ಒಟ್ಟು 93 ಕಡೆಗಳಲ್ಲಿ , 15 ದಾಸರು , 89 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ಸಿದ್ಧಗುರುತ್ರಿಪುರಾಂತಕ
ಕಂಡೆ ನಾನೊಂದು ಸುವಸ್ತ ಮಂಡಲದೊಳು ಸದ್ಗುರು ದಯದಲಿ ಸಾಭ್ಯಸ್ತ ಧ್ರುವ ನೆನವಿನ ಕೊನೆಯಲಿ ಅನುವಾಗಿ ದೋರತದೆ ಘನ ದೀಪ್ತಿಯಲಿ ಬೀರುತಿದೆ ಮನದ ಮುಗುಟ 1 ಪ್ರಣವನ ಮೂಲಾಗ್ರಹಲಿ ಪರಿಪೂರ್ಣತಾನಾಗೆÀದ ಘನವೆ ಘನವಾಗ್ಹೊಳೆಯುತದೆ ಪ್ರಾಣಪದಕ 2 ಮಹಿಪತಿ ಬಾಹ್ಯಾಂತ್ರದೊಳು ವಸ್ತು ವಿರಾಜಿಸುತದೆ ಮಹಿಮರೆ ಬಲ್ಲರೀಸುಖ ನಾಮಾಮೃತದ ಸ್ವಾನುಭವದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಂತರಂಗದ ಸುಖ ಹೇಳುವುದಲ್ಲಾ ಸಂತೋಷವೆಂಬುದು ಶಿವನೊಬ್ಬ ಬಲ್ಲ ಪ ಗುರುಕೊಟ್ಟ ಮಂತ್ರದ ಪರರ್ಯಾರು ಅರಿಯದಂದದಲಿ ಈ ಪ್ರಾಣ ಪರಮನೊಳಾಡುವುದು ಆತನ ದಿವ್ಯ ಚರಣನೋಡುವುದು ಆಂತರ್ಯದ ಸ್ವಾನುಭವ ಅರಿಯದ ಜನರಿಗೆ 1 ಧ್ಯಾನಿಸಿ ನೋಡಲು ದೃಢವಿಡಿದಾಡಲು ಜ್ಞಾನ ದೀಪದ ಜ್ಯೋತಿ ಗಗನ ವೇರಿದ ಪ್ರತಿ ಭಾನುವುದಿಸಿದಂದದಿ ಪ್ರಕಾಶಮಾನ ಸದಾನಂದದಿ ಅಂತರ್ಯದ ಸ್ವಾನುಭವ ಅರಿಯದ ಜನರಿಗೆ 2 ಮೂರ್ತಿ ಪರಮನಾಗಿಹ ಅರ್ಥಿ ಎರಕವಾಗಿಹ ಲಕ್ಷಾ ಎಣಿಕೆ ಇಲ್ಲದ ಮೋಕ್ಷಾ ಶರಧಿಯೊಳಾಡುವುದು ಶಕ್ತಿಯ ಮರ್ಮ ವರಕೃಪಮಾಡುವುದು ವಿಮಲಾನಂದ ಗುರುಕಟಾಕ್ಷದ ಬಗೆ ಅರಿಯದ ಜನರಿಗೆ 3
--------------
ಭಟಕಳ ಅಪ್ಪಯ್ಯ
