ಒಟ್ಟು 54 ಕಡೆಗಳಲ್ಲಿ , 18 ದಾಸರು , 36 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಸರ್ವಾಂತರ್ಯಾಮಿ-ನೀನೇಸರಿ-ಸರ್ವಜ್ಞನು ಸ್ವಾಮೀ ಪ ಸರ್ವಕಾರಣ ಸರ್ವಾಧಾರನು ಸರ್ವಶರಿರೇಕ ಸರ್ವನಿಮಾಯಕ ಅ.ಪ. ಹರಿತನಯನಿಗಂದೂ ಸ್ವಶಕ್ತಿಯ ಹರಿಕೊಡುವನು ಬಂದು ಗುರಿಮಾಡಿದೆ ಹರಿ1 ಕಾಣಿಸುವನು ಎಂದೂ ಸಪ್ರಾಣರಮಾಡಿದೆ 2 ಮರುತನ ಸುತನೆಂದು ಧೃತರಾಷ್ಟ್ರನು ಕರದಪ್ಪುವನೆಂದು ಶರಣನಹರಣವನುಳಹಿದೆ 3 ಪಾಲನ ಖತಿಯೊಳಗೆ ಶರಧಿಯೊಳಾಲಯ ಮಾಡಿದೆ 4 ದುರುಳ ಪುಲಿಯು ಬಂದು ಕರದಖಡುಗದಿಂ-ಹರಿಯನು ಖಂಡಿಸಿ ಶರಣನ ಸಲಹಿದ ವರದವಿಠಲಹರಿ5
--------------
ಸರಗೂರು ವೆಂಕಟವರದಾರ್ಯರು
ಅಸಾಧಾರಣ ವಿಠಲ ನೀ ಸಲಹೊ ಇವಳಾ |ಈಶಾದಿ ದಿವಿಜೇಡ್ಯ | ಶ್ರೀರಾಮಚಂದ್ರಾ ಪ ವಿಶ್ವ ಮೂರುತಿಯೇ |ಮೀಸಲ ಮನದಲಿರೆ | ನೀ ಸ್ವಪ್ನ ಸೂಚಿಸಿದೆಏಸು ಕರುಣವೊ ನಿನಗೆ | ದಾಸ ಜನರಲ್ಲೀ1 ಪರಿಪರಿಯ ಭವಣೆಗಳ | ಪರಿಹರಿಸಿ ಭಕ್ತಳಿಗೆಪೊರೆಯೊ ಕರುಣಾವನಧಿ ನರಹರಿಯೇ ಸ್ವಾಮೀ |ತರತಮದ ಜ್ಞಾನ ಸ | ದ್ವೈರಾಗ್ಯ ಭಕುತಿಯನುಕರುಣಿಸೀ ಪೊರೆ ಇವಳ | ಮರುತಾಂತರಾತ್ಮ 2 ಪಂಚಾತ್ಮಕನೆ ಪ್ರಾ | ಪಂಚ ಸುಖದೊಳಗೆ ತವಸಂಚಿಂತನೆಯ ಕೊಟ್ಟು | ಕಾಪಾಡೊ ಹರಿಯೇಪಂಚಭೇದವು ಅಂತೆ | ನೀಚೋಚ್ಚ ಕ್ರಮ ತಿಳಿಸೀವಾಂಛಿತಾರ್ಥದ ಕಳೆಯೊ | ಸಂಚಿತಾಗಮವಾ 3 ಸೃಷ್ಟಾದಿಕರ್ತನೇ | ಕೃಷ್ಣ ಮೂರುತಿ ದೇವಭ್ರಷ್ಟಸಂಗವ ಕೊಡವೆ | ಶಿಷ್ಟರಲ್ಲಿಡಿಸೋ |ಇಷ್ಟ ಮೂರ್ತಿಯ ಮನದಿ | ಸ್ಪಷ್ಟ ತೋರುತ ಸಲಹೋಶಿಷ್ಟ ಜನ ಸದ್ವಂದ್ಯ | ವಿಷ್ಣು ಪ್ರಾರ್ಥಿಸುವೇ 4 ಗೋವರ್ಧನೋದ್ದರಗೆ | ಭಾವುಕರ ಪರಿಪಾಲಪಾವನಕೆ ಪಾವನನೆ | ಕಾವುದೀಕೆಯನುದೇವನೀನಲ್ಲದಲೆ | ಕಾವರನ್ಯರನ ಕಾಣೆಗೋವಿದಾಂಪತಿ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಎನ್ನನುದ್ದರಿಸು ಗುರು ರನ್ನ ಮಹಿಪತಿದೇವ | ಚಿನ್ನನೆನುತಲಿ ಬಿಡದೆ ಘನ್ನ ದಯ ಮಳೆಗರೆದು | ಮುನ್ನಿನಪರಾಧಗಳನಿನ್ನು ಕ್ಷಮೆಯನು ಮಾಡಿ | ನಿನ್ನ ಸ್ಮರಣೆಯೊಳಿಪ್ಪ ಸನ್ಮತಿಯನಿತ್ತು 1 ನಿಚ್ಚಳದ ಪದಗಳಿಗೆ ಮುಚ್ಚಗೊಳ್ಳದೆ ನಿನ್ನ | ಎಚ್ಚರಿಕೆಯನು ತೊರೆದು ಬೆಚ್ಚಿ ಬೆದರುತೆ ವಿಷಯ | ಕಚ್ಚಿ ಬಳಲುವ ಈ ಹುಚ್ಚು ಮನಸ್ಸಿಗೆ ನೀ | ನಿಚ್ಚಟದರಹು ಕೊಟ್ಟು ನಿಶ್ಚಲದಲಿ ಸಲುಹು2 ಕುಂಭಿನಿಲಿ ಧೇನು ಬಸಿರಿಂ ಬಂದ ಕರುವಿಂಗೆ | ಹಂಬಲಿಸಿ ತಿರು ತಿರುಗಿ ಬೆಂಬಿಡದೆ ಬಪ್ಪಂತೆ | ಇಂಬಾಗಿ ಎನಗ ಕರುಣಾಂಬಕದಿ ನೋಡಿ ನೀ | ಸಂಬಾಳಿಸೈ ಕೃಷ್ಣನೆಂಬವನ ಸ್ವಾಮೀ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಪಾಡೋ ಸುಬ್ರಹ್ಮಣ್ಯ ಮಹಸ್ವಾಮೀ ಪ ಅನುದಿನ ದಯಾಪರ ದೇವ ನೀನೂ ಮಮತೆಯಿಂದ ಕಾಪಾಡು ಎಂಬೆ ನಾನು ಸುಬ್ರಹ್ಮಣ್ಯ 1 ಉರಗ ಬೇಡ್ವೆ ನಿನ್ನ ಸುಬ್ರಹ್ಮಣ್ಯ2 ಚಿತ್ತಜ ಕುಮಾರಾ ಸುಬ್ರಹ್ಮಣ್ಯ3
--------------
ಬೆಳ್ಳೆ ದಾಸಪ್ಪಯ್ಯ
ಗುರು ಸಾರ್ವ _ ಭೌಮಾ ದೊರಕಿಸುತ ಹರಿಕರುಣ ಪೊರೆ ರಾಘವೇಂದ್ರಾ ಪ ಅಂದು ಹರಿ ತವಶರದಿ ಕರ ಪೊರೆದಂತೆ ನಂದಿ ಸುತ ದುರಿತೌಘ ಇಂದೆನಗೆ _ ಮೈದೊರು ಗುರುವೇ ಕುಂದು ಮಯ ಕಲಿಯೊಳಗೆ ಕಂದುತಿಹ ಕಂದರನು ತಂದೆ ಗುರು ಕಾಯದಿರೆ ಮುಂದು ಬರೆ ಆಗುವದೆ ಸ್ವಾಮೀ 1 ಕತ್ತಲೆಯು ಸುತ್ತಿಹುದು ಮುತ್ತಿಹವು ಕುತ್ತುಗಳು ಬತ್ತಿಹವು ಶಕ್ತಿಗಳು ಹತ್ತವೈ ಚಿತ್ತದೊಳು ಏನೂ ಎತ್ತುಗಳ ತೆರದಂತೆ ಸುತ್ತುತಲಿ ಭವದಲ್ಲಿ ಭಕ್ತಿಯನು ಕಾಣದಲೆ ಮೃತ್ಯುವಿಗೆ ತುತ್ತಾಹೆ ನಲ್ಲೋ 2 ಪರಿಪರಿಯ ಹರಕೆಗಳ ಪೂರೈಸಿ ಭಕುತರಿಗೆ ನಿರುತದಲಿ ಪೊರೆವವಗೆ ಭಾರವೇ ನಾ ನೊಬ್ಬ ಧೊರೆಯೇ ಗುರು ಸೇವೆ ಮಾಡರಿಯೆ ಬರಿ ಮೂಢ ಕಡು ಪಾಪಿ ಶಿರವಿಡುವೆ ಚರಣದಲಿ ಕರುಣಾಳು ಭರವಸೆಯೆ ನನಗೇ 3 ಪ್ರಹ್ಲಾದ ಬಲಿತಾತ ಬಾಹ್ಲೀಕ ಕುರುಪೋಷ ಶ್ರೀ ಹರಿಯು ಗುರುಭಕ್ತಿ ವಾಹಿನಿಯ ಹರಿಸೈಯ ಸತ್ಯಸಂಧಾ ದೇಹದಲಿ ಬಲವಿಲ್ಲ ಈಹಗಳು ಬಿಡದಲ್ಲ ಬಾಹಿರನು ನಿನಗಲ್ಲ ತ್ರಾಹಿ ಗುರು ನೀ ಬಲ್ಲೆ ಎಲ್ಲಾ4 ಶ್ರೀ ಮಧ್ವ ಗುರು ಚೇಲ ತಾಮಸರ ನಿರ್ಮೂಲ ಶ್ರೀಮಂತ ಗುಣಮಾಲ ಶ್ರೀ ಮನೋಹರ ಕೃಷ್ಣವಿಠಲ ಯಜಕಾ ಕಾಮಿತಾ ಫಲದಾತ ನೇಮದಲಿ ಹರಿನಾಮ ನುಡಿಸೆಂಬೆ ಸತತಾ 5
--------------
ಕೃಷ್ಣವಿಠಲದಾಸರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ತಾಮರಸ ನೆರೆ ನಂಬಿದೆ ಪ ಕಾಮಕ್ರೋಧವ ಕಳೆದು ನಿನ್ನ ನಾಮಾಮೃತವ ಪ್ರೇಮದಲಿ ಎನಗುಣಿಸೋ ಸ್ವಾಮಿ ಅ.ಪ. ಉಪರಾಗ ದಶಮಿ ದ್ವಾದಶಿ ದಿವಸ ಮೊದಲಾದ ಉಪೇಕ್ಷೆ ಮಾಡಿ ಕಳೆದೆ ಉಪಕಾರಯೆಂದು ನಿಜ ಉಕ್ತಿ ಪೇಳಿದರೆನಗೆ ಅಪಕಾರ ಕಾಣುತಿದೆಕೋ ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆ ತಪ ವೃದ್ಧರನ್ನು ಹಳಿವೆ ಸ್ವಪನದೊಳಗಾದರೊ ವೈರಾಗ್ಯ ಬಯಸದಲೆ ಕಪಟ ಮನುಜರೊಳಾಡಿ ನಿನ್ನ ಮರೆದೆ ಸ್ವಾಮೀ 1 ಮಾರನ ಉಪಟಳಾಕಾರದಲಿ ನಾ ಬಲು ಪೋರ ಬುದ್ಧಿಯನು ಮಾಡಿ ಆರು ಇಲ್ಲದ ಸಮಯದೊಳವಳು ಕಣ್ಣು ಸನ್ನೆಯ ಮಾಡಿ ಕೋರಿದ್ದು ಇತ್ತು ನೀಡಿ ಕ್ರೂರಮಾನವರೊಳಗೆ ಆಡಿ ವಾರಿಜನಾಭ ನಿನ್ನ ಆರಾಧನೆಯ ಮರೆದು ಧಾರಿಣೀ ಭಾರದೆ ಪರಲೋಕ ಮರೆದೆ 2 ಭೂಸುರರು ಚಂಡಾಲ ಜಾತಿಯೆನ್ನದೆ ಬಲು ಹೇಸಿಕಿಲ್ಲದೆ ತಿರುಗುವೆ ಪರಿ ವೇಷವನು ಧರಿಸಿ ಮೆರೆದೇ ಆಶೆಯುಳ್ಳ ಮಹಪಿಶಾಚಿಗೊಳಗಾಗಿ ಹರಿ ದಾಸ ಸಹವಾಸ ಜರೆದೆ ವಾಸುಕೀಶಯನ ವಸುದೇವತನಯನೆ ನಿನ್ನ ದಾಸನೆನ್ನಿಸದೆ ಅಪಹಾಸ ಮಾನವನಾದೆ 3 ಹರಿದಾಸರ ಬಳಿ ಅರಘಳಿಗೆ ಕೂತರೆ ಶಿರವ್ಯಾಧಿಯೆಂದೇಳುವೇ ದುರುಳ ದುರ್ವಾರ್ತೆಗಳ ಪೇಳಲು ಹಸಿವು ತೃಷೆ ಮರೆದು ಲಾಲಿಸಿ ಕೇಳುವೆ ತರುಣಿ ಮಕ್ಕಳು ಎನ್ನ ಪರಿಪರಿ ಬೈದರೆ ಪರಮ ಹರುಷವ ತಾಳುವೆ ಗುರುಹಿರಿಯರೊಂದುತ್ತರವನಾಡಲು ಕೇಳಿ ಧರಿಸಲಾರದೆ ನಾನು ಮತ್ಸರಿಪೆನವರೊಡನೇ 4 ನಾ ಮಾಡಿದಪರಾಧ ಎಣಿಸಿ ಬರೆದರೆ ಈ ಭೂಮಂಡಲವು ಸಾಲದಿಹುದೊ ಕ್ಷಮೆಯೊಳಗುಳ್ಳ ದುರ್ಮತಿ ಕೂಡಿಡಲು ಈ ಮತಿಯ ಅದು ಪೋಲದು ಹೋಮ ಜಪತಪಗಳನು ಎಷ್ಟು ಮಾಡಲು ಪಾಪ ಸ್ತೋಮ ಎಂದಿಗು ಪೋಗದೊ ಸಾಮಜವರದ ಜಗನ್ನಾಥ ವಿಠಲ ನಿನ್ನ ಕಾಣಿ 5
--------------
ಜಗನ್ನಾಥದಾಸರು
ದತ್ತಾತ್ರೇಯ ಸ್ವಾಮೀ ಕೃಪೆ ಮಾಡೈ ನೀಯನ್ನ ಮ್ಯಾಲ ಪ ಅನಿಮಿಷಮಾನಸ ಸಂಚಾರಾ ಅನಾಥ ಜನ ಸಂಕಟ ಪರಿಹಾರಾ ದೀನ ದಯಾಲ ರಮಾವರಾ ನೆನೆವರ ಸಹಕಾರಾ 1 ಅನಸೂಯಾಕರ ಸಂಪುಟರನ್ನಾ ಘನತರ ಚರಿತ ಪರಮ ಪಾವನ್ನಾ ಅನುಪಮ ತ್ರೈಜಗ ಜೀವನ್ನಾ ವನರುಹವದನಾ2 ಸರಸಿಜೋದ್ಭವ ನುತ ಮನ್ನಾಥಾ ವರ ನಿಗಮಾ ಗೋಚರ ಅನಂತಾ ಕರುಣಾಂಬುಧಿಯೇ ಸರ್ವಾತೀತಾ ಗುರು ಮಹಿಪತಿ ದಾತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗೆ ಅಚ್ಚರವಲ್ಲ ಅನುಮಾನಸಲ್ಲಾ ಇನಿತು ಶ್ರಮ ಕಳೆಯದಿರೆ ಘನತಿಲ್ಲ ನಿಮದಲ್ಲ ಪ ಹಿಂದೆ ನಿನ್ನ ಅಜ್ಞಾ ನಾ ಒಂದು ಮೀರಿದಕೆ ನೀ ಇಂದು ಭವಭವಣೆ ಬಹುಪರಿಯಿಂದಲೀ ತಂದು ನೋಯಿಸಿ ಮನಸುನಿಂದದಲೆ ಪರರಿಗೆ ಇಂದು ಮೊರೆಯನು ಹೋಗಿಸುವುದು ಥರವೇ ಹರಿಯೇ 1 ಒಂದು ತಿಳಿಯದಲೆ ನಾನು ಅಂದ ಮಾತಿಗೆ ಮನಸು ನೊಂದು ಈ ತೆರದಿ ಮಾಡುವುದು ರೀತೇ ಕಂದನಪರಾಧಗಳ ಒಂದು ನೋಡದ ಜನನಿ ಯಂದದಲಿ ನೀ ಪಾಲಿಸುವುದು ಸ್ವಾಮೀ ಪ್ರೇಮೀ 2 ಜಾತಮಗನನು ನಿಜತಾತ ಪರರಿಗೆ ತಾನು ಆತುರಾದಿಂದಲಿ ಮಾರಿದಂತೆ ದೂತರನು ಜಗದೇಕÀನಾಥ ನೀ ಪರಿಪರಿ ಫಾತಿಸಲು ಇನ್ನಾರು ಪೊರೆªರೈಯ್ಯಾ ಜೀಯಾ 3 ನಂಬಿದವರನ್ನು ನೀ ಅಂಬಿನಲಿ ಹೊಡೆವರೆ ಅರಿ ಪದುಮ ಗದಧರಪಾಣಿಯೆ ತುಂಬಿದ್ಹರಿಗೋಲಲ್ಲಿ ಇಂಬುಗೊಂಡಿರುವಾಗ ಅಂಬುಧಿಮುಣುಗಿಸುವದು ಥರವೇನೋ 4 ಯಾತಕೀಸೊ ಮಾತು ಸೋತೆ ನಾ ನಿನಗೀಗ ವಾತದೇವನ ತಾತ ಸೀತಾನಾಥಾ ನೀತ ಶ್ರೀಗುರುಜಗನ್ನಾಥ ವಿಠ್ಠಲರೇಯ ಮಾತು ಲಾಲಿಸಿ ಪಾಲಿಸುವದು ಇನ್ನಾ ಚೆನ್ನಾ 5
--------------
ಗುರುಜಗನ್ನಾಥದಾಸರು
ನಿನ್ನನೇ ನಂಬಿದೆನಯ್ಯಾ ಪ ನಿನ್ನನೇ ನಂಬಿದೆನಯ್ಯಾ | ಎನ್ನ ಬಿಡದಿರು ಕೈಯ್ಯಾ | ಬೀರೆಲೋದಯಾ 1 ತರಳ ತಾಯಿಯಲ್ಲದೆ | ನೆರೆಹೊರೆಯ ಬಲ್ಲದೇ | ಮರಳು ಮಂದನೆನ್ನದೆ | ಅರಹು ಕೂಡಿಸೋ ತಂದೆ 2 ಹೋದೆಣಿಕೆಯ ಬಿಟ್ಟು | ಪಾದಸ್ಮರಣೆ ಕೊಟ್ಟು | ಸಾಧುಸಂಗದಲಿಟ್ಟು | ಬೋಧಾಮೃತವನಿಟ್ಟು 3 ಜ್ಞಾನ ಭಕುತಿ ಇಲ್ಲಾ ಮೌನ ಸಾಧನವಿಲ್ಲಾ | ಏನೇನು ಸಾಧನವಿಲ್ಲಾ | ನೀನು ಪೇಕ್ಷಿಸುದಲ್ಲಾ4 ಗುರು ಮಹಿಪತಿ ಸ್ವಾಮೀ | ಶರಣರ ರಕ್ಷಕ ನೇಮಿ | ಸುರಮುನಿಜನ ಪ್ರೇಮಿ | ಹೊರಿಯೋ ಸಾಸಿರ ನಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ಪದ್ಮಾಪತಿ ವಿಠಲ ನೀನಿವಳ ಸಲಹ ಬೇಕೋ ಪ ಪದ್ಮ ಸಂಭವ ಜನಕ ಪದ್ಮದಳ ನೇತೃ ಹೃತ್ಪದ್ಮ ದೋಷಗಳ ತಿದ್ದಿ ಕಾಪಾಡೊ ಹರಿಯೇ ಅ.ಪ. ಜನ್ಮಜನ್ಮಾಂತರದ ಪುಣ್ಯ ಸಂಚಯದಿ ಶ್ರೀಮನ್ಮಧ್ವಮತದಲಿ ಜನ್ಮ ತಾಳಿಹಳೋ |ಕರ್ಮನಾಮನೆ ಅನಾದ್ವವಿದ್ಯಾಕಾಮಕರ್ಮಗಳನೆ ಕಳೆವ ಸನ್ಮಾರ್ಗವನೆ ತೋರೊ 1 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರವನೆ ತಿಳಿಸಿ ಸಂಸಾರನಿಧಿ ದಾಟಿಸೋಕಾರುಣ್ಯ ನಿಧಿ ಮೂಲ ಕಾರಣನು ನೀನೆಂದುಸಾರಿಬೇಡುವೆ ನಿನ್ನ ಪಾರು ಮಾಡಿವಳಾ 2 ಪತಿಸುತರು ಹಿತರಲ್ಲಿ | ಮತಿಮತಾಂವರಲ್ಲಿಕೃತಿಪತಿಯ ವ್ಯಾಪ್ತಿ ಸನ್ಮತಿಯನೇ ಕೊಡುತಹಿತದಿ ಸೇವೆಯಗೈಸು ಕೃತಕಾರ್ಯಳೆಂದೆನಿಸುಗತಿ ವಿಹೀನರಿಗೆಲ್ಲ ಗತಿಪ್ರದನೆ ಸ್ವಾಮೀ 3 ನಿನ್ನ ಸ್ಮøತಿಗಿಂದಧಿಕ ಅನ್ಯಸಾಧನ ಕಾಣೆಘನ್ನ ಈ ಕಲಿಯುಗದಿ ಪ್ರಾಣಾಂತರಾತ್ಮ |ಪುಣ್ಯ ಫಲದಾತ ಪ್ರಪನ್ನ ಪರಿಪಾಲಕನೆನಿನ್ನ ಸಂಕೀರ್ತನವ ಸರ್ವದಾ ಕೊಡು ಹರಿಯೇ 4 ಭಾರ ನಿನ್ನದೊಸ್ವಾಮಿಮಧ್ವಾಂತರಾತ್ಮ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರಭವನಾಮ ಸಂವತ್ಸರ ಸ್ತೋತ್ರ 145 ಪದ್ಮನಾಭ ಪದ್ಮೇಶ ಪದ್ಮಸಂಭವ ತಾತ ಮೋದಬಲ ಜ್ಞಾನಾದ್ಯಾಮಲ ಗುಣನಿಧಿಯೇ ಸತ್ಯಜಗತ್ ಸೃಷ್ಟಾದಿ ಕರ್ತನೀನೇ ಪ್ರಭವ ಸಂವತ್ಸರ ನಿಯಾಮಕನು ಸ್ವಾಮೀ ನಮಸ್ತೆ ಪ ಈ ಪ್ರಭವನಾಮ ನಿನ್ನ ನಿಯಾಮನಿಂ ಸೋಮನು ಈ ಸಂವತ್ಸರರಾಜನು ಮಂಗಳನು ಮಂತ್ರಿಃ ಸಸ್ಯ ಸೈನ್ಯಾಧಿಪರು ಶುಕ್ರ ವಿಧುಧಾನ್ಯಪತಿ ಬುದನು ರಸಪ ರವಿ ನಿರಸಗುರು ಹೀಗೆ ನಾಯಕರು ನವರು 1 ವಿಷ್ಣುನವ ಶ್ರೀನವ ನರವಾಯುನವ ಪತೀಶನÀವ ಶೇಷನವ ಈ ಬಗೆ ನವ ಮೂರ್ತಿ ಅಧಿಕಾರಿಗಳಿಂ ಸ್ಮರಣೀಯ ವರ್ಷನವನಾಯಕರೊಳೆ ವಾಯ್ವುಂತರ್ಗತನಾಗಿ ಶ್ರೀಸಹ ವಿಷ್ಣು ನೀನೆ ಇದ್ದು ಕೃತಿನಡೆಸಿ ಲೋಕವಕಾಯುತಿ2 ಸೋಮ ರಾಜನು ತನ್ನ ವಶದಿ ಸೈನ್ಯ ವೇಘಗಳಿಚ್ಚಿಹನು ಅಮಾತ್ಯತ್ಯ ಕುಜಗಿಹುದು ಶಿಷ್ಟಪಾಲನತಿದುಷ್ಟರ ತಿದ್ದುವುದಕ್ಕೆ ಅಮ್ಮಮ್ಮ ಏನೆಂಬೆ ಅಮೃತಕರ ಸೋಮದಿಯಲ್ಲಿದ್ದು ರಾಜ ರಾಜೇಶ್ವರ ನೀ ಕಮಲಾಸನಪಿತ ಪ್ರಸನ್ನ ಶ್ರೀನಿವಾಸ ಸಂತಾನಾದಿ ಭಾಗ್ಯ ವೀವಿ ಕರುಣಾಳು 3
--------------
ಪ್ರಸನ್ನ ಶ್ರೀನಿವಾಸದಾಸರು