ್ತರು ಅರಸುತ್ತ ಬರ್ಪುದ ಕಂಡು ವತ್ತಿ ಬಾಗಿಲು ಕೊಂಡಿ ಸ್ವಸ್ಥವಿಲ್ಲೆಂಬೆ4 ಕಂಡು ಕರೆಯುತ ಭಾರಿ ಊಟ ತೊಂಡನಂದದಿ ನೀಡಿ ಮನದಿ ಉಂಡು ಹರುಷವ ನೆನೆವೆ ಧನ್ಯ\ ಆಹಾ ಕೆಂಡ ಬಿಸಿಲಲಿ ಬಡವ ಕಂಡು ಮಹಡಿಯ ಬರಲು ಪಿಂಡ ಪಿಡಿಯನು ಹಾಕೆ ತಂಡುಲವಿಲ್ಲೆಂಬೆ5 ದಾನಗೈದರು ಒಮ್ಮಿಂದೊಮ್ಮೆ ಮಾನಪಡೆಯಲು ಊರ ಒಳಗೆ ನಾನೆಂಬ ಹಂಕಾರ ಬಿಡದೆ ಶ್ರೀನಿಧಿ ಸ್ವಾಮಿತ್ವ ನೆನೆಯೆ ಆಹಾ ಸ್ವಾನುಭವ ಕಾಣದೆಲೆ ಜ್ಞಾನ ಭಾಸ್ಕರನಂತೆ ಪು- ರಾಣಪೇಳುತ ನನ್ನ ಸಮಾನ ವಿಲ್ಲಂತೆಂಬೆ6 ನೂರಿತ್ತು ಸಂಬಳ ಹಿಂದೆ ಮನದಿ ಊರಿತ್ತು ಹರಿಭಕ್ತಿ ಎಲ್ಲಿ ಈಗ ನೂರ್ಹತ್ತು ಕೊಟ್ಟರು ದೇವ ಬೆ- ನ್ಹತ್ತಿದೆ ತಾಪತ್ರಯ ಬಹಳ ಆಹಾ ಸಿರಿ ಕೃಷ್ಣವಿಠಲನೆ ದೃಷ್ಟಿ ವಾರುಗಾಣೆನು ಕಾಣೆನು ಸತ್ಯ ಪೊರೆಯೋ ಶರಣೆಂತೆಂಬೆ7
--------------
ಕೃಷ್ಣವಿಠಲದಾಸರು
ಮದ್ದಾನೆ ಗತಿ ಸಖಿ ಬಾರಮ್ಮಾ|| ಮುದ್ದು ಮೊಗದ ರಂಗನ ತಂದು ತೋರಮ್ಮಾ 1 ಇಂದು ಎನ್ನ ಚಿತ್ತ ಸ್ವಸ್ಥವಾಗದೇ| ಒಂದುಗಳಿಗಿ ಕ್ರಮಣವಾಗಿ ಹೋಗದೇ 2 ಬಿಗಿದವೇನೆ ಮಾಯಿ ಫಣಿಗಳು| ವೇಗದಿಂದ ಬರುತಿದೇ ತಂಗಾಳಿಗಳು 3 ಮಂದರಧರನು ಯಾಕೆ ಬಾರನೇ| ಚಂದ್ರ ಕಿರಣ ಝಳಕ ನಿಲ್ಲಲಾರೆನೇ 4 ಮೊದಲೆನ್ನ ಬಿನ್ನಹವ ಹೋಗಿ ನೀನು ಹೇಳಮ್ಮಾ 5 ಮೊದಲೆನ್ನ ಕೈಯ್ಯಾ ತಾ ಹಿಡುವರೇ| ತದನಂತರದಿ ತಪ್ಪ ನೋಡುವರೇ 6 ಆರಿಸಿಬ್ಯಾಡೆಂದು ಹೇಳಿ ಕುಂದೆನ್ನಾ| ಕರೆತಾರೆ ಮಹಿಪತಿ ಸುತ ಜೀವನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನೆ ಮನೆಯು ಹರಿಯ ಆಲಯವಾಗಬೇಕು ಪ ಜನಗಳು ಸದಾಚಾರ ಶೀಲರಾಗಬೇಕು ಅ.ಪ ಭೂತ ಸರ್ಗದಲಿ ಹೊಸ ನೀತಿಗಳ ಕಲ್ಪನೆಯು ಘಾತಕವು ಲೋಕಹಿತಕೆಂದರಿಯದೆ ಜಾತಿ ಬೇಡೆನ್ನುವರ ರೀತಿನೀತಿಗಳು ಆ ಪಾತರ ರಮಣೀಯವೆಂಬುದ ತೋರಬೇಕು 1 ಅಸ್ತವಾಗಲಿ ಜಾತಿ ಮತ ಭೇದವೆಲ್ಲವು ಸ್ವಸ್ಥವಾಗುವುದೆಂದು ಭಾರತವು ಎನ್ನುವರು ಮಸ್ತಕದಿ ಕರವಿಟ್ಟು ಕುಳಿತುಕೊಳ್ಳುವ ತೆರದಿ 2 ಬಹುಮತವು ಎಮ್ಮದೆಂಬುವ ಮದವು ಬೆಳೆಯುತಿರೆ ಸಹನವೇ ಸಾಧುಜನಗಳಿಗೆ ಶರಣ ಇಹಪರಗಳಲ್ಲಿಯೂ ಪ್ರಸನ್ನ ಹರಿ ಸಲಹುವನು ಕುಹಕ ಮಾರ್ಗವು ಬೇಧ ಸಹಜ ಧರ್ಮಗಳಿಂದ 3
--------------
ವಿದ್ಯಾಪ್ರಸನ್ನತೀರ್ಥರು
ವಸ್ತು ತಾ ಬೇರೆ ಅದೆ | ನಿಜವಸ್ತು ಅರಿತವ ಬಲ್ಲಾ ಪ ಮಣಿ ಎಣಿಸುವದಲ್ಲ ||ಹೊನ್ನು ಹೆಣ್ಣಿಗೆ ಮೆಚ್ಚಿ ಬಣ್ಣದ ಮಾತಾಡಿ |ಚೆನ್ನಿಗ ತನದಿಂದ ತಿರುಗುವದಲ್ಲ 1 ಮಾನ ಮನ್ನಣೆಗಾಗಿ ಜ್ಞಾನದ ಮಾತುಗಳಾಡಿ |ಧ್ಯಾನ ಮೌನವನು ತೋರುವರು |ಮನ್ನಣೆಯಾಗದಿರೆ ಛಾನಸತನದಿಂದ ಜನರ ದೂರುವರಲ್ಲ 2 ಮನವ ಸ್ವಸ್ಥವ ಮಾಡದೆಅನೇಕ ವ್ಯಥೆ ಕೂಡಿ ಕನಕದಾಶೆಗಾಗಿ ಕೆಡಬೇಡ |ಬಲ್ಲ ರಾಯರ ಪ್ರಭು ರುಕ್ಮಭೂಷಣ ಕೂಡಿಕ್ಷುಲ್ಲಕ ತನವ ಬಿಟ್ಟು ಸುಖಿಸಿರಯ್ಯ 3
--------------
ರುಕ್ಮಾಂಗದರು
ವಿಶ್ವಪತಿ ಇಂದುಶೇಖರ ಸುರಮಸ್ತಕಮಣಿ ಮನ್ಮಥರಿಪುವೆ ವಿಸ್ತರಿಪೆನು ನಿಮ್ಮ ಮಹಿಮೆಯ ಜಗದೊಳು ಸ್ವಸ್ಥವಾಗಿ ಪ. ಎಲ್ಲಿ ನೋಡಲು ಲಿಂಗಮಯವು ಅಲ್ಲಿಗಲ್ಲಿಗೆ ತೀರ್ಥಯಾತ್ರೆಯು ಸೊಲ್ಲು ಸೊಲ್ಲಿಗೆ ಹರಮಹಾದೇವಂತೆಲ್ಲರು ಸ್ತುತಿಸುವರು ಬಲ್ಲವರು ಇದು ಭಾವಿಸಿ ಕಾಶಿಗಿಂತ ಮಹಿಮೆ ವೆಗ್ಗಳವಹುದೆನುತ ಸುಲಕ್ಷಣೆ ಶಿವಗಾತ್ರೆ ಶಿವನವಲ್ಲಭೆ ತ್ರಾಸಿನಲಿ ತೂಗುವಳು 1 ನಾಟಕದಿ ನಾನಾಜನ್ಮದಿ ಬಂದು ದಾಟದಂತರವನಳಿದನು ಚಂದ್ರ ಕೋಟಿತೀರ್ಥದಿ ಮಿಂದು ಮೈಯ ಕೋಟಲೆ ಸಂಸಾರಗಳೆಲ್ಲ ದಾಟಿದೆನು ಇನ್ನು ಜನನಮರಣಗಳೆಂಬೋಪಾಯಗಳಿಲ್ಲವು 2 ಕೂಪಾರದಲಿ ಬಂದು ಸೂಸುವ ತೆರೆಗಳು ಅಭ್ರದಿಂದಲಿ ಅಪ್ಪಳಿಸಲು ಉನ್ನತ ಭ್ರಮೆಗೊಂಡಿದ್ದ ಕರ್ಮದ ಬಲಿಗಳು ಮಿಗಿಲಾದವು ಉರ್ವಿಯೊಳಗುಳ್ಳ ಸಕಲನದಿಗಳನು ಗರ್ಭದಲಿ ಇಂಬಿಟ್ಟು ಮೆರೆದಂತಿಹ ಸರ್ಬಗೂಡಿಸುವ ಸಿಂಧುರಾಜನಲಿ ಮಿಂದು ನಿರ್ಭಯಳಾದೆನು 3 ಬಲಿದ ದನುಜನ ಭಾವಕ್ಕೆ ಮೆಚ್ಚಿ ಒಲಿದಷ್ಟವರವಿತ್ತ ಸಿಲುಕಲು ಸುಲಭನೆಂದು ಹೇರಂಬನೊಳಿತ್ತು ನೆಲೆಗೊಳಿಸಿ ಎಳೆದರೆ ಎಳೆಯಲೊಲ್ಲದೆ ಛಲವಿಡಿದ ಲಂಕಾಧಿಪತಿಯ ಅಹಂಕಾರ ವಳಿದು ಇಂದ್ರಾದಿಗಳಿಗೆ ವರವಿತ್ತ ಮಹಾಬಲಲಿಂಗನ ಕಂಡೆ 4 ಅನ್ನದಾ ಶತಶೃಂಗ ಪರ್ವತ ಪಶ್ಚಿಮದಿಂದ ಪಾತಾಳಗಂಗೆ ಸಹಿತಲಿ ಪ್ರ- ಸನ್ನನಾಗಿ ನಿಂದ ಚೆನ್ನ ಹೆಳವನಕಟ್ಟೆರಂಗನ ಪ್ರಿಯ ಪನ್ನಂಗಧರ ಪರಮಪವಿತ್ರ ಗೋಕರ್ಣೇಶನ ಕಂಡೆ ಪಾ- ವನವಾಯಿತು ಎಲ್ಲಾ ಕುಲಕೋಟಿಯು 5
--------------
ಹೆಳವನಕಟ್ಟೆ ಗಿರಿಯಮ್ಮ
ಹಂಬಲ ಮರೆವುದುಂಟೆ ಪ ಬೆಂಬಲವಾಗಿಯೆ ಇಂಬುದೋರದ ನೀನು ಡೊಂಬಿಗಾರರ ಮುಂದೆ ಕಂಬದಂದದಿ ನಿಂದೆ ಅ.ಪ ತೃಣವಾದ ಕಾಯಗಳು ಮನದೊಳಗೆ ಘನವಾಗಿ ತೋರುತಿದೆ ಗುಣವಿಲ್ಲ ಬದುಕಿನೊಳು ಅಣಿತಪ್ಪಿ ಹೋಯಿತು ಪ್ರಣವರೂಪನೆ ಕೇಳು ಕ್ಷಣ ಜೀವ ನಿಲ್ಲದು 1 ಆಯ ತಪ್ಪಿದ ಮಾತನು ಆಡುತ ಎನ್ನ ಬಾಯನು ಹೊಯ್ಪವರ ಸಾಯ ಬಡಿದು ಮುಂದೆ ನ್ಯಾಯ ತೋರದ ಹಾಗೆ ಕಾಯಬೇಕೆನ್ನ ಉಪಾಯದಿಂದಲೆ ಜೀಯ 2 ಎರವು ಮಾಡಿದ ಕಾಲದೊಳಗೆ ಸೂರೆಗೊಂಡವರನೆಲ್ಲ ವಾರಿಜಾಕ್ಷನೆ ನೀ ವಿಚಾರವ ಮಾಡದೆ ದೂರುಗಳೆಲ್ಲವ ಪಾರು ಮಾಡಿದೆ ನಿನ್ನ 3 ಹಸ್ತ ಬಲಿದ ಕಾಲದಿ ಮಸ್ತಕದೊಳು ಹಸ್ತಿಯಂದದಿ ಹೊತ್ತೆನು ಸ್ವಸ್ಥವಿಲ್ಲದ ನರನಸ್ಥಿ ಚರ್ಮದ ಮೇಲೆ ಕಷ್ಟಾಗಿ ಕರುಣವ ನಾಸ್ತಿ ಮಾಳ್ಪೆಯ ಎನ್ನ 4 ಎನ್ನ ಸರ್ವಸ್ವವನು ತಿಂದವರೀಗ ಇನ್ನೇನು ಸುಕೃತಿಗಳೊ ನಿನ್ನ ಮನಸಿಗದು ಚನ್ನವಾದರೆ ಮೇಲೆ ಇನ್ನಾರು ಕೇಳ್ವರು ವರಾಹತಿಮ್ಮಪ್ಪ ನಿನ್ನ 5
--------------
ವರಹತಿಮ್ಮಪ್ಪ
ನೋಡುನೋಡುದಯಮಾಡು ಮಾಡಿನ್ನಪ.ನೋಡುವೈರಾಗ್ಯಭಾಗ್ಯವಿಹೀನನಕಾಡುತಿದೆ ಮನ ಕರುಣಾಸಂಪನ್ನ ಅ.ಪ.ಸ್ನಾನ ಸಂಧ್ಯಾವಂದನೆ ಸಚೇಲದಿಧ್ಯಾನ ಮೌನವ ಹಿಡಿಸಿಜ್ಞಾನ ಭಕ್ತಿ ವಿರಕ್ತಿ ಮಾತಿನನಾಣ್ನುಡಿಯಂತೆ ನುಡಿಸಿದಾನ ಧರ್ಮ ಕೈವಲ್ಯದಾರ್ಯೆಂದು ನಿದಾನ ತುಷ್ಟಿಯ ಬಡಿಸಿತಾನರೆಕ್ಷಣ ಸ್ವಸ್ಥವಿರದೆಲ್ಲಹಾನಿ ಮಾಡಿತೆನ್ನ ಚಿತ್ತವ ಕೆಡಿಸಿ 1ಸಾಲಂಕೃತ ಬಾಲನೊಯ್ದಡವಿಯಲಿ ಕೊಲ್ವಆಲಯದ ಕಳ್ಳನಂತೆಬಾಲೆಯನ್ನಾಳದೆ ಷಂಡಘನಕೂಪದೊಳು ನೂಕಿಸುವಂತೆಪೇಳಲೇನು ದುರ್ಬಲರನು ಅರಸ ತಾಶೂಲಕಿಕ್ಕಿಸುವಂತೆಮೇಲೆ ಮೇಲೆ ದುರ್ವಿಷಯಾಟವಿಯೊಳುಕಾಲಕಟ್ಟ್ಯೆನ್ನ ಕೆಡಹುತಿದೆ2ಕನ್ನಿಕೆಗೆ ವರನೊಪ್ಪಿದರೆ ತೆತ್ತಿಗನ್ನ ಪ್ರತಿಕೂಲವೇನುಪುಣ್ಯಶ್ಲೋಕನ ಅಭಯವಿರಲು ಸುಖಿಗನ್ಯ ತೊಡರ್ಯಾಕಿನ್ನಮನ್ನೆಯನ ಪಾದವಿಡಿದಿಹ ಮಡದಿಗೆಅನ್ಯರಾತಂಕವೇನು ಪ್ರಸನ್ನವೆಂಕಟಸ್ವಾಮಿ ನೀ ಒಲಿದರೆಕುನ್ನಿ ಮನ ಕಾಡಿ ಮಾಡುವದೇನು 3
--------------
ಪ್ರಸನ್ನವೆಂಕಟದಾಸರು