ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದಹುದೊ ಹನುಮಂತ ನಿನ್ನ ಮಹಿಮೆಅಹಿತರೆದೆಶೂಲ ನಿಜಪಾಲ ಹರಿಪದಲೋಲ ಪ. ಬೇಡಿದರಿಗಭಯಹಸ್ತದ ಪ್ರಸಾದವನಿತ್ತುಕೂಡೆ ಮನದಭೀಷ್ಟಗಳ ಕೊಡುವೆಆಡಲನ್ನಳಕೊವಿಯನೊಡದು(?)ರಿಪುಖಳ ವಿ-ಭಾಡನೆಂದೆನಿಸಿ ಸೋದೆಯ ಜನರ ಪೊರೆದೆ 1 ರಾಮಲಕ್ಷ್ಮಣರ ಪೆಗಲಲಿ ಹೊತ್ತುಕೊಂಡು ನಿ-ಸ್ಸೀಮನೆಂದೆನಿಸಿ ಸುಗ್ರೀವನಪ್ರೇಮದಿಂದಲಿ ತಂದು ಅವನಿಗಭಯವಿತ್ತುಭೂಮಿಕಪಿಗಳ ಕೂಡಿ ಸೀತೆಯನರಸಿದೆ2 ಮಂಡೋದರಿಯ ಸುತನ ತುಂಡುಚೂರ್ಣವ ಮಾಡಿತಂಡ ತಂಡದ ಅಂಗಡಿಯ ಸಾಲೆಯಲಿಚಂಡ ಪಾವಕÀನಿಪ್ಪ ಸವುದೆಯೊಳು ಖಳರಹಿಂಡ ಹೋಮಿಸಿ ರಣಾಧ್ವರಕೆ ವೀಕ್ಷಿತನಾದೆ3 ಸ್ವಾಮಿಕಾರ್ಯದಿ ದುರಂಧರನೆನಿಸಿ ನಿನ್ನ ಪದಪ್ರೇಮ ವರ್ಧಿಪುವುದೇನು ಚಿತ್ರತಾಮಸಜನರ ಸೀಮೆಯೊಳು ಪೂಜೆಯಗೊಂಬಧೀಮಂತ ನಿನಗಲ್ಲದುಳಿದವರಿಗುಂಟೆ 4 ಗಿರಿವನವ ತಂದು ವಾನÀರ ಸಮೂಹವ ರಕ್ಷಿಸಿದೆದುರುಳ ರಾವಣನ ನೀನೆ ಗುದ್ದಿ ಧರೆಯೊಳಗೆಸಿರಿರಾಮನ ಪಂಥ ಗೆಲಲೆಂದುತಿರುಗಿದೆಯೆಲೊ ಹಯವದನನ ಮೋಹದ ಬಂಟ5
--------------
ವಾದಿರಾಜ