ಅನುಭವವಿದೇ ನೋಡಿ ಆನಂದೋ ಬ್ರಹ್ಮ ಏನೆಂದ್ಹೇಳಲಿನ್ನಾಗುವ ಸಂಭ್ರಮ ಧ್ರುವ ಸುಖ ನೋಡಿ ನಮ್ಮ ಸ್ವಾನುಭವದ ಸಖರಿಂದ ಮೀರಿ ಬಲು ಸುಸ್ವಾದ ಅಖರಿಂದ ಕೇಳಿ ನಿಜ ಬೋಧಾ ಶುಕಮುನಿ ಸೇವಿಸುದಾ 1 ಬೆರೆದು ನೋಡಿ ಆರು ಚಕ್ರವೇರಿ ಸುರಿಯುತಿದೆ ಸುಖ ಸಂತ್ರಾಧಾರಿ ಭೋರ್ಗರೆಯುತಿದೆ ಅನಂತ ಪರಿ- ದೋರಿ ಕೊಡುತಾನೆ ಶ್ರೀಹರಿ 2 ಸುಗ್ಗಿ ಇದೇ ನೋಡಿ ಸುಜ್ಞಾನಿಗಳು ಲಗ್ಗೆ ಮಾಡಿಕೊಳ್ಳಿ ಅದೆ ಬಲು ಬಹಳ ಬೊಗ್ಗಿ ಉಣಬೇಕು ಇದು ಸರ್ವಕಾಲ ಹಿಗ್ಗಿಕೊಳ್ಳೊ ಮಹಿಪತಿ ನೀ ತರಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರ್ಥಿಯಾಗಿದೆ ಬನ್ನಿ ಅರ್ತು ನೋಡುವ ಗುರುಮೂರ್ತಿಯಿಂದ ನಿರ್ತವಾಗಿ ಪೂರ್ಣಬೆರ್ತು ಕೂಡುವಾ ಬನ್ನಿ ಗುರ್ತದಿಂದ ಧ್ರುವ ಸೂರ್ಯನಿಲ್ಲದ ಸೂಪ್ರಕಾಶ ತುಂಬೇದ ಹೇಳಲೇನ ತೂರ್ಯಾವಸ್ಥೆಯೊಳು ಬೆರೆದು ಕೂಡಿದ ಜ್ಞಾನಿಬಲ್ಲ ಖೂನ ಬರಿಯ ಮಾತನಾಡಿ ಹೊರಿಯ ಹೇಳುವದಲ್ಲ ಅರುವ್ಹೆಸ್ಥಾನ ಪರಿಯಾಯದಿಂದ ಪರಿಣಿಮಿಸಿ ನೋಡಿ ಪರಮ ಪ್ರಾಣ 1 ಚಂದ್ರನಿಲ್ಲದೆ ಬೆಳದಿಂಗಲು ಬಿದ್ದದ ಬಲು ಬಹಳ ಇಂದ್ರಾದಿಕರೆಲ್ಲ ಹರುಷದಿ ನೋಡುವರು ಸರ್ವಕಾಲ ಸುಂದ್ರವಾದ ಸುವಸ್ತುವಳಗೊಂದದೆ ಅಚಲ ಸಾಂದ್ರವಾದ ಸುಖತುಂಬಿ ತುಳುಕತದೆ ಥಳ ಥಳ 2 ಮನದ ಕೊನೆಯಲಿದ್ದ ಘನಸುಖ ನೋಡಿರೋ ನೆನೆದು ಬ್ಯಾಗ ಸ್ವಾನುಭವದಲನುಭವಿಸುವದು ಬ್ರಹ್ಮಭೋಗ ನಾ ನೀನೆಂಬುವ ಮಾತು ಏನು ತಾಳುವದಲ್ಲ ರಾಜಯೋಗ ದೀನ ಮಹಿಪತಿಗೆ ತಾನೆತಾನಾದ ಸದ್ಗುರುವೀಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನೆವೆ ಯೋಗ್ಯ ನೋಡಿರೈ ಭಕುತಿಗೆ | ಸಾಯಾಸವಿಲ್ಲದ ಯೈದನವನಿಯೊಳಗ ಮುಕುತಿಗೆ ಪ ನಿತ್ಯ ಶ್ರವಣ ಮಾಡಲೆಂದು ಬ್ಯಾಸರಾ | ಹ್ಯಾವ ಹೆಮ್ಮೆಯಲ್ಲಿ ಕಳಿಯ ವ್ಯರ್ಥವಾಸರಾ | ನೋವ ಮಾಡುತಿರಲು ತಾಪತ್ರಯದ ತೂರಾ | ಬಳಲ ಆವಗಿರುವ ಕೂಡಿಕೊಂಡು ಹರಿಯ ದಾಸರಾ 1 ನ್ಯೂನ ನೋಡದೆ ಪರರ ಸದ್ಗುಣವನೆ ಕೊಂಬನು | ದಂಭ | ಮಾನ ತೊರೆದು ಸ್ತುತಿಯ ನಿಂದ್ಯ ಸರಿಯ ಕಾಂಬನು | ಜ್ಞಾನದಿಂದ ಪಡೆದು ಗುರುಹಿರಿಯರಿಂಬನು | ತ್ವರಿತ | ಸ್ವಾನುಭವದ ಸೌಖ್ಯಸಾರ ಸವಿಯನುಂಬನು 2 ಬಲಿದು ಭಾವನಿಂದ ತಿಳಿದು ಸ್ವಹಿತುಪಾಯನು ದೃಢದಿ | ಹುಲು ಮನಿಜರಿದಿರ ಹೋಗಿ ದೆರಿಯ ಬಾಯನು | ತಳೆದು ವೇಷದಿಂದ ದಣಿಸವಾವ ಕಾಯನು | ಹೃದಯ | ದೊಳನವನ ನಲುವ ಗುರುಮಹಿಪತಿ ಪ್ರೀಯನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಕ್ಕೊ ಇಲ್ಲೆ ಹಾನೆ ಸಕಲ ಪಾಲಕ ತಾನೆ ಭಕುತಿ ನಿಜವಾಗಲಿಕೆ ಪ್ರಕಟವಾಗತಾನೆ ಧ್ರುವ ಒಡನೆ ತನ್ನೊಳು ನೋಡಲಿಕ್ಕೆ ಜಯಜಯವೆನ್ನಿ 1 ಪಡೆದುಕೊಳ್ಳಿ ಖೂನವಿಡಿದು ಗುರುಙÁ್ಞನ ಬಿಡದೆ ಭಾಸುತಾನೆ ಒಡಿಯ ನೋಡಿ ನಿಜಸ್ಥಾನ 2 ಹಿಡಿಯಬೇಕು ಬ್ಯಾಗ ಜಡಿದು ಮನಯೋಗ ಕುಡುವಾ ಮಹಿಪತಿ ಗುರು ಸ್ವಾನುಭವಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ ಗುರುಕೃಪೆಯಿಂದ ಧ್ರುವ ಸದಮಲ ಸುಖಕಲ್ಲೋಳ ಬೆಳಗುದೋರುತಲ್ಯದೆ ಬಹಳ ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1 ಮಾಯವಗಂಡು ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು ಸ್ಮರಣಿಯ ಸವಿದುಂಡು 2 ಸದ್ಗುರು ಎನ್ನೊಡೆಯ ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸುದಿವಸ ನೋಡಿ ಕಂಡೆವು ಕಣ್ಣಾರೆ ಚಂದವಾಗಿ ಗುರು ಪೂರ್ಣಮಾಡಿದ ಮನೋಹರ ಧ್ರುವ ಕೇಳದಾ ಕೇಳಿದೆವು ಫೇಳಿಸುವದೆನ್ನೊಳಗೆ ಹೇಳೇನೆಂದರೆ ಬಾರದು ಸುಳವು ಇನ್ನೊಬ್ಬರಿಗೆ ತಾಳಮೃದಂಗ ಭೇರಿ ಭೋರಿಡುತ ಒಳ ಹೊರಗೆ ತಿಳಿದೇನಂದರದೇ ನೋಡಿ ಉಲುವು ತಾ ತನ್ನೊಳಗೆ 1 ಕಾಣದ ಕಂಡೆವು ಖೂನ ತಾ ಕಣ್ಣಿನ ಕೊನೆಯೊಳಗೆ ಪ್ರಾಣ ಪಾವನ್ನವಾಯಿತು ಪುಣ್ಯ ಪ್ರಭೆಯೊಳಗೆ ಭಾನುಕೋಟಿತೇಜ ಧನ್ಯಗೈಸಿದ ಎನಗೆ ಸ್ವಾನುಭವದ ಸುಖ ಎದುರಿಟ್ಟಿತು ಜಗದೊಳಗೆ 2 ನುಡಿಯು ಕೇಳಿದಂಥ ನುಡಿಗೇಳಿದೆವಿಂದು ಕಡಿಗಾಯಿತು ನೋಡಿ ಹುಟ್ಟಿಬಾಯ ಜನ್ಮಸಂದು ವಿಡಿದು ಗುರುಪಾದ ಜನ್ಮಸಾರ್ಥಕಾಯಿತಿಂದು ಪಡೆದ ಮಹಿಪತಿ ನಿಜಾನಂದ ವಸ್ತುವಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಜ್ಞಾನವೊ ಇದೇ ಮಾನವೊ ಧ್ರುವ ಕೇಳಿ ಕೇಳಿ ಕೇಳಿ ಕೇಳುವ ಮಾತಿದು ಕೇಳಿದಂತೆ ನೀವು ಬಾಳಿ ಬಾಳಿದ ಮ್ಯಾಲಿನ್ನು ಹೇಳ್ಯಾಡುವ ಮಾತಿನ ಮೊಳೆ ಅಂಕುರನೆ ಸೀಳಿ ಒಳಿತಾಗಿದೆ ಪೂರ್ಣ ಕೇಳಿ ಕಳೆದ ದುಸ್ಸಂಗವು ಕೇಳುವನಾದರೆ ತಿಳಿಸಿಕೊಡುವನು ಗುರು ಹೇಳಿ 1 ಸೂಟಿ ತಿಳಿದು ನಿಜಧಾಟಿಗೆ ಬಂದರೆ ಕೋಟಿಗವನೇ ಒಬ್ಬ ಙÁ್ಞನಿ ನೀಟಾಗಿಹ್ಯ ಘನಕೂಟವು ತಿಳಿದರೆ ನೋಟದಲ್ಲವ ಬಲು ತ್ರಾಣಿ ನೋಟದಲ್ಲಿಹುದು ತ್ರಾಟಿವ ಬಲ್ಲನೆ ಬೂಟಕ ದೇಹಾಭಿಮಾನಿ ನಾಟಿ ಮನದೊಳು ಮಾಟಿಸಿಕೊಂಬುದು ಘಟಿಸಿತಿದೆ ಸಾಧನ 2 ನೆನೆಯಲಿಕ್ಕೆ ಮನ ಘನಬೆರದಾಡುವ ಖೂನಾಗುವದಿದೆ ರಾಜಯೋಗ ಅನುಭವಿಗಳಿಗೆ ಅನುಕೂಲವಾಗಿನ್ನು ಅನುವಾಗಿದೋರುದು ಬ್ಯಾಗ ಭಾನುಕೋಟಿತೇಜ ತಾನೆತಾನಾದನು ಎನ್ನ ಮನದೊಳು ಈಗ ದೀನ ಮಹಿಪತಿಗೆ ಸನಾಥಮಾಡುವ ಸ್ವಾನುಭವದ ಬ್ರಹ್ಮಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ದೇವ ಪೂಜಿಯು ನೋಡಿ ಹೃದಯದಲಿ ನಿಜ ಒಡಗೂಡಿ ಧ್ರುವ ಮೂರ್ತಿಎಂಬುದೆ ಅಮೂರ್ತಿ ನಾಮರೂಪ ನಿಜ ಗುಹ್ಯವಾರ್ತಿ ವ್ಯೋಮಾಕಾರದ ಮನೆಮೂರ್ತಿ ಸ್ವಾಮಿ ಸದ್ಗುರುವಿನ ಕೀರ್ತಿ 1 ನಿತ್ಯನಿರ್ಗುಣ ನಿರ್ವಿಕಲ್ಪ ಸತ್ಯಸದ್ಗುರು ಸ್ವರೂಪ ನಿತ್ಯ ನಿತ್ಯದಿತ್ಯರ್ಥ ಸುದೀಪ ತತ್ವಙÁ್ಞನ ಮನಮಂಟಪ 2 ಸ್ವಾನುಭವ ಸ್ವಾದೋದಕ ಙÁ್ಞನ ಭಾಗೀರಥಿ ಅಭಿಷೇಕ ಮೌನ ಮೌನ್ಯ ವಸ್ತ್ರಾಮೋಲಿಕ ಧಾನ್ಯವೆಂಬುದೆ ಸೇವಿ ಅನೇಕ 3 ಗಂಧಾಕ್ಷತಿ ಪರಿಮಳ ಫಲಪುಷ್ಪ ಬುದ್ಧಿ ಮನವಾಯಿತು ಸ್ವರೂಪ ಸದ್ವಾಸನ್ಯಾಯಿತು ಧೂಪ ದೀಪ ಸದ್ಭಾವನೆ ನೈವೇದ್ಯ ಮೋಪ 4 ಫಲತಾಂಬೂಲವೆ ಸದ್ಭಕ್ತಿ ಮೂಲಜೀವ ಭಾವನೆ ಮಂಗಳಾರ್ತಿ ಬಾಲಕ ಮಹಿಪತಿ ನಿಜಪೂಜಿಸ್ಥಿತಿ ಕುಲಕೋಟಿ ಉದ್ಧರಿಸುವ ಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಲ್ಲೆ ಉಂಟು ಮುಕುತಿ ನೋಡಿ ನೋಡಿ ಒಂದೆ ಮನದಲಿ ಸುಲಭವಾಗಿ ದೋರುತಿಹ್ಯದು ಗುರುಕರುಣದಲಿ ಧ್ರುವ ಏನುಹೇಳಲಿ ಸ್ವಾನುಭವ ಸುಖದ ಸಿದ್ಧಿಯ ಜ್ಞಾನಿಬಲ್ಲ ಭಾಸುತಿಹ್ಯ ಸ್ವಕೀಲ ಸಿದ್ಧಿಯ ಮನವ ಬಲಿದು ಮಾಡಿಕೊಳ್ಳಿ ಜ್ಞಾನಸಿದ್ಧಿಯ ತನುವಿನೊಳು ದೋರುತೀಹ್ಯ ಶ್ರೀಗುರು ಸುಧೆಯ 1 ನಿಟಿಲ ಭ್ರೂಮಧ್ಯ ದಾಟಿನೋಡಿ ಮುಕ್ತಿಯ ದಿಟವಾಗಿ ಕೂಡಿ ಪ್ರಭಯ ಜ್ಞಾನ ಶಕ್ತಿಯ ಕುಟಿಲವಲ್ಲ ಕೇಳಿ ಮಾತು ನಿಜಯುಕ್ತಿಯ ನಟನೆ ತನ್ನೊಳು ದೋರುವ ಗುರುಭಕ್ತಿಯ 2 ಲೇಸು ಲೇಸಾಯಿತು ಎನಗೆ ಭಾಸ್ಕರ ಕರುಣವು ಭಾಸುತಿಹ್ಯದು ವಾಸುದೇವನ ಪುಣ್ಯಚರಣವು ಮೋಸವಿಲ್ಲದೆ ನೀಗಿತು ಜೀವನ ಜನ್ಮಮರಣವುದಾಸ ಮಹಿಪತಿಗಾಯಿತು ಘನಸ್ಫುರಣವು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು