ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1 ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2 ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3
--------------
ಚಿದಾನಂದ ಅವಧೂತರು
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು